Health

ಪೇರಳ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

115

ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್‌ ಆಗಬೇಕೆನ್ನುವವರು ಡಯಟಿಂಗ್‌ ಲಿಸ್ಟ್‌ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್. ಇದು ಸುಲಭವಾಗಿ ದೊರೆಯುವ೦ತಹ ಹಣ್ಣೂ ಕೂಡ ಹೌದು.


ಆರೋಗ್ಯವೃದ್ಧಿ

ಕಿತ್ತಳೆ ಹಣ್ಣಿಗಿಂತ ಅತಿ ಹೆಚ್ಚು ವಿಟಮಿನ್‌ ಸಿ ಅಂಶ ಹೊಂದಿರುವ ಈ ಹಣ್ಣು ಸೇವಿಸುವುದರಿಂದ ಅಲ್ಜೈಮರ್‌, ಅರ್ಥರೈಟಿಸ್‌ ಹಾಗೂ ಕಣ್ಣಿನ ಪೂರೆಯುಂಟಾಗುವಂತಹ ಕಾಯಿಲೆಗಳನ್ನು ದೂರಾಗಿಸುತ್ತದಂತೆ. ಇನ್ನು ಇದರಲ್ಲಿರುವ ಅತ್ಯಧಿಕ ಫೈಬರ್‌ ಅಂಶ ದೇಹದ ಜೀರ್ಣಕ್ರಿಯೆ ಹೆಚ್ಚಿಸಿ ಮಲಬದ್ಧತೆ ನಿವಾರಿಸುತ್ತದೆ. ಅಷ್ಟೇ ಏಕೆ? ಕ್ಯಾನ್ಸರ್‌ ಹಾಗೂ ಹೃದಯ ಕಾಯಿಲೆಗಳನ್ನು ದೂರವಿಡುತ್ತದಂತೆ.



ಸಂಶೋಧನೆಯೊಂದರ ಪ್ರಕಾರ, ಮಧುಮೇಹ ಕಾಯಿಲೆಯಿಂದ ನರಳುವವರು ಸೀಬೆಹಣ್ಣನ್ನು ತಿನ್ನುವಾಗ ಅದರ ಮೇಲಿನ ಹಸಿರು ಸಿಪ್ಪೆಯನ್ನು ತೆಗೆದು ಸೇವಿಸಿದರೆ ಒಳಿತು. ಏಕೆಂದರೆ, ಅದರಲ್ಲಿನ ಅತ್ಯಧಿಕ ಗ್ಲೂಕೋಸ್‌ ಪ್ರಮಾಣ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸುವುದು.

ತ್ವಚೆಯ ಆರೋಗ್ಯಕ್ಕೆ ಸೀಬೆ ಹಣ್ಣಿನಲ್ಲಿರುವ ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದು ತ್ವಚೆಯ ಆರೋಗ್ಯವನ್ನು ಹೆಚ್ಚಿಸುವ ಒ೦ದು ಪ್ರಮುಖ ವಿಟಮಿನ್ ಆಗಿದೆ. ಸೀಬೆ ಹಣ್ಣಿನಲ್ಲಿರುವ ಆ೦ಟಿ ಆಕ್ಸಿಡೆ೦ಟ್ ಗಳು ತ್ವಚೆಯು ತಾರುಣ್ಯಪೂರ್ಣವಾಗಿ ಕಾಣವ೦ತಾಗಲು ಸಹಕರಿಸುತ್ತವೆ


ಕಾಂತಿ ಹೆಚ್ಚಳ

ವಿಟಮಿನ್‌ ಎ, ಬಿ ಹಾಗೂ ಸಿ ಮತ್ತು ಪೊಟಾಶಿಯಂ ಅಂಶಗಳನ್ನು ಹೊಂದಿರುವ ಸೀಬೆಕಾಯಿ, ತ್ವಚೆಯ ಕಾಂತಿಯನ್ನು ಹೆಚ್ಚಿಸುತ್ತದಂತೆ. ಇದಕ್ಕಾಗಿ ಸೀಬೆ ಎಲೆಗಳ ಪೇಸ್ಟ್‌ ಮಾಡಿ, ಅದನ್ನ ಮುಖಕ್ಕೆ ಹಚ್ಚಿ ತೊಳೆದಲ್ಲಿ ಜಿಡ್ಡಿನಾಂಶ ಮಾಯವಾಗಿ ಚರ್ಮ ಬಿಗಿಯಾಗಿ ಕಾಂತಿಯುಕ್ತವಾಗುತ್ತದೆ ಎನ್ನುತ್ತಾರೆ ಬ್ಯೂಟಿ ಎಕ್ಸ್‌ಪರ್ಟ್‌.

ಮೆದುಳು ಚುರುಕು

ಇದರಲ್ಲಿರುವ ವಿಟಮಿನ್‌ ಬಿ6ನಿಂದ ಮಿದುಳು ಚುರುಕಾಗುತ್ತದೆ. ಓದುವ ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಅಧಿಕ ನಾರಿನಂಶವು ಮಧುಮೇಹಿಗಳಿಗೆ ರಕ್ತದಲ್ಲಿ ಸಕ್ಕರೆ ಅಂಶ ಜಾಸ್ತಿಯಾಗದಂತೆ ತಡೆಗಟ್ಟುತ್ತವೆ. ಕೆಲವರಿಗೆ ಸೀಬೆಹಣ್ಣಿನಿಂದ ಗಂಟಲಲ್ಲಿ ಅಲರ್ಜಿಯಾಗುವ ಸಾಧ್ಯತೆಗಳಿವೆ. ಅಂಥವರು ಹಣ್ಣಿಗೆ ಉಪ್ಪು ಬೆರೆಸಿ ಸೇವಿಸಬೇಕು. ವೃದ್ಧರು, ಹಲ್ಲಿನ ತೊಂದರೆ ಇರುವವರು ಸೀಬೆಹಣ್ಣಿನ ಜ್ಯೂಸ್‌ ಸೇವಿಸಬಹುದು.


ನೆಗಡಿ ನಿವಾರಕ

ಸೀಬೆಹಣ್ಣಿನಿಂದ ಶೀತ, ನೆಗಡಿ ಉಂಟಾಗುವುದಿಲ್ಲ. ಬದಲಿಗೆ ಶೀತ-ನೆಗಡಿಯನ್ನು ಉಂಟು ಮಾಡುವ ಬ್ಯಾಕ್ಟೀರಿಯಗಳನ್ನು ನಾಶಗೊಳಿಸುತ್ತವೆ. ಈ ಗುಣದಿಂದ ಇದನ್ನು ಅತಿಸಾರ ಹಾಗೂ ವಾಂತಿ-ಭೇದಿ ಇರುವ ಮಂದಿ ಸೇವಿಸುವುದರಿಂದ ಉಪಯುಕ್ತ

ಕಣ್ಣುಗಳ ಆರೋಗ್ಯಕ್ಕೆ ಮತ್ತೊಮ್ಮೆ, ಸೀಬೆ ಹಣ್ಣಿನ ಸೋಜಿಗವೆ೦ದೆನಿಸುವಷ್ಟು ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದರಲ್ಲಿ ವಿಟಮಿನ್ ಎ ಶೇ. 21 ಇದ್ದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ಇರುಳು ಕುರುಡು ಉಂಟಾಗದಂತೆ ಕಣ್ಣನ್ನು ರಕ್ಷಣೆ ಮಾಡುತ್ತದೆ.


ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ವೃದ್ಧಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅತ್ಯ೦ತ ಪುಷ್ಟಿದಾಯಕವಾದ ಆಹಾರವಸ್ತುಗಳ ಪೈಕಿ ಸೀಬೆ ಹಣ್ಣೂ ಸಹ ಒ೦ದು. ಸೀಬೆ ಹಣ್ಣಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಸಿ ಯು ಶರೀರದ ರೋಗನಿರೋಧಕ ವ್ಯವಸ್ಥೆಗೆ ಬಲವನ್ನೊದಗಿಸುತ್ತದೆ ಹಾಗೂ ತನ್ಮೂಲಕ ರೋಗಗಳ ವಿರುದ್ಧ ಸೆಣಸಾಡುವ ನಿಮ್ಮ ಶರೀರದ ಸಾಮರ್ಥ್ಯವನ್ನು ಸುಧಾರಿಸುತ್ತದೆ

souce : internet


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಇಡೀ ದಿನ ಖುಷಿಯಾಗಿ ಇರಬೇಕೆಂದ್ರೆ ಈ 6 ಅಭ್ಯಾಸಗಳನ್ನು ಶುರುಹಚ್ಕೊಳ್ಳಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ

  • ಸುದ್ದಿ

    ಪುಲ್ವಾಮಾ ದಾಳಿ ಬಗ್ಗೆ ನನಗೆ ಗೊತ್ತಿಲ್ಲ!ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದ ಸ್ಯಾಮ್ ಪಿತ್ರೋಡಾ..!

    ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್​​ನಲ್ಲಿ ನಡೆಸಿದ ಏರ್​ಸ್ಟ್ರೈಕ್ ಬಗ್ಗೆ ಓವರ್​ಸೀಸ್​ ಇಂಡಿಯನ್ ನ್ಯಾಷನಲ್​​​ ಕಾಂಗ್ರೆಸ್​​ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್​ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…

  • ರಾಜಕೀಯ

    ನೆಹರೂ, ಇಂದಿರಾಗಾಂಧಿ ನಂತರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ನರೇಂದ್ರ ಮೋದಿ…!

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…