ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ವಾಸ್ತವದಲ್ಲಿ ನೀವು ಸ್ವಂತ ಮನೆ ಹೊಂದಿಲ್ಲದಿದ್ದರೆ ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಖಂಡಿತ ಪ್ರಯತ್ನಿಸಿ. ಅದಕ್ಕೆ ಸಂಬಂಧಿಸಿದ ಕೆಲ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ:-
ಜನಸಾಮಾನ್ಯರ ಸ್ವಂತ ಮನೆ ಕನಸು ನನಸು ಮಾಡಲು, ಕೇಂದ್ರ ಸರ್ಕಾರ “ಪ್ರಧಾನ ಮಂತ್ರಿ ಅವಾಸ ಯೋಜನೆ” (Pradhan ,Mantri Awas Yojana) ಪ್ರಾರಂಭಿಸಿದೆ. ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ.
ಯಾರೂ ಅರ್ಹರು? ವಾರ್ಷಿಕವಾಗಿ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ್ದು, ಆರ್ಥಿಕವಾಗಿ ತೀರಾ ಹಿಂದುಳಿದ ವರ್ಗದ ಅಡಿಯಲ್ಲಿ ಬರುವ ಹಾಗೂ ವಾರ್ಷಿಕವಾಗಿ 6 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಗುಂಪಿನಲ್ಲಿ ಬರುವವರು ಪ್ರಧಾನ ಮಂತ್ರಿ ಅವಾಸ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಈ ವರ್ಗದ ಅಡಿಯಲ್ಲಿ ದೇಶದ ಲಕ್ಷಾಂತರ ಜನರು ಬರುವುದರಿಂದ ತುಂಬಾ ಕುಟುಂಬಗಳಿಗೆ ಸೂರು ಸೌಲಭ್ಯ ಸಿಗಲಿದೆ.
ಯೋಜನೆಯಿಂದ ಪಡೆಯುವ ಸಬ್ಸಿಡಿ:- ವಾರ್ಷಿಕವಾಗಿ ಆದಾಯ ರೂ. 6 ಲಕ್ಷ ಇರುವವರು ಪ್ರಸ್ತುತ ಈ ಸಬ್ಸಿಡಿಯ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಈಗ ಇದರ ಮಿತಿಯನ್ನು 6 ಲಕ್ಷದಿಂದ 18 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅಂದರೆ ಈ ಸಬ್ಸಿಡಿ ಪರಿಮಿತಿಯಲ್ಲಿ ಇದೀಗ ರೂ. 18 ಲಕ್ಷದವರೆಗೆ ಆದಾಯ ಗಳಿಸುವವರು ಫಲಾನುಭವಿಗಳು ಆಗಲಿದ್ದಾರೆ. ವಾರ್ಷಿಕವಾಗಿ ರೂ. 12 ಲಕ್ಷ ಆದಾಯ ಗಳಿಸುತ್ತಿರುವವರು ಮೂಲ ಅಸಲು ರೂ. 9 ಲಕ್ಷದ ಮೇಲೆ ಶೇ. 4ರಷ್ಟು ಬಡ್ಡಿ ಸಬ್ಸಿಡಿ ಪಡೆಯಲಿದ್ದಾರೆ. ಒಂದು ವೇಳೆ ನಿಮ್ಮ ಆದಾಯ ವಾರ್ಷಿಕವಾಗಿ ರೂ. 18 ಲಕ್ಷ ಇದ್ದರೆ ಮೂಲ ಅಸಲು ರೂ. 12 ಲಕ್ಷದ ಮೇಲೆ ಶೇ. 3ರಷ್ಟು ಸಬ್ಸಿಡಿ ಪಡೆಯಬಹುದು.
ಸಾಲದ ಅವಧಿ ಮತ್ತು ಕಟ್ಟಬೇಕಾದ ಕಂತು ಎಷ್ಟು? ಈ ಹಿಂದೆ ಸಾಲದ ಅವಧಿ 15 ವರ್ಷಗಳಾಗಿತ್ತು. ಆದರೆ ಈಗ ಇದನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದೆ. 2೦ ವರ್ಷಗಳ ಕಾಲಾವಧಿ ಸಾಲದ ಮೇಲೆ ಶೇ. 9ರ ಬಡ್ಡಿದರದಲ್ಲಿ ಶೇ. 3ರ ಸಬ್ಸಿಡಿ ದರದಲ್ಲಿ ಒಟ್ಟು ರೂ. 2.4 ಲಕ್ಷ ಸಬ್ಸಿಡಿ ಗಳಿಸಬಹುದು. ಅಂದರೆ ಪ್ರತಿ ತಿಂಗಳ ಕಂತುಗಳಲ್ಲಿ ಸರಾಸರಿ ರೂ. 2,200ರವರೆಗೆ ಕಡಿತವಾಗುತ್ತದೆ.
ಯೋಜನೆ ಅನುಷ್ಠಾನ ಹೇಗೆ?
ಕೇಂದ್ರ ಸರ್ಕಾರದ ಈ ಯೋಜನೆಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಮತ್ತು ಹುಡ್ಕೊ(HUDCO) ಸಂಸ್ಥೆಗಳು ಕಾರ್ಯಗತಗೊಳಿಸಲಿವೆ.
ಕೇಂದ್ರ ಸರ್ಕಾರದ ಈ ಯೋಜನೆಯ ಗುರಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ ಸೂರು ಕಲ್ಪಿಸಲು 26 ರಾಜ್ಯಗಳ 2,508 ನಗರಗಳನ್ನು ಆಯ್ಕೆ ಮಾಡಲಾಗಿದೆ. 7 ವರ್ಷಗಳ ಕಾಲಮಿತಿಯಲ್ಲಿ 2 ಕೋಟಿ ಮನೆಗಳನ್ನು ಕಟ್ಟಿಸುವ ಯೋಜನೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್ ಅಂತ ಟ್ಯಾಗ್ಲೈನ್ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್ ಸ್ಟಾರ್ ಯಶ್ ಸಾಥ್ ಕೊಡ್ತಿದ್ದಾರೆ. ಕೆಜಿಎಫ್ ಸೆಟ್ನಿಂದ ಡೈರೆಕ್ಟಾಗಿ ಕಿಸ್ ಜೋಡಿಯನ್ನ ನೋಡೋಕ್ಕೆ ಥಿಯೇಟರ್ಗೆ ಬರ್ತಿದ್ದಾರೆ. ಕಿಸ್..ಟೈಟಲ್ ಮತ್ತು…
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ. ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ. ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ…