ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.

ಫೆಬ್ರವರಿಯಲ್ಲಿ ಎದುರಾಗುವ ಗಂಡಾಂತರವನ್ನು ತಪ್ಪಿಸಿಕೊಂಡರೆ ಮೋದಿ 12 ವರ್ಷಗಳ ಕಾಲ ದೇಶವನ್ನು ಸುರಕ್ಷಿತವಾಗಿ ಆಳುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ.

ಹಿಂದೊಮ್ಮೆ ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದಾಗ ಮೋದಿಯವರಿದ್ದ ವಿಮಾನ ಪ್ರತಿಕೂಲ ಹವಾಮಾನದಿಂದ ತುರ್ತು ಭೂ ಸ್ಪರ್ಶ ಮಾಡಿತ್ತು. ನಂತರ ಪ್ರಧಾನಿ ದಿಢೀರ್ ಪಾಕಿಸ್ತಾನಕ್ಕೆ ತೆರಳಿ ನವಾಜ್ ಶರೀಫ್ ಅವರನ್ನು ಭೇಟಿಯಾಗಿ ಟೀಕೆ ಟಿಪ್ಪಣಿ ಎದುರಿಸದ್ದರು. ಇವು ಪ್ರಧಾನಿ ಎದುರಿಸಿದ ಎರಡು ಗಂಡಾಂತರಗಳು ಎಂದಿರುವ ಗುರೂಜಿ ಮೂರನೇ ಗಂಡಾಂತರ ಯಾವ ರೂಪದಲ್ಲಿ ಎದುರಾಗುತ್ತೆ ಎಂಬುದನ್ನು ಹೇಳಲಾಗದು ಎಂದಿದ್ದಾರೆ.

ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು, ‘ಮೋದಿ ಅವರದು ವೃಶ್ಚಿಕ ರಾಶಿ, ಅವರಿಗೆ ಶನಿ ಚೆನ್ನಾಗಿಲ್ಲ. ಶನಿ ಕೂತಾಗ ಯಾರನ್ನೂ ಬಿಡಲ್ಲ. ಗುರು ತುಲಾ ರಾಶಿಗೆ ಪ್ರವೇಶ ಮಾಡಿದ್ದಾನೆ. ಹೀಗಾಗಿ ಉನ್ನತ ಸ್ಥಾನದಲ್ಲಿದ್ದು ಯಶೋಕೀರ್ತಿ ಹೊಂದಿರುವ ಸಿನಿಮಾ ಸ್ಟಾರ್ ಅಥವಾ ರಾಜಕಾರಣಿಗೆ ಘೋರ ಅಪಮೃತ್ಯು ಕಾದಿದೆ’ ಎಂದರು.
ಪ್ರಧಾನಿಗೆ ಸ್ತ್ರೀ ದೋಷವಿದೆ. ಪತ್ನಿಯಿಂದ ದೂರವಿದ್ದಾರೆ. ತಾಯಿಯಿಂದ, ಹೆಣ್ಣಿಂದ( ಪತ್ನಿ) ದೂರ ಇರುವ ಪ್ರಧಾನಿಗೆ ಶುಕ್ರನಿಂದಲೂ ದೋಷ ಇದೆ. ಮೋದಿಯವರು ತಾಯಿಯನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡು ಸೇವೆ ಮಾಡಿದರೆ ದೋಷಗಳಿಂದ ಮುಕ್ತವಾಗುವ ಸಾಧ್ಯತೆ ಇದೆ. ಜೊತೆಗೆ ಪಾರ್ಲಿಮೆಂಟ್ನ ವಾಸ್ತು ಸ್ಥಿತಿ ಕೂಡ ಪ್ರಧಾನಿಗೆ ಅನುಕೂಲಕರವಾಗಿಲ್ಲ ಎಂದು ಗುರೂಜಿ ಹೇಳಿದ್ದಾರೆ. ಅವರನ್ನು ಹೆಣ್ಣೊಬ್ಬಳು ಮೋಹಿಸಲಿದ್ದಾಳೆ. ಇದೇ ಮೋದಿಗೆ ಮುಳುವಾಗಲಿದೆ. ಗಾಂಧಿ ಕುಟುಂಬಕ್ಕೆ ಇಲ್ಲವೇ ಮೋದಿಗೆ ಸಾವು ಸಾವಿರ ಪರ್ಸೆಂಟ್ ಖಚಿತ ಎಂದರು.

ಈ ಗಂಡಾಂತರದಿಂದ ಪಾರಾಗಬೇಕಾದ್ರೆ ದಕ್ಷಿಣದ 6 ಕ್ಷೇತ್ರಗಳ ಸುಬ್ರಹ್ಮಣ್ಯ ದೇವರನ್ನು ಆರಾಧಿಸಬೇಕು ಎಂದು ಸಲಹೆ ನೀಡಿದರು. ಜೊತೆಗೆ ನಾನೇ ಎಲ್ಲಾ ಅನ್ನೋ ಹಿಟ್ಲರ್ ಮನೋಧೋರಣೆಯನ್ನು ಮೋದಿ ಅವರು ಬಿಟ್ಟರೆ ಒಳ್ಳೆಯದು ಎಂದರು.

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬೆರಕೆ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದ ಗುರೂಜಿ, ಮಾಜಿ ಸಿಎಂ ಕುಮಾರಸ್ವಾಮಿ ಸಿಎಂ ಆಗುವುದರ ಜೊತೆಗೆ ಕಿಂಗ್’ಮೇಕರ್ ಆಗಲಿದ್ದಾರೆ ಎಂದರು. ಆದರೆ ಅವರು ಆರೋಗ್ಯವನ್ನು ಚೆನ್ನಾಗಿಟ್ಟುಕೊಂಡು, ತಂದೆ ದೇವೇಗೌಡರ ಮಾತನ್ನು ಚಾಚೂತಪ್ಪದೆ ಕೇಳಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಮುನ್ನಡೆಯಬೇಕು. ಕಾಂಗ್ರೆಸ್-ಬಿಜೆಪಿಗಿಂತ ಕುಮಾರಸ್ವಾಮಿ ಅವರ ಮೇಲೆ ಉತ್ತರ ಕರ್ನಾಟಕದ ಜನರು ನಂಬಿಕೆ ಇಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು ಅವರು ಅದನ್ನು ಉಳಿಸಿಕೊಳ್ಳಬೇಕು ಎಂದೂ ಕಿವಿಮಾತು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…
ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…