ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಬಾಳೆಹಣ್ಣಿನಲ್ಲಿ ಕೂಡ ಸಾಕಷ್ಟು ತಳಿಗಳಿದ್ದರೂ ಬಹುತೇಕ ಎಲ್ಲಾ ಹಣ್ಣುಗಳಲ್ಲಿ ಒಂದೇ ರೀತಿಯ ಪೋಷಾಕಾಂಶಗಳು ಇವೆ ಎಂದು ಭಾವಿಸುತ್ತೇವೆ. ಸಾಮಾನ್ಯವಾಗಿ ಬಾಳೆಹಣ್ಣಿನಲ್ಲಿ 11 ತರಹದ ಖನಿಜಾಂಶಗಳು, 6 ತರಹದ ವಿಟಮಿನ್ಸ್, ಫೈಬರ್ ಮತ್ತು ಕಾರ್ಬೋಹೈಡ್ರೇಟ್ಸ್ ಗಳು ಇವೆ.
ಬಾಳೆಹಣ್ಣು ಅಂದರೆ ಹಳದಿ ಬಣ್ಣದ ಬಾಳೆಹಣ್ಣುಗಳಷ್ಟೇ ಎಲ್ಲರಿಗೂ ಗೊತ್ತು. ಆದರೆ ಕೆಂಪು ಬಾಳೆಹಣ್ಣುಗಳ ಬಗ್ಗೆ ಮತ್ತು ಅದರ ವಿಶೇಷತೆಗಳ ಬಗ್ಗೆ ನಿಮಗೆ ಗೊತ್ತಿದೆಯೇ? ಈ ಹಣ್ಣು ಇತರೆ ಹಣ್ಣುಗಳಿಗಿಂತ ಹೆಚ್ಚು ಸಿಹಿ ಮಾತ್ರವಲ್ಲ ಹೆಚ್ಚು ಆರೋಗ್ಯದಾಯಕವೂ ಹೌದು.
ಕೆಂಪು ಬಾಳೆಹಣ್ಣು ಹಳದಿ ಬಾಳೆಹಣ್ಣು ಮತ್ತು ರಾಸ್ಪ್ ಬೆರ್ರಿ ಹಣ್ಣುಗಳ ಸಂಯೋಗದಿಂದ ಉಂಟಾಗುವ ವಿಶಿಷ್ಟ ರುಚಿ ಕೊಡುತ್ತದೆ. ಇದರಲ್ಲಿ ಬಹಳಷ್ಟು ಆರೋಗ್ಯ ಲಾಭಗಳಿವೆ. ಕೆಂಪು ಬಾಳೆಹಣ್ಣುಗಳನ್ನು ಸಾಮಾನ್ಯವಾಗಿ ನಮ್ಮ ದೇಶದ ದಕ್ಷಿಣ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಾರೆ.
ವಿಶ್ವದಾದ್ಯಂತ ಸುಮಾರು 14 ರಿಂದ 15 ತರಹದ ಬಾಳೆಹಣ್ಣುಗಳಿವೆ. ಅದರಲ್ಲಿ ಹಳದಿ ಬಾಳೆಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಪರಿಚಿತ ಮತ್ತು ಎಲ್ಲರೂ ಸೇವಿಸುತ್ತಾರೆ. ಕೆಂಪು ಬಾಳೆಹಣ್ಣು ಬೆರ್ರಿ ಹಣ್ಣಿನ ರುಚಿಯನ್ನು ಹೊಂದಿದ್ದು, ಹೆಚ್ಚಿನ ಪ್ರಮಾಣದಲ್ಲಿ ಪೊಟಾಶಿಯಂ ಹೊಂದಿದೆ ಮತ್ತು ಕ್ಷಾರೀಯ ಅಂಶವನ್ನೂ ಒಳಗೊಂಡಿದೆ.
ಇದರಲ್ಲಿ ಆ್ಯಂಟಿಒಕ್ಸಿಡೆಂಟ್ ಆಗಿ ಕಲಸ ಮಾಡುವ ಆಂಥೋಸಯಾನಿನ್ ಎಂಬ ಅಂಶವೂ ಇದೆ. ಫೈಬರ್ ಮತ್ತು ವಿಟಮಿನ್ ಸಿ ಕೂಡ ಹೆಚ್ಚಿನ ಪ್ರಮಾಣದಲ್ಲಿದೆ. ಸಾಮಾನ್ಯವಾಗಿ ಎಲ್ಲಾ ಜಾತಿಯ ಬಾಳೆಹಣ್ಣುಗಳು ಒಂದೇ ತರಹದ ಪೋಷಕಾಂಶಗಳನ್ನು ಹೊಂದಿದ್ದರೂ, ಕೆಂಪು ಬಾಳೆಹಣ್ಣುಗಳು ಬೇರೆಯದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್, ಖನಿಜಾಂಶ ಮತ್ತು ಆ್ಯಂಟಿಒಕ್ಸಿಡೆಂಟ್ ಅಂಶಗಳಿವೆ.ಈ ಬಾಳೆಹಣ್ಣುಗಳಲ್ಲಿ ನಾರಿನಂಶ ಹೆಚ್ಚಿಗೆ ಇರುವುದರಿಂದ ಇದು ಮಧುಮೇಹಿಗಳಿಗೆ ಅತ್ಯುತ್ತಮ ಆಹಾರ.ಇದು ಸಕ್ಕರೆ ಅಂಶವನ್ನು ದೇಹದಲ್ಲಿ ನಿಧಾನವಾಗಿ ಹರಡುವುದರಿಂದ ದೇಹದ ಶಕ್ತಿಯ ಉತ್ತಮ ಮಟ್ಟದಲ್ಲಿರಿಸುತ್ತದೆ. ಪೊಟಾಶಿಯಂ ಅಷ್ಟೇ ಅಲ್ಲದೆ, ವಿಟಮಿನ್ ಸಿ, ಬೀಟಾ ಕ್ಯಾರೋಟಿನ್, ಬಿ6 ವಿಟಮಿನ್, ವಿಟಮಿನ್ ಡಿ ಇದ್ದು, ಇವು ದೇಹದ ಚಯಾಪಚಯ ಕ್ರಿಯೆಗೆ ಸಹಾಯ ಮಾಡಿ, ಪ್ರೊಟೀನ್ ಒದಗಿಸುತ್ತದೆ.
ದೇಹ ತೂಕ ಇಳಿಸುವಲ್ಲಿ ಸಹಾಯ ಮಾಡುತ್ತದೆ:-
ಕೆಂಪು ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ನಾರಿನಂಶ ನಿಮಗೆ ತುಂಬಾ ಹೊತ್ತು ಹಸಿವಾಗದಂತೆ ತಡೆಯುತ್ತದೆ. ಒಂದು ಪೂರ್ತಿ ಕೆಂಪು ಬಾಳೆಹಣ್ಣು ಕೇವಲ 90 ರಿಂದ 100 ರಷ್ಟು ಕ್ಯಾಲೋರಿಯನ್ನು ಹೊಂದಿದ್ದು, ಒಳ್ಳೆಯ ಪಿಷ್ಠವನ್ನು ಒಳಗೊಂಡಿರುವುದರಿಂದ ಅನಗತ್ಯವಾಗಿ ತಿನ್ನುವ ಬಯಕೆಗೆ ಕಡಿವಾಣ ಆಗುತ್ತದೆ. ಇದು ನಿಮ್ಮ ತೂಕ ಇಳಿಸುವ ಕ್ರೀಯೆಗೆ ಸಹಾಯ ಮಾಡುತ್ತದೆ.
ಕಿಡ್ನಿಯ ಆರೋಗ್ಯಕ್ಕೆ ಉತ್ತಮ:-
ಎಲ್ಲರಿಗೂ ಗೊತ್ತಿರುವಂತೆ ಪೊಟಾಶಿಯಂ ಕಿಡ್ನಿಯಲ್ಲಿ ಕಲ್ಲು ಆಗುವುದನ್ನು ತಡೆಯುತ್ತದೆ. ಕೆಂಪು ಬಾಳೆಹಣ್ಣಿನಲ್ಲಿ ಪೊಟಾಶಿಯಂ ಹೇರಳವಾಗಿದೆ. ನಿಮ್ಮ ದೇಹದಲ್ಲಿ ಕ್ಯಾಲ್ಶಿಯಂ ಸಮತೋಲನದಲ್ಲಿಡಲೂ ಇದು ಸಹಾಯಕಾರಿ. ಇದರಿಂದ ಶರೀರದಲ್ಲಿರುವ ಮೂಳೆಗಳು ಆರೋಗ್ಯಕರವಾಗಿದ್ದು, ಗಟ್ಟಿಯಾಗಿರುತ್ತದೆ.
ಧೂಮಪಾನ ತ್ಯಜಿಸಲು ಸಹಕಾರಿ:-
ಮೆಗ್ನಿಶಿಯಂ ಮತ್ತು ಪೊಟಾಶಿಯಂ ನಿಕೋಟಿನ್ ಹೊಂದಿರುವ ಧೂಮಪಾನ, ಗುಟ್ಕಾ ಮುಂತಾದ ದುಶ್ಚಟಗಳಿಂದ ಹೊರಬರಲು ಸಹಾಯ ಮಾಡುತ್ತದೆ. ನಿಕೋಟಿನ್ ಸಿಗರೇಟ್ ಮತ್ತು ಇತರ ತಂಬಾಕುಗಳಲ್ಲಿರುವ ಒಂದು ಅಂಶವಾಗಿರುವುದರಿಂದ ಕೆಂಪು ಬಾಳೆಹಣ್ಣು ಸೇವನೆ ಮಾಡುವುದರಿಂದ ಈ ಅಭ್ಯಾಸದಿಂದ ನಿಧಾನವಾಗಿ ಹೊರಬರಬಹುದು.
ಚರ್ಮದ ರಕ್ಷಣೆ:-
ಕೆಂಪು ಬಾಳೆಹಣ್ಣುಗಳ ಸೇವನೆಯಿಂದ ಮಾತ್ರ ಆರೋಗ್ಯ ಲಾಭವಲ್ಲ, ಇದನ್ನು ಸೇವಿಸುವುದರಿಂದ ಅಥವಾ ಇದರ ಪೇಸ್ಟ್ ಮುಖಕ್ಕೆ ಹಚ್ಚಿಕೊಳ್ಳುವುದೂ ಬಹಳ ಒಳ್ಳೆಯದು.ಪೌಡರ್ ಮಾಡಿದ ಓಟ್ಸ್, ಕಿವುಚಿದ ಕೆಂಪು ಬಾಳೆಹಣ್ಣು ಮತ್ತು ಕೆಲವು ಹನಿ ಜೇನುತುಪ್ಪ ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಒಣಗಲು ಬಿಡಿ. ನಂತರ ಮುಖ ತೊಳೆದರೆ ಮುಖ ಕಾಂತಿಯುತವಾಗುತ್ತದೆ.
ರಕ್ತ ಶುದ್ಧೀಕರಿಸುತ್ತದೆ:-
ಈ ಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ಮತ್ತು ವಿಟಮಿನ್ ಗಳು ರಕ್ತವನ್ನು ಶುದ್ಧೀಕರಿಸಿ, ಹಿಮೋಗ್ಲೋಬಿನ್ ಮಟ್ಟವನ್ನು ಉತ್ತಮಪಡಿಸುತ್ತದೆ.ಇದು ನಿಮ್ಮ ಇಮ್ಯುನಿಟಿಯನ್ನೂ ಹೆಚ್ಚಿಸುತ್ತದೆ. ಕೆಂಪು ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ6 ದೇಹದಲ್ಲಿರುವ ಪ್ರೋಟಿನ್ ನ್ನು ಸಮತೋಲದಲ್ಲಿಟ್ಟು ಕೆಂಪು ರಕ್ತ ಕಣಗಳ ಉತ್ಪತ್ತಿಗೆ ಸಹಾಯ ಮಾಡುತ್ತದೆ.
ಕೂದಲಿಗೆ ಅತ್ಯುತ್ತಮ:-
ಕೆಂಪು ಬಾಳೆಹಣ್ಣನ್ನು ಕಿವುಚಿ ಅದಕ್ಕೆ ತೆಂಗಿನ ಎಣ್ಣೆ, ಸಾಸಿವೆ ಎಣ್ಣೆ, ಅಥವಾ ಬಾದಾಮಿ ಎಣ್ಣೆ ಹಾಕಿ ಮಿಶ್ರಣ ಮಾಡಿ ತಲೆಗೆ ಹಚ್ಚಿಕೊಳ್ಳಿ. ನಂತರ ಇದರ ಮೇಲೆ ಸ್ವಲ್ಪ ನಿಂಬೆಹಣ್ಣಿನ ರಸವನ್ನು ಸಿಂಪಡಿಸಿ. 30 ನಿಮಿಷದ ನಂತರ ಕೂದಲು ತೊಳೆದರೆ ಮಿನುಗುವ ಸಿಲ್ಕೀ ಕೂದಲು ನಿಮ್ಮದಾಗುತ್ತದೆ. ಅಷ್ಟೇ ಅಲ್ಲ, ಇದರಿಂದ ತಲೆಹೊಟ್ಟು, ಕೂದಲುದುರುವಿಕೆ ಮತ್ತು ಒಣಕೂದಲಿನಿಂದ ರಕ್ಷಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…