ಸುದ್ದಿ

ಪುಲ್ವಾಮಾ ದಾಳಿ ಬಗ್ಗೆ ನನಗೆ ಗೊತ್ತಿಲ್ಲ!ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದ ಸ್ಯಾಮ್ ಪಿತ್ರೋಡಾ..!

55

ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್​​ನಲ್ಲಿ ನಡೆಸಿದ ಏರ್​ಸ್ಟ್ರೈಕ್ ಬಗ್ಗೆ ಓವರ್​ಸೀಸ್​ ಇಂಡಿಯನ್ ನ್ಯಾಷನಲ್​​​ ಕಾಂಗ್ರೆಸ್​​ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್​ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ ಎಸಗಿದ್ದನ್ನು ಪರಿಗಣಿಸಿ ಪಾಕಿಸ್ತಾನವನ್ನು ಸಂಪೂರ್ಣವಾಗಿ ದೂಷಣೆ ಮಾಡುವುದು ಸರಿಯಲ್ಲ. ಈ ವಿಚಾರದಲ್ಲಿ ನಾನು ನಂಬಿಕೆಯನ್ನು ಇಟ್ಟಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಪುಲ್ವಾಮಾ ದಾಳಿ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ಈ ರೀತಿಯ ದಾಳಿ ನಡೆಯುತ್ತಲೇ ಇರುತ್ತದೆ. ಮುಂಬೈ ದಾಳಿಯಾದಾಗ ನಾವು ವಿಮಾನವನ್ನು ಪಾಕಿಸ್ತಾನಕ್ಕೆ ಕಳುಹಿಸಬಹುದಿತ್ತು. ಆದರೆ ನನ್ನ ಪ್ರಕಾರ ಇದು ಸರಿಯಾದ ನಿರ್ಧಾರ ಅಲ್ಲ ಎಂದು ಹೇಳಿದರು.

ಸುದ್ದಿ ಸಂಸ್ಥೆಯೊಂದಿಗೆ ನಡೆದ ಸಂದರ್ಶನದಲ್ಲಿ ಮಾತನಾಡಿದ ಪಿತ್ರೋಡ, ನಿಜಕ್ಕೂ ದಾಳಿ ನಡೆಯಿತಾ? ನಿಜಕ್ಕೂ 300 ಜನರನ್ನು ಕೊಲ್ಲಲಾಯಿತಾ? ನನಗೆ ಗೊತ್ತಿಲ್ಲ. ಒಬ್ಬ ಪ್ರಜೆಯಾಗಿ ಇದನ್ನು ಕೇಳುವುದು ನನ್ನ ಕರ್ತವ್ಯ. ವಿದೇಶಿ ಮಾಧ್ಯಮಗಳು ಈ ಏರ್​​ಸ್ಟ್ರೈಕ್​ ಬಗ್ಗೆ ಬೇರೆಯದ್ದೇ ರೀತಿಯಲ್ಲಿ ವರದಿ ಮಾಡಿವೆ ಎಂದು ಹೇಳಿದ್ರು.

ನಾನು ಗಾಂಧಿವಾದಿ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ನಂಬಿರುವವನು ಎಂದು ಹೇಳಿದ್ರು. ಹಾಗಿದ್ರೆ ಪಾಕಿಸ್ತಾನದೊಂದಿಗೆ ಮಾತುಕತೆ ಮಾಡಿ ಪರಿಹಾರ ಕಂಡುಕೊಳ್ಳಬೇಕಾ ಎಂದು ಮತ್ತೆ ಪ್ರಶ್ನಿಸಿದಾಗ, ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ದೇಶವನ್ನು ದೂಷಿಸುವುದು ತಿಳಿಗೇಡಿತನ ಎಂದರು. ನನಗೆ ಪುಲ್ವಾಮಾ ದಾಳಿ ಬಗ್ಗೆ ಅಷ್ಟಾಗಿ ಗೊತ್ತಿಲ್ಲ. ಇದು ಯಾವಾಗಲೂ ನಡೆಯುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.

ಈ ವಿಚಾರದ ಬಗ್ಗೆ ಮತ್ತಷ್ಟು ಸ್ಪಷ್ಟನೆ ನೀಡಿದ ಅವರು, ನಾನು ಕಾಂಗ್ರೆಸ್ ಪಕ್ಷದ ಪರವಾಗಿ ಹೇಳಿಕೆ ನೀಡುತ್ತಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ನಾನು ಒಬ್ಬ ವಿಜ್ಞಾನಿ. ನಾನು ಡೇಟಾಗಳನ್ನು ನಂಬುತ್ತೇನೆ ಹೊರತು ಭಾವನೆಗಳನ್ನು ನಂಬುವುದಿಲ್ಲ ಎಂದು ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…

  • ಮನರಂಜನೆ

    ಬಿಗ್ ಬಾಸ್-5ರ ಪಟ್ಟ ಯಾರಿಗೆ.?ಕಾಮಾನ್ ಮ್ಯಾನ್ Vs ಸೆಲೆಬ್ರೆಟಿಸ್!ಸೋಶಿಯಲ್ ಮೀಡಿಯಾದಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ?ಇಲ್ಲಿದೆ ಪೂರ್ತಿ ವಿವರ,ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…

  • ಸುದ್ದಿ

    ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

    ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading