News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Sports, ಕ್ರೀಡೆ

ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

872

‘ಕಡುವೈರಿಗಳ ವಿರುದ್ಧ ಫೈನಲ್​ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.

ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ.  ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ. ಆ ಕಾರಣಕ್ಕಾಗಿ ಅತೀವ ಕುತೂಹಲಕ್ಕೆ ಕಾರಣವಾಗಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್​ನಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವ 14.11 ಕೋಟಿ ರೂ. ಹಾಗೂ ಮಿರುಗುವ ಟ್ರೋಫಿಗಿಂತ ಮುಖ್ಯವಾಗಿ ‘ಕಡುವೈರಿಗಳ ವಿರುದ್ಧ ಫೈನಲ್​ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಟೂರ್ನಿಯ 5 ಪಂದ್ಯಗಳಿಗೆ ಆತಿಥ್ಯ ವಹಿಸಿಕೊಂಡಿರುವ ‘ದಿ ಓವಲ್’ ಮೈದಾನದಲ್ಲಿ ಭಾರತಕ್ಕೆ ಟೂರ್ನಿಯ 3ನೇ ಪಂದ್ಯವಾಗಿದೆ. ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತ್ತು.

ಇನ್ನೊಂದೆಡೆ ಪಾಕಿಸ್ತಾನ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಐಸಿಸಿ ಟೂರ್ನಿಗಳಲ್ಲಿ ಅಭೂತಪೂರ್ವ ಸ್ಥಿರ ನಿರ್ವಹಣೆ ತೋರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧವೂ ಇಂಥದ್ದೊಂದು ದಾಖಲೆ ಕಾಯ್ದುಕೊಂಡಿದೆ. ಅಲ್ಲದೆ, ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 124 ರನ್​ಗಳಿಂದ ಬಗ್ಗುಬಡಿದ ಆತ್ಮವಿಶ್ವಾಸ ಕೊಹ್ಲಿ ಟೀಮ್ಲ್ಲಿದೆ. ಆ ಬಳಿಕ ಪಾಕಿಸ್ತಾನ ತಂಡ ಅದ್ಭುತ ನಿರ್ವಹಣೆ ತೋರಿದ್ದರೂ, ಫೈನಲ್​ನಲ್ಲಿ ನಮ್ಮ ತಂಡ ಭಿನ್ನ ನಿರ್ವಹಣೆ ತೋರುವ ಅಗತ್ಯವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು 22 ಆಟಗಾರರ ನಡುವೆ ಕ್ರಿಕೆಟ್​ನ ಕೇವಲ ಒಂದು ಪಂದ್ಯವಾಗಿರದೆ ಉಭಯ ದೇಶಗಳ ನಡುವಿನ ಪ್ರತಿಷ್ಠೆಯೇ ಪಣಕ್ಕಿಟ್ಟಂತೆ ಅಭಿಮಾನಿಗಳು ವರ್ತಿಸುವುದು ಪಂದ್ಯದ ಮೇಲಿನ ಕ್ರೇಜ್ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಕ್ರಿಕೆಟ್​ಅನ್ನು ಮಾತ್ರವೇ ಗಮನಿಸುವುದಾದರೆ, ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಟೀಮ್ ಯಾವುದೇ ವಿಭಾಗಕ್ಕೂ ಸಮವಲ್ಲ. ಆದರೆ, ಅನ್​ಪ್ರಿಡಿಕ್ಟಬಲ್ ಟೀಮ್ ಖ್ಯಾತಿಯ ಪಾಕ್ ತನ್ನ ದಿನದಂದು ಸಾಂಘಿಕ ನಿರ್ವಹಣೆ ನೀಡುತ್ತದೆ.

ಪಾಕ್​ನ ಅಗ್ರ ಮೂವರು ಬ್ಯಾಟ್ಸ್​ಮನ್​ಗಳಾದ ಅಜರ್ ಅಲಿ, ಫಖರ್ ಜಮಾನ್ ಹಾಗೂ ಬಾಬರ್ ಅಜಮ್ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್​ಮನ್​ಗಳಾದ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿಗೆ ಯಾವ ಹಂತದಲ್ಲೂ ತಾಳೆಯಾಗುವುದಿಲ್ಲ. ಆದರೆ, ಮೊಹಮದ್ ಆಮಿರ್, ಹಸನ್ ಅಲಿ, ಜುನೇದ್ ಖಾನ್ ಹಾಗೂ ರುಮ್ಮಾನ್ ರಯೀಸ್ ಇರುವ ಪಾಕ್ ತಂಡದ ವೇಗದ ಬೌಲಿಂಗ್ ವಿಭಾಗ ನಿಜಕ್ಕೂ ಬಲಿಷ್ಠ. ವಿಶ್ವ ನಂ.1 ದಕ್ಷಿಣ ಆಫ್ರಿಕಾ ಎದುರು ಇದೇ ಶಕ್ತಿ ಪಾಕ್​ಗೆ ಜಯ ತಂದಿತ್ತು. ಈಗ ಇವರ ಮೇಲೆ ನಂಬಿಕೆ ಇರಿಸಿಯೇ ಪಾಕಿಸ್ತಾನ ಗೆಲುವಿನ ನಿರೀಕ್ಷೆ ಇಟ್ಟಿದೆ.

ಇನ್ನು ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಮೂವರೊಂದಿಗೆ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯರ ನೈಜ ಆಟ ಇನ್ನೂ ಸಾಬೀತಾಗಿಲ್ಲ. ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್​ಗಳೇ ಮಿಂಚಿರುವ ಕಾರಣ ಮಧ್ಯಮ ಕ್ರಮಾಂಕದ ಶಕ್ತಿ ತೋರ್ಪಡಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ, ಅಪರೂಪದ ವೈಫಲ್ಯ ಅಗ್ರ ಕ್ರಮಾಂಕದಿಂದ ದಾಖಲಾದಲ್ಲಿ, ಮಧ್ಯಮ ಕ್ರಮಾಂಕ ಮಿಂಚುವ ವಿಶ್ವಾಸವನ್ನು ನಾಯಕ ಕೊಹ್ಲಿ ವ್ಯಕ್ತಪಡಿಸಿದ್ದಾರೆ.

ಭಾರತ ನಂ. 1 

ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದರೆ ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ನಂ. 1 ಸ್ಥಾನಕ್ಕೇರಲಿದೆ. ಸೆಮೀಸ್ ಗೆಲುವಿನ ಬಳಿಕ 2ನೇ ಸ್ಥಾನಕ್ಕೇರಿರುವ ಭಾರತ ತಂಡ (118), ಫೈನಲ್ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಕುಸಿಯಲಿದೆ. ಆದರೆ ಕೊಹ್ಲಿ ಪಡೆ ಗೆದ್ದರೆ ಅಂಕ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ (119) ಜತೆ ಸಮಬಲ ಸಾಧಿಸಲಿದೆಯಲ್ಲದೆ, ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಲಿದೆ. ಭಾರತ ಈಗಾಗಲೆ ಟೆಸ್ಟ್ ರ್ಯಾಂಕಿಂಗ್​ನಲ್ಲಿ ನಂ. 1 ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್​ನಲ್ಲಿ 4ನೇ ಸ್ಥಾನದಲ್ಲಿದೆ. ಸದ್ಯ 7ನೇ ಸ್ಥಾನದಲ್ಲಿರುವ ಪಾಕ್ ಗೆದ್ದರೆ 6ನೇ ಸ್ಥಾನಕ್ಕೇರಲಿದ್ದು, ಸೋತರೆ 8ನೇ ಸ್ಥಾನಕ್ಕೆ ಕುಸಿಯಲಿದೆ.

ಭಾರತ ಗೆದ್ದರೆ….

  • ಸತತ 2 ಬಾರಿ ಟ್ರೋಫಿ ಗೆದ್ದ ಆಸೀಸ್ ದಾಖಲೆ ಸಮ
  • ಒಟ್ಟಾರೆ 3 ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ದಾಖಲೆ
  • ಭಾರತಕ್ಕೆ 6ನೇ, ನಾಯಕ ಕೊಹ್ಲಿಗೆ ಚೊಚ್ಚಲ ಐಸಿಸಿ ಪ್ರಶಸ್ತಿ
  • ಕೋಚ್ ಅನಿಲ್ ಕುಂಬ್ಳೆಗೆ ಚೊಚ್ಚಲ ಐಸಿಸಿ ಟ್ರೋಫಿ
  • ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ನಂ. 1 ಸ್ಥಾನಕ್ಕೆ ಬಡ್ತಿ

ಪಾಕಿಸ್ತಾನ ಗೆದ್ದರೆ…

  • ಚೊಚ್ಚಲ ಚಾಂಪಿಯನ್ಸ್ ಟ್ರೋಫಿ ಗೆಲುವಿನ ಸಾಧನೆ
  • ಐಸಿಸಿಯ ಎಲ್ಲ ಪ್ರಶಸ್ತಿ ಗೆದ್ದ ನಾಲ್ಕನೇ ತಂಡ ಎನ್ನುವ ಸಾಧನೆ
  • 1992ರ ಬಳಿಕ ಮೊದಲ ಐಸಿಸಿ ಏಕದಿನ ಪ್ರಶಸ್ತಿ ಗೆಲುವು
  • 2009ರ ಬಳಿಕ ಮೊದಲ ಬಾರಿ ಐಸಿಸಿ ಟೂರ್ನಿ ಚಾಂಪಿಯನ್
  • ಭಾರತ ವಿರುದ್ಧ ಲೀಗ್ ಸೋಲಿಗೆ ಸೇಡು ತೀರಿಸಿದ ಸಮಾಧಾನ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಆರೋಗ್ಯ, ಉಪಯುಕ್ತ ಮಾಹಿತಿ

    ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..‌ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…

  • ಸುದ್ದಿ

    ಪೊಲೀಸ್ ಠಾಣೆಯಲ್ಲಿ ಆರೋಪಿಯ ಬರ್ತ್‌ಡೇ ಸೆಲೆಬ್ರೇಷನ್….!

    ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್‌ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್‌ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ಆರೋಗ್ಯ

    ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

    ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…