News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
Sports

ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

30

ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ಪುಟ ಸೇರಿದ್ದಾರೆ. 

ಭಾರತದ ಬ್ಯಾಡ್ಮಿಂಟನ್ ಕಣ್ಮಣಿ ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.24ರ ಹರೆಯದ ಹೈದರಾಬಾದ್‌ ಆಟಗಾರ್ತಿ2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್‌ ಪ್ರವೇಶಿಸಿ, ಪ್ರಶಸ್ತಿ ಸೆಣಸಾಟದಲ್ಲಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಅದರಲ್ಲೂ ವಿಶೇಷವಾಗಿ2017ರ ಫೈನಲ್‌ನಲ್ಲಿ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು. ಜೀವಮಾನದಲ್ಲೇ ಅತ್ಯುನ್ನತ ಫಾರ್ಮ್‌ನಲ್ಲಿರುವ ಪಿವಿ ಸಿಂಧೂ, ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಹಾರ ಮಾಡ ತೊಡಗಿದರು. ಸಿಂಧೂ ಬಲವಾದ ಹೊಡೆತಕ್ಕೆ ಓಕುಹರಾ ಬಳಿ ಉತ್ತರವೇ ಇಲ್ಲ. ಇದರಿಂದಾಗಿ ಒಂದು ಹಂತದಲ್ಲಿ16-2ರ ಅಂತರದ ಮುನ್ನಡೆ ದಾಖಲಿಸಿದರು. ಅಲ್ಲದೆ ಮೊದಲ ಸುತ್ತನ್ನು21-7 ರ ಅಂತರದ ಸುಲಭವಾಗಿ ವಶಪಡಿಸಿಕೊಂಡರು. 

ನಿರ್ಣಾಯಕ ದ್ವಿತೀಯ ಸುತ್ತಿನಲ್ಲೂ ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಸಿಂಧೂ, ಎದುರಾಳಿಯ ಮೇಲೆ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಹಿಂದಿನ ಪ್ರದರ್ಶನಕ್ಕೆ ಹೋಲಿಸಿದರೆ ಅನಗತ್ಯ ತಪ್ಪುಗಳಿಗೆ ಯಾವುದೇ ಆಸ್ಪದ ನೀಡದ ಸಿಂಧೂ, ತಮ್ಮ ಬಲವಾದ ಹೊಡೆತದಿಂದಲೇ ಎದುರಾಳಿ ಮೇಲೆ ಸವಾರಿ ಮಾಡಿದರು. ಹಾಗೆಯೇ ದ್ವಿತೀಯ ಸುತ್ತಿನಲ್ಲೂ ಒಂದು ಹಂತದಲ್ಲಿ16-4ರ ಮುನ್ನಡೆ ಗಳಿಸಿ ಪ್ರಶಸ್ತಿಯತ್ತ ಮುನ್ನಡೆದರು. ಅಂತಿಮವಾಗಿ ದ್ವಿತೀಯ ಗೇಮ್ 21-7ರ ಅಂತರದಲ್ಲಿ ವಶಪಡಿಸಿ ಚಿನ್ನದ ಹಾರವನ್ನುಕೊರಳಿಗೆ ಹಾಕಿಕೊಂಡರು. 

ಶನಿವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಆಟಗಾರ್ತಿ ಚೀನಾದ ಚೆನ್‌ ಯು ಫಿ ಅವರನ್ನು21-7 ಮತ್ತು 21-14 ಗೇಮ್‌ಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ವೇದಿಕೆ ನಿರ್ಮಿಸಿಕೊಂಡರು. ಇದರೊಂದಿಗೆ ಬಿಡಬ್ಲ್ಯುಎಫ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಸತತ 3ನೇ ಬಾರಿಗೆ ಫೈನಲ್‌ ಪ್ರವೇಶಿಸಿದ ವಿಶ್ವದ ಮೊದಲ ಆಟಗಾರ್ತಿಯೆನ್ನುವ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು. 2013ರ ಆವೃತ್ತಿಯಲ್ಲಿ ಸಿಂಧೂ ಕಂಚಿನ ಪದಕ ಜಯಿಸಿದ್ದರು. ಆಗ ಅವರಿಗೆ ಕೇವಲ 18 ವರ್ಷ. ಅದಾದ ಬಳಿಕ 2014ರ ಆವೃತ್ತಿಯಲ್ಲೂ ಕಂಚಿನ ಪದಕ ಗೆದ್ದಿದ್ದರು. ಇದರೊಂದಿಗೆ, ರಿಯೊ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಸಿಂಧೂ ಬಿಡಬ್ಲ್ಯುಎಫ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಒಟ್ಟು 5 ಪದಕ (ಹಾಲಿ ಆವೃತ್ತಿಯದೂ ಸೇರಿ) ಗೆದ್ದಂತಾಗಿದೆ.

ಸಿಂಧೂ ಪ್ರಮುಖ ಸಾಧನೆಗಳು: 
ಒಲಿಂಪಿಕ್: 
2016 ರಿಯೋ ಡಿ ಜನೈರೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
ವಿಶ್ವ ಚಾಂಪಿಯನ್‌ಶಿಪ್: 
2019 ಬಾಸೆಲ್: ಚಿನ್ನ ಪದಕ (ಮಹಿಳಾ ಸಿಂಗಲ್ಸ್) 
2018 ನಾನ್‌ಜಿಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
2017 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
2014 ಕೊಪೆನ್‌ಹ್ಯಾಗನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್) 
2013 ಗುವಾಂಗ್‌ಝೌ: ಕಂಚಿನ ಪದಕ (ಮಹಿಳಾ ಸಿಂಗಲ್ಸ್) 
ಏಷ್ಯನ್ ಗೇಮ್ಸ್: 
2018 ಜಕಾರ್ತ-ಪ್ಯಾಲೆಮ್‌ಬ್ಯಾಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
2014 ಇಂಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್) 
ಕಾಮನ್‌ವೆಲ್ತ್ ಗೇಮ್ಸ್: 
2018 ಗೋಲ್ಡ್ ಕೋಸ್ಟ್: ಚಿನ್ನದ ಪದಕ (ಮಿಶ್ರ ತಂಡ) 
2018 ಗೋಲ್ಡ್ ಕೋಸ್ಟ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
2014 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
ಏಷ್ಯಾ ಚಾಂಪಿಯನ್‌ಶಿಪ್: 
2014 ಗಿಮ್ಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್) 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಕಿಂಗ್ ನ್ಯೂಸ್ : 7ರ ಬಾಲಕನ ಬಾಯಲ್ಲಿತ್ತು 526 ಹಲ್ಲುಗಳು…!

    ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…

  • ಸುದ್ದಿ

    ಕಾಡಿನ ನಾಶವಾಗುತ್ತಿರುವ ಹಿನ್ನೆಲೆ ಬಗ್ಗೆ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಹೇಳಿದ್ದೇನು..?

    ನೀರಿನ  ಸಂರಕ್ಷಣೆಗಾಗಿ ನ್ಯೂಸ್ ​18 ಹಮ್ಮಿಕೊಂಡಿರುವ  #Mission Paani ಆಂದೋಲನ  ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್​ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್​ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….

  • ಸಿನಿಮಾ

    ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

    ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…

  • ಜ್ಯೋತಿಷ್ಯ

    ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

    ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…

  • ವಿಜ್ಞಾನ

    ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

    ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…