News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಭವಿಷ್ಯ

ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

1355

ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ  ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಎದುರಾಗುವ ಗಂಡಾಂತರವನ್ನು ತಪ್ಪಿಸಿಕೊಂಡರೆ ಮೋದಿ 12 ವರ್ಷಗಳ ಕಾಲ ದೇಶವನ್ನು ಸುರಕ್ಷಿತವಾಗಿ ಆಳುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.

ಆ ಎರಡು ಗಂಡಾಂತರಗಳು:-

ಹಿಂದೊಮ್ಮೆ ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದಾಗ ಮೋದಿಯವರಿದ್ದ ವಿಮಾನ ಪ್ರತಿಕೂಲ ಹವಾಮಾನದಿಂದ ತುರ್ತು ಭೂ ಸ್ಪರ್ಶ ಮಾಡಿತ್ತು. ನಂತರ ಪ್ರಧಾನಿ ದಿಢೀರ್ ಪಾಕಿಸ್ತಾನಕ್ಕೆ ತೆರಳಿ ನವಾಜ್ ಶರೀಫ್ ಅವರನ್ನು ಭೇಟಿಯಾಗಿ ಟೀಕೆ ಟಿಪ್ಪಣಿ ಎದುರಿಸದ್ದರು. ಇವು ಪ್ರಧಾನಿ ಎದುರಿಸಿದ ಎರಡು ಗಂಡಾಂತರಗಳು ಎಂದಿರುವ ಗುರೂಜಿ ಮೂರನೇ ಗಂಡಾಂತರ ಯಾವ ರೂಪದಲ್ಲಿ ಎದುರಾಗುತ್ತೆ ಎಂಬುದನ್ನು ಹೇಳಲಾಗದು ಎಂದಿದ್ದಾರೆ.

ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ‘ಮೋದಿ ಅವರದು ವೃಶ್ಚಿಕ ರಾಶಿ, ಅವರಿಗೆ ಶನಿ ಚೆನ್ನಾಗಿಲ್ಲ. ಶನಿ ಕೂತಾಗ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶ ಮಾಡಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿದ್ದು ಯಶೋಕೀರ್ತಿ ಹೊಂದಿರುವ ಸಿನಿಮಾ ಸ್ಟಾರ್ ಅಥವಾ ರಾಜಕಾರಣಿಗೆ ಘೋರ ಅಪಮೃತ್ಯು ಕಾದಿದೆ’ ಎಂದರು.

ಪ್ರಧಾನಿ ಮತ್ತು ಹೆಣ್ಣಿನ ಮೋಹ:-

ಪ್ರಧಾನಿಗೆ ಸ್ತ್ರೀ ದೋಷವಿದೆ. ಪತ್ನಿಯಿಂದ ದೂರವಿದ್ದಾರೆ. ತಾಯಿಯಿಂದ, ಹೆಣ್ಣಿಂದ( ಪತ್ನಿ) ದೂರ ಇರುವ ಪ್ರಧಾನಿಗೆ ಶುಕ್ರನಿಂದಲೂ ದೋಷ ಇದೆ. ಮೋದಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡು ಸೇವೆ ಮಾಡಿದರೆ ದೋಷಗಳಿಂದ ಮುಕ್ತವಾಗುವ ಸಾಧ್ಯತೆ ಇದೆ. ಜೊತೆಗೆ ಪಾರ್ಲಿಮೆಂಟ್‌ನ ವಾಸ್ತು ಸ್ಥಿತಿ ಕೂಡ ಪ್ರಧಾನಿಗೆ ಅನುಕೂಲಕರವಾಗಿಲ್ಲ ಎಂದು  ಗುರೂಜಿ ಹೇಳಿದ್ದಾರೆ. ಅವರನ್ನು ಹೆಣ್ಣೊಬ್ಬಳು ಮೋಹಿಸಲಿದ್ದಾಳೆ. ಇದೇ ಮೋದಿಗೆ ಮುಳುವಾಗಲಿದೆ. ಗಾಂಧಿ ಕುಟುಂಬಕ್ಕೆ ಇಲ್ಲವೇ ಮೋದಿಗೆ ಸಾವು ಸಾವಿರ ಪರ್ಸೆಂಟ್ ಖಚಿತ ಎಂದರು.

ಈ ಗಂಡಾಂತರದಿಂದ ಪಾರಾಗಬೇಕಾದ್ರೆ ದಕ್ಷಿಣದ 6 ಕ್ಷೇತ್ರಗಳ ಸುಬ್ರಹ್ಮಣ್ಯ ದೇವರನ್ನು ಆರಾಧಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ನಾನೇ ಎಲ್ಲಾ ಅನ್ನೋ ಹಿಟ್ಲರ್ ಮನೋಧೋರಣೆಯನ್ನು ಮೋದಿ ಅವರು ಬಿಟ್ಟರೆ ಒಳ್ಳೆಯದು ಎಂದರು.

ಕುಮಾರಸ್ವಾಮಿ ಕಿಂಗ್ ಮೇಕರ್:-

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬೆರಕೆ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದ ಗುರೂಜಿ, ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗುವುದರ ಜೊತೆಗೆ ಕಿಂಗ್’ಮೇಕರ್ ಆಗಲಿದ್ದಾರೆ ಎಂದರು.  ಆದರೆ ಅವರು ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡು, ತಂದೆ ದೇವೇಗೌಡರ ಮಾತನ್ನು ಚಾಚೂತಪ್ಪದೆ ಕೇಳಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಮುನ್ನಡೆಯಬೇಕು. ಕಾಂಗ್ರೆಸ್-ಬಿಜೆಪಿಗಿಂತ ಕುಮಾರಸ್ವಾಮಿ ಅವರ ಮೇಲೆ ಉತ್ತರ ಕರ್ನಾಟಕದ ಜನರು ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು ಅವರು ಅದನ್ನು ಉಳಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…

  • ಆಧ್ಯಾತ್ಮ, ಜ್ಯೋತಿಷ್ಯ

    ದೀಪಾವಳಿ ಹಬ್ಬದ ಆರಂಭದೊಂದಿಗೆ 28-10-19 ರಿಂದ 4-11-19 ಈ ರಾಶಿಯವರಿಗೆ ರಾಜಯೋಗ ಶುರುವಾಗಲಿದೆ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ  ಇಂದು ಆರೋಗ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಹಣ ಕಾಸು

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!ಏಕೆ ಗೊತ್ತಾ?ಈ ಲೇಖನ ಓದಿ…

    ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.

  • Cinema, ಸಿನಿಮಾ

    ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

    ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.