News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Sports, ಕ್ರೀಡೆ

ಪ್ರತಿಷ್ಠೆಗಾಗಿ ಭಾರತ ಮತ್ತು ಪಾಕ್ ಕೊನೆಯ ಹೋರಾಟ ಇಲ್ಲಿ ಗೆಲುವು ಯಾರದು?

869

‘ಕಡುವೈರಿಗಳ ವಿರುದ್ಧ ಫೈನಲ್​ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.

ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ.  ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್​ನಲ್ಲಿ ಭಾನುವಾರ ಎದುರಾಗುತ್ತಿವೆ. ಆ ಕಾರಣಕ್ಕಾಗಿ ಅತೀವ ಕುತೂಹಲಕ್ಕೆ ಕಾರಣವಾಗಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್​ನಲ್ಲಿ ಚಾಂಪಿಯನ್ ತಂಡಕ್ಕೆ ಸಿಗುವ 14.11 ಕೋಟಿ ರೂ. ಹಾಗೂ ಮಿರುಗುವ ಟ್ರೋಫಿಗಿಂತ ಮುಖ್ಯವಾಗಿ ‘ಕಡುವೈರಿಗಳ ವಿರುದ್ಧ ಫೈನಲ್​ನಲ್ಲಿ ಗೆದ್ದೆ’ ಎನ್ನುವ ಪ್ರತಿಷ್ಠೆಯೇ ಎರಡೂ ತಂಡಕ್ಕೆ ಮುಖ್ಯವಾಗಿದೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಈಗಾಗಲೇ ಟೂರ್ನಿಯ 5 ಪಂದ್ಯಗಳಿಗೆ ಆತಿಥ್ಯ ವಹಿಸಿಕೊಂಡಿರುವ ‘ದಿ ಓವಲ್’ ಮೈದಾನದಲ್ಲಿ ಭಾರತಕ್ಕೆ ಟೂರ್ನಿಯ 3ನೇ ಪಂದ್ಯವಾಗಿದೆ. ಶ್ರೀಲಂಕಾ ವಿರುದ್ಧ ಸೋಲು ಕಂಡಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತ್ತು.

ಇನ್ನೊಂದೆಡೆ ಪಾಕಿಸ್ತಾನ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಪಂದ್ಯ ಆಡಲಿದೆ. ಐಸಿಸಿ ಟೂರ್ನಿಗಳಲ್ಲಿ ಅಭೂತಪೂರ್ವ ಸ್ಥಿರ ನಿರ್ವಹಣೆ ತೋರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧವೂ ಇಂಥದ್ದೊಂದು ದಾಖಲೆ ಕಾಯ್ದುಕೊಂಡಿದೆ. ಅಲ್ಲದೆ, ಹಾಲಿ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನವನ್ನು 124 ರನ್​ಗಳಿಂದ ಬಗ್ಗುಬಡಿದ ಆತ್ಮವಿಶ್ವಾಸ ಕೊಹ್ಲಿ ಟೀಮ್ಲ್ಲಿದೆ. ಆ ಬಳಿಕ ಪಾಕಿಸ್ತಾನ ತಂಡ ಅದ್ಭುತ ನಿರ್ವಹಣೆ ತೋರಿದ್ದರೂ, ಫೈನಲ್​ನಲ್ಲಿ ನಮ್ಮ ತಂಡ ಭಿನ್ನ ನಿರ್ವಹಣೆ ತೋರುವ ಅಗತ್ಯವಿಲ್ಲ ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಇದು 22 ಆಟಗಾರರ ನಡುವೆ ಕ್ರಿಕೆಟ್​ನ ಕೇವಲ ಒಂದು ಪಂದ್ಯವಾಗಿರದೆ ಉಭಯ ದೇಶಗಳ ನಡುವಿನ ಪ್ರತಿಷ್ಠೆಯೇ ಪಣಕ್ಕಿಟ್ಟಂತೆ ಅಭಿಮಾನಿಗಳು ವರ್ತಿಸುವುದು ಪಂದ್ಯದ ಮೇಲಿನ ಕ್ರೇಜ್ ಹೆಚ್ಚಳಕ್ಕೆ ಕಾರಣವಾಗಿದೆ. ಇನ್ನು ಕ್ರಿಕೆಟ್​ಅನ್ನು ಮಾತ್ರವೇ ಗಮನಿಸುವುದಾದರೆ, ಪಾಕಿಸ್ತಾನ ತಂಡ ವಿರಾಟ್ ಕೊಹ್ಲಿ ಟೀಮ್ ಯಾವುದೇ ವಿಭಾಗಕ್ಕೂ ಸಮವಲ್ಲ. ಆದರೆ, ಅನ್​ಪ್ರಿಡಿಕ್ಟಬಲ್ ಟೀಮ್ ಖ್ಯಾತಿಯ ಪಾಕ್ ತನ್ನ ದಿನದಂದು ಸಾಂಘಿಕ ನಿರ್ವಹಣೆ ನೀಡುತ್ತದೆ.

ಪಾಕ್​ನ ಅಗ್ರ ಮೂವರು ಬ್ಯಾಟ್ಸ್​ಮನ್​ಗಳಾದ ಅಜರ್ ಅಲಿ, ಫಖರ್ ಜಮಾನ್ ಹಾಗೂ ಬಾಬರ್ ಅಜಮ್ ಟೀಮ್ ಇಂಡಿಯಾದ ಅಗ್ರ ಮೂವರು ಬ್ಯಾಟ್ಸ್​ಮನ್​ಗಳಾದ ರೋಹಿತ್ ಶರ್ಮ, ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿಗೆ ಯಾವ ಹಂತದಲ್ಲೂ ತಾಳೆಯಾಗುವುದಿಲ್ಲ. ಆದರೆ, ಮೊಹಮದ್ ಆಮಿರ್, ಹಸನ್ ಅಲಿ, ಜುನೇದ್ ಖಾನ್ ಹಾಗೂ ರುಮ್ಮಾನ್ ರಯೀಸ್ ಇರುವ ಪಾಕ್ ತಂಡದ ವೇಗದ ಬೌಲಿಂಗ್ ವಿಭಾಗ ನಿಜಕ್ಕೂ ಬಲಿಷ್ಠ. ವಿಶ್ವ ನಂ.1 ದಕ್ಷಿಣ ಆಫ್ರಿಕಾ ಎದುರು ಇದೇ ಶಕ್ತಿ ಪಾಕ್​ಗೆ ಜಯ ತಂದಿತ್ತು. ಈಗ ಇವರ ಮೇಲೆ ನಂಬಿಕೆ ಇರಿಸಿಯೇ ಪಾಕಿಸ್ತಾನ ಗೆಲುವಿನ ನಿರೀಕ್ಷೆ ಇಟ್ಟಿದೆ.

ಇನ್ನು ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಅಗ್ರ ಮೂವರೊಂದಿಗೆ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಹಾರ್ದಿಕ್ ಪಾಂಡ್ಯರ ನೈಜ ಆಟ ಇನ್ನೂ ಸಾಬೀತಾಗಿಲ್ಲ. ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್​ಗಳೇ ಮಿಂಚಿರುವ ಕಾರಣ ಮಧ್ಯಮ ಕ್ರಮಾಂಕದ ಶಕ್ತಿ ತೋರ್ಪಡಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ, ಅಪರೂಪದ ವೈಫಲ್ಯ ಅಗ್ರ ಕ್ರಮಾಂಕದಿಂದ ದಾಖಲಾದಲ್ಲಿ, ಮಧ್ಯಮ ಕ್ರಮಾಂಕ ಮಿಂಚುವ ವಿಶ್ವಾಸವನ್ನು ನಾಯಕ ಕೊಹ್ಲಿ ವ್ಯಕ್ತಪಡಿಸಿದ್ದಾರೆ.

ಭಾರತ ನಂ. 1 

ಭಾರತ ತಂಡ ಫೈನಲ್ ಪಂದ್ಯದಲ್ಲಿ ಪಾಕ್ ವಿರುದ್ಧ ಗೆದ್ದರೆ ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ನಂ. 1 ಸ್ಥಾನಕ್ಕೇರಲಿದೆ. ಸೆಮೀಸ್ ಗೆಲುವಿನ ಬಳಿಕ 2ನೇ ಸ್ಥಾನಕ್ಕೇರಿರುವ ಭಾರತ ತಂಡ (118), ಫೈನಲ್ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಕುಸಿಯಲಿದೆ. ಆದರೆ ಕೊಹ್ಲಿ ಪಡೆ ಗೆದ್ದರೆ ಅಂಕ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ (119) ಜತೆ ಸಮಬಲ ಸಾಧಿಸಲಿದೆಯಲ್ಲದೆ, ದಶಾಂಶ ಲೆಕ್ಕಾಚಾರದಲ್ಲಿ ಅಗ್ರಸ್ಥಾನಕ್ಕೇರಲಿದೆ. ಭಾರತ ಈಗಾಗಲೆ ಟೆಸ್ಟ್ ರ್ಯಾಂಕಿಂಗ್​ನಲ್ಲಿ ನಂ. 1 ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್​ನಲ್ಲಿ 4ನೇ ಸ್ಥಾನದಲ್ಲಿದೆ. ಸದ್ಯ 7ನೇ ಸ್ಥಾನದಲ್ಲಿರುವ ಪಾಕ್ ಗೆದ್ದರೆ 6ನೇ ಸ್ಥಾನಕ್ಕೇರಲಿದ್ದು, ಸೋತರೆ 8ನೇ ಸ್ಥಾನಕ್ಕೆ ಕುಸಿಯಲಿದೆ.

ಭಾರತ ಗೆದ್ದರೆ….

  • ಸತತ 2 ಬಾರಿ ಟ್ರೋಫಿ ಗೆದ್ದ ಆಸೀಸ್ ದಾಖಲೆ ಸಮ
  • ಒಟ್ಟಾರೆ 3 ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ದಾಖಲೆ
  • ಭಾರತಕ್ಕೆ 6ನೇ, ನಾಯಕ ಕೊಹ್ಲಿಗೆ ಚೊಚ್ಚಲ ಐಸಿಸಿ ಪ್ರಶಸ್ತಿ
  • ಕೋಚ್ ಅನಿಲ್ ಕುಂಬ್ಳೆಗೆ ಚೊಚ್ಚಲ ಐಸಿಸಿ ಟ್ರೋಫಿ
  • ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ನಂ. 1 ಸ್ಥಾನಕ್ಕೆ ಬಡ್ತಿ

ಪಾಕಿಸ್ತಾನ ಗೆದ್ದರೆ…

  • ಚೊಚ್ಚಲ ಚಾಂಪಿಯನ್ಸ್ ಟ್ರೋಫಿ ಗೆಲುವಿನ ಸಾಧನೆ
  • ಐಸಿಸಿಯ ಎಲ್ಲ ಪ್ರಶಸ್ತಿ ಗೆದ್ದ ನಾಲ್ಕನೇ ತಂಡ ಎನ್ನುವ ಸಾಧನೆ
  • 1992ರ ಬಳಿಕ ಮೊದಲ ಐಸಿಸಿ ಏಕದಿನ ಪ್ರಶಸ್ತಿ ಗೆಲುವು
  • 2009ರ ಬಳಿಕ ಮೊದಲ ಬಾರಿ ಐಸಿಸಿ ಟೂರ್ನಿ ಚಾಂಪಿಯನ್
  • ಭಾರತ ವಿರುದ್ಧ ಲೀಗ್ ಸೋಲಿಗೆ ಸೇಡು ತೀರಿಸಿದ ಸಮಾಧಾನ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…

  • Health, ಉಪಯುಕ್ತ ಮಾಹಿತಿ

    ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

    ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • ರೆಸಿಪಿ

    ಆಲೂಗಡ್ಡೆ ದೋಸೆ ಹೇಗೆ ತಯಾರಿಸುವುದು ಎಂದು ನಿಮಗೆ ಗೊತ್ತಾ….?ತಿಳಿಯಲು ಈ ಲೇಖನ ಓದಿ….

    ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.

  • ಉಪಯುಕ್ತ ಮಾಹಿತಿ

    ದಿನಕ್ಕೆ ಎರಡು ರೂಪಾಯಿ ಉಳಿಸಿದ್ರೆ, ಕೇವಲ ಒಂದೇ ವರ್ಷಕ್ಕೆ ಲಕ್ಷಾಧಿಪತಿಯಾಗುತ್ತೀರಾ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.