ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ಪುಟ ಸೇರಿದ್ದಾರೆ.

ಭಾರತದ ಬ್ಯಾಡ್ಮಿಂಟನ್ ಕಣ್ಮಣಿ ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.24ರ ಹರೆಯದ ಹೈದರಾಬಾದ್ ಆಟಗಾರ್ತಿ2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್ ಪ್ರವೇಶಿಸಿ, ಪ್ರಶಸ್ತಿ ಸೆಣಸಾಟದಲ್ಲಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಅದರಲ್ಲೂ ವಿಶೇಷವಾಗಿ2017ರ ಫೈನಲ್ನಲ್ಲಿ ಜಪಾನ್ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು. ಜೀವಮಾನದಲ್ಲೇ ಅತ್ಯುನ್ನತ ಫಾರ್ಮ್ನಲ್ಲಿರುವ ಪಿವಿ ಸಿಂಧೂ, ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಹಾರ ಮಾಡ ತೊಡಗಿದರು. ಸಿಂಧೂ ಬಲವಾದ ಹೊಡೆತಕ್ಕೆ ಓಕುಹರಾ ಬಳಿ ಉತ್ತರವೇ ಇಲ್ಲ. ಇದರಿಂದಾಗಿ ಒಂದು ಹಂತದಲ್ಲಿ16-2ರ ಅಂತರದ ಮುನ್ನಡೆ ದಾಖಲಿಸಿದರು. ಅಲ್ಲದೆ ಮೊದಲ ಸುತ್ತನ್ನು21-7 ರ ಅಂತರದ ಸುಲಭವಾಗಿ ವಶಪಡಿಸಿಕೊಂಡರು.

ನಿರ್ಣಾಯಕ ದ್ವಿತೀಯ ಸುತ್ತಿನಲ್ಲೂ ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಸಿಂಧೂ, ಎದುರಾಳಿಯ ಮೇಲೆ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಹಿಂದಿನ ಪ್ರದರ್ಶನಕ್ಕೆ ಹೋಲಿಸಿದರೆ ಅನಗತ್ಯ ತಪ್ಪುಗಳಿಗೆ ಯಾವುದೇ ಆಸ್ಪದ ನೀಡದ ಸಿಂಧೂ, ತಮ್ಮ ಬಲವಾದ ಹೊಡೆತದಿಂದಲೇ ಎದುರಾಳಿ ಮೇಲೆ ಸವಾರಿ ಮಾಡಿದರು. ಹಾಗೆಯೇ ದ್ವಿತೀಯ ಸುತ್ತಿನಲ್ಲೂ ಒಂದು ಹಂತದಲ್ಲಿ16-4ರ ಮುನ್ನಡೆ ಗಳಿಸಿ ಪ್ರಶಸ್ತಿಯತ್ತ ಮುನ್ನಡೆದರು. ಅಂತಿಮವಾಗಿ ದ್ವಿತೀಯ ಗೇಮ್ 21-7ರ ಅಂತರದಲ್ಲಿ ವಶಪಡಿಸಿ ಚಿನ್ನದ ಹಾರವನ್ನುಕೊರಳಿಗೆ ಹಾಕಿಕೊಂಡರು.

ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಆಟಗಾರ್ತಿ ಚೀನಾದ ಚೆನ್ ಯು ಫಿ ಅವರನ್ನು21-7 ಮತ್ತು 21-14 ಗೇಮ್ಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ವೇದಿಕೆ ನಿರ್ಮಿಸಿಕೊಂಡರು. ಇದರೊಂದಿಗೆ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಸತತ 3ನೇ ಬಾರಿಗೆ ಫೈನಲ್ ಪ್ರವೇಶಿಸಿದ ವಿಶ್ವದ ಮೊದಲ ಆಟಗಾರ್ತಿಯೆನ್ನುವ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು. 2013ರ ಆವೃತ್ತಿಯಲ್ಲಿ ಸಿಂಧೂ ಕಂಚಿನ ಪದಕ ಜಯಿಸಿದ್ದರು. ಆಗ ಅವರಿಗೆ ಕೇವಲ 18 ವರ್ಷ. ಅದಾದ ಬಳಿಕ 2014ರ ಆವೃತ್ತಿಯಲ್ಲೂ ಕಂಚಿನ ಪದಕ ಗೆದ್ದಿದ್ದರು. ಇದರೊಂದಿಗೆ, ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸಿಂಧೂ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಒಟ್ಟು 5 ಪದಕ (ಹಾಲಿ ಆವೃತ್ತಿಯದೂ ಸೇರಿ) ಗೆದ್ದಂತಾಗಿದೆ.
ಸಿಂಧೂ ಪ್ರಮುಖ ಸಾಧನೆಗಳು:
ಒಲಿಂಪಿಕ್:
2016 ರಿಯೋ ಡಿ ಜನೈರೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ವಿಶ್ವ ಚಾಂಪಿಯನ್ಶಿಪ್:
2019 ಬಾಸೆಲ್: ಚಿನ್ನ ಪದಕ (ಮಹಿಳಾ ಸಿಂಗಲ್ಸ್)
2018 ನಾನ್ಜಿಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2017 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಕೊಪೆನ್ಹ್ಯಾಗನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
2013 ಗುವಾಂಗ್ಝೌ: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಏಷ್ಯನ್ ಗೇಮ್ಸ್:
2018 ಜಕಾರ್ತ-ಪ್ಯಾಲೆಮ್ಬ್ಯಾಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಇಂಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಕಾಮನ್ವೆಲ್ತ್ ಗೇಮ್ಸ್:
2018 ಗೋಲ್ಡ್ ಕೋಸ್ಟ್: ಚಿನ್ನದ ಪದಕ (ಮಿಶ್ರ ತಂಡ)
2018 ಗೋಲ್ಡ್ ಕೋಸ್ಟ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ಏಷ್ಯಾ ಚಾಂಪಿಯನ್ಶಿಪ್:
2014 ಗಿಮ್ಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.