ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ. ರಷ್ಯಾದಲ್ಲಿ ಆನ್ ಲೈನ್ ಗೇಮ್ ಒಂದು ಮಕ್ಕಳ ಪ್ರಾಣ ತೆಗೆಯುತ್ತಿರುವ ಬಗ್ಗೆ ಸುದ್ದಿಯಾಗಿದೆ.
ಸಾವಿಗೆ ಪ್ರಚೋದನೆ ನೀಡುವ ಆಪಾಯಕಾರಿ ಮೊಬೈಲ್ ಗೇಮ್ ಆಗಿರುವ ಬ್ಲೂ ವೇಲ್ ಚಾಲೆಂಜ್ ಸ್ವೀಕರಿಸಿ ಇತ್ತೀಚೆಗಷ್ಟೇ ಮುಂಬೈನಲ್ಲಿ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಅಂಥಹದ್ದೇ ಯತ್ನಕ್ಕೆ ಮುಂದಾಗಿದ್ದ ಬಾಲಕನೊಬ್ಬನನ್ನು ಇಂದೋರ್ ನಲ್ಲಿ ರಕ್ಷಣೆ ಮಾಡಲಾಗಿದೆ.
ದೇಶದಲ್ಲಿ ಬ್ಲೂವೇಲ್ ಮೊಬೈಲ್ ಗೇಮ್ ಗೆ ನಿಷೇಧ ಹೇರಬೇಕೆಂದು ಭಾರೀ ಒತ್ತಾಯ ಕೇಳಿಬರುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಬಾಲಕ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದ್ದು ದೇಶದಾದ್ಯಂತ ಪೋಷಕರು ಬೆಚ್ಚಿ ಬೀಳುವಂತೆ ಮಾಡಿದೆ.
ಬ್ಲೂವೇಲ್ ಚಾಲೆಂಚ್ ನ 50ನೇ ಹಂತ ತಲುಪಿದ್ದ ಮಧ್ಯಪ್ರದೇಶದ ಇಂದೋರ್ ನ 13 ವರ್ಷದ ಬಾಲಕನೊಬ್ಬ ಗುರುವಾರ ಶಾಲೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಗುರುವಾರ ಮಧ್ಯಾಹ್ನ ಚಮಲೀದೇವಿ ಪಬ್ಲಿಕ್ ಸ್ಕೂಲ್ ನ ಶಾಲೆಯ 3ನೇ ಮಹಡಿಯಿಂದ ಕೆಳಗೆ ಹಾರಿ ಬಾಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ಸಹಪಾಠಿಗಳು, ಶಿಕ್ಷಕರು ಸ್ಥಳಕ್ಕೆ ಧಾವಿಸಿ ಬಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಾಥಮಿಕ ತನಿಖೆ ವೇಳೆ, ಬಾಲಕ ಕಳೆದ ಕೆಲ ದಿನಗಳಿಂದ ತಂದೆಯ ಮೊಬೈಲ್ ನಲ್ಲಿ ಬ್ಲೂವೇಲ್ ಗೇಮ್ ಆಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದೆ. ಇದರ ಅಂತಿಮ ಹಂತವಾಗಿ ಗುರುವಾರ ಆತನಿಗೆ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಟಾಸ್ಕ್ ನೀಡಲಾಗಿತ್ತು. ಅದಕ್ಕೆ ಬಾಲಕ ಯತ್ನಿಸುತ್ತಿರವಾಗಲೇ, ಸಹಪಾಠಿಗಳ ಸಮಯ ಪ್ರಜ್ಞೆಯಿಂದಾಗಿ ಬದುಕುಳಿದಿದ್ದಾನೆ.
ಏನಿದು ಭಯಾನಕ ಬ್ಲೂವೇಲ್ ಗೇಮ್!
ಮೊದಲಿಗೆ ರಷ್ಯಾದಲ್ಲಿ ಪ್ರಾರಂಭವಾದ ಈ ಅಟ ಮೆಲ್ಲನೆ ಭಾರತವನ್ನೂ ಪ್ರವೇಶಿಸಿತು. ಒಂದು ಸಾಮಾಜಿಕ ತಾಣ ಇದನ್ನು ನಿರ್ವಹಿಸುತ್ತಿದೆ. ಈ ಆಟದಲ್ಲಿ ಪಾಲ್ಗೊಳ್ಳ ಬೇಕಾದವರು… ನಿರ್ವಾಹಕರು ಹೇಳಿದಂತೆ ಮಾಡಬೇಕು.
50 ದಿನಗಳ ಕಾಲ ಅವರು ನೀಡುವ ಟಾಸ್ಕ್ ಗಳನ್ನು ಮಾಡುತ್ತಿರಬೇಕು. ಮೊದಲು ಒಂದು ಪೇಪರಲ್ಲಿ ತಿಮಿಂಗಲ ಚಿತ್ರವನ್ನು ರಚಿಸಬೇಕು. ನಂತರ ಶರೀರದಮೆಲೆ ಬರೆಸಿಕೊಳ್ಳಬೇಕು. ನಂತರ ಹಾರರ್ ಸಿನಿಮಾಗಳನ್ನು ನೋಡುತ್ತಾ, ಮಧ್ಯರಾತ್ರಿ ಎದ್ದೇಳುವುದು… ನಡೆಯುವುದು ಮೊದಲಾದ ಟಾಸ್ಕ್ ಗಳನ್ನು ಪೂರೈಸಬೇಕು.
ಈ ರೀತಿ 50 ಟಾಸ್ಕ್ ಗಳನ್ನು 50 ದಿನಗಳಲ್ಲಿ ಪೂರ್ಣಗೊಳಿಸಿದನಂತರ ಆತ್ಮಹತ್ಯೆ ಮಾಡಿಕೊಳ್ಳಬೇಕು. ಇದನ್ನೇ ಸೆಲ್ಫ್ ಡೆಸ್ಟ್ರಾಯಿಂಗ್ ಎನ್ನುತ್ತಾರೆ. ಆಟದಲ್ಲಿ ಗೆಲ್ಲಬೇಕಾದರೆ, ತಪ್ಪದೆ ಆತ್ಮಹತ್ಯೆ ಮಡಿಕೊಳ್ಳಲೇಬೇಕು ಎಂದು ನಿರ್ವಾಹಕರು ಆಟಗಾರರ ಮೇಲೆ ಒತ್ತಡ ಹೇರುತ್ತಾರೆ. ಹೀಗಾಗಿ… ಆಟವನ್ನು ಗೆಲ್ಲಲೇ ಬೇಕೆಂಬ ಹಠದಿಂದ ಮಕ್ಕಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಸ್ಪರ್ಧಾಳುಗಳಗಳನ್ನ ಬಲವಂತವಾಗಿ ವೇಲ್ ಶೇಪ್ ಪಡೆಯುವಂತೆ ಒತ್ತಾಯಿಸಲಾಗುತ್ತಂತೆ. ಒಂದು ಕೊನೆಯ ದಿನ ಆತ್ಮಹತ್ಯೆಯಂತಹ ಸವಾಲು ಹಾಕಲಾಗುತ್ತಂತೆ. 14 ವರ್ಷದ ಹುಡುಗಿಯರೂ ಸಹ ಈ ಗೇಮ್`ನಲ್ಲಿ ತಲ್ಲೀನರಾಗಿ 14 ಅಂತಸ್ತಿನ ಕಟ್ಟಡದಿಂದ ಧುಮುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಮಕ್ಕಳನ್ನ ಈ ರೀತಿ ಸಾವಿಗೆ ನೂಕಿದ ಆನ್ ಲೈನ್ ಡೆತ್ ಗ್ರೂಪ್`ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…
ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್ವುಡ್ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?