ದೇವರು-ಧರ್ಮ

ಪ್ರತಿಯೊಬ್ಬ “ಹಿಂದೂ ಧರ್ಮ”ದವರು ಕೂಡ ತಿಳಿಯಲೇಬೇಕಾದ ಈ ವಿಷಯಗಳು..!ಏನೆಂದು ತಿಳಿಯಬೇಕಾದ್ರೆ ಈ ಲೇಖನ ಓದಿ…

2727

ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ. ಯೋಗಿಕ ಸಂಪ್ರದಾಯಗಳು ಮತ್ತು ಕರ್ಮದ ಕಲ್ಪನೆಯನ್ನು ಆಧರಿಸಿದ “ದೈನಿಕ ಸದಾಚಾರ”ದ ವಿಶಾಲವಾದ ವೈವಿಧ್ಯ ಮತ್ತು ಹಿಂದೂ ವಿವಾಹ ಪದ್ಧತಿಗಳಂತಹ ಸಮಾಜದ ಸಂಪ್ರದಾಯಬದ್ಧ ನಡವಳಿಕೆಗಳನ್ನೂ ಹಿಂದೂ ಧರ್ಮವು ಒಳಗೊಳ್ಳುತ್ತದೆ.

ಹಿಂದು ಧರ್ಮವು ವಿಶ್ವದ ಪುರಾತನ ಧರ್ಮ ವಾಗಿದ್ದು, ಓಂ ಕಾರ – ಹಿಂದೂ ಧರ್ಮದ ಒಂದು ಪವಿತ್ರಾಕ್ಷರ, ಗಣಪತಿ – ಹಿಂದೂ ಧರ್ಮೀಯರು ಅಪಾರವಾಗಿ ನಂಬುವ ದೇವರು

ವೇದಗಳು (4)
ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ.

ರಾಶೀಗಳು (12)
ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ಧನು, ಮಕರ, ಕುಂಭ, ಮೀನ.

ಋತುಗಳು (6) ಮತ್ತು ಮಾಸ (12)
ವಸಂತ (ಚೈತ್ರ-ವೈಶಾಖ), ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ), ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ), ಶಿಶಿರ (ಮಾಘ-ಫಾಲ್ಗುಣ).

ದಿಕ್ಕುಗಳು (10)
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ,
ಆಗ್ನೇಯ, ವಾಯವ್ಯ, ನೈಋತ್ಯ, ಆಕಾಶ, ಪಾತಾಳ.

ಸಂಸ್ಕಾರಗಳು (16)
ಗರ್ಭಧಾನ, ಪುಂಸವನ, ಸೀಮನ್ತೋತ್ರಯನ, ಜಾತಕರ್ಮ, ನಾಮಕರಣ,
ನಿಷಕ್ರಮಣ, ಅನ್ನಪ್ರಾಶನ, ಚೂಡಾಕರ್ಮ, ಕರ್ಣಭೇದ, ಯಜ್ಞೋಪವೀತ,
ವೇದಾರಂಭ, ಕೇಶಾಂತ, ಸಮಾವರ್ತನ, ವಿವಾಹ, ಆವಸಥ್ಯಧಾನ, ಶ್ರೌತಧಾನ.

ಸಪ್ತ ಋಷಿಗಳು (7)
ವಿಶ್ವಾಮಿತ್ರ, ಜಮದಗ್ನಿ, ಭಾರದ್ವಾಜ, ಗೌತಮ, ಅತ್ರಿ, ವಸಿಷ್ಠ, ಕಶ್ಯಪ.

ಸಪ್ತ ಪರ್ವತಗಳು
ಹಿಮಾಲಯ (ಉತ್ತರ ಭಾರತ), ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) , ಮಹೇಂದ್ರ (ಉಡಿಸಾ), ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ), ರೈವತಕ (ಗಿರನಾರ-ಗುಜರಾತ)

ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ), ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು), ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ), ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ), ಪರಳೀ ವೈಜನಾಥ, ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ , ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).

ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ), ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ), ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)

ಚಾರಧಾಮಗಳು
ಬದ್ರಿನಾಥ (ಉತ್ತರಾಂಚಲ), ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ), ಜಗನ್ನಾಥಪುರೀ (ಉಡೀಸಾ).

ಸಪ್ತಪುರಿಗಳು :-
ಅಯೋಧ್ಯಾ, ಮಥುರಾ, ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ), ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.), ದ್ವಾರಿಕಾ (ಗುಜರಾಥ).

ಚಾರಕುಂಭಗಳು :-
ಹರಿದ್ವಾರ (ಉತ್ತರಖಂಡ), ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) , ನಾಶಿಕ(ಮಹಾರಾಷ್ಟ್ರ)

ಪವಿತ್ರ-ಸ್ಮರಣೀಯ ನದಿಗಳು
ಗಂಗಾ , ಕಾವೇರಿ, ಯಮುನಾ, ಸರಸ್ವತೀ, ನರ್ಮದಾ, ಮಹಾನದೀ, ಗೋದಾವರೀ,
ಕೃಷ್ಣಾ , ಬ್ರಹ್ಮಪುತ್ರಾ.

ಅಷ್ಟ ಲಕ್ಷ್ಮೀಯರು (8)
ಆದಿಲಕ್ಷ್ಮೀ , ವಿದ್ಯಾಲಕ್ಷ್ಮೀ , ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ, ಕಾಮಲಕ್ಷ್ಮೀ, ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ, ಯೋಗಲಕ್ಷ್ಮೀ.

ಯುಗಗಳು (4) ಸತ್ಯಯುಗ, ತ್ರೇತಾಯುಗ,ದ್ವಾಪರಯುಗ, ಕಲಿಯುಗ.

ಪುರುಷಾರ್ಥ (4) ಧರ್ಮ , ಅರ್ಥ , ಕಾಮ , ಮೋಕ್ಷ.

ಪ್ರಕೃತಿಯ ಗುಣಗಳು (3) ಸತ್ವ , ರಜ , ತಮ.

ನಕ್ಷತ್ರಗಳು (28)
ಅಶ್ವನೀ, ಭರಣೀ, ಕೃತಿಕಾ, ರೋಹಿಣೀ, ಮೃಗ,ಆರ್ದ್ರಾ, ಪುನರ್ವಸು, ಪುಷ್ಯ, ಆಶ್ಲೇಷಾ,
ಮೇಘಾ, ಪೂರ್ವಾಫಾಲ್ಗುನೀ, ಉತ್ತರಾ ಫಾಲ್ಗುನೀ,ಹಸ್ತ, ಚಿತ್ರಾ, ಸ್ವಾತೀ, ವಿಶಾಖಾ, ಅನುರಾಧಾ,
ಜ್ಯೇಷ್ಠ, ಮೂಲ, ಪೂರ್ವಾಷಾಢಾ, ಉತ್ತರಾಷಾಢಾ,ಶ್ರಾವಣ, ಘನಿಷ್ಠಾ, ಶತತಾರಕಾ, ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ, ರೇವತೀ, ಅಭಿಜಿತ.


ದಶಾವತಾರ (10)
ಮತ್ಸ್ಯ, ಕೂರ್ಮ, ವರಾಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ, ಕಲ್ಕಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

    ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…

  • ಸುದ್ದಿ, ಸ್ಪೂರ್ತಿ

    15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತು ಬರಡು ಭೂಮಿಯಲ್ಲಿ ಬಂಗಾರದಂತಹ ಬೆಳೆ ತೆಗೆದ ರೈತ, ಈ ಸುದ್ದಿ ನೋಡಿ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್‍ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್‍ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್‍ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಯನ್ನು ನೆನೆಯುತ್ತಾ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…