ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ. ಆ ಕಾರಣಕ್ಕಾಗಿ ಅತೀವ ಕುತೂಹಲಕ್ಕೆ ಕಾರಣವಾಗಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವ 14.11 ಕೋಟಿ ರೂ. ಹಾಗೂ ಮಿರುಗುವ ಟ್ರೋಫಿಗಿಂತ ಮುಖ್ಯವಾಗಿ ‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಟೂರ್ನಿಯ 5 ಪಂದ್ಯಗಳಿಗೆ ಆತಿಥ್ಯ ವಹಿಸಿಕೊಂಡಿರುವ ‘ದಿ ಓವಲ್’ ಮೈದಾನದಲ್ಲಿ ಭಾರತಕ್ಕೆ ಟೂರ್ನಿಯ 3ನೇ ಪಂದ್ಯವಾಗಿದೆ. ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತ್ತು.
ಇನ್ನೊಂದೆಡೆ ಪಾಕಿಸ್ತಾನ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಐಸಿಸಿ ಟೂರ್ನಿಗಳಲ್ಲಿ ಅಭೂತಪೂರ್ವ ಸ್ಥಿರ ನಿರ್ವಹಣೆ ತೋರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧವೂ ಇಂಥದ್ದೊಂದು ದಾಖಲೆ ಕಾಯ್ದುಕೊಂಡಿದೆ. ಅಲ್ಲದೆ, ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 124 ರನ್ಗಳಿಂದ ಬಗ್ಗುಬಡಿದ ಆತ್ಮವಿಶ್ವಾಸ ಕೊಹ್ಲಿ ಟೀಮ್ಲ್ಲಿದೆ. ಆ ಬಳಿಕ ಪಾಕಿಸ್ತಾನ ತಂಡ ಅದ್ಭುತ ನಿರ್ವಹಣೆ ತೋರಿದ್ದರೂ, ಫೈನಲ್ನಲ್ಲಿ ನಮ್ಮ ತಂಡ ಭಿನ್ನ ನಿರ್ವಹಣೆ ತೋರುವ ಅಗತ್ಯವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು 22 ಆಟಗಾರರ ನಡುವೆ ಕ್ರಿಕೆಟ್ನ ಕೇವಲ ಒಂದು ಪಂದ್ಯವಾಗಿರದೆ ಉಭಯ ದೇಶಗಳ ನಡುವಿನ ಪ್ರತಿಷ್ಠೆಯೇ ಪಣಕ್ಕಿಟ್ಟಂತೆ ಅಭಿಮಾನಿಗಳು ವರ್ತಿಸುವುದು ಪಂದ್ಯದ ಮೇಲಿನ ಕ್ರೇಜ್ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಕ್ರಿಕೆಟ್ಅನ್ನು ಮಾತ್ರವೇ ಗಮನಿಸುವುದಾದರೆ, ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಟೀಮ್ ಯಾವುದೇ ವಿಭಾಗಕ್ಕೂ ಸಮವಲ್ಲ. ಆದರೆ, ಅನ್ಪ್ರಿಡಿಕ್ಟಬಲ್ ಟೀಮ್ ಖ್ಯಾತಿಯ ಪಾಕ್ ತನ್ನ ದಿನದಂದು ಸಾಂಘಿಕ ನಿರ್ವಹಣೆ ನೀಡುತ್ತದೆ.
ಪಾಕ್ನ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ಅಜರ್ ಅಲಿ, ಫಖರ್ ಜಮಾನ್ ಹಾಗೂ ಬಾಬರ್ ಅಜಮ್ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿಗೆ ಯಾವ ಹಂತದಲ್ಲೂ ತಾಳೆಯಾಗುವುದಿಲ್ಲ. ಆದರೆ, ಮೊಹಮದ್ ಆಮಿರ್, ಹಸನ್ ಅಲಿ, ಜುನೇದ್ ಖಾನ್ ಹಾಗೂ ರುಮ್ಮಾನ್ ರಯೀಸ್ ಇರುವ ಪಾಕ್ ತಂಡದ ವೇಗದ ಬೌಲಿಂಗ್ ವಿಭಾಗ ನಿಜಕ್ಕೂ ಬಲಿಷ್ಠ. ವಿಶ್ವ ನಂ.1 ದಕ್ಷಿಣ ಆಫ್ರಿಕಾ ಎದುರು ಇದೇ ಶಕ್ತಿ ಪಾಕ್ಗೆ ಜಯ ತಂದಿತ್ತು. ಈಗ ಇವರ ಮೇಲೆ ನಂಬಿಕೆ ಇರಿಸಿಯೇ ಪಾಕಿಸ್ತಾನ ಗೆಲುವಿನ ನಿರೀಕ್ಷೆ ಇಟ್ಟಿದೆ.
ಇನ್ನು ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಮೂವರೊಂದಿಗೆ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯರ ನೈಜ ಆಟ ಇನ್ನೂ ಸಾಬೀತಾಗಿಲ್ಲ. ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳೇ ಮಿಂಚಿರುವ ಕಾರಣ ಮಧ್ಯಮ ಕ್ರಮಾಂಕದ ಶಕ್ತಿ ತೋರ್ಪಡಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ, ಅಪರೂಪದ ವೈಫಲ್ಯ ಅಗ್ರ ಕ್ರಮಾಂಕದಿಂದ ದಾಖಲಾದಲ್ಲಿ, ಮಧ್ಯಮ ಕ್ರಮಾಂಕ ಮಿಂಚುವ ವಿಶ್ವಾಸವನ್ನು ನಾಯಕ ಕೊಹ್ಲಿ ವ್ಯಕ್ತಪಡಿಸಿದ್ದಾರೆ.
ಭಾರತ ನಂ. 1
ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದರೆ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನಕ್ಕೇರಲಿದೆ. ಸೆಮೀಸ್ ಗೆಲುವಿನ ಬಳಿಕ 2ನೇ ಸ್ಥಾನಕ್ಕೇರಿರುವ ಭಾರತ ತಂಡ (118), ಫೈನಲ್ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಕುಸಿಯಲಿದೆ. ಆದರೆ ಕೊಹ್ಲಿ ಪಡೆ ಗೆದ್ದರೆ ಅಂಕ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ (119) ಜತೆ ಸಮಬಲ ಸಾಧಿಸಲಿದೆಯಲ್ಲದೆ, ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಲಿದೆ. ಭಾರತ ಈಗಾಗಲೆ ಟೆಸ್ಟ್ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್ನಲ್ಲಿ 4ನೇ ಸ್ಥಾನದಲ್ಲಿದೆ. ಸದ್ಯ 7ನೇ ಸ್ಥಾನದಲ್ಲಿರುವ ಪಾಕ್ ಗೆದ್ದರೆ 6ನೇ ಸ್ಥಾನಕ್ಕೇರಲಿದ್ದು, ಸೋತರೆ 8ನೇ ಸ್ಥಾನಕ್ಕೆ ಕುಸಿಯಲಿದೆ.
ಭಾರತ ಗೆದ್ದರೆ….
ಪಾಕಿಸ್ತಾನ ಗೆದ್ದರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…
ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…