News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

156

ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ.

ಇದರಲ್ಲಿ ಕೀಟಾಣು ವಿರೋಧಿ ಗುಣಗಳಿವೆ. ಇಷ್ಟು ಮಾತ್ರವಲ್ಲದೆ ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು.

ಒಂದು ಲೋಟ ‘ಪುದೀನಾ ಜ್ಯೂಸ್‌’ನಲ್ಲಿದೆ ಔಷಧೀಯ ಶಕ್ತಿ! ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆರೋಗ್ಯ ಗುಣಗಳನ್ನು ಹೊರತುಪಡಿಸಿ ಪುದೀನಾ ಎಲೆಗಳು ಸೊಳ್ಳೆ ಮತ್ತು ಕೀಟಗಳನ್ನು ಓಡಿಸುವಲ್ಲಿ ಪರಿಣಾಮಕಾರಿ. ಪುದೀನಾ ಎಲೆಗಳಿಂದ ಆಗುವಂತಹ ಲಾಭಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ
ವಿಟಮಿನ್ ಸಿ ಹೆಚ್ಚಿಸುವುದು:-

ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಪುದೀನಾ ಎಲೆಗಳು ಪ್ರತಿರೊಧಕ ಶಕ್ತಿ ಹೆಚ್ಚಿಸುವುದು. ನೀವು ಸೇವಿಸುವ ಆಹಾರದಲ್ಲಿ ಪುದೀನಾದ ಕೆಲವು ಎಲೆಗಳನ್ನು ಹಾಕಿದರೆ ಒಳ್ಳೆಯ ಫಲಿತಾಂಶ ಸಿಗುವುದು.

ಬಾಯಿಯ ಕೆಟ್ಟ ವಾಸನೆ ತಡೆಯುವುದು :-

ಪುದೀನಾದಲ್ಲಿ ಇರುವಂತಹ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಪುದೀನಾದ ಪ್ರಮುಖ ಆರೋಗ್ಯ ಗುಣಗಳಲ್ಲಿ ಒಂದಾಗಿದೆ.

ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಂಡು ಜಗಿಯಿರಿ. ಇದು ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾದ ನಿವಾರಣೆ ಮಾಡುವುದು.

ಅಜೀರ್ಣ ನಿವಾರಣೆ :-

ನೀವು ಅಜೀರ್ಣದಿಂದ ಬಳಲುತ್ತಾ ಇದ್ದರೆ ಪುದೀನಾ ಎಲೆಗಳು ನಿಮ್ಮ ನೆರವಿಗೆ ಬರಲಿದೆ. ಪುದೀನಾ ಎಲೆಗಳು ಜೊಲ್ಲುರಸದ ಗ್ರಂಥಿಗಳನ್ನು ಕ್ರಿಯಾತ್ಮಕಗೊಳಿಸುವುದು ಮತ್ತು ಕಿಣ್ವಗಳನ್ನು ಪ್ರೇರೇಪಿಸುವ ಮೂಲಕ ಜೀರ್ಣಕ್ರಿಯೆಗೆ ಶಕ್ತಿ ನೀಡುವುದು.

ಕೆಲವು ತಾಜಾ ಪುದೀನಾ ಎಲೆಗಳನ್ನು ತೆಗೆದುಕೊಂಡು ಅದನ್ನು ಒಂದು ಲೋಟ ನೀರಿಗೆ ಹಾಕಿ ಮತ್ತು ಐದು ನಿಮಿಷ ಕಾಲ ಹಾಗೆ ಬಿಡಿ. ಬಳಿಕ ನೀರನ್ನು ಕುಡಿಯಿರಿ.

ಶ್ವಾಸಕೋಶದ ರೋಗ ತಡೆಯುವುದು:-

ನಿಮಗೆ ಕೆಲವೊಮ್ಮೆ ಉಸಿರಾಡಲು ತುಂಬಾ ಕಷ್ಟವಾಗುತ್ತಿದೆ ಎಂದಾದರೆ ನೀವು ಕೆಲವು ಪುದೀನಾ ಎಲೆಗಳನ್ನು ತೆಗೆದುಕೊಳ್ಳಿ. ಪುದೀನಾ ಎಲೆಗಳಲ್ಲಿ ರೊಸ್ಮರಿನಿಕ್ ಆಮ್ಲವಿದೆ. ಇದು ಆ್ಯಂಟಿಆಕ್ಸಿಡೆಂಟ್ ನಿಂದ ಸಮೃದ್ಧವಾಗಿದೆ.

ಇದು ಫ್ರೀ ರ್ಯಾಡಿಕಲ್ ಅನ್ನು ತಟಸ್ಥಗೊಳಿಸುವುದು ಮತ್ತು ಉರಿಯೂತದ ರಾಸಾಯನಿಕವನ್ನು ನಿರ್ಬಂಧಿಸುವುದು. ಇದರಿಂದ ಉಸಿರಾಟದ ವ್ಯವಸ್ಥೆಗೆ ಪರಿಣಾಮವಾಗುವುದು. ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಪುದೀನಾವನ್ನು ಬಳಸಿಕೊಂಡರೆ ಉಸಿರಾಟದ ಸಮಸ್ಯೆ ನಿವಾರಣೆಯಾಗುವುದು.

ತಲೆನೋವು ಮತ್ತು ವಾಕರಿಕೆ ನಿವಾರಣೆ :-

ಪುದೀನಾ ಎಲೆಗಳಲ್ಲಿ ಉರಿಯೂತ ಶಮನಕಾರಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳು ಇವೆ. ಪುದೀನಾ ಎಣ್ಣೆ ತೆಗೆದುಕೊಂಡು ಅದನ್ನು ಹಣೆಗೆ ಹಚ್ಚಿಕೊಳ್ಳಿ ಇದರಿಂದ ತಲೆನೋವು ಮತ್ತು ವಾಕರಿಕೆ ನಿವಾರಣೆಯಾಗುವುದು.

ತೂಕ ಕಳೆದುಕೊಳ್ಳಲು:-

ಪುದೀನಾ ತುಂಬಾ ಕಡಿಮೆ ಕ್ಯಾಲರಿಗಳನ್ನು ಒಳಗೊಂಡಿರುವಂತಹ ಗಿಡಮೂಲಿಕೆ ಮತ್ತು ಇದರಲ್ಲಿ ನಾರಿನಾಂಶವು ಅಧಿಕವಾಗಿದೆ. ಪುದೀನಾ ಎಲೆಗಳು ಜೀರ್ಣಕ್ರಿಯೆ ಕಿಣ್ವಗಳನ್ನು ಉತ್ತೇಜಿಸುವುದು.

ಇದರಿಂದ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಾಧ್ಯವಾಗುವುದು. ಕೊಬ್ಬು ದಹಿಸುವ ಮೂಲಕ ಶಕ್ತಿ ಬಿಡುಗಡೆಯಾಗುವುದು. ನಿಮಗೆ ತೂಕ ಕಳೆದುಕೊಳ್ಳಬೇಕೆಂದು ಮನಸ್ಸಿದ್ದರೆ ಪುದೀನಾವನ್ನು ದೈನಂದಿನ ಆಹಾರದಲ್ಲಿ ಬಳಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…

  • ಸುದ್ದಿ

    ತುಂಬು ಗರ್ಭಿಣಿಯಾದ ಬಹುಭಾಷಾ ನಟಿ ಸಮೀರಾ ರೆಡ್ಡಿ ಅವರಿಂದ ಅಂಡರ್‌ವಾಟರ್ ಫೋಟೋಶೂಟ್…!

    ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಜ್ಯೋತಿಷ್ಯ

    ಇದ್ದಕಿದ್ದಂತೆ ನಿಮ್ಮ ಜೇಬಿನಲ್ಲಿರುವ ನಾಣ್ಯ ಅಥ್ವಾ ನೋಟು ಕೆಳಗಡೆ ಬಿದ್ರೆ ಏನಾಗುತ್ತೆ ಗೊತ್ತಾ..?

    ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…

  • inspirational, ಸುದ್ದಿ

    ದಾನ ಶೂರ ವೀರ ಕರ್ಣ ಸಾಯುವ ಮುನ್ನ ಕೊನೆಯ ಆಸೆಯನ್ನು ಕೇಳಿದಾಗ ಕೃಷ್ಣನೇ ಬೆಚ್ಚಿಬೆರಗಾದ, ಅಲ್ಲಿ ಏನು ನಡೆಯಿತು ಗೊತ್ತಾ?

    ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…