ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ವಾಸ್ತವದಲ್ಲಿ ನೀವು ಸ್ವಂತ ಮನೆ ಹೊಂದಿಲ್ಲದಿದ್ದರೆ ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಖಂಡಿತ ಪ್ರಯತ್ನಿಸಿ. ಅದಕ್ಕೆ ಸಂಬಂಧಿಸಿದ ಕೆಲ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ:-
ಜನಸಾಮಾನ್ಯರ ಸ್ವಂತ ಮನೆ ಕನಸು ನನಸು ಮಾಡಲು, ಕೇಂದ್ರ ಸರ್ಕಾರ “ಪ್ರಧಾನ ಮಂತ್ರಿ ಅವಾಸ ಯೋಜನೆ” (Pradhan ,Mantri Awas Yojana) ಪ್ರಾರಂಭಿಸಿದೆ. ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ.
ಯಾರೂ ಅರ್ಹರು? ವಾರ್ಷಿಕವಾಗಿ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ್ದು, ಆರ್ಥಿಕವಾಗಿ ತೀರಾ ಹಿಂದುಳಿದ ವರ್ಗದ ಅಡಿಯಲ್ಲಿ ಬರುವ ಹಾಗೂ ವಾರ್ಷಿಕವಾಗಿ 6 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಗುಂಪಿನಲ್ಲಿ ಬರುವವರು ಪ್ರಧಾನ ಮಂತ್ರಿ ಅವಾಸ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಈ ವರ್ಗದ ಅಡಿಯಲ್ಲಿ ದೇಶದ ಲಕ್ಷಾಂತರ ಜನರು ಬರುವುದರಿಂದ ತುಂಬಾ ಕುಟುಂಬಗಳಿಗೆ ಸೂರು ಸೌಲಭ್ಯ ಸಿಗಲಿದೆ.
ಯೋಜನೆಯಿಂದ ಪಡೆಯುವ ಸಬ್ಸಿಡಿ:- ವಾರ್ಷಿಕವಾಗಿ ಆದಾಯ ರೂ. 6 ಲಕ್ಷ ಇರುವವರು ಪ್ರಸ್ತುತ ಈ ಸಬ್ಸಿಡಿಯ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಈಗ ಇದರ ಮಿತಿಯನ್ನು 6 ಲಕ್ಷದಿಂದ 18 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅಂದರೆ ಈ ಸಬ್ಸಿಡಿ ಪರಿಮಿತಿಯಲ್ಲಿ ಇದೀಗ ರೂ. 18 ಲಕ್ಷದವರೆಗೆ ಆದಾಯ ಗಳಿಸುವವರು ಫಲಾನುಭವಿಗಳು ಆಗಲಿದ್ದಾರೆ. ವಾರ್ಷಿಕವಾಗಿ ರೂ. 12 ಲಕ್ಷ ಆದಾಯ ಗಳಿಸುತ್ತಿರುವವರು ಮೂಲ ಅಸಲು ರೂ. 9 ಲಕ್ಷದ ಮೇಲೆ ಶೇ. 4ರಷ್ಟು ಬಡ್ಡಿ ಸಬ್ಸಿಡಿ ಪಡೆಯಲಿದ್ದಾರೆ. ಒಂದು ವೇಳೆ ನಿಮ್ಮ ಆದಾಯ ವಾರ್ಷಿಕವಾಗಿ ರೂ. 18 ಲಕ್ಷ ಇದ್ದರೆ ಮೂಲ ಅಸಲು ರೂ. 12 ಲಕ್ಷದ ಮೇಲೆ ಶೇ. 3ರಷ್ಟು ಸಬ್ಸಿಡಿ ಪಡೆಯಬಹುದು.
ಸಾಲದ ಅವಧಿ ಮತ್ತು ಕಟ್ಟಬೇಕಾದ ಕಂತು ಎಷ್ಟು? ಈ ಹಿಂದೆ ಸಾಲದ ಅವಧಿ 15 ವರ್ಷಗಳಾಗಿತ್ತು. ಆದರೆ ಈಗ ಇದನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದೆ. 2೦ ವರ್ಷಗಳ ಕಾಲಾವಧಿ ಸಾಲದ ಮೇಲೆ ಶೇ. 9ರ ಬಡ್ಡಿದರದಲ್ಲಿ ಶೇ. 3ರ ಸಬ್ಸಿಡಿ ದರದಲ್ಲಿ ಒಟ್ಟು ರೂ. 2.4 ಲಕ್ಷ ಸಬ್ಸಿಡಿ ಗಳಿಸಬಹುದು. ಅಂದರೆ ಪ್ರತಿ ತಿಂಗಳ ಕಂತುಗಳಲ್ಲಿ ಸರಾಸರಿ ರೂ. 2,200ರವರೆಗೆ ಕಡಿತವಾಗುತ್ತದೆ.
ಯೋಜನೆ ಅನುಷ್ಠಾನ ಹೇಗೆ?
ಕೇಂದ್ರ ಸರ್ಕಾರದ ಈ ಯೋಜನೆಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಮತ್ತು ಹುಡ್ಕೊ(HUDCO) ಸಂಸ್ಥೆಗಳು ಕಾರ್ಯಗತಗೊಳಿಸಲಿವೆ.
ಕೇಂದ್ರ ಸರ್ಕಾರದ ಈ ಯೋಜನೆಯ ಗುರಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ ಸೂರು ಕಲ್ಪಿಸಲು 26 ರಾಜ್ಯಗಳ 2,508 ನಗರಗಳನ್ನು ಆಯ್ಕೆ ಮಾಡಲಾಗಿದೆ. 7 ವರ್ಷಗಳ ಕಾಲಮಿತಿಯಲ್ಲಿ 2 ಕೋಟಿ ಮನೆಗಳನ್ನು ಕಟ್ಟಿಸುವ ಯೋಜನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…
ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…