ಸುದ್ದಿ

ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

178

ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ ಈವರೆಗೂ ಮೊದಲ ವರ್ಷದ ಬಡ್ಡಿ ದರದ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ. ಅಟಲ್ ಪಿಂಚಣಿ ಯೋಜನೆ(APY) ಮಾಡಿಸುವುದು ಹೇಗೆ?

ಯೋಜನೆಗೆ ಯಾರು ಅರ್ಹರು? ತಿಂಗಳಿಗೆ ರೂ. 15,000ವರೆಗೆ ಗಳಿಸುವ ಅಸಂಘಟಿತ ವಲಯದ ಕಾರ್ಮಿಕರು- 18 ಮತ್ತು 40 ವರ್ಷ ವಯಸ್ಸಿನ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು.- 60 ವರ್ಷ ವಯಸ್ಸಿನ ನಂತರ 3,000 ರೂ. ಮಾಸಿಕ ಪಿಂಚಣಿ ಪಡೆಯುತ್ತಾರೆ- ಮಾಸಿಕ ಕೊಡುಗೆ ಮೊತ್ತವನ್ನು ವಯಸ್ಸಿನ ಆಧಾರದ ಮೇಲೆ 60 ವಯಸ್ಸಿನವರೆಗೆ ಪಾವತಿಸಬೇಕು. – ಗೃಹಾಧಾರಿತ ಕಾರ್ಮಿಕರು, ಬೀದಿ ಮಾರಾಟಗಾರರು, ಮಿಡ್ ಡೇ ಮೀಲ್ ಕಾರ್ಮಿಕರು, ಹೆಡ್ ಲೋಡರ್, ಇಟ್ಟಿಗೆ ಕೆಲಸಗಾರರು, ಚಮ್ಮಾರರು,ಸ್ಥಳೀಯ ಕಾರ್ಮಿಕರು, ಬಟ್ಟೆ ತೊಳೆಯುವವರು, ರಿಕ್ಷಾ, ಭೂಮಿರಹಿತ ಕಾರ್ಮಿಕರು, ಕೃಷಿ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮದ ಕೆಲಸಗಾರರು, ಆಡಿಯೋ-ದೃಶ್ಯ ಕೆಲಸಗಾರರು ಮತ್ತು ಇದೇ ರೀತಿಯ ಇತರ ತೊಡಗಿರುವ ಅಸಂಘಟಿತ ಕಾರ್ಮಿಕರು.

ವಯಸ್ಸು ಆಧಾರಿತ ಪಿಂಚಣಿ
ಒಂದು ಜೀವನ ಮಾದರಿಯ ಮೂಲಕ ನೋಡೋಣ. ಅಧಿಸೂಚನೆಯ ಪ್ರಕಾರ, 30 ರ ವಯಸ್ಸಿನವರು ತಿಂಗಳಿಗೆ 105 ರೂಪಾಯಿ 60 ರ ವರೆಗೆ ಪಾವತಿಸಬೇಕಾಗುತ್ತದೆ. ಒಟ್ಟಾರೆಯಾಗಿ, ವ್ಯಕ್ತಿಯು ರೂ. 37,800 (105×12=1260, 1260×30=37,800) ಹಣ ಪಾವತಿಸಿದರೆ ಅಷ್ಟೇ ಮೊತ್ತವನ್ನು ಸರ್ಕಾರ ಭರಿಸಲಿದೆ. ಅಸಂಘಟಿತ ವಲಯದ ಕಾರ್ಮಿಕರು ತಮ್ಮ ನೆರೆಹೊರೆಯಲ್ಲಿ ಈ ಯೋಜನೆಯನ್ನು ಲಾಭ ಪಡೆಯಲು ಮಾಹಿತಿ ನೀಡಬಹುದು. ಅಟಲ್ ಪಿಂಚಣಿ ಯೋಜನೆ ಮಾಡಿಸಿ, ತಿಂಗಳಿಗೆ 5000 ಪಡೆಯೋದು ಹೇಗೆ?

ರೂ. 55 ಮಾಸಿಕ ಕೊಡುಗೆ
18 ರಿಂದ 40 ವರ್ಷ ವಯಸ್ಸಿನೊಳಗಿನ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸುವಾಗ ಕಾರ್ಮಿಕರು ಆಧಾರ್ ಕಾರ್ಡ್ ಮತ್ತು ಉಳಿತಾಯ ಬ್ಯಾಂಕ್ ಖಾತೆ ಹೊಂದಿರಬೇಕಾಗುತ್ತದೆ. ಚಂದಾದಾರರು 18 ವರ್ಷ ವಯಸ್ಸಿನಲ್ಲಿ ಈ ಯೋಜನೆಗೆ ಪ್ರವೇಶಿಸಿ, ರೂ. 55 ರ ಮಾಸಿಕ ಕೊಡುಗೆ ಪಾವತಿಸುತ್ತಾ ಹೋದರೆ ಅವನು ಅಥವಾ ಅವಳು ನಿವೃತ್ತಿಯ ಮಾಸಿಕ ಪಿಂಚಣಿಯಾಗಿ ರೂ. 3,000 ಪಡೆಯಬಹುದು. ಖಾತೆಗೆ ಪಿಂಚಣಿದಾರರು ಪಾವತಿಸುವಷ್ಟೇ ಮೊತ್ತವನ್ನು ಸರ್ಕಾರ ಪಾವತಿಸುತ್ತದೆ.

ವೈಶಿಷ್ಟ್ಯ, ಅರ್ಹತೆ ಮತ್ತು ಅನುಕೂಲ
ಇದು ಸ್ವಯಂಪ್ರೇರಿತ ಮತ್ತು ಕೊಡುಗೆ ಪಿಂಚಣಿ ಯೋಜನೆಯಾಗಿದೆ. ಪಿಂಚಣಿ ಸ್ವೀಕೃತಿಯ ಸಂದರ್ಭದಲ್ಲಿ, ಚಂದಾದಾರರು ತೀರಿಕೊಂಡರೆ ಫಲಾನುಭವಿಗಳ ಸಂಗಾತಿಯು ಕುಟುಂಬದ ಸದಸ್ಯರಾಗಿ ಫಲಾನುಭವಿ ಪಡೆಯುವ 50% ಪಿಂಚಣಿ ಸ್ವೀಕರಿಸಲು ಅರ್ಹರಾಗಿರುತ್ತಾರೆ. ಕುಟುಂಬದ ಪಿಂಚಣಿ ಸಂಗಾತಿಗೆ ಮಾತ್ರ ಅನ್ವಯಿಸುತ್ತದೆ ಎಂದು ಗಮನಿಸಬಹುದು.ಒಬ್ಬ ಫಲಾನುಭವಿ ನಿಯಮಿತ ಕೊಡುಗೆ ನೀಡುತ್ತಿದ್ದು, ಯಾವುದೇ ಕಾರಣದಿಂದಾಗಿ ಅಂದರೆ 60 ವರ್ಷಕ್ಕೆ ಮುಂಚಿತವಾಗಿ ಮರಣಿಸಿದರೆ, ಅವನ / ಅವಳ ಸಂಗಾತಿಯು ನಿಯಮಿತ ಕೊಡುಗೆಗಳನ್ನು ಪಾವತಿಸುವ ಮೂಲಕ ಯೋಜನೆಗೆ ಸೇರಲು ಅಥವಾ ಮುಂದುವರಿಸಲು ಅರ್ಹರಾಗಿರುತ್ತಾರೆ. (Source: labour.gov.in/pm-sym)

ಸ್ವಯಂ ಪಾವತಿ (auto-debit)
PM-SYM ಯೋಜನೆಯ ಚಂದಾದಾರರು ಕೊಡುಗೆಗಳನ್ನು ತನ್ನ ಉಳಿತಾಯ ಬ್ಯಾಂಕ್ ಖಾತೆಯಿಂದ ಅಥವಾ ಜನ್ ಧನ್ ಖಾತೆಯಿಂದ ‘ಸ್ವಯಂ-ಡೆಬಿಟ್’ ಸೌಲಭ್ಯದ ಮೂಲಕ ಪಾವತಿ ಮಾಡಬೇಕಾಗುತ್ತದೆ. ಸೇರಿದ ವಯಸ್ಸಿನಿಂದ 60 ವರ್ಷ ವಯಸ್ಸಿನವರೆಗೂ ನಿಗದಿತ ಮೊತ್ತವನ್ನು ಚಂದಾದಾರರು ಪಾವತಿಸುತ್ತಾ ಹೋಗಬೇಕಾಗುತ್ತದೆ.

ಸರ್ಕಾರದ ಸಮಾನ ಕೊಡುಗೆ
ಈ ಯೋಜನೆ ಇನ್ನೊಂದು ವಿಶೇಷತೆಯೆಂದರೆ ಫಲಾನುಭವಿ ಕೊಡುಗೆ ಜೊತೆಗೆ ಸಮಾನ ಪ್ರಮಾಣದ ಮೊತ್ತವನ್ನು ಕೇಂದ್ರ ಸರ್ಕಾರವು ನೀಡುತ್ತದೆ. ಉದಾಹರಣೆಗೆ, ಫಲಾನುಭವಿಯು ತನ್ನ 20 ವರ್ಷ ವಯಸ್ಸಿನಲ್ಲಿ ಈ ಯೋಜನೆಯನ್ನು ಪಾರಂಭಿಸಿದರೆ, ಅವನು ಅಥವಾ ಅವಳು 60 ವರ್ಷ ವಯಸ್ಸಿನವರೆಗೆ ತಿಂಗಳಿಗೆ ರೂ. 61 ಹಣವನ್ನು ನೀಡಬೇಕಾಗಿರುತ್ತದೆ. ಕೇಂದ್ರ ಸರ್ಕಾರ ಕೂಡ ಇಷ್ಟೇ ಪ್ರಮಾಣದ ಸಮಾನ ಮೊತ್ತವನ್ನು ರೂ. 61 ಪ್ರತಿ ತಿಂಗಳು ಭರಿಸುತ್ತದೆ. ಆದ್ದರಿಂದ, ಒಂದು ತಿಂಗಳಲ್ಲಿ ಪ್ರತಿ ವ್ಯಕ್ತಿಯ ಒಟ್ಟು ಕೊಡುಗೆ ರೂ. 122 ಆಗಿರುತ್ತದೆ.

ಕನಿಷ್ಠ 3,000 ಪಿಂಚಣಿ
http://pmjandhanyojana.co.in ಪ್ರಕಾರ, ಈ ಯೋಜನೆ ಪ್ರಾಥಮಿಕವಾಗಿ ಅಸಂಘಟಿತ ವಲಯದ ಕಾರ್ಮಿಕರ ಪಿಂಚಣಿ ಯೋಜನೆಯಾಗಿದೆ ಎಂದು ಗಮನಿಸಬಹುದು. 2016 ರ ಫೆಬ್ರವರಿಯಲ್ಲಿ ಪಿಯೂಶ್ ಗೋಯಲ್ ಸಂಘಟಿತ ಮತ್ತು ಅಸಂಘಟಿತ ಕ್ಷೇತ್ರದ ಕಾರ್ಮಿಕರ ಉದ್ದೇಶಿತ ಫಲಾನುಭವಿಗಳಾಗಿ ಈ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ರೂ. 3,000 ಪಿಂಚಣಿ ಒದಗಿಸುತ್ತದೆ. ಮಾತೃಶ್ರೀ ಯೋಜನೆ: ರೂ. 12 ಸಾವಿರ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗುತ್ತಿದ್ದಿರಾ ;ಇನ್ಮುಂದೆ ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು,ಇಲ್ಲಿದೆ ನೋಡಿ ಮಾಹಿತಿ,.!!

    ಎಲ್‌ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್‌ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್‌ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್‌ಪಿಜಿ ಪೂರೈಕೆದಾರ ಕಂಪನಿಗಳ ವೆಬ್‌ಸೈಟ್ ಮೂಲಕ ಹೊಸ ಎಲ್‌ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್‌ ಹೊಂದಿದ್ದು, ಅದರ…

  • ಸುದ್ದಿ

    ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

    ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…

  • ಸಿನಿಮಾ

    ಕೊನೆಗೂ ತಮ್ಮ ಮಗಳ ಫೋಟೋವನ್ನು ಬಹಿರಂಗ ಮಾಡಿದ ಯಶ್ ರಾಧಿಕಾ ಪಂಡಿತ್ ದಪತಿ..ಯಾವ ಹೆಸರು ಇಟ್ಟಿದ್ದಾರೆ ನೋಡಿ…

    ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.

  • ಸುದ್ದಿ

    ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

    ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…