ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್ ಆಗಬೇಕೆನ್ನುವವರು ಡಯಟಿಂಗ್ ಲಿಸ್ಟ್ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್ಪರ್ಟ್ಸ್. ಇದು ಸುಲಭವಾಗಿ ದೊರೆಯುವ೦ತಹ ಹಣ್ಣೂ ಕೂಡ ಹೌದು.
ಆರೋಗ್ಯವೃದ್ಧಿ
ಕಿತ್ತಳೆ ಹಣ್ಣಿಗಿಂತ ಅತಿ ಹೆಚ್ಚು ವಿಟಮಿನ್ ಸಿ ಅಂಶ ಹೊಂದಿರುವ ಈ ಹಣ್ಣು ಸೇವಿಸುವುದರಿಂದ ಅಲ್ಜೈಮರ್, ಅರ್ಥರೈಟಿಸ್ ಹಾಗೂ ಕಣ್ಣಿನ ಪೂರೆಯುಂಟಾಗುವಂತಹ ಕಾಯಿಲೆಗಳನ್ನು ದೂರಾಗಿಸುತ್ತದಂತೆ. ಇನ್ನು ಇದರಲ್ಲಿರುವ ಅತ್ಯಧಿಕ ಫೈಬರ್ ಅಂಶ ದೇಹದ ಜೀರ್ಣಕ್ರಿಯೆ ಹೆಚ್ಚಿಸಿ ಮಲಬದ್ಧತೆ ನಿವಾರಿಸುತ್ತದೆ. ಅಷ್ಟೇ ಏಕೆ? ಕ್ಯಾನ್ಸರ್ ಹಾಗೂ ಹೃದಯ ಕಾಯಿಲೆಗಳನ್ನು ದೂರವಿಡುತ್ತದಂತೆ.

ಸಂಶೋಧನೆಯೊಂದರ ಪ್ರಕಾರ, ಮಧುಮೇಹ ಕಾಯಿಲೆಯಿಂದ ನರಳುವವರು ಸೀಬೆಹಣ್ಣನ್ನು ತಿನ್ನುವಾಗ ಅದರ ಮೇಲಿನ ಹಸಿರು ಸಿಪ್ಪೆಯನ್ನು ತೆಗೆದು ಸೇವಿಸಿದರೆ ಒಳಿತು. ಏಕೆಂದರೆ, ಅದರಲ್ಲಿನ ಅತ್ಯಧಿಕ ಗ್ಲೂಕೋಸ್ ಪ್ರಮಾಣ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಏರಿಸುವುದು.
ತ್ವಚೆಯ ಆರೋಗ್ಯಕ್ಕೆ ಸೀಬೆ ಹಣ್ಣಿನಲ್ಲಿರುವ ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದು ತ್ವಚೆಯ ಆರೋಗ್ಯವನ್ನು ಹೆಚ್ಚಿಸುವ ಒ೦ದು ಪ್ರಮುಖ ವಿಟಮಿನ್ ಆಗಿದೆ. ಸೀಬೆ ಹಣ್ಣಿನಲ್ಲಿರುವ ಆ೦ಟಿ ಆಕ್ಸಿಡೆ೦ಟ್ ಗಳು ತ್ವಚೆಯು ತಾರುಣ್ಯಪೂರ್ಣವಾಗಿ ಕಾಣವ೦ತಾಗಲು ಸಹಕರಿಸುತ್ತವೆ

ಕಾಂತಿ ಹೆಚ್ಚಳ
ವಿಟಮಿನ್ ಎ, ಬಿ ಹಾಗೂ ಸಿ ಮತ್ತು ಪೊಟಾಶಿಯಂ ಅಂಶಗಳನ್ನು ಹೊಂದಿರುವ ಸೀಬೆಕಾಯಿ, ತ್ವಚೆಯ ಕಾಂತಿಯನ್ನು ಹೆಚ್ಚಿಸುತ್ತದಂತೆ. ಇದಕ್ಕಾಗಿ ಸೀಬೆ ಎಲೆಗಳ ಪೇಸ್ಟ್ ಮಾಡಿ, ಅದನ್ನ ಮುಖಕ್ಕೆ ಹಚ್ಚಿ ತೊಳೆದಲ್ಲಿ ಜಿಡ್ಡಿನಾಂಶ ಮಾಯವಾಗಿ ಚರ್ಮ ಬಿಗಿಯಾಗಿ ಕಾಂತಿಯುಕ್ತವಾಗುತ್ತದೆ ಎನ್ನುತ್ತಾರೆ ಬ್ಯೂಟಿ ಎಕ್ಸ್ಪರ್ಟ್.
ಮೆದುಳು ಚುರುಕು
ಇದರಲ್ಲಿರುವ ವಿಟಮಿನ್ ಬಿ6ನಿಂದ ಮಿದುಳು ಚುರುಕಾಗುತ್ತದೆ. ಓದುವ ಮಕ್ಕಳಲ್ಲಿ ನೆನಪಿನ ಶಕ್ತಿ ಹೆಚ್ಚುತ್ತದೆ. ಇದರಲ್ಲಿರುವ ಅಧಿಕ ನಾರಿನಂಶವು ಮಧುಮೇಹಿಗಳಿಗೆ ರಕ್ತದಲ್ಲಿ ಸಕ್ಕರೆ ಅಂಶ ಜಾಸ್ತಿಯಾಗದಂತೆ ತಡೆಗಟ್ಟುತ್ತವೆ. ಕೆಲವರಿಗೆ ಸೀಬೆಹಣ್ಣಿನಿಂದ ಗಂಟಲಲ್ಲಿ ಅಲರ್ಜಿಯಾಗುವ ಸಾಧ್ಯತೆಗಳಿವೆ. ಅಂಥವರು ಹಣ್ಣಿಗೆ ಉಪ್ಪು ಬೆರೆಸಿ ಸೇವಿಸಬೇಕು. ವೃದ್ಧರು, ಹಲ್ಲಿನ ತೊಂದರೆ ಇರುವವರು ಸೀಬೆಹಣ್ಣಿನ ಜ್ಯೂಸ್ ಸೇವಿಸಬಹುದು.

ನೆಗಡಿ ನಿವಾರಕ
ಸೀಬೆಹಣ್ಣಿನಿಂದ ಶೀತ, ನೆಗಡಿ ಉಂಟಾಗುವುದಿಲ್ಲ. ಬದಲಿಗೆ ಶೀತ-ನೆಗಡಿಯನ್ನು ಉಂಟು ಮಾಡುವ ಬ್ಯಾಕ್ಟೀರಿಯಗಳನ್ನು ನಾಶಗೊಳಿಸುತ್ತವೆ. ಈ ಗುಣದಿಂದ ಇದನ್ನು ಅತಿಸಾರ ಹಾಗೂ ವಾಂತಿ-ಭೇದಿ ಇರುವ ಮಂದಿ ಸೇವಿಸುವುದರಿಂದ ಉಪಯುಕ್ತ
ಕಣ್ಣುಗಳ ಆರೋಗ್ಯಕ್ಕೆ ಮತ್ತೊಮ್ಮೆ, ಸೀಬೆ ಹಣ್ಣಿನ ಸೋಜಿಗವೆ೦ದೆನಿಸುವಷ್ಟು ವಿಟಮಿನ್ ಎ ಯು ಸಮೃದ್ಧವಾಗಿದ್ದು, ಇದರಲ್ಲಿ ವಿಟಮಿನ್ ಎ ಶೇ. 21 ಇದ್ದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದು ಇರುಳು ಕುರುಡು ಉಂಟಾಗದಂತೆ ಕಣ್ಣನ್ನು ರಕ್ಷಣೆ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ವೃದ್ಧಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅತ್ಯ೦ತ ಪುಷ್ಟಿದಾಯಕವಾದ ಆಹಾರವಸ್ತುಗಳ ಪೈಕಿ ಸೀಬೆ ಹಣ್ಣೂ ಸಹ ಒ೦ದು. ಸೀಬೆ ಹಣ್ಣಿನಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಸಿ ಯು ಶರೀರದ ರೋಗನಿರೋಧಕ ವ್ಯವಸ್ಥೆಗೆ ಬಲವನ್ನೊದಗಿಸುತ್ತದೆ ಹಾಗೂ ತನ್ಮೂಲಕ ರೋಗಗಳ ವಿರುದ್ಧ ಸೆಣಸಾಡುವ ನಿಮ್ಮ ಶರೀರದ ಸಾಮರ್ಥ್ಯವನ್ನು ಸುಧಾರಿಸುತ್ತದೆ
souce : internet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…
ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ. ಸದ್ಯ ಕಲರ್ ಫುಲ್ ಫ್ಲವರ್ ಮೂಲಕ ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪರಸ್ಪರ…
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…