ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ಪುಟ ಸೇರಿದ್ದಾರೆ.

ಭಾರತದ ಬ್ಯಾಡ್ಮಿಂಟನ್ ಕಣ್ಮಣಿ ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.24ರ ಹರೆಯದ ಹೈದರಾಬಾದ್ ಆಟಗಾರ್ತಿ2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್ ಪ್ರವೇಶಿಸಿ, ಪ್ರಶಸ್ತಿ ಸೆಣಸಾಟದಲ್ಲಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಅದರಲ್ಲೂ ವಿಶೇಷವಾಗಿ2017ರ ಫೈನಲ್ನಲ್ಲಿ ಜಪಾನ್ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು. ಜೀವಮಾನದಲ್ಲೇ ಅತ್ಯುನ್ನತ ಫಾರ್ಮ್ನಲ್ಲಿರುವ ಪಿವಿ ಸಿಂಧೂ, ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಹಾರ ಮಾಡ ತೊಡಗಿದರು. ಸಿಂಧೂ ಬಲವಾದ ಹೊಡೆತಕ್ಕೆ ಓಕುಹರಾ ಬಳಿ ಉತ್ತರವೇ ಇಲ್ಲ. ಇದರಿಂದಾಗಿ ಒಂದು ಹಂತದಲ್ಲಿ16-2ರ ಅಂತರದ ಮುನ್ನಡೆ ದಾಖಲಿಸಿದರು. ಅಲ್ಲದೆ ಮೊದಲ ಸುತ್ತನ್ನು21-7 ರ ಅಂತರದ ಸುಲಭವಾಗಿ ವಶಪಡಿಸಿಕೊಂಡರು.

ನಿರ್ಣಾಯಕ ದ್ವಿತೀಯ ಸುತ್ತಿನಲ್ಲೂ ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಸಿಂಧೂ, ಎದುರಾಳಿಯ ಮೇಲೆ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಹಿಂದಿನ ಪ್ರದರ್ಶನಕ್ಕೆ ಹೋಲಿಸಿದರೆ ಅನಗತ್ಯ ತಪ್ಪುಗಳಿಗೆ ಯಾವುದೇ ಆಸ್ಪದ ನೀಡದ ಸಿಂಧೂ, ತಮ್ಮ ಬಲವಾದ ಹೊಡೆತದಿಂದಲೇ ಎದುರಾಳಿ ಮೇಲೆ ಸವಾರಿ ಮಾಡಿದರು. ಹಾಗೆಯೇ ದ್ವಿತೀಯ ಸುತ್ತಿನಲ್ಲೂ ಒಂದು ಹಂತದಲ್ಲಿ16-4ರ ಮುನ್ನಡೆ ಗಳಿಸಿ ಪ್ರಶಸ್ತಿಯತ್ತ ಮುನ್ನಡೆದರು. ಅಂತಿಮವಾಗಿ ದ್ವಿತೀಯ ಗೇಮ್ 21-7ರ ಅಂತರದಲ್ಲಿ ವಶಪಡಿಸಿ ಚಿನ್ನದ ಹಾರವನ್ನುಕೊರಳಿಗೆ ಹಾಕಿಕೊಂಡರು.

ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಆಟಗಾರ್ತಿ ಚೀನಾದ ಚೆನ್ ಯು ಫಿ ಅವರನ್ನು21-7 ಮತ್ತು 21-14 ಗೇಮ್ಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ವೇದಿಕೆ ನಿರ್ಮಿಸಿಕೊಂಡರು. ಇದರೊಂದಿಗೆ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಸತತ 3ನೇ ಬಾರಿಗೆ ಫೈನಲ್ ಪ್ರವೇಶಿಸಿದ ವಿಶ್ವದ ಮೊದಲ ಆಟಗಾರ್ತಿಯೆನ್ನುವ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು. 2013ರ ಆವೃತ್ತಿಯಲ್ಲಿ ಸಿಂಧೂ ಕಂಚಿನ ಪದಕ ಜಯಿಸಿದ್ದರು. ಆಗ ಅವರಿಗೆ ಕೇವಲ 18 ವರ್ಷ. ಅದಾದ ಬಳಿಕ 2014ರ ಆವೃತ್ತಿಯಲ್ಲೂ ಕಂಚಿನ ಪದಕ ಗೆದ್ದಿದ್ದರು. ಇದರೊಂದಿಗೆ, ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸಿಂಧೂ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಒಟ್ಟು 5 ಪದಕ (ಹಾಲಿ ಆವೃತ್ತಿಯದೂ ಸೇರಿ) ಗೆದ್ದಂತಾಗಿದೆ.
ಸಿಂಧೂ ಪ್ರಮುಖ ಸಾಧನೆಗಳು:
ಒಲಿಂಪಿಕ್:
2016 ರಿಯೋ ಡಿ ಜನೈರೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ವಿಶ್ವ ಚಾಂಪಿಯನ್ಶಿಪ್:
2019 ಬಾಸೆಲ್: ಚಿನ್ನ ಪದಕ (ಮಹಿಳಾ ಸಿಂಗಲ್ಸ್)
2018 ನಾನ್ಜಿಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2017 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಕೊಪೆನ್ಹ್ಯಾಗನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
2013 ಗುವಾಂಗ್ಝೌ: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಏಷ್ಯನ್ ಗೇಮ್ಸ್:
2018 ಜಕಾರ್ತ-ಪ್ಯಾಲೆಮ್ಬ್ಯಾಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಇಂಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಕಾಮನ್ವೆಲ್ತ್ ಗೇಮ್ಸ್:
2018 ಗೋಲ್ಡ್ ಕೋಸ್ಟ್: ಚಿನ್ನದ ಪದಕ (ಮಿಶ್ರ ತಂಡ)
2018 ಗೋಲ್ಡ್ ಕೋಸ್ಟ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ಏಷ್ಯಾ ಚಾಂಪಿಯನ್ಶಿಪ್:
2014 ಗಿಮ್ಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…