ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ. ಆ ಕಾರಣಕ್ಕಾಗಿ ಅತೀವ ಕುತೂಹಲಕ್ಕೆ ಕಾರಣವಾಗಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವ 14.11 ಕೋಟಿ ರೂ. ಹಾಗೂ ಮಿರುಗುವ ಟ್ರೋಫಿಗಿಂತ ಮುಖ್ಯವಾಗಿ ‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಟೂರ್ನಿಯ 5 ಪಂದ್ಯಗಳಿಗೆ ಆತಿಥ್ಯ ವಹಿಸಿಕೊಂಡಿರುವ ‘ದಿ ಓವಲ್’ ಮೈದಾನದಲ್ಲಿ ಭಾರತಕ್ಕೆ ಟೂರ್ನಿಯ 3ನೇ ಪಂದ್ಯವಾಗಿದೆ. ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತ್ತು.
ಇನ್ನೊಂದೆಡೆ ಪಾಕಿಸ್ತಾನ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಐಸಿಸಿ ಟೂರ್ನಿಗಳಲ್ಲಿ ಅಭೂತಪೂರ್ವ ಸ್ಥಿರ ನಿರ್ವಹಣೆ ತೋರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧವೂ ಇಂಥದ್ದೊಂದು ದಾಖಲೆ ಕಾಯ್ದುಕೊಂಡಿದೆ. ಅಲ್ಲದೆ, ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 124 ರನ್ಗಳಿಂದ ಬಗ್ಗುಬಡಿದ ಆತ್ಮವಿಶ್ವಾಸ ಕೊಹ್ಲಿ ಟೀಮ್ಲ್ಲಿದೆ. ಆ ಬಳಿಕ ಪಾಕಿಸ್ತಾನ ತಂಡ ಅದ್ಭುತ ನಿರ್ವಹಣೆ ತೋರಿದ್ದರೂ, ಫೈನಲ್ನಲ್ಲಿ ನಮ್ಮ ತಂಡ ಭಿನ್ನ ನಿರ್ವಹಣೆ ತೋರುವ ಅಗತ್ಯವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು 22 ಆಟಗಾರರ ನಡುವೆ ಕ್ರಿಕೆಟ್ನ ಕೇವಲ ಒಂದು ಪಂದ್ಯವಾಗಿರದೆ ಉಭಯ ದೇಶಗಳ ನಡುವಿನ ಪ್ರತಿಷ್ಠೆಯೇ ಪಣಕ್ಕಿಟ್ಟಂತೆ ಅಭಿಮಾನಿಗಳು ವರ್ತಿಸುವುದು ಪಂದ್ಯದ ಮೇಲಿನ ಕ್ರೇಜ್ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಕ್ರಿಕೆಟ್ಅನ್ನು ಮಾತ್ರವೇ ಗಮನಿಸುವುದಾದರೆ, ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಟೀಮ್ ಯಾವುದೇ ವಿಭಾಗಕ್ಕೂ ಸಮವಲ್ಲ. ಆದರೆ, ಅನ್ಪ್ರಿಡಿಕ್ಟಬಲ್ ಟೀಮ್ ಖ್ಯಾತಿಯ ಪಾಕ್ ತನ್ನ ದಿನದಂದು ಸಾಂಘಿಕ ನಿರ್ವಹಣೆ ನೀಡುತ್ತದೆ.
ಪಾಕ್ನ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ಅಜರ್ ಅಲಿ, ಫಖರ್ ಜಮಾನ್ ಹಾಗೂ ಬಾಬರ್ ಅಜಮ್ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿಗೆ ಯಾವ ಹಂತದಲ್ಲೂ ತಾಳೆಯಾಗುವುದಿಲ್ಲ. ಆದರೆ, ಮೊಹಮದ್ ಆಮಿರ್, ಹಸನ್ ಅಲಿ, ಜುನೇದ್ ಖಾನ್ ಹಾಗೂ ರುಮ್ಮಾನ್ ರಯೀಸ್ ಇರುವ ಪಾಕ್ ತಂಡದ ವೇಗದ ಬೌಲಿಂಗ್ ವಿಭಾಗ ನಿಜಕ್ಕೂ ಬಲಿಷ್ಠ. ವಿಶ್ವ ನಂ.1 ದಕ್ಷಿಣ ಆಫ್ರಿಕಾ ಎದುರು ಇದೇ ಶಕ್ತಿ ಪಾಕ್ಗೆ ಜಯ ತಂದಿತ್ತು. ಈಗ ಇವರ ಮೇಲೆ ನಂಬಿಕೆ ಇರಿಸಿಯೇ ಪಾಕಿಸ್ತಾನ ಗೆಲುವಿನ ನಿರೀಕ್ಷೆ ಇಟ್ಟಿದೆ.
ಇನ್ನು ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಮೂವರೊಂದಿಗೆ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯರ ನೈಜ ಆಟ ಇನ್ನೂ ಸಾಬೀತಾಗಿಲ್ಲ. ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳೇ ಮಿಂಚಿರುವ ಕಾರಣ ಮಧ್ಯಮ ಕ್ರಮಾಂಕದ ಶಕ್ತಿ ತೋರ್ಪಡಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ, ಅಪರೂಪದ ವೈಫಲ್ಯ ಅಗ್ರ ಕ್ರಮಾಂಕದಿಂದ ದಾಖಲಾದಲ್ಲಿ, ಮಧ್ಯಮ ಕ್ರಮಾಂಕ ಮಿಂಚುವ ವಿಶ್ವಾಸವನ್ನು ನಾಯಕ ಕೊಹ್ಲಿ ವ್ಯಕ್ತಪಡಿಸಿದ್ದಾರೆ.
ಭಾರತ ನಂ. 1
ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದರೆ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನಕ್ಕೇರಲಿದೆ. ಸೆಮೀಸ್ ಗೆಲುವಿನ ಬಳಿಕ 2ನೇ ಸ್ಥಾನಕ್ಕೇರಿರುವ ಭಾರತ ತಂಡ (118), ಫೈನಲ್ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಕುಸಿಯಲಿದೆ. ಆದರೆ ಕೊಹ್ಲಿ ಪಡೆ ಗೆದ್ದರೆ ಅಂಕ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ (119) ಜತೆ ಸಮಬಲ ಸಾಧಿಸಲಿದೆಯಲ್ಲದೆ, ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಲಿದೆ. ಭಾರತ ಈಗಾಗಲೆ ಟೆಸ್ಟ್ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್ನಲ್ಲಿ 4ನೇ ಸ್ಥಾನದಲ್ಲಿದೆ. ಸದ್ಯ 7ನೇ ಸ್ಥಾನದಲ್ಲಿರುವ ಪಾಕ್ ಗೆದ್ದರೆ 6ನೇ ಸ್ಥಾನಕ್ಕೇರಲಿದ್ದು, ಸೋತರೆ 8ನೇ ಸ್ಥಾನಕ್ಕೆ ಕುಸಿಯಲಿದೆ.
ಭಾರತ ಗೆದ್ದರೆ….
ಪಾಕಿಸ್ತಾನ ಗೆದ್ದರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.