ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ. ಆ ಕಾರಣಕ್ಕಾಗಿ ಅತೀವ ಕುತೂಹಲಕ್ಕೆ ಕಾರಣವಾಗಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವ 14.11 ಕೋಟಿ ರೂ. ಹಾಗೂ ಮಿರುಗುವ ಟ್ರೋಫಿಗಿಂತ ಮುಖ್ಯವಾಗಿ ‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಟೂರ್ನಿಯ 5 ಪಂದ್ಯಗಳಿಗೆ ಆತಿಥ್ಯ ವಹಿಸಿಕೊಂಡಿರುವ ‘ದಿ ಓವಲ್’ ಮೈದಾನದಲ್ಲಿ ಭಾರತಕ್ಕೆ ಟೂರ್ನಿಯ 3ನೇ ಪಂದ್ಯವಾಗಿದೆ. ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತ್ತು.
ಇನ್ನೊಂದೆಡೆ ಪಾಕಿಸ್ತಾನ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಐಸಿಸಿ ಟೂರ್ನಿಗಳಲ್ಲಿ ಅಭೂತಪೂರ್ವ ಸ್ಥಿರ ನಿರ್ವಹಣೆ ತೋರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧವೂ ಇಂಥದ್ದೊಂದು ದಾಖಲೆ ಕಾಯ್ದುಕೊಂಡಿದೆ. ಅಲ್ಲದೆ, ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 124 ರನ್ಗಳಿಂದ ಬಗ್ಗುಬಡಿದ ಆತ್ಮವಿಶ್ವಾಸ ಕೊಹ್ಲಿ ಟೀಮ್ಲ್ಲಿದೆ. ಆ ಬಳಿಕ ಪಾಕಿಸ್ತಾನ ತಂಡ ಅದ್ಭುತ ನಿರ್ವಹಣೆ ತೋರಿದ್ದರೂ, ಫೈನಲ್ನಲ್ಲಿ ನಮ್ಮ ತಂಡ ಭಿನ್ನ ನಿರ್ವಹಣೆ ತೋರುವ ಅಗತ್ಯವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು 22 ಆಟಗಾರರ ನಡುವೆ ಕ್ರಿಕೆಟ್ನ ಕೇವಲ ಒಂದು ಪಂದ್ಯವಾಗಿರದೆ ಉಭಯ ದೇಶಗಳ ನಡುವಿನ ಪ್ರತಿಷ್ಠೆಯೇ ಪಣಕ್ಕಿಟ್ಟಂತೆ ಅಭಿಮಾನಿಗಳು ವರ್ತಿಸುವುದು ಪಂದ್ಯದ ಮೇಲಿನ ಕ್ರೇಜ್ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಕ್ರಿಕೆಟ್ಅನ್ನು ಮಾತ್ರವೇ ಗಮನಿಸುವುದಾದರೆ, ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಟೀಮ್ ಯಾವುದೇ ವಿಭಾಗಕ್ಕೂ ಸಮವಲ್ಲ. ಆದರೆ, ಅನ್ಪ್ರಿಡಿಕ್ಟಬಲ್ ಟೀಮ್ ಖ್ಯಾತಿಯ ಪಾಕ್ ತನ್ನ ದಿನದಂದು ಸಾಂಘಿಕ ನಿರ್ವಹಣೆ ನೀಡುತ್ತದೆ.
ಪಾಕ್ನ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ಅಜರ್ ಅಲಿ, ಫಖರ್ ಜಮಾನ್ ಹಾಗೂ ಬಾಬರ್ ಅಜಮ್ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿಗೆ ಯಾವ ಹಂತದಲ್ಲೂ ತಾಳೆಯಾಗುವುದಿಲ್ಲ. ಆದರೆ, ಮೊಹಮದ್ ಆಮಿರ್, ಹಸನ್ ಅಲಿ, ಜುನೇದ್ ಖಾನ್ ಹಾಗೂ ರುಮ್ಮಾನ್ ರಯೀಸ್ ಇರುವ ಪಾಕ್ ತಂಡದ ವೇಗದ ಬೌಲಿಂಗ್ ವಿಭಾಗ ನಿಜಕ್ಕೂ ಬಲಿಷ್ಠ. ವಿಶ್ವ ನಂ.1 ದಕ್ಷಿಣ ಆಫ್ರಿಕಾ ಎದುರು ಇದೇ ಶಕ್ತಿ ಪಾಕ್ಗೆ ಜಯ ತಂದಿತ್ತು. ಈಗ ಇವರ ಮೇಲೆ ನಂಬಿಕೆ ಇರಿಸಿಯೇ ಪಾಕಿಸ್ತಾನ ಗೆಲುವಿನ ನಿರೀಕ್ಷೆ ಇಟ್ಟಿದೆ.
ಇನ್ನು ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಮೂವರೊಂದಿಗೆ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯರ ನೈಜ ಆಟ ಇನ್ನೂ ಸಾಬೀತಾಗಿಲ್ಲ. ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳೇ ಮಿಂಚಿರುವ ಕಾರಣ ಮಧ್ಯಮ ಕ್ರಮಾಂಕದ ಶಕ್ತಿ ತೋರ್ಪಡಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ, ಅಪರೂಪದ ವೈಫಲ್ಯ ಅಗ್ರ ಕ್ರಮಾಂಕದಿಂದ ದಾಖಲಾದಲ್ಲಿ, ಮಧ್ಯಮ ಕ್ರಮಾಂಕ ಮಿಂಚುವ ವಿಶ್ವಾಸವನ್ನು ನಾಯಕ ಕೊಹ್ಲಿ ವ್ಯಕ್ತಪಡಿಸಿದ್ದಾರೆ.
ಭಾರತ ನಂ. 1
ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದರೆ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನಕ್ಕೇರಲಿದೆ. ಸೆಮೀಸ್ ಗೆಲುವಿನ ಬಳಿಕ 2ನೇ ಸ್ಥಾನಕ್ಕೇರಿರುವ ಭಾರತ ತಂಡ (118), ಫೈನಲ್ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಕುಸಿಯಲಿದೆ. ಆದರೆ ಕೊಹ್ಲಿ ಪಡೆ ಗೆದ್ದರೆ ಅಂಕ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ (119) ಜತೆ ಸಮಬಲ ಸಾಧಿಸಲಿದೆಯಲ್ಲದೆ, ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಲಿದೆ. ಭಾರತ ಈಗಾಗಲೆ ಟೆಸ್ಟ್ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್ನಲ್ಲಿ 4ನೇ ಸ್ಥಾನದಲ್ಲಿದೆ. ಸದ್ಯ 7ನೇ ಸ್ಥಾನದಲ್ಲಿರುವ ಪಾಕ್ ಗೆದ್ದರೆ 6ನೇ ಸ್ಥಾನಕ್ಕೇರಲಿದ್ದು, ಸೋತರೆ 8ನೇ ಸ್ಥಾನಕ್ಕೆ ಕುಸಿಯಲಿದೆ.
ಭಾರತ ಗೆದ್ದರೆ….
ಪಾಕಿಸ್ತಾನ ಗೆದ್ದರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…