ವಿಚಿತ್ರ ಆದರೂ ಸತ್ಯ, ವಿಸ್ಮಯ ಜಗತ್ತು

ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ ದಾಟಿ ಬಾಂಗ್ಲಾ ತಲುಪಿದ ಬಾಲಕ ..!ತಿಳಿಯಲು ಇದನ್ನು ಓದಿ..

546

ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.

ಇತ್ತೀಚೆಗೆ 13 ವರ್ಷದ ಬಾಲಕ ನಬಿ ಹುಸೈನ್ ಪ್ಲಾಸ್ಟಿಕ್ ತೈಲ ಡಬ್ಬವನ್ನು ಬಳಸಿ ಬಾಂಗ್ಲಾದೇಶಕ್ಕೆ ಬರುವ ಮೂಲಕ ತನ್ನ ಜೀವ ಉಳಿಸಿಕೊಂಡಿದ್ದಾರೆ. ಅವನಿಗೆ ಈಜಲು ಗೊತ್ತಿರಲಿಲ್ಲ ಹಾಗೂ ಮ್ಯಾನ್ಮಾರ್‌ನಲ್ಲಿನ ತನ್ನ ಗ್ರಾಮದಿಂದ ಪಲಾಯನಗೈಯುವ ಮೊದಲು ಸಮುದ್ರವನ್ನೂ ನೋಡಿರಲಿಲ್ಲ. ಆದರೆ, ಖಾಲಿ ಪ್ಲಾಸ್ಟಿಕ್ ಡಬ್ಬವನ್ನು ಹಿಡಿದುಕೊಂಡ ನಬಿ ಹುಸೈನ್ ಬಂಗಾಳ ಕೊಲ್ಲಿಯಲ್ಲಿ 4 ಕಿ.ಮೀ. ದಾಟಿ ಬಾಂಗ್ಲಾದೇಶಕ್ಕೆ ಬಂದರು.

ಮ್ಯಾನ್ಮಾರ್‌ನ ರೊಹಿಂಗ್ಯಾ ಮುಸ್ಲಿಮರು ಅಲ್ಲಿನ ಹಿಂಸಾಚಾರದಿಂದ ಎಷ್ಟು ಕಂಗೆಟ್ಟಿದ್ದಾರೆಂದರೆ, ಕೆಲವರು ಸಮುದ್ರವನ್ನು ಈಜಿ ದಾಟಲು ಪ್ರಯತ್ನಿಸುತ್ತಿದ್ದಾರೆ.

ಒಂದೇ ವಾರದಲ್ಲಿ, 40ಕ್ಕೂ ಅಧಿಕ ಬಾಲಕರು ಮತ್ತು ಯುವಕರು ಪ್ಲಾಸ್ಟಿಕ್ ಡಬ್ಬಗಳನ್ನು ತೆಪ್ಪದಂತೆ ಬಳಸಿಕೊಂಡು ನಾಫ್ ನದಿಯನ್ನು ಅಳಿವೆ ಪ್ರದೇಶದಲ್ಲಿ ದಾಟಿ ಶಾ ಪೊರಿರ್ ದ್ವೀಪಕ್ಕೆ ಬಂದಿದ್ದಾರೆ.

‘‘ನಾನು ತುಂಬಾ ಹೆದರಿದ್ದೆ. ಇದು ನನ್ನ ಕೊನೆಯ ದಿನವೆಂದೇ ನಾನು ಭಾವಿಸಿದ್ದೆ’’ ಎಂದು ನಬಿ ಹೇಳುತ್ತಾನೆ.

ರೊಹಿಂಗ್ಯಾ ಮುಸ್ಲಿಮರು ಮ್ಯಾನ್ಮಾರ್‌ನಲ್ಲಿ ದಶಕಗಳಿಂದ ವಾಸಿಸುತ್ತಿದ್ದರೂ, ಬೌದ್ಧ ಬಹುಸಂಖ್ಯಾತ ದೇಶವು ಅವರನ್ನು ಬಾಂಗ್ಲಾದೇಶದಿಂದ ಬಂದ ಅತಿಕ್ರಮಣಕಾರಿಗಳಂತೆ ಪರಗಣಿಸುತ್ತಿದೆ. ಅಲ್ಲಿನ ಸರಕಾರವು ಅವರಿಗೆ ಮೂಲಭೂತ ಹಕ್ಕುಗಳನ್ನು ನಿರಾಕರಿಸಿದೆ.

ರೊಹಿಂಗ್ಯಾ ಮುಸ್ಲಿಮರು ಜಗತ್ತಿನ ಅತ್ಯಂತ ಮರ್ದನಕ್ಕೊಳಗಾದ ಅಲ್ಪಸಂಖ್ಯಾತ ಗುಂಪು ಎಂಬುದಾಗಿ ವಿಶ್ವಸಂಸ್ಥೆ ಹೇಳಿದೆ.

‘‘ಮ್ಯಾನ್ಮಾರ್‌ನಲ್ಲಿ ನಾವು ಸಂಕಷ್ಟ ಎದುರಿಸಬೇಕಾಗಿದೆ. ಹಾಗಾಗಿ, ಅದಕ್ಕಿಂತ ಸಮುದ್ರದಲ್ಲಿ ಮುಳುಗುವುದೇ ಉತ್ತಮ ಎಂದು ನಾವು ಯೋಚಿಸಿದೆವು’’ ಎಂದು ಪ್ಲಾಸ್ಟಿಕ್ ಡಬ್ಬವನ್ನು ಹಿಡಿದು ಈಜುತ್ತಾ ಬಾಂಗ್ಲಾದೇಶಕ್ಕೆ ಬಂದ 18 ವರ್ಷದ ಕಮಲ್ ಹುಸೈನ್ ಹೇಳುತ್ತಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮತ್ತೆ ಮಂಡ್ಯದಲ್ಲಿ ಜೋಡೆತ್ತುಗಳ ಅಬ್ಬರ: ಸುಮಲತಾ ಅವರ ಮುಂದಿನ ಪ್ಲಾನ್ ಏನು?

    ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…

  • ಆರೋಗ್ಯ

    ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

    ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…

  • ಸುದ್ದಿ

    ವಿಚ್ಛೇದನ ನೀಡಿ ಎರಡನೇ ಮದುವೆ ಆದ್ರೂ, ಈ ಮಹಿಳೆ ತನ್ನ ಎರಡನೇ ಗಂಡನ ಜೊತೆಗೇ, ಮೊದಲ ಪತಿಯ ಸೇವೆ ಮಾಡುತ್ತಿದ್ದಾಳೆ..!ಏಕೆ?ತಿಳಿಯಲು ಈ ಲೇಖನ ಓದಿ…

    ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಏಪ್ರಿಲ್, 2019) ಇದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸಬೇಕಾಗಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಸ್ಥೈರ್ಯ ಮತ್ತು…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…