ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ.

ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರ ದೇಶಭಕ್ತಿಯನ್ನ ಯಾರಿಂದಲೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಅದೇ ರೀತಿಯಾಗಿ ಸಮಾಜಮುಖಿಯಾಗಿ, ಸಮಾಜದ ಪರವಾಗಿ ಹಾಗೂ ಸಮಾಜಕೋಸ್ಕರ ಹೋರಾಟ ಮಾಡುವ ಬಹಳಷ್ಟು ತ್ಯಾಗಮಯಿ ರಾಜಕಾರಣಿಗಳಿದ್ದಾರೆ. ಅವರಿಂದಲೇ ಅಲ್ಪ ಸ್ವಲ್ಪ ನ್ಯಾಯ ನಮ್ಮ ಬಡವರಿಗೆ ಹಾಗೂ ರೈತರಿಗೆ ಸಿಗುತ್ತಿದೆ. ಸಿಎಂ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದು ಸುಳ್ಳಲ್ಲ. ಅವರು ಯಾರಿಗೂ ಮೋಸ ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಯೋಜನೆಗಳನ್ನ ಮರೆಯುವಂತಿಲ್ಲ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ರೀತಿ ಹೇಳಿಕೆ ನೀಡಿರುವುದು ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ ಶಾಸಕಿ ಹೆಬ್ಬಾಳ್ಕರ್ ಮೋದಿಯನ್ನ ಹೊಗಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.