News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

1015

ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

ಬಾಳೆಹಣ್ಣಿನಲ್ಲಿ ಕೂಡ ಸಾಕಷ್ಟು ತಳಿಗಳಿದ್ದರೂ ಬಹುತೇಕ ಎಲ್ಲಾ ಹಣ್ಣುಗಳಲ್ಲಿ ಒಂದೇ ರೀತಿಯ ಪೋಷಾಕಾಂಶಗಳು ಇವೆ ಎಂದು ಭಾವಿಸುತ್ತೇವೆ. ಸಾಮಾನ್ಯವಾಗಿ ಬಾಳೆಹಣ್ಣಿನಲ್ಲಿ 11 ತರಹದ ಖನಿಜಾಂಶಗಳು, 6 ತರಹದ ವಿಟಮಿನ್ಸ್, ಫೈಬರ್ ಮತ್ತು ಕಾರ್ಬೋಹೈಡ್ರೇಟ್ಸ್ ಗಳು ಇವೆ.

ಬಾಳೆಹಣ್ಣು ಅಂದರೆ ಹಳದಿ ಬಣ್ಣದ ಬಾಳೆಹಣ್ಣುಗಳಷ್ಟೇ ಎಲ್ಲರಿಗೂ ಗೊತ್ತು. ಆದರೆ ಕೆಂಪು ಬಾಳೆಹಣ್ಣುಗಳ ಬಗ್ಗೆ ಮತ್ತು ಅದರ ವಿಶೇಷತೆಗಳ ಬಗ್ಗೆ ನಿಮಗೆ ಗೊತ್ತಿದೆಯೇ? ಈ ಹಣ್ಣು ಇತರೆ ಹಣ್ಣುಗಳಿಗಿಂತ ಹೆಚ್ಚು ಸಿಹಿ ಮಾತ್ರವಲ್ಲ ಹೆಚ್ಚು ಆರೋಗ್ಯದಾಯಕವೂ ಹೌದು.

ಕೆಂಪು ಬಾಳೆಹಣ್ಣು ಹಳದಿ ಬಾಳೆಹಣ್ಣು ಮತ್ತು ರಾಸ್ಪ್ ಬೆರ್ರಿ ಹಣ್ಣುಗಳ ಸಂಯೋಗದಿಂದ ಉಂಟಾಗುವ ವಿಶಿಷ್ಟ ರುಚಿ ಕೊಡುತ್ತದೆ. ಇದರಲ್ಲಿ ಬಹಳಷ್ಟು ಆರೋಗ್ಯ ಲಾಭಗಳಿವೆ. ಕೆಂಪು ಬಾಳೆಹಣ್ಣುಗಳನ್ನು ಸಾಮಾನ್ಯವಾಗಿ ನಮ್ಮ ದೇಶದ ದಕ್ಷಿಣ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಾರೆ.

ವಿಶ್ವದಾದ್ಯಂತ ಸುಮಾರು 14 ರಿಂದ 15 ತರಹದ ಬಾಳೆಹಣ್ಣುಗಳಿವೆ. ಅದರಲ್ಲಿ ಹಳದಿ ಬಾಳೆಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಪರಿಚಿತ ಮತ್ತು ಎಲ್ಲರೂ ಸೇವಿಸುತ್ತಾರೆ. ಕೆಂಪು ಬಾಳೆಹಣ್ಣು ಬೆರ್ರಿ ಹಣ್ಣಿನ ರುಚಿಯನ್ನು ಹೊಂದಿದ್ದು, ಹೆಚ್ಚಿನ ಪ್ರಮಾಣದಲ್ಲಿ ಪೊಟಾಶಿಯಂ ಹೊಂದಿದೆ ಮತ್ತು ಕ್ಷಾರೀಯ ಅಂಶವನ್ನೂ ಒಳಗೊಂಡಿದೆ.

ಇದರಲ್ಲಿ ಆ್ಯಂಟಿಒಕ್ಸಿಡೆಂಟ್ ಆಗಿ ಕಲಸ ಮಾಡುವ ಆಂಥೋಸಯಾನಿನ್ ಎಂಬ ಅಂಶವೂ ಇದೆ. ಫೈಬರ್ ಮತ್ತು ವಿಟಮಿನ್ ಸಿ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಸಾಮಾನ್ಯವಾಗಿ ಎಲ್ಲಾ ಜಾತಿಯ ಬಾಳೆಹಣ್ಣುಗಳು ಒಂದೇ ತರಹದ ಪೋಷಕಾಂಶಗಳನ್ನು ಹೊಂದಿದ್ದರೂ, ಕೆಂಪು ಬಾಳೆಹಣ್ಣುಗಳು ಬೇರೆಯದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್, ಖನಿಜಾಂಶ ಮತ್ತು ಆ್ಯಂಟಿಒಕ್ಸಿಡೆಂಟ್ ಅಂಶಗಳಿವೆ.ಈ ಬಾಳೆಹಣ್ಣುಗಳಲ್ಲಿ ನಾರಿನಂಶ ಹೆಚ್ಚಿಗೆ ಇರುವುದರಿಂದ ಇದು ಮಧುಮೇಹಿಗಳಿಗೆ ಅತ್ಯುತ್ತಮ ಆಹಾರ.ಇದು ಸಕ್ಕರೆ ಅಂಶವನ್ನು ದೇಹದಲ್ಲಿ ನಿಧಾನವಾಗಿ ಹರಡುವುದರಿಂದ ದೇಹದ ಶಕ್ತಿಯ ಉತ್ತಮ ಮಟ್ಟದಲ್ಲಿರಿಸುತ್ತದೆ. ಪೊಟಾಶಿಯಂ ಅಷ್ಟೇ ಅಲ್ಲದೆ, ವಿಟಮಿನ್ ಸಿ, ಬೀಟಾ ಕ್ಯಾರೋಟಿನ್, ಬಿ6 ವಿಟಮಿನ್, ವಿಟಮಿನ್ ಡಿ ಇದ್ದು, ಇವು ದೇಹದ ಚಯಾಪಚಯ ಕ್ರಿಯೆಗೆ ಸಹಾಯ ಮಾಡಿ, ಪ್ರೊಟೀನ್ ಒದಗಿಸುತ್ತದೆ.

ದೇಹ ತೂಕ ಇಳಿಸುವಲ್ಲಿ ಸಹಾಯ ಮಾಡುತ್ತದೆ:-

ಕೆಂಪು ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ನಾರಿನಂಶ ನಿಮಗೆ ತುಂಬಾ ಹೊತ್ತು ಹಸಿವಾಗದಂತೆ ತಡೆಯುತ್ತದೆ. ಒಂದು ಪೂರ್ತಿ ಕೆಂಪು ಬಾಳೆಹಣ್ಣು ಕೇವಲ 90 ರಿಂದ 100 ರಷ್ಟು ಕ್ಯಾಲೋರಿಯನ್ನು ಹೊಂದಿದ್ದು, ಒಳ್ಳೆಯ ಪಿಷ್ಠವನ್ನು ಒಳಗೊಂಡಿರುವುದರಿಂದ ಅನಗತ್ಯವಾಗಿ ತಿನ್ನುವ ಬಯಕೆಗೆ ಕಡಿವಾಣ ಆಗುತ್ತದೆ. ಇದು ನಿಮ್ಮ ತೂಕ ಇಳಿಸುವ ಕ್ರೀಯೆಗೆ ಸಹಾಯ ಮಾಡುತ್ತದೆ.

ಕಿಡ್ನಿಯ ಆರೋಗ್ಯಕ್ಕೆ ಉತ್ತಮ:-

ಎಲ್ಲರಿಗೂ ಗೊತ್ತಿರುವಂತೆ ಪೊಟಾಶಿಯಂ ಕಿಡ್ನಿಯಲ್ಲಿ ಕಲ್ಲು ಆಗುವುದನ್ನು ತಡೆಯುತ್ತದೆ. ಕೆಂಪು ಬಾಳೆಹಣ್ಣಿನಲ್ಲಿ ಪೊಟಾಶಿಯಂ ಹೇರಳವಾಗಿದೆ. ನಿಮ್ಮ ದೇಹದಲ್ಲಿ ಕ್ಯಾಲ್ಶಿಯಂ ಸಮತೋಲನದಲ್ಲಿಡಲೂ ಇದು ಸಹಾಯಕಾರಿ. ಇದರಿಂದ ಶರೀರದಲ್ಲಿರುವ ಮೂಳೆಗಳು ಆರೋಗ್ಯಕರವಾಗಿದ್ದು, ಗಟ್ಟಿಯಾಗಿರುತ್ತದೆ.

ಧೂಮಪಾನ ತ್ಯಜಿಸಲು ಸಹಕಾರಿ:-

ಮೆಗ್ನಿಶಿಯಂ ಮತ್ತು ಪೊಟಾಶಿಯಂ ನಿಕೋಟಿನ್ ಹೊಂದಿರುವ ಧೂಮಪಾನ, ಗುಟ್ಕಾ ಮುಂತಾದ ದುಶ್ಚಟಗಳಿಂದ ಹೊರಬರಲು ಸಹಾಯ ಮಾಡುತ್ತದೆ. ನಿಕೋಟಿನ್ ಸಿಗರೇಟ್ ಮತ್ತು ಇತರ ತಂಬಾಕುಗಳಲ್ಲಿರುವ ಒಂದು ಅಂಶವಾಗಿರುವುದರಿಂದ ಕೆಂಪು ಬಾಳೆಹಣ್ಣು ಸೇವನೆ ಮಾಡುವುದರಿಂದ ಈ ಅಭ್ಯಾಸದಿಂದ ನಿಧಾನವಾಗಿ ಹೊರಬರಬಹುದು.

ಚರ್ಮದ ರಕ್ಷಣೆ:-

ಕೆಂಪು ಬಾಳೆಹಣ್ಣುಗಳ ಸೇವನೆಯಿಂದ ಮಾತ್ರ ಆರೋಗ್ಯ ಲಾಭವಲ್ಲ, ಇದನ್ನು ಸೇವಿಸುವುದರಿಂದ ಅಥವಾ ಇದರ ಪೇಸ್ಟ್ ಮುಖಕ್ಕೆ ಹಚ್ಚಿಕೊಳ್ಳುವುದೂ ಬಹಳ ಒಳ್ಳೆಯದು.ಪೌಡರ್ ಮಾಡಿದ ಓಟ್ಸ್, ಕಿವುಚಿದ ಕೆಂಪು ಬಾಳೆಹಣ್ಣು ಮತ್ತು ಕೆಲವು ಹನಿ ಜೇನುತುಪ್ಪ ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಒಣಗಲು ಬಿಡಿ. ನಂತರ ಮುಖ ತೊಳೆದರೆ ಮುಖ ಕಾಂತಿಯುತವಾಗುತ್ತದೆ.

ರಕ್ತ ಶುದ್ಧೀಕರಿಸುತ್ತದೆ:-

ಈ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ವಿಟಮಿನ್ ಗಳು ರಕ್ತವನ್ನು ಶುದ್ಧೀಕರಿಸಿ, ಹಿಮೋಗ್ಲೋಬಿನ್ ಮಟ್ಟವನ್ನು ಉತ್ತಮಪಡಿಸುತ್ತದೆ.ಇದು ನಿಮ್ಮ ಇಮ್ಯುನಿಟಿಯನ್ನೂ ಹೆಚ್ಚಿಸುತ್ತದೆ. ಕೆಂಪು ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ6 ದೇಹದಲ್ಲಿರುವ ಪ್ರೋಟಿನ್ ನ್ನು ಸಮತೋಲದಲ್ಲಿಟ್ಟು ಕೆಂಪು ರಕ್ತ ಕಣಗಳ ಉತ್ಪತ್ತಿಗೆ ಸಹಾಯ ಮಾಡುತ್ತದೆ.

ಕೂದಲಿಗೆ ಅತ್ಯುತ್ತಮ:-

ಕೆಂಪು ಬಾಳೆಹಣ್ಣನ್ನು ಕಿವುಚಿ ಅದಕ್ಕೆ ತೆಂಗಿನ ಎಣ್ಣೆ, ಸಾಸಿವೆ ಎಣ್ಣೆ, ಅಥವಾ ಬಾದಾಮಿ ಎಣ್ಣೆ ಹಾಕಿ ಮಿಶ್ರಣ ಮಾಡಿ ತಲೆಗೆ ಹಚ್ಚಿಕೊಳ್ಳಿ. ನಂತರ ಇದರ ಮೇಲೆ ಸ್ವಲ್ಪ ನಿಂಬೆಹಣ್ಣಿನ ರಸವನ್ನು ಸಿಂಪಡಿಸಿ. 30 ನಿಮಿಷದ ನಂತರ ಕೂದಲು ತೊಳೆದರೆ ಮಿನುಗುವ ಸಿಲ್ಕೀ ಕೂದಲು ನಿಮ್ಮದಾಗುತ್ತದೆ. ಅಷ್ಟೇ ಅಲ್ಲ, ಇದರಿಂದ ತಲೆಹೊಟ್ಟು, ಕೂದಲುದುರುವಿಕೆ ಮತ್ತು ಒಣಕೂದಲಿನಿಂದ ರಕ್ಷಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ಆಧ್ಯಾತ್ಮ, ಜ್ಯೋತಿಷ್ಯ

    ಶುಭ ಶನಿವಾರದಂದು ಈ ವಸ್ತುಗಳು ನಿಮ್ಮ ಕಣ್ಣಿಗೆ ಬಿದ್ರೆ ಅದೃಷ್ಟವೋ ಅದೃಷ..!

    ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…