ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮನೆ ಮನೆಗೆ ತೆರಳಿ ಪೊಲಿಯೋ ಡ್ರಾಪ್ಸ್ ನೀಡುವ ಕಾರ್ಯಕ್ರಮದ ಭಾಗವಾಗಿ ಅಂಗನವಾಡಿ ಕಾರ್ಯಕರ್ತೆಯರು ಒಂದೂವರೆ ವರ್ಷ ಪ್ರಾಯದ ಬಾಲಕನಿಗೆ ಪೊಲೀಯೋ ಡ್ರಾಪ್ಸ್ ನೀಡಿದ ಅರ್ಧ ತಾಸಿನೊಳಗೆ ಆತನ ಬಾಯಲ್ಲಿ ನೊರೆ ಹೊರಬರಲು ಆರಂಭವಾಯಿತು. ಒಡನೆಯೇ ಬಾಲಕನನ್ನು ಕೃಷ್ಣ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅಷ್ಟರೊಳಗಾಗಿಯೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು.

ಬಾಲಕನ ಮನೆಯವರು ಮೂಲತಃ ಆಗ್ರಾದವರು. ಅವರು ತಮ್ಮ ಬಂಧುಗಳನ್ನು ಕಾಣಲು ಫೌಜಿ ಮೊಹಲ್ಲಾಗೆ ಬಂದಿದ್ದರು. ನತದೃಷ್ಟ ಬಾಲಕನು ಮನೆಯಲ್ಲಿ ಮಲಗಿದ್ದಾಗ ಆತನನ್ನು ಎಬ್ಬಿಸಿ ಆತನಿಗೆ ಆಶಾ ಕಾರ್ಯಕರ್ತೆಯರು ಪೊಲೀಯೋ ಡ್ರಾಪ್ಸ್ ನೀಡಿದರು ಎಂದು ವರದಿಗಳು ತಿಳಿಸಿವೆ.
ಜಿಲ್ಲಾ ಪೊಲೀಯೋ ಅಭಿಯಾನದ ಅಧಿಕಾರಿಯಾಗಿರುವ ಡಾ. ಜಸ್ಬೀರ್ ಸಿಂಗ್ ಈ ಬಗ್ಗೆ ಹೇಳಿರುವುದು ಇಷ್ಟು :
ನಾವು ಐದು ದಿನಗಳ ಈ ಪೋಲಿಯೋ ನಿರ್ಮೂಲನ ಅಭಿಯಾನದಲ್ಲಿ 3.75 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಡ್ರಾಪ್ಸ್ ಹಾಕಿದ್ದೇವೆ; ಆದರೆ ಯಾವುದೇ ಮಗುವಿಗೆ ಯಾವುದೇ ರೀತಿಯ ಅನಾರೋಗ್ಯ, ತೊಂದರೆ ಕಾಣಿಸಿದ್ದಿಲ್ಲ. ಈ ಪ್ರಕರಣದಲ್ಲಿ ಬಾಲಕನ ಸಾವಿಗೆ ಬೇರೇನೋ ಕಾರಣ ಇರಬೇಕು.

ಪೋಲಿಯೋ ಡ್ರಾಪ್ಸ್ ಹಾಕಿದ ಅರೆ ತಾಸಿನೊಳಗೆ ಬಾಲಕನು ಸತ್ತಿರುವುದು ಏನೋ ಕಾಕತಾಳೀಯವಾಗಿರಬೇಕು. ವೈದ್ಯರ ತಂಡವು ಮೃತ ಬಾಲಕನ ಮರಣೋತ್ತರ ಪರೀಕ್ಷೆಯನ್ನು ನಡೆಸಲಿದ್ದಾರೆ ಮತ್ತು ಆವರ ವರದಿಯಿಂದ ಬಾಲಕನ ಸಾವಿನ ನಿಜವಾದ ಕಾರಣವೇನು ಎಂಬುದು ಗೊತ್ತಾಗಲಿದೆ.

“ಬಾಲಕನ ಸಾವಿಗೂ ಪೋಲಿಯೋ ಡ್ರಾಪ್ಸ್ ಗೂ ಯಾವುದೇ ಸಂಬಂಧವಿಲ್ಲ; 1995ರಿಂದಲೂ ನಾವು ಈ ಅಭಿಯಾನವನ್ನು ಯಾವುದೇ ಚ್ಯುತಿ, ಹುಳಕು, ವ್ಯತಿರಿಕ್ತ ಪರಿಣಾಮವಿಲ್ಲದೇ ನಡೆಸಿಕೊಂಡು ಬರುತ್ತಿದ್ದೇವೆ ಎಂದು ಡಾ. ಜಸ್ಬೀರ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…