Health

ಪೇರಳ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

91

ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್‌ ಆಗಬೇಕೆನ್ನುವವರು ಡಯಟಿಂಗ್‌ ಲಿಸ್ಟ್‌ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್. ಇದು ಸುಲಭವಾಗಿ ದೊರೆಯುವ೦ತಹ ಹಣ್ಣೂ ಕೂಡ ಹೌದು.


ಆರೋಗ್ಯವೃದ್ಧಿ

ಕಿತ್ತಳೆ ಹಣ್ಣಿಗಿಂತ ಅತಿ ಹೆಚ್ಚು ವಿಟಮಿನ್‌ ಸಿ ಅಂಶ ಹೊಂದಿರುವ ಈ ಹಣ್ಣು ಸೇವಿಸುವುದರಿಂದ ಅಲ್ಜೈಮರ್‌, ಅರ್ಥರೈಟಿಸ್‌ ಹಾಗೂ ಕಣ್ಣಿನ ಪೂರೆಯುಂಟಾಗುವಂತಹ ಕಾಯಿಲೆಗಳನ್ನು ದೂರಾಗಿಸುತ್ತದಂತೆ. ಇನ್ನು ಇದರಲ್ಲಿರುವ ಅತ್ಯಧಿಕ ಫೈಬರ್‌ ಅಂಶ ದೇಹದ ಜೀರ್ಣಕ್ರಿಯೆ ಹೆಚ್ಚಿಸಿ ಮಲಬದ್ಧತೆ ನಿವಾರಿಸುತ್ತದೆ. ಅಷ್ಟೇ ಏಕೆ? ಕ್ಯಾನ್ಸರ್‌ ಹಾಗೂ ಹೃದಯ ಕಾಯಿಲೆಗಳನ್ನು ದೂರವಿಡುತ್ತದಂತೆ.



ಸಂಶೋಧನೆಯೊಂದರ ಪ್ರಕಾರ, ಮಧುಮೇಹ ಕಾಯಿಲೆಯಿಂದ ನರಳುವವರು ಸೀಬೆಹಣ್ಣನ್ನು ತಿನ್ನುವಾಗ ಅದರ ಮೇಲಿನ ಹಸಿರು ಸಿಪ್ಪೆಯನ್ನು ತೆಗೆದು ಸೇವಿಸಿದರೆ ಒಳಿತು. ಏಕೆಂದರೆ, ಅದರಲ್ಲಿನ ಅತ್ಯಧಿಕ ಗ್ಲೂಕೋಸ್‌ ಪ್ರಮಾಣ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸುವುದು.

ತ್ವಚೆಯ ಆರೋಗ್ಯಕ್ಕೆ ಸೀಬೆ ಹಣ್ಣಿನಲ್ಲಿರುವ ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದು ತ್ವಚೆಯ ಆರೋಗ್ಯವನ್ನು ಹೆಚ್ಚಿಸುವ ಒ೦ದು ಪ್ರಮುಖ ವಿಟಮಿನ್ ಆಗಿದೆ. ಸೀಬೆ ಹಣ್ಣಿನಲ್ಲಿರುವ ಆ೦ಟಿ ಆಕ್ಸಿಡೆ೦ಟ್ ಗಳು ತ್ವಚೆಯು ತಾರುಣ್ಯಪೂರ್ಣವಾಗಿ ಕಾಣವ೦ತಾಗಲು ಸಹಕರಿಸುತ್ತವೆ


ಕಾಂತಿ ಹೆಚ್ಚಳ

ವಿಟಮಿನ್‌ ಎ, ಬಿ ಹಾಗೂ ಸಿ ಮತ್ತು ಪೊಟಾಶಿಯಂ ಅಂಶಗಳನ್ನು ಹೊಂದಿರುವ ಸೀಬೆಕಾಯಿ, ತ್ವಚೆಯ ಕಾಂತಿಯನ್ನು ಹೆಚ್ಚಿಸುತ್ತದಂತೆ. ಇದಕ್ಕಾಗಿ ಸೀಬೆ ಎಲೆಗಳ ಪೇಸ್ಟ್‌ ಮಾಡಿ, ಅದನ್ನ ಮುಖಕ್ಕೆ ಹಚ್ಚಿ ತೊಳೆದಲ್ಲಿ ಜಿಡ್ಡಿನಾಂಶ ಮಾಯವಾಗಿ ಚರ್ಮ ಬಿಗಿಯಾಗಿ ಕಾಂತಿಯುಕ್ತವಾಗುತ್ತದೆ ಎನ್ನುತ್ತಾರೆ ಬ್ಯೂಟಿ ಎಕ್ಸ್‌ಪರ್ಟ್‌.

ಮೆದುಳು ಚುರುಕು

ಇದರಲ್ಲಿರುವ ವಿಟಮಿನ್‌ ಬಿ6ನಿಂದ ಮಿದುಳು ಚುರುಕಾಗುತ್ತದೆ. ಓದುವ ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಅಧಿಕ ನಾರಿನಂಶವು ಮಧುಮೇಹಿಗಳಿಗೆ ರಕ್ತದಲ್ಲಿ ಸಕ್ಕರೆ ಅಂಶ ಜಾಸ್ತಿಯಾಗದಂತೆ ತಡೆಗಟ್ಟುತ್ತವೆ. ಕೆಲವರಿಗೆ ಸೀಬೆಹಣ್ಣಿನಿಂದ ಗಂಟಲಲ್ಲಿ ಅಲರ್ಜಿಯಾಗುವ ಸಾಧ್ಯತೆಗಳಿವೆ. ಅಂಥವರು ಹಣ್ಣಿಗೆ ಉಪ್ಪು ಬೆರೆಸಿ ಸೇವಿಸಬೇಕು. ವೃದ್ಧರು, ಹಲ್ಲಿನ ತೊಂದರೆ ಇರುವವರು ಸೀಬೆಹಣ್ಣಿನ ಜ್ಯೂಸ್‌ ಸೇವಿಸಬಹುದು.


ನೆಗಡಿ ನಿವಾರಕ

ಸೀಬೆಹಣ್ಣಿನಿಂದ ಶೀತ, ನೆಗಡಿ ಉಂಟಾಗುವುದಿಲ್ಲ. ಬದಲಿಗೆ ಶೀತ-ನೆಗಡಿಯನ್ನು ಉಂಟು ಮಾಡುವ ಬ್ಯಾಕ್ಟೀರಿಯಗಳನ್ನು ನಾಶಗೊಳಿಸುತ್ತವೆ. ಈ ಗುಣದಿಂದ ಇದನ್ನು ಅತಿಸಾರ ಹಾಗೂ ವಾಂತಿ-ಭೇದಿ ಇರುವ ಮಂದಿ ಸೇವಿಸುವುದರಿಂದ ಉಪಯುಕ್ತ

ಕಣ್ಣುಗಳ ಆರೋಗ್ಯಕ್ಕೆ ಮತ್ತೊಮ್ಮೆ, ಸೀಬೆ ಹಣ್ಣಿನ ಸೋಜಿಗವೆ೦ದೆನಿಸುವಷ್ಟು ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದರಲ್ಲಿ ವಿಟಮಿನ್ ಎ ಶೇ. 21 ಇದ್ದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ಇರುಳು ಕುರುಡು ಉಂಟಾಗದಂತೆ ಕಣ್ಣನ್ನು ರಕ್ಷಣೆ ಮಾಡುತ್ತದೆ.


ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ವೃದ್ಧಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅತ್ಯ೦ತ ಪುಷ್ಟಿದಾಯಕವಾದ ಆಹಾರವಸ್ತುಗಳ ಪೈಕಿ ಸೀಬೆ ಹಣ್ಣೂ ಸಹ ಒ೦ದು. ಸೀಬೆ ಹಣ್ಣಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಸಿ ಯು ಶರೀರದ ರೋಗನಿರೋಧಕ ವ್ಯವಸ್ಥೆಗೆ ಬಲವನ್ನೊದಗಿಸುತ್ತದೆ ಹಾಗೂ ತನ್ಮೂಲಕ ರೋಗಗಳ ವಿರುದ್ಧ ಸೆಣಸಾಡುವ ನಿಮ್ಮ ಶರೀರದ ಸಾಮರ್ಥ್ಯವನ್ನು ಸುಧಾರಿಸುತ್ತದೆ

souce : internet


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ನೀತಿ ಕಥೆ

    ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

    ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…

  • ಆರೋಗ್ಯ

    ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು

  • ಸುದ್ದಿ

    50 ವರ್ಷದ ಹಿಂದೆ ಸತ್ತು ಸಮಾಧಿಯಾದವನು ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ.ಹೇಗೆ ಗೊತ್ತಾ,.??

    ಐವತ್ತು ವರ್ಷಗಳ  ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ  ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…