News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಸ್ತೆ

ಫೆರಿಫೆರಲ್‌ ರಿಂಗ್‌ ರಸ್ತೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ

167
  • 21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
  • 73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್‌ ರಿಂಗ್‌ ರಸ್ತೆ
  • ಸುಮಾರು 38,000 ಮರಗಳ ಹನನ..!

ತುಮಕೂರು ರಸ್ತೆ, ಹೊಸೂರು ರಸ್ತೆ ಸಂಪರ್ಕಿಸುವ ಪಿಆರ್‌ಆರ್‌ಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ

ಯೋಜನೆ ಪೂರ್ಣಗೊಂಡ ನಂತರ, ಫೆರಿಫೆರಲ್‌ ರಿಂಗ್‌ ರಸ್ತೆಯು ಒಟ್ಟು 73 ಕಿ.ಮೀ ಉದ್ದ ಇರಲಿದ್ದು, ಇದು ಬೆಂಗಳೂರಿನ ಈಶಾನ್ಯ, ಪೂರ್ವ ಮತ್ತು ಆಗ್ನೇಯ ಭಾಗಗಳನ್ನು ಸಂಪರ್ಕಿಸಲಿದೆ. ನಗರದ ವಾಯುವ್ಯ, ಪಶ್ಚಿಮ ಮತ್ತು ನೈಋುತ್ಯ ಪ್ರದೇಶಗಳ ಮೂಲಕ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆಯನ್ನು ಸಂಪರ್ಕಿಸುವ ನೈಸ್‌ ರಸ್ತೆಯೊಂದಿಗೆ ಬೆಂಗಳೂರು ತನ್ನ ವ್ಯಾಪ್ತಿಯಲ್ಲಿ 116 ಕಿ. ಮೀ. ಉದ್ದದ ಬೈಪಾಸ್‌ ಹೊಂದಲಿದೆ.

ಬಹು ದಿನಗಳಿಂದ ಬಾಕಿ ಉಳಿದಿದ್ದ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆ ಸಂಪರ್ಕಿಸುವ 8 ಪಥದ ಪೆರಿಫೆರಲ್‌ ರಿಂಗ್‌ ರಸ್ತೆ (ಪಿಆರ್‌ಆರ್‌)ಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ ತೋರಿದೆ.

ಭೂ ಸ್ವಾಧೀನ ಮತ್ತು ಅನುದಾನ ಕೊರತೆಯ ಕಾರಣ ದಶಕಗಳಿಂದ ಈ ಯೋಜನೆ ನನೆಗುದಿಗೆ ಬಿದ್ದಿತ್ತು. ಅಗತ್ಯ ಭೂಮಿ ಸ್ವಾಧೀನಪಡಿಸಿಕೊಳ್ಳುವ ಮೂಲಕ ಪಿಆರ್‌ಆರ್‌ ಯೋಜನೆ ಆರಂಭಿಸುವಂತೆ ಸುಪ್ರೀಂ ಕೋರ್ಟ್‌ ಇತ್ತೀಚಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಸೂಚಿಸಿದೆ.

ಯೋಜನೆಗೆ ತಾಂತ್ರಿಕ ವಿವರಗಳು ಮತ್ತು ಟೆಂಡರ್‌ಗಳನ್ನು ಅಂತಿಮಗೊಳಿಸಲು ರಾಜ್ಯ ಸರಕಾರ ಇತ್ತೀಚಿಗೆ ಎರಡು ಸಭೆಗಳನ್ನು ನಡೆಸಿದೆ. ಯೋಜನಾ ವೆಚ್ಚ 21,091 ಕೋಟಿ ರೂ. ಆಗಿದ್ದು, ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ(ಪಿಪಿಪಿ) ರಸ್ತೆ ನಿರ್ಮಿಸಲು ಸರಕಾರ ಮತ್ತು ಬಿಡಿಎ ನಿರ್ಧರಿಸಿವೆ. ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಆಧಾರದ ಮೇಲೆ ಗುತ್ತಿಗೆದಾರರ ನಿರ್ಧಾರವಾಗುವ ನಿರೀಕ್ಷೆಯಿದೆ.

 

ಹಿಂದಿನ ಪ್ರಸ್ತಾವನೆಯಂತೆ ಯೋಜನೆಗಾಗಿ 33,000 ಮರಗಳನ್ನು ತೆರೆವುಗೊಳಿಸಬೇಕಿದೆ. ಯೋಜನೆಯ ವಿನ್ಯಾಸದಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ಹೆಚ್ಚುವರಿ ಭೂಮಿ ಸ್ವಾಧೀನದ ಕಾರಣ ಹೆಚ್ಚುವರಿ 5,000 ಮರಗಳನ್ನು ತೆರೆವುಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಹೊಸ ಪ್ರಸ್ತಾವನೆಯನ್ನು ಬಿಡಿಎ ಸಲ್ಲಿಸಿದೆ ಎಂದು ತಿಳಿಸಿದರು.

15 ವರ್ಷಗಳ ಹಿಂದೆ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದಾಗ ಯೋಜನಾ ವೆಚ್ಚ 3 ಸಾವಿರ ಕೋಟಿ ರೂ. ಆಗಿತ್ತು. ಆದರೆ ಸುದೀರ್ಘ ವಿಳಂಬದ ಕಾರಣ ಯೋಜನಾ ವೆಚ್ಚು ಏಳು ಪಟ್ಟು ಹೆಚ್ಚಿದೆ. ಇತ್ತೀಚಿನ ಅಂದಾಜಿನ ಪ್ರಕಾರ, ಭೂಸ್ವಾಧೀನಕ್ಕೆಂದೇ 15,475 ಕೋಟಿ ರೂ. ವೆಚ್ಚವಾಗಲಿದೆ ಹಾಗೂ ಸಂಪೂರ್ಣ ಯೋಜನಾ ವೆಚ್ಚ 21,091 ಕೋಟಿ ರೂ. ನಿಗದಿಪಡಿಸಲಾಗಿದೆ.

ಪಿಆರ್‌ಆರ್‌ ನಿರ್ಮಾಣಕ್ಕೆ ಐರೋಪ್ಯ ಕಂಪನಿಗಳು ಮತ್ತು ಇಸ್ರೇಲಿ ಸಂಸ್ಥೆ ಆಸಕ್ತಿ ತೋರಿವೆ. ಆದರೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….

  • ರಾಜಕೀಯ

    ಮಿತ್ರ ಪಕ್ಷ ಕಾಂಗ್ರೆಸ್ ತೊರೆದು ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ?

    ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…

  • ಸುದ್ದಿ

    ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

    ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…