ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮನೆ ಮನೆಗೆ ತೆರಳಿ ಪೊಲಿಯೋ ಡ್ರಾಪ್ಸ್ ನೀಡುವ ಕಾರ್ಯಕ್ರಮದ ಭಾಗವಾಗಿ ಅಂಗನವಾಡಿ ಕಾರ್ಯಕರ್ತೆಯರು ಒಂದೂವರೆ ವರ್ಷ ಪ್ರಾಯದ ಬಾಲಕನಿಗೆ ಪೊಲೀಯೋ ಡ್ರಾಪ್ಸ್ ನೀಡಿದ ಅರ್ಧ ತಾಸಿನೊಳಗೆ ಆತನ ಬಾಯಲ್ಲಿ ನೊರೆ ಹೊರಬರಲು ಆರಂಭವಾಯಿತು. ಒಡನೆಯೇ ಬಾಲಕನನ್ನು ಕೃಷ್ಣ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅಷ್ಟರೊಳಗಾಗಿಯೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು.
ಬಾಲಕನ ಮನೆಯವರು ಮೂಲತಃ ಆಗ್ರಾದವರು. ಅವರು ತಮ್ಮ ಬಂಧುಗಳನ್ನು ಕಾಣಲು ಫೌಜಿ ಮೊಹಲ್ಲಾಗೆ ಬಂದಿದ್ದರು. ನತದೃಷ್ಟ ಬಾಲಕನು ಮನೆಯಲ್ಲಿ ಮಲಗಿದ್ದಾಗ ಆತನನ್ನು ಎಬ್ಬಿಸಿ ಆತನಿಗೆ ಆಶಾ ಕಾರ್ಯಕರ್ತೆಯರು ಪೊಲೀಯೋ ಡ್ರಾಪ್ಸ್ ನೀಡಿದರು ಎಂದು ವರದಿಗಳು ತಿಳಿಸಿವೆ.
ಜಿಲ್ಲಾ ಪೊಲೀಯೋ ಅಭಿಯಾನದ ಅಧಿಕಾರಿಯಾಗಿರುವ ಡಾ. ಜಸ್ಬೀರ್ ಸಿಂಗ್ ಈ ಬಗ್ಗೆ ಹೇಳಿರುವುದು ಇಷ್ಟು :
ನಾವು ಐದು ದಿನಗಳ ಈ ಪೋಲಿಯೋ ನಿರ್ಮೂಲನ ಅಭಿಯಾನದಲ್ಲಿ 3.75 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಡ್ರಾಪ್ಸ್ ಹಾಕಿದ್ದೇವೆ; ಆದರೆ ಯಾವುದೇ ಮಗುವಿಗೆ ಯಾವುದೇ ರೀತಿಯ ಅನಾರೋಗ್ಯ, ತೊಂದರೆ ಕಾಣಿಸಿದ್ದಿಲ್ಲ. ಈ ಪ್ರಕರಣದಲ್ಲಿ ಬಾಲಕನ ಸಾವಿಗೆ ಬೇರೇನೋ ಕಾರಣ ಇರಬೇಕು.
ಪೋಲಿಯೋ ಡ್ರಾಪ್ಸ್ ಹಾಕಿದ ಅರೆ ತಾಸಿನೊಳಗೆ ಬಾಲಕನು ಸತ್ತಿರುವುದು ಏನೋ ಕಾಕತಾಳೀಯವಾಗಿರಬೇಕು. ವೈದ್ಯರ ತಂಡವು ಮೃತ ಬಾಲಕನ ಮರಣೋತ್ತರ ಪರೀಕ್ಷೆಯನ್ನು ನಡೆಸಲಿದ್ದಾರೆ ಮತ್ತು ಆವರ ವರದಿಯಿಂದ ಬಾಲಕನ ಸಾವಿನ ನಿಜವಾದ ಕಾರಣವೇನು ಎಂಬುದು ಗೊತ್ತಾಗಲಿದೆ.
“ಬಾಲಕನ ಸಾವಿಗೂ ಪೋಲಿಯೋ ಡ್ರಾಪ್ಸ್ ಗೂ ಯಾವುದೇ ಸಂಬಂಧವಿಲ್ಲ; 1995ರಿಂದಲೂ ನಾವು ಈ ಅಭಿಯಾನವನ್ನು ಯಾವುದೇ ಚ್ಯುತಿ, ಹುಳಕು, ವ್ಯತಿರಿಕ್ತ ಪರಿಣಾಮವಿಲ್ಲದೇ ನಡೆಸಿಕೊಂಡು ಬರುತ್ತಿದ್ದೇವೆ ಎಂದು ಡಾ. ಜಸ್ಬೀರ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ
ನಮ್ಮ ದೇಹದ ಎಲ್ಲಾ ಭಾಗಗಳ ಚರ್ಮ ಬಿಳಿಯಾಗಿದ್ದರೂ ಮೊಣಕಾಲು ಮತ್ತು ಮೊಣಕೈಯ ಭಾಗಗಳು ಕಪ್ಪಾಗಿರುತ್ತವೆ ಹಾಗೂ ಒರಟಾಗಿರುತ್ತವೆ. ನೋಡಲು ಅಷ್ಟೇನು ಅಂದವಾಗಿರುವುದಿಲ್ಲ. ಡೆಡ್ಸ್ಕಿನ್ನ ಕಾರಣದಿಂದಾಗಿ ಆ ಭಾಗದ ಚರ್ಮ ಕಪ್ಪಾಗುತ್ತದೆ. ಪ್ರತಿದಿನ ನಾವು ಬಳಕೆ ಮಾಡುವ ಸೋಪ್ನಿಂದ ಈ ಚರ್ಮದ ಬಣ್ಣವನ್ನ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರ ಬದಲಾಗಿ ಇನ್ನೂ ಕೆಲವೊಂದು ಟಿಪ್ಸ್ಗಳನ್ನು ಬಳಕೆ ಮಾಡಿಕೊಂಡು ನೀವು ಚರ್ಮದ ಬಣ್ಣವನ್ನ ಬದಲಾವಣೆ ಮಾಡಬಹುದು. ಆದರೆ ನೀವು ಕೆಳಗಿನ ಈ ಕ್ರಮವನ್ನು ಒಂದು ಬಾರಿ ಬಳಸಿ ನೋಡಬಹುದು… ಟೂಥ್ಪೇಸ್ಟ್…
ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…