ಆರೋಗ್ಯ

ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

1010

ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

ಬಾಳೆಹಣ್ಣಿನಲ್ಲಿ ಕೂಡ ಸಾಕಷ್ಟು ತಳಿಗಳಿದ್ದರೂ ಬಹುತೇಕ ಎಲ್ಲಾ ಹಣ್ಣುಗಳಲ್ಲಿ ಒಂದೇ ರೀತಿಯ ಪೋಷಾಕಾಂಶಗಳು ಇವೆ ಎಂದು ಭಾವಿಸುತ್ತೇವೆ. ಸಾಮಾನ್ಯವಾಗಿ ಬಾಳೆಹಣ್ಣಿನಲ್ಲಿ 11 ತರಹದ ಖನಿಜಾಂಶಗಳು, 6 ತರಹದ ವಿಟಮಿನ್ಸ್, ಫೈಬರ್ ಮತ್ತು ಕಾರ್ಬೋಹೈಡ್ರೇಟ್ಸ್ ಗಳು ಇವೆ.

ಬಾಳೆಹಣ್ಣು ಅಂದರೆ ಹಳದಿ ಬಣ್ಣದ ಬಾಳೆಹಣ್ಣುಗಳಷ್ಟೇ ಎಲ್ಲರಿಗೂ ಗೊತ್ತು. ಆದರೆ ಕೆಂಪು ಬಾಳೆಹಣ್ಣುಗಳ ಬಗ್ಗೆ ಮತ್ತು ಅದರ ವಿಶೇಷತೆಗಳ ಬಗ್ಗೆ ನಿಮಗೆ ಗೊತ್ತಿದೆಯೇ? ಈ ಹಣ್ಣು ಇತರೆ ಹಣ್ಣುಗಳಿಗಿಂತ ಹೆಚ್ಚು ಸಿಹಿ ಮಾತ್ರವಲ್ಲ ಹೆಚ್ಚು ಆರೋಗ್ಯದಾಯಕವೂ ಹೌದು.

ಕೆಂಪು ಬಾಳೆಹಣ್ಣು ಹಳದಿ ಬಾಳೆಹಣ್ಣು ಮತ್ತು ರಾಸ್ಪ್ ಬೆರ್ರಿ ಹಣ್ಣುಗಳ ಸಂಯೋಗದಿಂದ ಉಂಟಾಗುವ ವಿಶಿಷ್ಟ ರುಚಿ ಕೊಡುತ್ತದೆ. ಇದರಲ್ಲಿ ಬಹಳಷ್ಟು ಆರೋಗ್ಯ ಲಾಭಗಳಿವೆ. ಕೆಂಪು ಬಾಳೆಹಣ್ಣುಗಳನ್ನು ಸಾಮಾನ್ಯವಾಗಿ ನಮ್ಮ ದೇಶದ ದಕ್ಷಿಣ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಾರೆ.

ವಿಶ್ವದಾದ್ಯಂತ ಸುಮಾರು 14 ರಿಂದ 15 ತರಹದ ಬಾಳೆಹಣ್ಣುಗಳಿವೆ. ಅದರಲ್ಲಿ ಹಳದಿ ಬಾಳೆಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಪರಿಚಿತ ಮತ್ತು ಎಲ್ಲರೂ ಸೇವಿಸುತ್ತಾರೆ. ಕೆಂಪು ಬಾಳೆಹಣ್ಣು ಬೆರ್ರಿ ಹಣ್ಣಿನ ರುಚಿಯನ್ನು ಹೊಂದಿದ್ದು, ಹೆಚ್ಚಿನ ಪ್ರಮಾಣದಲ್ಲಿ ಪೊಟಾಶಿಯಂ ಹೊಂದಿದೆ ಮತ್ತು ಕ್ಷಾರೀಯ ಅಂಶವನ್ನೂ ಒಳಗೊಂಡಿದೆ.

ಇದರಲ್ಲಿ ಆ್ಯಂಟಿಒಕ್ಸಿಡೆಂಟ್ ಆಗಿ ಕಲಸ ಮಾಡುವ ಆಂಥೋಸಯಾನಿನ್ ಎಂಬ ಅಂಶವೂ ಇದೆ. ಫೈಬರ್ ಮತ್ತು ವಿಟಮಿನ್ ಸಿ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಸಾಮಾನ್ಯವಾಗಿ ಎಲ್ಲಾ ಜಾತಿಯ ಬಾಳೆಹಣ್ಣುಗಳು ಒಂದೇ ತರಹದ ಪೋಷಕಾಂಶಗಳನ್ನು ಹೊಂದಿದ್ದರೂ, ಕೆಂಪು ಬಾಳೆಹಣ್ಣುಗಳು ಬೇರೆಯದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್, ಖನಿಜಾಂಶ ಮತ್ತು ಆ್ಯಂಟಿಒಕ್ಸಿಡೆಂಟ್ ಅಂಶಗಳಿವೆ.ಈ ಬಾಳೆಹಣ್ಣುಗಳಲ್ಲಿ ನಾರಿನಂಶ ಹೆಚ್ಚಿಗೆ ಇರುವುದರಿಂದ ಇದು ಮಧುಮೇಹಿಗಳಿಗೆ ಅತ್ಯುತ್ತಮ ಆಹಾರ.ಇದು ಸಕ್ಕರೆ ಅಂಶವನ್ನು ದೇಹದಲ್ಲಿ ನಿಧಾನವಾಗಿ ಹರಡುವುದರಿಂದ ದೇಹದ ಶಕ್ತಿಯ ಉತ್ತಮ ಮಟ್ಟದಲ್ಲಿರಿಸುತ್ತದೆ. ಪೊಟಾಶಿಯಂ ಅಷ್ಟೇ ಅಲ್ಲದೆ, ವಿಟಮಿನ್ ಸಿ, ಬೀಟಾ ಕ್ಯಾರೋಟಿನ್, ಬಿ6 ವಿಟಮಿನ್, ವಿಟಮಿನ್ ಡಿ ಇದ್ದು, ಇವು ದೇಹದ ಚಯಾಪಚಯ ಕ್ರಿಯೆಗೆ ಸಹಾಯ ಮಾಡಿ, ಪ್ರೊಟೀನ್ ಒದಗಿಸುತ್ತದೆ.

ದೇಹ ತೂಕ ಇಳಿಸುವಲ್ಲಿ ಸಹಾಯ ಮಾಡುತ್ತದೆ:-

ಕೆಂಪು ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ನಾರಿನಂಶ ನಿಮಗೆ ತುಂಬಾ ಹೊತ್ತು ಹಸಿವಾಗದಂತೆ ತಡೆಯುತ್ತದೆ. ಒಂದು ಪೂರ್ತಿ ಕೆಂಪು ಬಾಳೆಹಣ್ಣು ಕೇವಲ 90 ರಿಂದ 100 ರಷ್ಟು ಕ್ಯಾಲೋರಿಯನ್ನು ಹೊಂದಿದ್ದು, ಒಳ್ಳೆಯ ಪಿಷ್ಠವನ್ನು ಒಳಗೊಂಡಿರುವುದರಿಂದ ಅನಗತ್ಯವಾಗಿ ತಿನ್ನುವ ಬಯಕೆಗೆ ಕಡಿವಾಣ ಆಗುತ್ತದೆ. ಇದು ನಿಮ್ಮ ತೂಕ ಇಳಿಸುವ ಕ್ರೀಯೆಗೆ ಸಹಾಯ ಮಾಡುತ್ತದೆ.

ಕಿಡ್ನಿಯ ಆರೋಗ್ಯಕ್ಕೆ ಉತ್ತಮ:-

ಎಲ್ಲರಿಗೂ ಗೊತ್ತಿರುವಂತೆ ಪೊಟಾಶಿಯಂ ಕಿಡ್ನಿಯಲ್ಲಿ ಕಲ್ಲು ಆಗುವುದನ್ನು ತಡೆಯುತ್ತದೆ. ಕೆಂಪು ಬಾಳೆಹಣ್ಣಿನಲ್ಲಿ ಪೊಟಾಶಿಯಂ ಹೇರಳವಾಗಿದೆ. ನಿಮ್ಮ ದೇಹದಲ್ಲಿ ಕ್ಯಾಲ್ಶಿಯಂ ಸಮತೋಲನದಲ್ಲಿಡಲೂ ಇದು ಸಹಾಯಕಾರಿ. ಇದರಿಂದ ಶರೀರದಲ್ಲಿರುವ ಮೂಳೆಗಳು ಆರೋಗ್ಯಕರವಾಗಿದ್ದು, ಗಟ್ಟಿಯಾಗಿರುತ್ತದೆ.

ಧೂಮಪಾನ ತ್ಯಜಿಸಲು ಸಹಕಾರಿ:-

ಮೆಗ್ನಿಶಿಯಂ ಮತ್ತು ಪೊಟಾಶಿಯಂ ನಿಕೋಟಿನ್ ಹೊಂದಿರುವ ಧೂಮಪಾನ, ಗುಟ್ಕಾ ಮುಂತಾದ ದುಶ್ಚಟಗಳಿಂದ ಹೊರಬರಲು ಸಹಾಯ ಮಾಡುತ್ತದೆ. ನಿಕೋಟಿನ್ ಸಿಗರೇಟ್ ಮತ್ತು ಇತರ ತಂಬಾಕುಗಳಲ್ಲಿರುವ ಒಂದು ಅಂಶವಾಗಿರುವುದರಿಂದ ಕೆಂಪು ಬಾಳೆಹಣ್ಣು ಸೇವನೆ ಮಾಡುವುದರಿಂದ ಈ ಅಭ್ಯಾಸದಿಂದ ನಿಧಾನವಾಗಿ ಹೊರಬರಬಹುದು.

ಚರ್ಮದ ರಕ್ಷಣೆ:-

ಕೆಂಪು ಬಾಳೆಹಣ್ಣುಗಳ ಸೇವನೆಯಿಂದ ಮಾತ್ರ ಆರೋಗ್ಯ ಲಾಭವಲ್ಲ, ಇದನ್ನು ಸೇವಿಸುವುದರಿಂದ ಅಥವಾ ಇದರ ಪೇಸ್ಟ್ ಮುಖಕ್ಕೆ ಹಚ್ಚಿಕೊಳ್ಳುವುದೂ ಬಹಳ ಒಳ್ಳೆಯದು.ಪೌಡರ್ ಮಾಡಿದ ಓಟ್ಸ್, ಕಿವುಚಿದ ಕೆಂಪು ಬಾಳೆಹಣ್ಣು ಮತ್ತು ಕೆಲವು ಹನಿ ಜೇನುತುಪ್ಪ ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಒಣಗಲು ಬಿಡಿ. ನಂತರ ಮುಖ ತೊಳೆದರೆ ಮುಖ ಕಾಂತಿಯುತವಾಗುತ್ತದೆ.

ರಕ್ತ ಶುದ್ಧೀಕರಿಸುತ್ತದೆ:-

ಈ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ವಿಟಮಿನ್ ಗಳು ರಕ್ತವನ್ನು ಶುದ್ಧೀಕರಿಸಿ, ಹಿಮೋಗ್ಲೋಬಿನ್ ಮಟ್ಟವನ್ನು ಉತ್ತಮಪಡಿಸುತ್ತದೆ.ಇದು ನಿಮ್ಮ ಇಮ್ಯುನಿಟಿಯನ್ನೂ ಹೆಚ್ಚಿಸುತ್ತದೆ. ಕೆಂಪು ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ6 ದೇಹದಲ್ಲಿರುವ ಪ್ರೋಟಿನ್ ನ್ನು ಸಮತೋಲದಲ್ಲಿಟ್ಟು ಕೆಂಪು ರಕ್ತ ಕಣಗಳ ಉತ್ಪತ್ತಿಗೆ ಸಹಾಯ ಮಾಡುತ್ತದೆ.

ಕೂದಲಿಗೆ ಅತ್ಯುತ್ತಮ:-

ಕೆಂಪು ಬಾಳೆಹಣ್ಣನ್ನು ಕಿವುಚಿ ಅದಕ್ಕೆ ತೆಂಗಿನ ಎಣ್ಣೆ, ಸಾಸಿವೆ ಎಣ್ಣೆ, ಅಥವಾ ಬಾದಾಮಿ ಎಣ್ಣೆ ಹಾಕಿ ಮಿಶ್ರಣ ಮಾಡಿ ತಲೆಗೆ ಹಚ್ಚಿಕೊಳ್ಳಿ. ನಂತರ ಇದರ ಮೇಲೆ ಸ್ವಲ್ಪ ನಿಂಬೆಹಣ್ಣಿನ ರಸವನ್ನು ಸಿಂಪಡಿಸಿ. 30 ನಿಮಿಷದ ನಂತರ ಕೂದಲು ತೊಳೆದರೆ ಮಿನುಗುವ ಸಿಲ್ಕೀ ಕೂದಲು ನಿಮ್ಮದಾಗುತ್ತದೆ. ಅಷ್ಟೇ ಅಲ್ಲ, ಇದರಿಂದ ತಲೆಹೊಟ್ಟು, ಕೂದಲುದುರುವಿಕೆ ಮತ್ತು ಒಣಕೂದಲಿನಿಂದ ರಕ್ಷಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…

  • ಸುದ್ದಿ

    ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್! ಒಂದು ಲೀಟರ್ ಗೆ ಎಷ್ಟು ಗೊತ್ತಾ?

    ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…