ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ಪುಟ ಸೇರಿದ್ದಾರೆ.

ಭಾರತದ ಬ್ಯಾಡ್ಮಿಂಟನ್ ಕಣ್ಮಣಿ ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.24ರ ಹರೆಯದ ಹೈದರಾಬಾದ್ ಆಟಗಾರ್ತಿ2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್ ಪ್ರವೇಶಿಸಿ, ಪ್ರಶಸ್ತಿ ಸೆಣಸಾಟದಲ್ಲಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಅದರಲ್ಲೂ ವಿಶೇಷವಾಗಿ2017ರ ಫೈನಲ್ನಲ್ಲಿ ಜಪಾನ್ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು. ಜೀವಮಾನದಲ್ಲೇ ಅತ್ಯುನ್ನತ ಫಾರ್ಮ್ನಲ್ಲಿರುವ ಪಿವಿ ಸಿಂಧೂ, ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಹಾರ ಮಾಡ ತೊಡಗಿದರು. ಸಿಂಧೂ ಬಲವಾದ ಹೊಡೆತಕ್ಕೆ ಓಕುಹರಾ ಬಳಿ ಉತ್ತರವೇ ಇಲ್ಲ. ಇದರಿಂದಾಗಿ ಒಂದು ಹಂತದಲ್ಲಿ16-2ರ ಅಂತರದ ಮುನ್ನಡೆ ದಾಖಲಿಸಿದರು. ಅಲ್ಲದೆ ಮೊದಲ ಸುತ್ತನ್ನು21-7 ರ ಅಂತರದ ಸುಲಭವಾಗಿ ವಶಪಡಿಸಿಕೊಂಡರು.

ನಿರ್ಣಾಯಕ ದ್ವಿತೀಯ ಸುತ್ತಿನಲ್ಲೂ ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಸಿಂಧೂ, ಎದುರಾಳಿಯ ಮೇಲೆ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಹಿಂದಿನ ಪ್ರದರ್ಶನಕ್ಕೆ ಹೋಲಿಸಿದರೆ ಅನಗತ್ಯ ತಪ್ಪುಗಳಿಗೆ ಯಾವುದೇ ಆಸ್ಪದ ನೀಡದ ಸಿಂಧೂ, ತಮ್ಮ ಬಲವಾದ ಹೊಡೆತದಿಂದಲೇ ಎದುರಾಳಿ ಮೇಲೆ ಸವಾರಿ ಮಾಡಿದರು. ಹಾಗೆಯೇ ದ್ವಿತೀಯ ಸುತ್ತಿನಲ್ಲೂ ಒಂದು ಹಂತದಲ್ಲಿ16-4ರ ಮುನ್ನಡೆ ಗಳಿಸಿ ಪ್ರಶಸ್ತಿಯತ್ತ ಮುನ್ನಡೆದರು. ಅಂತಿಮವಾಗಿ ದ್ವಿತೀಯ ಗೇಮ್ 21-7ರ ಅಂತರದಲ್ಲಿ ವಶಪಡಿಸಿ ಚಿನ್ನದ ಹಾರವನ್ನುಕೊರಳಿಗೆ ಹಾಕಿಕೊಂಡರು.

ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಆಟಗಾರ್ತಿ ಚೀನಾದ ಚೆನ್ ಯು ಫಿ ಅವರನ್ನು21-7 ಮತ್ತು 21-14 ಗೇಮ್ಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ವೇದಿಕೆ ನಿರ್ಮಿಸಿಕೊಂಡರು. ಇದರೊಂದಿಗೆ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಸತತ 3ನೇ ಬಾರಿಗೆ ಫೈನಲ್ ಪ್ರವೇಶಿಸಿದ ವಿಶ್ವದ ಮೊದಲ ಆಟಗಾರ್ತಿಯೆನ್ನುವ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು. 2013ರ ಆವೃತ್ತಿಯಲ್ಲಿ ಸಿಂಧೂ ಕಂಚಿನ ಪದಕ ಜಯಿಸಿದ್ದರು. ಆಗ ಅವರಿಗೆ ಕೇವಲ 18 ವರ್ಷ. ಅದಾದ ಬಳಿಕ 2014ರ ಆವೃತ್ತಿಯಲ್ಲೂ ಕಂಚಿನ ಪದಕ ಗೆದ್ದಿದ್ದರು. ಇದರೊಂದಿಗೆ, ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸಿಂಧೂ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಒಟ್ಟು 5 ಪದಕ (ಹಾಲಿ ಆವೃತ್ತಿಯದೂ ಸೇರಿ) ಗೆದ್ದಂತಾಗಿದೆ.
ಸಿಂಧೂ ಪ್ರಮುಖ ಸಾಧನೆಗಳು:
ಒಲಿಂಪಿಕ್:
2016 ರಿಯೋ ಡಿ ಜನೈರೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ವಿಶ್ವ ಚಾಂಪಿಯನ್ಶಿಪ್:
2019 ಬಾಸೆಲ್: ಚಿನ್ನ ಪದಕ (ಮಹಿಳಾ ಸಿಂಗಲ್ಸ್)
2018 ನಾನ್ಜಿಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2017 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಕೊಪೆನ್ಹ್ಯಾಗನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
2013 ಗುವಾಂಗ್ಝೌ: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಏಷ್ಯನ್ ಗೇಮ್ಸ್:
2018 ಜಕಾರ್ತ-ಪ್ಯಾಲೆಮ್ಬ್ಯಾಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಇಂಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಕಾಮನ್ವೆಲ್ತ್ ಗೇಮ್ಸ್:
2018 ಗೋಲ್ಡ್ ಕೋಸ್ಟ್: ಚಿನ್ನದ ಪದಕ (ಮಿಶ್ರ ತಂಡ)
2018 ಗೋಲ್ಡ್ ಕೋಸ್ಟ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ಏಷ್ಯಾ ಚಾಂಪಿಯನ್ಶಿಪ್:
2014 ಗಿಮ್ಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…