News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇಶ-ವಿದೇಶ

ಪೊಲೀಸ್ ಅಧಿಕಾರಿ ಮುಂದೆಯೇ, ಠಾಣಾಧಿಕಾರಿಯ ಸೀಟ್ನಲ್ಲಿ ಕುಳಿತ ಸ್ವಘೋಷಿತ ದೇವ ಮಹಿಳೆ..!

308

ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.

ಸ್ವಘೋಷಿತ ದೇವ ಮಹಿಳೆಯನ್ನು ಪೊಲೀಸ್ ಠಾಣೆಗೆ ಆಹ್ವಾನಿಸಿ ಆತ್ಮೀಯತೆಯಿಂದ ಸ್ವಾಗತಿಸಿ, ರಕ್ಷಣೆ ಮಾಡಬೇಕಾದ ಪೊಲೀಸ್ ಅಧಿಕಾರಿಗಳೇ ಆಕೆಗೆ ತನ್ನ ಸೀಟ್ ಅನ್ನು ಬಿಟ್ಟು ಕೊಟ್ಟಿರುವ ಫೋಟೋ ಇದೀಗ ವಿವಾದಕ್ಕೀಡಾಗಿದೆ.

ದೇಶದಾದ್ಯಂತ ಬಹು ಚರ್ಚೆಗೀಡಾಗಿರುವ ಸ್ವಯಂಘೋಷಿತ ದೇವಮಹಿಳೆ ರಾಧೆ ಮಾ ತನ್ನ ಫ್ಯಾಷನ್’ಗಳಿಗೆ ಫೇಮಸ್ಸು. ಇದೀಗ ಮುಖ್ಯ ಠಾಣಾಧಿಕಾರಿಯ ಸೀಟ್ನಲ್ಲೇ ಕುಳ್ಳಿರಿಸಿ ರಾಧೇ ಮಾಗೆ ಪೊಲೀಸ್ ಸಿಬ್ಬಂದಿ ಗೌರವಿಸಿದ ವಿಚಾರ ಬಹಿರಂಗಗೊಂಡಿದೆ.

ದೆಹಲಿಯ ವಿವೇಕ್ ವಿಹಾರ್ ಪೊಲೀಸ್ ಠಾಣೆಗೆ ರಾಧೆ ಮಾಳನ್ನು ಆತ್ಮೀಯವಾಗಿ ಆಹ್ವಾನಿಸಿದ್ದರು. ಈ ಸಂದರ್ಭದಲ್ಲಿ ಠಾಣಾಧಿಕಾರಿ ಎದ್ದು ತನ್ನ ಕುರ್ಚಿಯಲ್ಲಿ ರಾಧೆ ಮಾಳನ್ನು ಕೂರಿಸಿ, ತಾನು ರಾಧೆ ಮಾ ಪಕ್ಕದಲ್ಲಿ ಕೈಮುಗಿದು ನಿಂತಿರುವ ಫೋಟೋ ವೈರಲ್ ಆಗಿದೆ.

ಕೌಟುಂಬಿಕ ಹಿಂಸೆ ಪ್ರಕರಣವೊಂದರಲ್ಲಿ ಆರೋಪ ಹೊತ್ತಿರುವ ರಾಧೆ ಮಾರ ತನಿಖೆಗೆಂದು ಸ್ಟೇಷನ್’ಗೆ ಆಗಮಿಸಿದ್ದರು. ಆದರೆ ಈ ಸಂದರ್ಭದಲ್ಲಿ ಠಾಣಾಧಿಕಾರಿಯೇ ರಾಧೆ ಮಾ ಪಕ್ಕದಲ್ಲೇ ನಿಂತು ಕೈಮುಗಿದು, ಕೆಂಪು ಶಲ್ಯ ಹೊದ್ದಿಸಿದ್ದಾರೆ.

ಸದ್ಯ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಭಾರೀ ವಿವಾದ ಸೃಷ್ಟಿಸಿವೆ.ರಾಧೆ ಮಾಳನ್ನು ಠಾಣೆಗೆ ಆಹ್ವಾನಿಸಿರುವ ಘಟನೆ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ. ರಾಧೆ ಮಾಗೆ ಖ್ಯಾತ ಸಿನಿಮಾ ನಿರ್ಮಾಪಕ, ನಿರ್ದೇಶಕ ಸುಭಾಶ್ ಘಾಯ್ ಸೇರಿದಂತೆ ಗಣ್ಯಾತೀ ಗಣ್ಯರ ಭಕ್ತರನ್ನು ಹೊಂದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ