ದೇವರು-ಧರ್ಮ, ರಾಜಕೀಯ

‘ಪ್ರಧಾನಿ ಮೋದಿ’ಆಜಾನ್(ನಮಾಜ್) ಧ್ವನಿ ಕೇಳಿಸಿ ಭಾಷಣ ನಿಲ್ಲಿಸಿದರು..!ಏಕೆ ಗೊತ್ತಾ?ಶಾಕ್ ಆಗ್ತೀರಾ!ಮುಂದೆ ಓದಿ…

233

ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ. ಮೋದಿ ಭಾಷಣ ನಿಲ್ಲಿಸಲು ಕಾರಣವಾಗಿದ್ದು ಆಜಾನ್(ನಮಾಜ್). ಬುಧವಾರ ನವ್ಸಾರಿಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಸಮೀಪದ ಮಸೀದಿಯಿಂದ ಆಜಾನ್(ನಮಾಜ್) ಧ್ವನಿ ಕೇಳಿತು. ತಕ್ಷಣವೇ ಪ್ರಧಾನಿ ಮೋದಿ ಕೆಲ ಕ್ಷಣಗಳ ಕಾಲ ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾದರು. ನಂತರ ಆಜಾನ್ ಮುಗಿದ ಬಳಿಕ ಮತ್ತೆ ಭಾಷಣ ಮುಂದುವರೆಸಿದರು.

ಪ್ರಧಾನಿ ಮೋದಿ ಅವರು ತಮ್ಮ ಭಾಷಣವನ್ನು ನಿಲ್ಲಿಸುತ್ತಿದ್ದಂತೆ ಸಭಿಕರಲ್ಲಿ ಕೆಲ ಕಾಲ ಗೊಂದಲ ಉಂಟಾಯಿತು. ಆದರೆ ಮೋದಿ ಅವರು ಆಜಾನ್ ಮುಗಿದ ಬಳಿಕ ಭಾಷಣ ಆರಂಭಿಸುತ್ತಿದಂತೆ ಎಲ್ಲ ಸಭಿಕರು ಚಪ್ಪಾಳೆ ತಟ್ಟುವ ಮೂಲಕ ಮೋದಿಯವರ ನಡೆಯನ್ನು ಸ್ವಾಗತಿಸಿದರು.

ಇದೇ ಮೊದಲಲ್ಲ:-

ಆಜಾನ್ ವೇಳೆ ಮೋದಿ ಅವರು ಭಾಷಣ ನಿಲ್ಲಿಸಿದ್ದು ಇದೇ ಮೊದಲಲ್ಲ. ಈ ಹಿಂದೆ ಪಶ್ಚಿಮ ಬಂಗಾಳದ ಖರಗ್‍ಪುರದಲ್ಲಿ ಭಾಷಣ ಮಾಡುವ ವೇಳೆ ಆಜಾನ್ ಧ್ವನಿ ಕೇಳಿಸಿದಾಗಲೂ ಪ್ರಧಾನಿ ತಮ್ಮ ಭಾಷಣವನ್ನು ನಿಲ್ಲಿಸಿ ಮೌನ ವಹಿಸಿದ್ದರು.

ನಂತರ ಭಾಷಣ ಆರಂಭಿಸಿದ ಅವರು ಯಾರ ಪ್ರಾರ್ಥನೆಯನ್ನು ನಡುವೆ ಅಡ್ಡಿಪಡುಸುವುದು ನನಗೆ ಇಷ್ಟವಿಲ್ಲ. ಹಾಗಾಗಿ ಭಾಷಣವನ್ನು ನಡುವೆ ನಿಲ್ಲಿಸಬೇಕಾಯಿತು ಎಂದು ಹೇಳಿದ್ದರು.

ಭಾಷಣ ವೇಳೆ ಮತ್ತೊಂದು ಅಚ್ಚರಿ:-

ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಮತ್ತೊಂದು ಅಚ್ಚರಿ ಘಟನೆ ನಡೆಯಿತು. ಪ್ರಧಾನಿ ಮೋದಿಯಂತೆ ಬಟ್ಟೆತೊಟ್ಟಿದ್ದ ಪುಟ್ಟ ಪೋರನೊಬ್ಬ ವೇದಿಕೆ ಮೇಲೆ ಬಂದು ಪ್ರಧಾನಿಗಳಿಗೆ ಶುಭಾಶಯ ತಿಳಿಸಿದ. ಬಾಲಕನನ್ನು ಮಾತನಾಡಿಸಿದ ಪ್ರಧಾನಿ ಮೋದಿ ಬಾಲಕನ ಬಳಿ ಬಂದು ಶುಭ ಕೋರಿದರು.

ಕಳೆದ ಎರಡು ದಿನಗಳಿಂದ ಗುಜರಾತ್ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸುತ್ತಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಧರ್ಮಸ್ಥಳದ ಧರ್ಮಾದಿಕಾರಿಗಳಾದ, ಡಾ.ವೀರೇಂದ್ರ ಹೆಗಡೆರವರು ನೂತನವಾಗಿ ನಿರ್ಮಿಸಿರುವ ಮನೆ ಹೇಗಿದೆ ಗೊತ್ತಾ..?ಈ ಲೇಖನ ನೋಡಿ…

    ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಸುದ್ದಿ

    ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

    100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…