ಆಧ್ಯಾತ್ಮ

‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

1547

ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

ಅಷ್ಟಲ್ಲದೇ ಉರಿಯೂತಕ್ಕೆ ಸಂಬಂಧಿಸಿದ ಯಾವ್ದೇ ತರದ ತೊಂದ್ರೆ ಇದ್ರೆ ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಕಮ್ಮಿ ಮಾಡ್ಸತ್ತೆ. ಪ್ರೋಟೀನ್ ಮತ್ತೆ ನಾರಿನ ಅಂಶ ಸಕ್ಕತ್ತಾಗಿ ಇರೋದ್ರಿಂದ ಮಧುಮೇಹ ಕಾಯಿಲೆಯನ್ನ ಕಮ್ಮಿ ಮಾಡ್ಸತ್ತೆ.

ಇದೇ ತರ ಇನ್ನೂ 09 ಉಪಯೋಗಗಳಿದೆ

1. ಇದ್ರಲ್ಲಿರೋ ಪೌಷ್ಟಿಕಾಂಶಗಳು ಮಂಡಿ ನೋವು ಕಮ್ಮಿಮಾಡತ್ತೆ:-

ಬಟಾಣಿಗಳಲ್ಲಿ ಬೇರೆ ಬೇರೆ ತರದ ಬಟಾಣಿಗಳಿವೆ. ಫ್ಲಾವನೊಯ್ಡ್ ಗುಂಪಿನ ಬಟಾಣಿಗಳಲ್ಲಿ ಕ್ಯಟಾಚಿನ್ ಮತ್ತೆ ಎಪಿಕ್ಯಟಾಚಿನ್ ಅನ್ನೋ ಆಂಟಿ ಆಕ್ಸಿಡೆಂಟ್ ಇದೆಯಂತೆ.

ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಮಿನ್ರಲ್, ಜಿಂಕ್, ಒಮೆಗಾ 3 ಫ್ಯಾಟಿ ಆಸಿಡ್, ಇದೆಲ್ಲದ್ರ ಭಂಡಾರಾನೇ ಬಟಾಣಿಗಳಲ್ಲಿ ಅಡ್ಗಿದೆಯಂತೆ. ಇದೆಲ್ಲದ್ರ ಸಹಾಯದಿಂದ ಮಧುಮೇಹ , ಹೃದಯದ ತೊಂದ್ರೆ , ಮಂಡಿ ನೋವ್ಗಳನ್ನ ಕಮ್ಮಿ ಮಾಡ್ತದಂತೆ.

2. ರಕ್ತದಲ್ಲಿರೋ ಸಕ್ಕರೆ ಪ್ರಮಾಣ ಕಮ್ಮಿ ಮಾಡತ್ತೆ:-

ರಕ್ತದಲ್ಲಿರೋ ಸಕ್ಕರೆ ಪ್ರಮಾಣವನ್ನ ಕಮ್ಮಿ ಮಾಡ್ಸಕ್ಕೆ ಬಟಾಣಿ ಒಂದೊಳ್ಳೆ ಆಹಾರ ಅಂತ ಕೆಲ್ವು ಆಹಾರ ತಜ್ಞರು ಹೇಳಿದ್ದನ್ನ ಕೇಳಿದ್ ನೆನಪಿದೆ. ಆದ್ರೆ ಹೇಗ್ ಕಮ್ಮಿ ಮಾಡ್ಸತ್ತೆ ಅಂತ ಗೊತ್ತಿರ್ಲಿಲ್ಲ.

ಇವಾಗ ಗೊತ್ತಾಗಿದ್ ಹೊಸ್ ವಿಷ್ಯ ಎನಂದ್ರೆ ಇದ್ರಲ್ಲಿರೋ ಪ್ರೋಟೀನ್ ಮತ್ತೆ ನಾರಿನ ಅಂಶ ಪಿಷ್ಟವನ್ನ ತುಂಡ್ಮಾಡಿ ಕಾರ್ಬೋಹೈಡ್ರೇಟ್ಸಗಳನ್ನ ಜೀರ್ಣಾಂಗವ್ಯೂಹದ ಕಡೆಗೆ ತಳ್ಳತ್ತೆ. ಈ ಕಾರ್ಬೋಹೈಡ್ರೇಟ್ಸಗಳು ರಕ್ತದಲ್ಲಿರೋ ಸಕ್ಕರೆಯ ಪ್ರಮಾಣಾನ ಕಡ್ಮೆ ಮಾಡ್ಸತ್ತೆ.

3. ಇದ್ರಲ್ಲಿರೋ ವಿಟಮಿನ್ ಬಿ ಅಂಶ ಹೃದಯ ಚನ್ನಾಗಿ ಕೆಲಸ ಮಾಡೋ ಹಾಗೆ ನೋಡ್ಕೊಳತ್ತೆ:-

ಹಾಳು ಮೂಳನ್ನೆಲ್ಲಾ ತಿಂದು ಹೊಟ್ಟೆ ಬರ್ಸಕೊಂಡು ಆಮೇಲೆ ನಿಧಾನವಾಗಿ ಬೇಡ್ದೇ ಇರೋ ಕೊಬ್ಬನ್ನ ಹೆಚ್ಸಿಕೊಂಡ್ರೆ ಹೃದಯದ ಕಾಯ್ಲೆ ಸಾಮಾನ್ಯ. ಬಟಾಣಿಯಲ್ಲಿರೋ ನಿಯಾಸಿನ್ ಅನ್ನೋ ಅಂಶ ಈ ಕೆಟ್ಟ್ ಕೊಬ್ಬನ್ನ ಕರ್ಗಸತ್ತೆ. ಇದ್ರ ಜೊತೆಗೆ ನಾನು ಸಾಥ್ ಕೊಡ್ತೀನಿ ಅಂತ ಒಮೆಗಾ 3 ಫ್ಯಾಟಿ ಆಸಿಡ್ ಬೇರೆ ಇದೆ. ಕೆಟ್ಟ್ ಕೊಬ್ಬಿನ ಜೊತೆ ಹೋಮೋ ಸಿಸ್ಟಿನ್ ಅನ್ನೋದ್ಬೇರೆ ಕೂಡ್ಕಂಡು ತುಂಬಾನೇ ತೊಂದ್ರೆ ಕೊಡತ್ತೆ.

4. ಆಂಟಿ ಆಕ್ಸಿಡೆಂಟ್ಸ್ ಸಹಾಯದಿಂದ ಹೊಟ್ಟೆ ಕ್ಯಾನ್ಸರ್ ಬರೋದನ್ನ ತಡೆಗಟ್ಟತ್ತೆ:-

ಒತ್ತಡ ಮತ್ತು ತಲೆಬಿಸಿ ಜಾಸ್ತಿ ಮಾಡ್ಕೊಳೋದ್ರಿಂದ ಕ್ಯಾನ್ಸರ್ ಬೆಳೀಬೋದು. ನಿಮ್ ದೇಹದಲ್ಲಿ ಆಂಟಿ ಆಕ್ಸಿಡೆಂಟ್ ಕಮ್ಮಿ ಇದ್ರೆ ಈ ಸಮಸ್ಯೆನಾ ಪರಿಹರ್ಸಕ್ಕೆ ಆಗಲ್ಲ.

ಆಗ್ಲೇ ಹೇಳ್ದಾಗೆ ಬಟಾಣಿ ಆಂಟಿ ಆಕ್ಸಿಡೆಂಟ್ಗಳ ಭಂಡಾರಾವೇ ಆಗಿರೋದ್ರಿಂದ ಹೊಟ್ಟೆ ಕ್ಯಾನ್ಸರ್ ಇಂದ ನಮ್ಮನ್ನ ಕಾಪಾಡತ್ತೆ.

5. ಬಟಾಣೀಲಿ ಕ್ಯಾಲೋರಿ ಕಮ್ಮಿ ಇರೋದ್ರಿಂದ ತೂಕ ಇಳಿಸ್ಕೊಳಕ್ಕೆ ಸಹಾಯ ಮಾಡತ್ತೆ:-

ಒಳ್ಳೆ ಪೋಷಕಾಂಶ ಮತ್ತೆ ಕಮ್ಮಿ ಕ್ಯಾಲೋರಿಯನ್ನ ಹೊಂದಿರೋ ಬಟಾಣಿ ನಿಮ್ ತೂಕ ಇಳ್ಸೋದ್ರಲ್ಲಿ ಅನುಮಾನಾನೇ ಇಲ್ಲ. ಒಂದು ಕಪ್ ಬಟಾಣಿಯಲ್ಲಿ ಸುಮಾರು 118 ಕ್ಯಾಲೋರಿಗಳು ಮಾತ್ರ ಇರತ್ತೆ. ಹಾಗೇ ನೀವ್ ಬಟಾಣಿ ತಿಂದಾದ್ಮೇಲೆ ಇನ್ನೇನ್ ತಿನ್ನೋಕೂ ಮನ್ಸ್ ಬರಲ್ಲ. ಯಾಕಂದ್ರೆ ನಿಮ್ ಹೊಟ್ಟೆ ಅದಾಗ್ಲೇ ತುಂಬಿರತ್ತೆ. ಬಟಾಣಿಗೆ ಸ್ವಲ್ಪ ಮಟ್ಟಿಗೆ ಉಪ್ಪನ್ನ ಹಾಕ್ಬಿಟ್ಟು ತಿಂದ್ರೆ ಸಕ್ಕತ್ತಾಗ್ ಶಕ್ತಿನೂ ಸಿಗತ್ತೆ.

6. ಇದ್ರಲ್ಲಿರೋ ನಾರಿನಂಶ ಹೊಟ್ಟೆ ಕಟ್ಕೊಳ್ದೆ ಇರೋ ಹಾಗೆ ನೋಡ್ಕೊಳತ್ತೆ:-

ಮಲಬದ್ದತೆ ಇದ್ಯಲ್ಲಾ… ಅದು ಎಲ್ಲಾ ಕಾಯ್ಲೆಗೂ ಇಲ್ ಜಾಗ ಇದೆ ಬಾರಪ್ಪಾ ಅನ್ನತ್ತೆ. ಬಟಾಣಿಯಲ್ಲಿ ಹೆಚ್ಚಿನ ಪ್ರಮಾಣದ ನಾರಿನಂಶ ಇರೋದ್ರಿಂದ ಎಷ್ಟೋ ದಿನ್ಗಳಿಂದ ಕೂಡ್ಕಂಡಿರೋ ತ್ಯಾಜ್ಯಗಳನ್ನ ಹೊರ್ಗಹಾಕ್ಲಿಕ್ಕೆ ಸಹಾಯ ಮಾಡತ್ತೆ. ಹಾಗೇ ಬಟಾಣಿ ಜೀರ್ಣಾಂಗ ವ್ಯವಸ್ಥೆಗೆ ತುಂಬಾನೇ ಸಾಥ್ ಕೊಡೋದೂ ಇದಕ್ಕೆ ಕಾರಣ ಇರ್ಬೋದು.

7. ಕೂದಲಿನ ಅಂದ ಕಾಪಾಡೋಕೆ ಇದ್ರಲ್ಲಿರೋ ವಿಟಮಿನ್ ಬಿ ಸಹಾಯ ಮಾಡತ್ತೆ:-

ಬಟಾಣಿಯಲ್ಲಿರೋ ವಿಟಮಿನ್ ಬಿ , ಫೋಲೆಟ್ , ವಿಟಮಿನ್ ಬಿ 6 ಕೂದಲು ಬೇರಿನಿಂದ ಗಟ್ಟಿಯಾಗೋ ಹಾಗೆ ನೋಡ್ಕೊಳತ್ತೆ. ವಿಟಮಿನ್ ಸಿ ಅನ್ನೋದು ಕೂದ್ಲು ಉದ್ರದೇ ಇರೋ ಹಾಗೆ ಕಾಪಾಡತ್ತೆ.

8.ಆಗಾಗ ಹುಷಾರ್ ತಪ್ಪಿ ಬೀಳದೆ ಇರೋ ಹಾಗೆ ನೋಡ್ಕೊಳತ್ತೆ:-

ನಮ್ ದೇಹದಲ್ಲಿರೋ ವ್ಯಾಧಿ ಕ್ಷಮತ್ವ ನಿರ್ಧಾರ ಆಗೋದೇ ವಿಟಮಿನ್ ಎ ಮೂಲಕ. ಒಂದು ತಟ್ಟೇ ಬಟಾಣಿಯಲ್ಲಿ ಸುಮಾರು 22 % ವಿಟಮಿನ್ ಎ ನಮ್ ದೇಹಕ್ಕೆ ಸಿಗತ್ತಂತೆ. ಅದ್ಕೊಸ್ಕರ ಇಮ್ಯುನಿಟಿ ಇಲ್ಲಾಂತ ಕೊರಗ್ಬೇಡಿ. ಬಟಾಣಿ ತಿನ್ನಿ. ಉಸಿರಾಟದ ತೊಂದ್ರೆ ಆಗ್ದೆ ಇರಕ್ಕೂ ವಿಟಮಿನ್ ಎ ಬೇಕಾಗತ್ತೆ.

9. ಚರ್ಮ ಹೊಳಿಯೋ ಹಾಗೆ ಮಾಡಿ ಚಿಕ್ಕೋರ ತರ ಕಾಣೋಹಾಗೆ ಮಾಡತ್ತೆ:-

ನಮ್ ದೇಹದಲ್ಲಿ ಫ್ರೀ ರಾಡಿಕಲ್ ಅನ್ನೋ ಅಂಶ ಇಲ್ದೇ ಹೋಗಿದ್ರೆ ಬಿಸ್ಲು , ಚಳಿ , ಮಳೆಯಂತ ನಮ್ ಚರ್ಮ ಬೇಗನೇ ಸುಕ್ಕು ಗಟ್ತಿತ್ತು. ಬಟಾಣಿಯಲ್ಲಿರೋ ಆಂಟಿ ಆಕ್ಸಿಡೆಂಟ್ ಈ ಫ್ರೀ ರಾಡಿಕಲ್ಗಳ ಆಯಸ್ಸು ಮತ್ತು ಅದ್ರ ಶಕ್ತಿಯನ್ನ ಜಾಸ್ತಿ ಮಾಡ್ಸತ್ತೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಊಟವಾದ ತಕ್ಷಣ ನೀರನ್ನು ಕುಡಿಯಬಾರದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

  • ಆರೋಗ್ಯ

    ಹೆಚ್ಚಿನವರಿಗೆ ಕಣ್ಣಿನ ಸಮಸ್ಯೆ ಕಾಡುತ್ತಿದಿಯಾ..?ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ ..

    ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.

  • ಸುದ್ದಿ

    ಕೋಟಿ ಕೋಟಿ ಬೆಲೆಬಾಳುವ ಕಾರುಗಳ ಯಜಮಾನ ‘ಲೂನಾ’ ದಲ್ಲಿ ಪಯಣ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್‍ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….

  • ಸುದ್ದಿ

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…