News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಸ್ತೆ

ಫೆರಿಫೆರಲ್‌ ರಿಂಗ್‌ ರಸ್ತೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ

170
  • 21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
  • 73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್‌ ರಿಂಗ್‌ ರಸ್ತೆ
  • ಸುಮಾರು 38,000 ಮರಗಳ ಹನನ..!

ತುಮಕೂರು ರಸ್ತೆ, ಹೊಸೂರು ರಸ್ತೆ ಸಂಪರ್ಕಿಸುವ ಪಿಆರ್‌ಆರ್‌ಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ

ಯೋಜನೆ ಪೂರ್ಣಗೊಂಡ ನಂತರ, ಫೆರಿಫೆರಲ್‌ ರಿಂಗ್‌ ರಸ್ತೆಯು ಒಟ್ಟು 73 ಕಿ.ಮೀ ಉದ್ದ ಇರಲಿದ್ದು, ಇದು ಬೆಂಗಳೂರಿನ ಈಶಾನ್ಯ, ಪೂರ್ವ ಮತ್ತು ಆಗ್ನೇಯ ಭಾಗಗಳನ್ನು ಸಂಪರ್ಕಿಸಲಿದೆ. ನಗರದ ವಾಯುವ್ಯ, ಪಶ್ಚಿಮ ಮತ್ತು ನೈಋುತ್ಯ ಪ್ರದೇಶಗಳ ಮೂಲಕ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆಯನ್ನು ಸಂಪರ್ಕಿಸುವ ನೈಸ್‌ ರಸ್ತೆಯೊಂದಿಗೆ ಬೆಂಗಳೂರು ತನ್ನ ವ್ಯಾಪ್ತಿಯಲ್ಲಿ 116 ಕಿ. ಮೀ. ಉದ್ದದ ಬೈಪಾಸ್‌ ಹೊಂದಲಿದೆ.

ಬಹು ದಿನಗಳಿಂದ ಬಾಕಿ ಉಳಿದಿದ್ದ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆ ಸಂಪರ್ಕಿಸುವ 8 ಪಥದ ಪೆರಿಫೆರಲ್‌ ರಿಂಗ್‌ ರಸ್ತೆ (ಪಿಆರ್‌ಆರ್‌)ಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ ತೋರಿದೆ.

ಭೂ ಸ್ವಾಧೀನ ಮತ್ತು ಅನುದಾನ ಕೊರತೆಯ ಕಾರಣ ದಶಕಗಳಿಂದ ಈ ಯೋಜನೆ ನನೆಗುದಿಗೆ ಬಿದ್ದಿತ್ತು. ಅಗತ್ಯ ಭೂಮಿ ಸ್ವಾಧೀನಪಡಿಸಿಕೊಳ್ಳುವ ಮೂಲಕ ಪಿಆರ್‌ಆರ್‌ ಯೋಜನೆ ಆರಂಭಿಸುವಂತೆ ಸುಪ್ರೀಂ ಕೋರ್ಟ್‌ ಇತ್ತೀಚಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಸೂಚಿಸಿದೆ.

ಯೋಜನೆಗೆ ತಾಂತ್ರಿಕ ವಿವರಗಳು ಮತ್ತು ಟೆಂಡರ್‌ಗಳನ್ನು ಅಂತಿಮಗೊಳಿಸಲು ರಾಜ್ಯ ಸರಕಾರ ಇತ್ತೀಚಿಗೆ ಎರಡು ಸಭೆಗಳನ್ನು ನಡೆಸಿದೆ. ಯೋಜನಾ ವೆಚ್ಚ 21,091 ಕೋಟಿ ರೂ. ಆಗಿದ್ದು, ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ(ಪಿಪಿಪಿ) ರಸ್ತೆ ನಿರ್ಮಿಸಲು ಸರಕಾರ ಮತ್ತು ಬಿಡಿಎ ನಿರ್ಧರಿಸಿವೆ. ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಆಧಾರದ ಮೇಲೆ ಗುತ್ತಿಗೆದಾರರ ನಿರ್ಧಾರವಾಗುವ ನಿರೀಕ್ಷೆಯಿದೆ.

 

ಹಿಂದಿನ ಪ್ರಸ್ತಾವನೆಯಂತೆ ಯೋಜನೆಗಾಗಿ 33,000 ಮರಗಳನ್ನು ತೆರೆವುಗೊಳಿಸಬೇಕಿದೆ. ಯೋಜನೆಯ ವಿನ್ಯಾಸದಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ಹೆಚ್ಚುವರಿ ಭೂಮಿ ಸ್ವಾಧೀನದ ಕಾರಣ ಹೆಚ್ಚುವರಿ 5,000 ಮರಗಳನ್ನು ತೆರೆವುಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಹೊಸ ಪ್ರಸ್ತಾವನೆಯನ್ನು ಬಿಡಿಎ ಸಲ್ಲಿಸಿದೆ ಎಂದು ತಿಳಿಸಿದರು.

15 ವರ್ಷಗಳ ಹಿಂದೆ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದಾಗ ಯೋಜನಾ ವೆಚ್ಚ 3 ಸಾವಿರ ಕೋಟಿ ರೂ. ಆಗಿತ್ತು. ಆದರೆ ಸುದೀರ್ಘ ವಿಳಂಬದ ಕಾರಣ ಯೋಜನಾ ವೆಚ್ಚು ಏಳು ಪಟ್ಟು ಹೆಚ್ಚಿದೆ. ಇತ್ತೀಚಿನ ಅಂದಾಜಿನ ಪ್ರಕಾರ, ಭೂಸ್ವಾಧೀನಕ್ಕೆಂದೇ 15,475 ಕೋಟಿ ರೂ. ವೆಚ್ಚವಾಗಲಿದೆ ಹಾಗೂ ಸಂಪೂರ್ಣ ಯೋಜನಾ ವೆಚ್ಚ 21,091 ಕೋಟಿ ರೂ. ನಿಗದಿಪಡಿಸಲಾಗಿದೆ.

ಪಿಆರ್‌ಆರ್‌ ನಿರ್ಮಾಣಕ್ಕೆ ಐರೋಪ್ಯ ಕಂಪನಿಗಳು ಮತ್ತು ಇಸ್ರೇಲಿ ಸಂಸ್ಥೆ ಆಸಕ್ತಿ ತೋರಿವೆ. ಆದರೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • ಸರ್ಕಾರಿ ಯೋಜನೆಗಳು

    ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

  • ಉಪಯುಕ್ತ ಮಾಹಿತಿ

    ಅಕ್ಕಿಯಲ್ಲಿ ಹುಳ ಬಾರದಂತೆ ಮಾಡುವ ವಿಧಾನ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.

  • ದೇಶ-ವಿದೇಶ

    ಅಮೇರಿಕಾವನ್ನು ಧ್ವಂಸ ಮಾಡುವುದಾಗಿ, ಬಹಿರಂಗವಾಗಿ ಸವಾಲು ಹಾಕಿದ ಈ ಸರ್ವಾಧಿಕಾರಿ!

    ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…