ಆರೋಗ್ಯ

ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

1002

ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

ಬಾಳೆಹಣ್ಣಿನಲ್ಲಿ ಕೂಡ ಸಾಕಷ್ಟು ತಳಿಗಳಿದ್ದರೂ ಬಹುತೇಕ ಎಲ್ಲಾ ಹಣ್ಣುಗಳಲ್ಲಿ ಒಂದೇ ರೀತಿಯ ಪೋಷಾಕಾಂಶಗಳು ಇವೆ ಎಂದು ಭಾವಿಸುತ್ತೇವೆ. ಸಾಮಾನ್ಯವಾಗಿ ಬಾಳೆಹಣ್ಣಿನಲ್ಲಿ 11 ತರಹದ ಖನಿಜಾಂಶಗಳು, 6 ತರಹದ ವಿಟಮಿನ್ಸ್, ಫೈಬರ್ ಮತ್ತು ಕಾರ್ಬೋಹೈಡ್ರೇಟ್ಸ್ ಗಳು ಇವೆ.

ಬಾಳೆಹಣ್ಣು ಅಂದರೆ ಹಳದಿ ಬಣ್ಣದ ಬಾಳೆಹಣ್ಣುಗಳಷ್ಟೇ ಎಲ್ಲರಿಗೂ ಗೊತ್ತು. ಆದರೆ ಕೆಂಪು ಬಾಳೆಹಣ್ಣುಗಳ ಬಗ್ಗೆ ಮತ್ತು ಅದರ ವಿಶೇಷತೆಗಳ ಬಗ್ಗೆ ನಿಮಗೆ ಗೊತ್ತಿದೆಯೇ? ಈ ಹಣ್ಣು ಇತರೆ ಹಣ್ಣುಗಳಿಗಿಂತ ಹೆಚ್ಚು ಸಿಹಿ ಮಾತ್ರವಲ್ಲ ಹೆಚ್ಚು ಆರೋಗ್ಯದಾಯಕವೂ ಹೌದು.

ಕೆಂಪು ಬಾಳೆಹಣ್ಣು ಹಳದಿ ಬಾಳೆಹಣ್ಣು ಮತ್ತು ರಾಸ್ಪ್ ಬೆರ್ರಿ ಹಣ್ಣುಗಳ ಸಂಯೋಗದಿಂದ ಉಂಟಾಗುವ ವಿಶಿಷ್ಟ ರುಚಿ ಕೊಡುತ್ತದೆ. ಇದರಲ್ಲಿ ಬಹಳಷ್ಟು ಆರೋಗ್ಯ ಲಾಭಗಳಿವೆ. ಕೆಂಪು ಬಾಳೆಹಣ್ಣುಗಳನ್ನು ಸಾಮಾನ್ಯವಾಗಿ ನಮ್ಮ ದೇಶದ ದಕ್ಷಿಣ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಾರೆ.

ವಿಶ್ವದಾದ್ಯಂತ ಸುಮಾರು 14 ರಿಂದ 15 ತರಹದ ಬಾಳೆಹಣ್ಣುಗಳಿವೆ. ಅದರಲ್ಲಿ ಹಳದಿ ಬಾಳೆಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಪರಿಚಿತ ಮತ್ತು ಎಲ್ಲರೂ ಸೇವಿಸುತ್ತಾರೆ. ಕೆಂಪು ಬಾಳೆಹಣ್ಣು ಬೆರ್ರಿ ಹಣ್ಣಿನ ರುಚಿಯನ್ನು ಹೊಂದಿದ್ದು, ಹೆಚ್ಚಿನ ಪ್ರಮಾಣದಲ್ಲಿ ಪೊಟಾಶಿಯಂ ಹೊಂದಿದೆ ಮತ್ತು ಕ್ಷಾರೀಯ ಅಂಶವನ್ನೂ ಒಳಗೊಂಡಿದೆ.

ಇದರಲ್ಲಿ ಆ್ಯಂಟಿಒಕ್ಸಿಡೆಂಟ್ ಆಗಿ ಕಲಸ ಮಾಡುವ ಆಂಥೋಸಯಾನಿನ್ ಎಂಬ ಅಂಶವೂ ಇದೆ. ಫೈಬರ್ ಮತ್ತು ವಿಟಮಿನ್ ಸಿ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಸಾಮಾನ್ಯವಾಗಿ ಎಲ್ಲಾ ಜಾತಿಯ ಬಾಳೆಹಣ್ಣುಗಳು ಒಂದೇ ತರಹದ ಪೋಷಕಾಂಶಗಳನ್ನು ಹೊಂದಿದ್ದರೂ, ಕೆಂಪು ಬಾಳೆಹಣ್ಣುಗಳು ಬೇರೆಯದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್, ಖನಿಜಾಂಶ ಮತ್ತು ಆ್ಯಂಟಿಒಕ್ಸಿಡೆಂಟ್ ಅಂಶಗಳಿವೆ.ಈ ಬಾಳೆಹಣ್ಣುಗಳಲ್ಲಿ ನಾರಿನಂಶ ಹೆಚ್ಚಿಗೆ ಇರುವುದರಿಂದ ಇದು ಮಧುಮೇಹಿಗಳಿಗೆ ಅತ್ಯುತ್ತಮ ಆಹಾರ.ಇದು ಸಕ್ಕರೆ ಅಂಶವನ್ನು ದೇಹದಲ್ಲಿ ನಿಧಾನವಾಗಿ ಹರಡುವುದರಿಂದ ದೇಹದ ಶಕ್ತಿಯ ಉತ್ತಮ ಮಟ್ಟದಲ್ಲಿರಿಸುತ್ತದೆ. ಪೊಟಾಶಿಯಂ ಅಷ್ಟೇ ಅಲ್ಲದೆ, ವಿಟಮಿನ್ ಸಿ, ಬೀಟಾ ಕ್ಯಾರೋಟಿನ್, ಬಿ6 ವಿಟಮಿನ್, ವಿಟಮಿನ್ ಡಿ ಇದ್ದು, ಇವು ದೇಹದ ಚಯಾಪಚಯ ಕ್ರಿಯೆಗೆ ಸಹಾಯ ಮಾಡಿ, ಪ್ರೊಟೀನ್ ಒದಗಿಸುತ್ತದೆ.

ದೇಹ ತೂಕ ಇಳಿಸುವಲ್ಲಿ ಸಹಾಯ ಮಾಡುತ್ತದೆ:-

ಕೆಂಪು ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ನಾರಿನಂಶ ನಿಮಗೆ ತುಂಬಾ ಹೊತ್ತು ಹಸಿವಾಗದಂತೆ ತಡೆಯುತ್ತದೆ. ಒಂದು ಪೂರ್ತಿ ಕೆಂಪು ಬಾಳೆಹಣ್ಣು ಕೇವಲ 90 ರಿಂದ 100 ರಷ್ಟು ಕ್ಯಾಲೋರಿಯನ್ನು ಹೊಂದಿದ್ದು, ಒಳ್ಳೆಯ ಪಿಷ್ಠವನ್ನು ಒಳಗೊಂಡಿರುವುದರಿಂದ ಅನಗತ್ಯವಾಗಿ ತಿನ್ನುವ ಬಯಕೆಗೆ ಕಡಿವಾಣ ಆಗುತ್ತದೆ. ಇದು ನಿಮ್ಮ ತೂಕ ಇಳಿಸುವ ಕ್ರೀಯೆಗೆ ಸಹಾಯ ಮಾಡುತ್ತದೆ.

ಕಿಡ್ನಿಯ ಆರೋಗ್ಯಕ್ಕೆ ಉತ್ತಮ:-

ಎಲ್ಲರಿಗೂ ಗೊತ್ತಿರುವಂತೆ ಪೊಟಾಶಿಯಂ ಕಿಡ್ನಿಯಲ್ಲಿ ಕಲ್ಲು ಆಗುವುದನ್ನು ತಡೆಯುತ್ತದೆ. ಕೆಂಪು ಬಾಳೆಹಣ್ಣಿನಲ್ಲಿ ಪೊಟಾಶಿಯಂ ಹೇರಳವಾಗಿದೆ. ನಿಮ್ಮ ದೇಹದಲ್ಲಿ ಕ್ಯಾಲ್ಶಿಯಂ ಸಮತೋಲನದಲ್ಲಿಡಲೂ ಇದು ಸಹಾಯಕಾರಿ. ಇದರಿಂದ ಶರೀರದಲ್ಲಿರುವ ಮೂಳೆಗಳು ಆರೋಗ್ಯಕರವಾಗಿದ್ದು, ಗಟ್ಟಿಯಾಗಿರುತ್ತದೆ.

ಧೂಮಪಾನ ತ್ಯಜಿಸಲು ಸಹಕಾರಿ:-

ಮೆಗ್ನಿಶಿಯಂ ಮತ್ತು ಪೊಟಾಶಿಯಂ ನಿಕೋಟಿನ್ ಹೊಂದಿರುವ ಧೂಮಪಾನ, ಗುಟ್ಕಾ ಮುಂತಾದ ದುಶ್ಚಟಗಳಿಂದ ಹೊರಬರಲು ಸಹಾಯ ಮಾಡುತ್ತದೆ. ನಿಕೋಟಿನ್ ಸಿಗರೇಟ್ ಮತ್ತು ಇತರ ತಂಬಾಕುಗಳಲ್ಲಿರುವ ಒಂದು ಅಂಶವಾಗಿರುವುದರಿಂದ ಕೆಂಪು ಬಾಳೆಹಣ್ಣು ಸೇವನೆ ಮಾಡುವುದರಿಂದ ಈ ಅಭ್ಯಾಸದಿಂದ ನಿಧಾನವಾಗಿ ಹೊರಬರಬಹುದು.

ಚರ್ಮದ ರಕ್ಷಣೆ:-

ಕೆಂಪು ಬಾಳೆಹಣ್ಣುಗಳ ಸೇವನೆಯಿಂದ ಮಾತ್ರ ಆರೋಗ್ಯ ಲಾಭವಲ್ಲ, ಇದನ್ನು ಸೇವಿಸುವುದರಿಂದ ಅಥವಾ ಇದರ ಪೇಸ್ಟ್ ಮುಖಕ್ಕೆ ಹಚ್ಚಿಕೊಳ್ಳುವುದೂ ಬಹಳ ಒಳ್ಳೆಯದು.ಪೌಡರ್ ಮಾಡಿದ ಓಟ್ಸ್, ಕಿವುಚಿದ ಕೆಂಪು ಬಾಳೆಹಣ್ಣು ಮತ್ತು ಕೆಲವು ಹನಿ ಜೇನುತುಪ್ಪ ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಒಣಗಲು ಬಿಡಿ. ನಂತರ ಮುಖ ತೊಳೆದರೆ ಮುಖ ಕಾಂತಿಯುತವಾಗುತ್ತದೆ.

ರಕ್ತ ಶುದ್ಧೀಕರಿಸುತ್ತದೆ:-

ಈ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ವಿಟಮಿನ್ ಗಳು ರಕ್ತವನ್ನು ಶುದ್ಧೀಕರಿಸಿ, ಹಿಮೋಗ್ಲೋಬಿನ್ ಮಟ್ಟವನ್ನು ಉತ್ತಮಪಡಿಸುತ್ತದೆ.ಇದು ನಿಮ್ಮ ಇಮ್ಯುನಿಟಿಯನ್ನೂ ಹೆಚ್ಚಿಸುತ್ತದೆ. ಕೆಂಪು ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ6 ದೇಹದಲ್ಲಿರುವ ಪ್ರೋಟಿನ್ ನ್ನು ಸಮತೋಲದಲ್ಲಿಟ್ಟು ಕೆಂಪು ರಕ್ತ ಕಣಗಳ ಉತ್ಪತ್ತಿಗೆ ಸಹಾಯ ಮಾಡುತ್ತದೆ.

ಕೂದಲಿಗೆ ಅತ್ಯುತ್ತಮ:-

ಕೆಂಪು ಬಾಳೆಹಣ್ಣನ್ನು ಕಿವುಚಿ ಅದಕ್ಕೆ ತೆಂಗಿನ ಎಣ್ಣೆ, ಸಾಸಿವೆ ಎಣ್ಣೆ, ಅಥವಾ ಬಾದಾಮಿ ಎಣ್ಣೆ ಹಾಕಿ ಮಿಶ್ರಣ ಮಾಡಿ ತಲೆಗೆ ಹಚ್ಚಿಕೊಳ್ಳಿ. ನಂತರ ಇದರ ಮೇಲೆ ಸ್ವಲ್ಪ ನಿಂಬೆಹಣ್ಣಿನ ರಸವನ್ನು ಸಿಂಪಡಿಸಿ. 30 ನಿಮಿಷದ ನಂತರ ಕೂದಲು ತೊಳೆದರೆ ಮಿನುಗುವ ಸಿಲ್ಕೀ ಕೂದಲು ನಿಮ್ಮದಾಗುತ್ತದೆ. ಅಷ್ಟೇ ಅಲ್ಲ, ಇದರಿಂದ ತಲೆಹೊಟ್ಟು, ಕೂದಲುದುರುವಿಕೆ ಮತ್ತು ಒಣಕೂದಲಿನಿಂದ ರಕ್ಷಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …

  • ಸುದ್ದಿ

    ಕೋತಿಯನ್ನು ಈ ಶ್ರೀಮಂತ ದಂಪತಿಗಳು ತಮ್ಮ ಸ್ವಂತ ಮಗನಿಗಿಂತ ಹೆಚ್ಚಾಗಿ ಸಾಕುತ್ತಿದ್ದಾರೆ.!ಏಕೆ ಗೋತಾ.?ತಿಳಿಯಲು ಈ ಲೇಖನ ಓದಿ…

    ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.

  • ಪ್ರೇಮ, ಸ್ಪೂರ್ತಿ

    ಮನೆಯವರಿಗೆ ಗೊತ್ತಿಲ್ಲದೇ ಹಾಗೆ ತನ್ನ ಗೆಳತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಹುಡುಗ, ಕಾರಣ ಮಾತ್ರ ಶಾಕಿಂಗ್.

    ಕೇರಳ ರಾಜ್ಯಕ್ಕೆ ಸೇರಿದ ಸಚಿನ್ ಹಾಗೂ ಭವ್ಯಾ ಎಂಬುವವರು ಡಿಪ್ಲೋಮ ಓದುತ್ತಿದ್ದಾಗ ಇಬ್ಬರೂ ಒಳ್ಳೆಯ ಸ್ನೇಹಿತರಾಗುತ್ತಾರೆ, ಇವರ ಸ್ನೇಹ ತುಂಬಾ ಆತ್ಮೀಯವಾಗಿ 8 ತಿಂಗಳು ಮುಂದುವರೆದ ಕಾರಣ ಇವರ ಸ್ನೇಹವನ್ನ ಅಪಾರ್ಥ ಮಾಡಿಕೊಂಡ ಭವ್ಯಾ ಮನೆಯವರು ಸಚಿನ್ ಜೊತೆ ಮಾತನಾಡದೆ ಇರುವಂತೆ ಭವ್ಯಾಗೆ ಎಚ್ಚರಿಕೆಯನ್ನ ನೀಡುತ್ತಾರೆ. ಇನ್ನು ತಮ್ಮ ಮನೆಯವರ ಮಾತಿಗೆ ಬೆಲೆಕೊಟ್ಟ ಭವ್ಯಾ ಸಚಿನ್ ಜೊತೆ ಮಾತನಾಡುವುದನ್ನ ಬಿಟ್ಟು ಬಿಡುತ್ತಾಳೆ, ಇನ್ನು ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಇರುವುದು ಬರಿ ಸ್ನೇಹ ಅಲ್ಲ ಪ್ರೀತಿ ಅನ್ನುವುದು…

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • Cinema

    ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

     ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…