ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ಪುಟ ಸೇರಿದ್ದಾರೆ.

ಭಾರತದ ಬ್ಯಾಡ್ಮಿಂಟನ್ ಕಣ್ಮಣಿ ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.24ರ ಹರೆಯದ ಹೈದರಾಬಾದ್ ಆಟಗಾರ್ತಿ2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್ ಪ್ರವೇಶಿಸಿ, ಪ್ರಶಸ್ತಿ ಸೆಣಸಾಟದಲ್ಲಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಅದರಲ್ಲೂ ವಿಶೇಷವಾಗಿ2017ರ ಫೈನಲ್ನಲ್ಲಿ ಜಪಾನ್ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು. ಜೀವಮಾನದಲ್ಲೇ ಅತ್ಯುನ್ನತ ಫಾರ್ಮ್ನಲ್ಲಿರುವ ಪಿವಿ ಸಿಂಧೂ, ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಹಾರ ಮಾಡ ತೊಡಗಿದರು. ಸಿಂಧೂ ಬಲವಾದ ಹೊಡೆತಕ್ಕೆ ಓಕುಹರಾ ಬಳಿ ಉತ್ತರವೇ ಇಲ್ಲ. ಇದರಿಂದಾಗಿ ಒಂದು ಹಂತದಲ್ಲಿ16-2ರ ಅಂತರದ ಮುನ್ನಡೆ ದಾಖಲಿಸಿದರು. ಅಲ್ಲದೆ ಮೊದಲ ಸುತ್ತನ್ನು21-7 ರ ಅಂತರದ ಸುಲಭವಾಗಿ ವಶಪಡಿಸಿಕೊಂಡರು.

ನಿರ್ಣಾಯಕ ದ್ವಿತೀಯ ಸುತ್ತಿನಲ್ಲೂ ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಸಿಂಧೂ, ಎದುರಾಳಿಯ ಮೇಲೆ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಹಿಂದಿನ ಪ್ರದರ್ಶನಕ್ಕೆ ಹೋಲಿಸಿದರೆ ಅನಗತ್ಯ ತಪ್ಪುಗಳಿಗೆ ಯಾವುದೇ ಆಸ್ಪದ ನೀಡದ ಸಿಂಧೂ, ತಮ್ಮ ಬಲವಾದ ಹೊಡೆತದಿಂದಲೇ ಎದುರಾಳಿ ಮೇಲೆ ಸವಾರಿ ಮಾಡಿದರು. ಹಾಗೆಯೇ ದ್ವಿತೀಯ ಸುತ್ತಿನಲ್ಲೂ ಒಂದು ಹಂತದಲ್ಲಿ16-4ರ ಮುನ್ನಡೆ ಗಳಿಸಿ ಪ್ರಶಸ್ತಿಯತ್ತ ಮುನ್ನಡೆದರು. ಅಂತಿಮವಾಗಿ ದ್ವಿತೀಯ ಗೇಮ್ 21-7ರ ಅಂತರದಲ್ಲಿ ವಶಪಡಿಸಿ ಚಿನ್ನದ ಹಾರವನ್ನುಕೊರಳಿಗೆ ಹಾಕಿಕೊಂಡರು.

ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಆಟಗಾರ್ತಿ ಚೀನಾದ ಚೆನ್ ಯು ಫಿ ಅವರನ್ನು21-7 ಮತ್ತು 21-14 ಗೇಮ್ಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ವೇದಿಕೆ ನಿರ್ಮಿಸಿಕೊಂಡರು. ಇದರೊಂದಿಗೆ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಸತತ 3ನೇ ಬಾರಿಗೆ ಫೈನಲ್ ಪ್ರವೇಶಿಸಿದ ವಿಶ್ವದ ಮೊದಲ ಆಟಗಾರ್ತಿಯೆನ್ನುವ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು. 2013ರ ಆವೃತ್ತಿಯಲ್ಲಿ ಸಿಂಧೂ ಕಂಚಿನ ಪದಕ ಜಯಿಸಿದ್ದರು. ಆಗ ಅವರಿಗೆ ಕೇವಲ 18 ವರ್ಷ. ಅದಾದ ಬಳಿಕ 2014ರ ಆವೃತ್ತಿಯಲ್ಲೂ ಕಂಚಿನ ಪದಕ ಗೆದ್ದಿದ್ದರು. ಇದರೊಂದಿಗೆ, ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸಿಂಧೂ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಒಟ್ಟು 5 ಪದಕ (ಹಾಲಿ ಆವೃತ್ತಿಯದೂ ಸೇರಿ) ಗೆದ್ದಂತಾಗಿದೆ.
ಸಿಂಧೂ ಪ್ರಮುಖ ಸಾಧನೆಗಳು:
ಒಲಿಂಪಿಕ್:
2016 ರಿಯೋ ಡಿ ಜನೈರೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ವಿಶ್ವ ಚಾಂಪಿಯನ್ಶಿಪ್:
2019 ಬಾಸೆಲ್: ಚಿನ್ನ ಪದಕ (ಮಹಿಳಾ ಸಿಂಗಲ್ಸ್)
2018 ನಾನ್ಜಿಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2017 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಕೊಪೆನ್ಹ್ಯಾಗನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
2013 ಗುವಾಂಗ್ಝೌ: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಏಷ್ಯನ್ ಗೇಮ್ಸ್:
2018 ಜಕಾರ್ತ-ಪ್ಯಾಲೆಮ್ಬ್ಯಾಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಇಂಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಕಾಮನ್ವೆಲ್ತ್ ಗೇಮ್ಸ್:
2018 ಗೋಲ್ಡ್ ಕೋಸ್ಟ್: ಚಿನ್ನದ ಪದಕ (ಮಿಶ್ರ ತಂಡ)
2018 ಗೋಲ್ಡ್ ಕೋಸ್ಟ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ಏಷ್ಯಾ ಚಾಂಪಿಯನ್ಶಿಪ್:
2014 ಗಿಮ್ಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್ಸಿ, ಎಸ್ಟಿ ಅಭ್ಯರ್ಥಿಗಳು, 32 ಒಬಿಸಿ, 9…
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…