ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ. ಆ ಕಾರಣಕ್ಕಾಗಿ ಅತೀವ ಕುತೂಹಲಕ್ಕೆ ಕಾರಣವಾಗಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವ 14.11 ಕೋಟಿ ರೂ. ಹಾಗೂ ಮಿರುಗುವ ಟ್ರೋಫಿಗಿಂತ ಮುಖ್ಯವಾಗಿ ‘ಕಡುವೈರಿಗಳ ವಿರುದ್ಧ ಫೈನಲ್ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.
ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಟೂರ್ನಿಯ 5 ಪಂದ್ಯಗಳಿಗೆ ಆತಿಥ್ಯ ವಹಿಸಿಕೊಂಡಿರುವ ‘ದಿ ಓವಲ್’ ಮೈದಾನದಲ್ಲಿ ಭಾರತಕ್ಕೆ ಟೂರ್ನಿಯ 3ನೇ ಪಂದ್ಯವಾಗಿದೆ. ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತ್ತು.
ಇನ್ನೊಂದೆಡೆ ಪಾಕಿಸ್ತಾನ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಐಸಿಸಿ ಟೂರ್ನಿಗಳಲ್ಲಿ ಅಭೂತಪೂರ್ವ ಸ್ಥಿರ ನಿರ್ವಹಣೆ ತೋರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧವೂ ಇಂಥದ್ದೊಂದು ದಾಖಲೆ ಕಾಯ್ದುಕೊಂಡಿದೆ. ಅಲ್ಲದೆ, ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 124 ರನ್ಗಳಿಂದ ಬಗ್ಗುಬಡಿದ ಆತ್ಮವಿಶ್ವಾಸ ಕೊಹ್ಲಿ ಟೀಮ್ಲ್ಲಿದೆ. ಆ ಬಳಿಕ ಪಾಕಿಸ್ತಾನ ತಂಡ ಅದ್ಭುತ ನಿರ್ವಹಣೆ ತೋರಿದ್ದರೂ, ಫೈನಲ್ನಲ್ಲಿ ನಮ್ಮ ತಂಡ ಭಿನ್ನ ನಿರ್ವಹಣೆ ತೋರುವ ಅಗತ್ಯವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು 22 ಆಟಗಾರರ ನಡುವೆ ಕ್ರಿಕೆಟ್ನ ಕೇವಲ ಒಂದು ಪಂದ್ಯವಾಗಿರದೆ ಉಭಯ ದೇಶಗಳ ನಡುವಿನ ಪ್ರತಿಷ್ಠೆಯೇ ಪಣಕ್ಕಿಟ್ಟಂತೆ ಅಭಿಮಾನಿಗಳು ವರ್ತಿಸುವುದು ಪಂದ್ಯದ ಮೇಲಿನ ಕ್ರೇಜ್ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಕ್ರಿಕೆಟ್ಅನ್ನು ಮಾತ್ರವೇ ಗಮನಿಸುವುದಾದರೆ, ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಟೀಮ್ ಯಾವುದೇ ವಿಭಾಗಕ್ಕೂ ಸಮವಲ್ಲ. ಆದರೆ, ಅನ್ಪ್ರಿಡಿಕ್ಟಬಲ್ ಟೀಮ್ ಖ್ಯಾತಿಯ ಪಾಕ್ ತನ್ನ ದಿನದಂದು ಸಾಂಘಿಕ ನಿರ್ವಹಣೆ ನೀಡುತ್ತದೆ.
ಪಾಕ್ನ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ಅಜರ್ ಅಲಿ, ಫಖರ್ ಜಮಾನ್ ಹಾಗೂ ಬಾಬರ್ ಅಜಮ್ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿಗೆ ಯಾವ ಹಂತದಲ್ಲೂ ತಾಳೆಯಾಗುವುದಿಲ್ಲ. ಆದರೆ, ಮೊಹಮದ್ ಆಮಿರ್, ಹಸನ್ ಅಲಿ, ಜುನೇದ್ ಖಾನ್ ಹಾಗೂ ರುಮ್ಮಾನ್ ರಯೀಸ್ ಇರುವ ಪಾಕ್ ತಂಡದ ವೇಗದ ಬೌಲಿಂಗ್ ವಿಭಾಗ ನಿಜಕ್ಕೂ ಬಲಿಷ್ಠ. ವಿಶ್ವ ನಂ.1 ದಕ್ಷಿಣ ಆಫ್ರಿಕಾ ಎದುರು ಇದೇ ಶಕ್ತಿ ಪಾಕ್ಗೆ ಜಯ ತಂದಿತ್ತು. ಈಗ ಇವರ ಮೇಲೆ ನಂಬಿಕೆ ಇರಿಸಿಯೇ ಪಾಕಿಸ್ತಾನ ಗೆಲುವಿನ ನಿರೀಕ್ಷೆ ಇಟ್ಟಿದೆ.
ಇನ್ನು ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಮೂವರೊಂದಿಗೆ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯರ ನೈಜ ಆಟ ಇನ್ನೂ ಸಾಬೀತಾಗಿಲ್ಲ. ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳೇ ಮಿಂಚಿರುವ ಕಾರಣ ಮಧ್ಯಮ ಕ್ರಮಾಂಕದ ಶಕ್ತಿ ತೋರ್ಪಡಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ, ಅಪರೂಪದ ವೈಫಲ್ಯ ಅಗ್ರ ಕ್ರಮಾಂಕದಿಂದ ದಾಖಲಾದಲ್ಲಿ, ಮಧ್ಯಮ ಕ್ರಮಾಂಕ ಮಿಂಚುವ ವಿಶ್ವಾಸವನ್ನು ನಾಯಕ ಕೊಹ್ಲಿ ವ್ಯಕ್ತಪಡಿಸಿದ್ದಾರೆ.
ಭಾರತ ನಂ. 1
ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದರೆ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನಕ್ಕೇರಲಿದೆ. ಸೆಮೀಸ್ ಗೆಲುವಿನ ಬಳಿಕ 2ನೇ ಸ್ಥಾನಕ್ಕೇರಿರುವ ಭಾರತ ತಂಡ (118), ಫೈನಲ್ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಕುಸಿಯಲಿದೆ. ಆದರೆ ಕೊಹ್ಲಿ ಪಡೆ ಗೆದ್ದರೆ ಅಂಕ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ (119) ಜತೆ ಸಮಬಲ ಸಾಧಿಸಲಿದೆಯಲ್ಲದೆ, ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಲಿದೆ. ಭಾರತ ಈಗಾಗಲೆ ಟೆಸ್ಟ್ ರ್ಯಾಂಕಿಂಗ್ನಲ್ಲಿ ನಂ. 1 ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್ನಲ್ಲಿ 4ನೇ ಸ್ಥಾನದಲ್ಲಿದೆ. ಸದ್ಯ 7ನೇ ಸ್ಥಾನದಲ್ಲಿರುವ ಪಾಕ್ ಗೆದ್ದರೆ 6ನೇ ಸ್ಥಾನಕ್ಕೇರಲಿದ್ದು, ಸೋತರೆ 8ನೇ ಸ್ಥಾನಕ್ಕೆ ಕುಸಿಯಲಿದೆ.
ಭಾರತ ಗೆದ್ದರೆ….
ಪಾಕಿಸ್ತಾನ ಗೆದ್ದರೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….