ಆಧ್ಯಾತ್ಮ

‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

1559

ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

ಅಷ್ಟಲ್ಲದೇ ಉರಿಯೂತಕ್ಕೆ ಸಂಬಂಧಿಸಿದ ಯಾವ್ದೇ ತರದ ತೊಂದ್ರೆ ಇದ್ರೆ ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಕಮ್ಮಿ ಮಾಡ್ಸತ್ತೆ. ಪ್ರೋಟೀನ್ ಮತ್ತೆ ನಾರಿನ ಅಂಶ ಸಕ್ಕತ್ತಾಗಿ ಇರೋದ್ರಿಂದ ಮಧುಮೇಹ ಕಾಯಿಲೆಯನ್ನ ಕಮ್ಮಿ ಮಾಡ್ಸತ್ತೆ.

ಇದೇ ತರ ಇನ್ನೂ 09 ಉಪಯೋಗಗಳಿದೆ

1. ಇದ್ರಲ್ಲಿರೋ ಪೌಷ್ಟಿಕಾಂಶಗಳು ಮಂಡಿ ನೋವು ಕಮ್ಮಿಮಾಡತ್ತೆ:-

ಬಟಾಣಿಗಳಲ್ಲಿ ಬೇರೆ ಬೇರೆ ತರದ ಬಟಾಣಿಗಳಿವೆ. ಫ್ಲಾವನೊಯ್ಡ್ ಗುಂಪಿನ ಬಟಾಣಿಗಳಲ್ಲಿ ಕ್ಯಟಾಚಿನ್ ಮತ್ತೆ ಎಪಿಕ್ಯಟಾಚಿನ್ ಅನ್ನೋ ಆಂಟಿ ಆಕ್ಸಿಡೆಂಟ್ ಇದೆಯಂತೆ.

ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಮಿನ್ರಲ್, ಜಿಂಕ್, ಒಮೆಗಾ 3 ಫ್ಯಾಟಿ ಆಸಿಡ್, ಇದೆಲ್ಲದ್ರ ಭಂಡಾರಾನೇ ಬಟಾಣಿಗಳಲ್ಲಿ ಅಡ್ಗಿದೆಯಂತೆ. ಇದೆಲ್ಲದ್ರ ಸಹಾಯದಿಂದ ಮಧುಮೇಹ , ಹೃದಯದ ತೊಂದ್ರೆ , ಮಂಡಿ ನೋವ್ಗಳನ್ನ ಕಮ್ಮಿ ಮಾಡ್ತದಂತೆ.

2. ರಕ್ತದಲ್ಲಿರೋ ಸಕ್ಕರೆ ಪ್ರಮಾಣ ಕಮ್ಮಿ ಮಾಡತ್ತೆ:-

ರಕ್ತದಲ್ಲಿರೋ ಸಕ್ಕರೆ ಪ್ರಮಾಣವನ್ನ ಕಮ್ಮಿ ಮಾಡ್ಸಕ್ಕೆ ಬಟಾಣಿ ಒಂದೊಳ್ಳೆ ಆಹಾರ ಅಂತ ಕೆಲ್ವು ಆಹಾರ ತಜ್ಞರು ಹೇಳಿದ್ದನ್ನ ಕೇಳಿದ್ ನೆನಪಿದೆ. ಆದ್ರೆ ಹೇಗ್ ಕಮ್ಮಿ ಮಾಡ್ಸತ್ತೆ ಅಂತ ಗೊತ್ತಿರ್ಲಿಲ್ಲ.

ಇವಾಗ ಗೊತ್ತಾಗಿದ್ ಹೊಸ್ ವಿಷ್ಯ ಎನಂದ್ರೆ ಇದ್ರಲ್ಲಿರೋ ಪ್ರೋಟೀನ್ ಮತ್ತೆ ನಾರಿನ ಅಂಶ ಪಿಷ್ಟವನ್ನ ತುಂಡ್ಮಾಡಿ ಕಾರ್ಬೋಹೈಡ್ರೇಟ್ಸಗಳನ್ನ ಜೀರ್ಣಾಂಗವ್ಯೂಹದ ಕಡೆಗೆ ತಳ್ಳತ್ತೆ. ಈ ಕಾರ್ಬೋಹೈಡ್ರೇಟ್ಸಗಳು ರಕ್ತದಲ್ಲಿರೋ ಸಕ್ಕರೆಯ ಪ್ರಮಾಣಾನ ಕಡ್ಮೆ ಮಾಡ್ಸತ್ತೆ.

3. ಇದ್ರಲ್ಲಿರೋ ವಿಟಮಿನ್ ಬಿ ಅಂಶ ಹೃದಯ ಚನ್ನಾಗಿ ಕೆಲಸ ಮಾಡೋ ಹಾಗೆ ನೋಡ್ಕೊಳತ್ತೆ:-

ಹಾಳು ಮೂಳನ್ನೆಲ್ಲಾ ತಿಂದು ಹೊಟ್ಟೆ ಬರ್ಸಕೊಂಡು ಆಮೇಲೆ ನಿಧಾನವಾಗಿ ಬೇಡ್ದೇ ಇರೋ ಕೊಬ್ಬನ್ನ ಹೆಚ್ಸಿಕೊಂಡ್ರೆ ಹೃದಯದ ಕಾಯ್ಲೆ ಸಾಮಾನ್ಯ. ಬಟಾಣಿಯಲ್ಲಿರೋ ನಿಯಾಸಿನ್ ಅನ್ನೋ ಅಂಶ ಈ ಕೆಟ್ಟ್ ಕೊಬ್ಬನ್ನ ಕರ್ಗಸತ್ತೆ. ಇದ್ರ ಜೊತೆಗೆ ನಾನು ಸಾಥ್ ಕೊಡ್ತೀನಿ ಅಂತ ಒಮೆಗಾ 3 ಫ್ಯಾಟಿ ಆಸಿಡ್ ಬೇರೆ ಇದೆ. ಕೆಟ್ಟ್ ಕೊಬ್ಬಿನ ಜೊತೆ ಹೋಮೋ ಸಿಸ್ಟಿನ್ ಅನ್ನೋದ್ಬೇರೆ ಕೂಡ್ಕಂಡು ತುಂಬಾನೇ ತೊಂದ್ರೆ ಕೊಡತ್ತೆ.

4. ಆಂಟಿ ಆಕ್ಸಿಡೆಂಟ್ಸ್ ಸಹಾಯದಿಂದ ಹೊಟ್ಟೆ ಕ್ಯಾನ್ಸರ್ ಬರೋದನ್ನ ತಡೆಗಟ್ಟತ್ತೆ:-

ಒತ್ತಡ ಮತ್ತು ತಲೆಬಿಸಿ ಜಾಸ್ತಿ ಮಾಡ್ಕೊಳೋದ್ರಿಂದ ಕ್ಯಾನ್ಸರ್ ಬೆಳೀಬೋದು. ನಿಮ್ ದೇಹದಲ್ಲಿ ಆಂಟಿ ಆಕ್ಸಿಡೆಂಟ್ ಕಮ್ಮಿ ಇದ್ರೆ ಈ ಸಮಸ್ಯೆನಾ ಪರಿಹರ್ಸಕ್ಕೆ ಆಗಲ್ಲ.

ಆಗ್ಲೇ ಹೇಳ್ದಾಗೆ ಬಟಾಣಿ ಆಂಟಿ ಆಕ್ಸಿಡೆಂಟ್ಗಳ ಭಂಡಾರಾವೇ ಆಗಿರೋದ್ರಿಂದ ಹೊಟ್ಟೆ ಕ್ಯಾನ್ಸರ್ ಇಂದ ನಮ್ಮನ್ನ ಕಾಪಾಡತ್ತೆ.

5. ಬಟಾಣೀಲಿ ಕ್ಯಾಲೋರಿ ಕಮ್ಮಿ ಇರೋದ್ರಿಂದ ತೂಕ ಇಳಿಸ್ಕೊಳಕ್ಕೆ ಸಹಾಯ ಮಾಡತ್ತೆ:-

ಒಳ್ಳೆ ಪೋಷಕಾಂಶ ಮತ್ತೆ ಕಮ್ಮಿ ಕ್ಯಾಲೋರಿಯನ್ನ ಹೊಂದಿರೋ ಬಟಾಣಿ ನಿಮ್ ತೂಕ ಇಳ್ಸೋದ್ರಲ್ಲಿ ಅನುಮಾನಾನೇ ಇಲ್ಲ. ಒಂದು ಕಪ್ ಬಟಾಣಿಯಲ್ಲಿ ಸುಮಾರು 118 ಕ್ಯಾಲೋರಿಗಳು ಮಾತ್ರ ಇರತ್ತೆ. ಹಾಗೇ ನೀವ್ ಬಟಾಣಿ ತಿಂದಾದ್ಮೇಲೆ ಇನ್ನೇನ್ ತಿನ್ನೋಕೂ ಮನ್ಸ್ ಬರಲ್ಲ. ಯಾಕಂದ್ರೆ ನಿಮ್ ಹೊಟ್ಟೆ ಅದಾಗ್ಲೇ ತುಂಬಿರತ್ತೆ. ಬಟಾಣಿಗೆ ಸ್ವಲ್ಪ ಮಟ್ಟಿಗೆ ಉಪ್ಪನ್ನ ಹಾಕ್ಬಿಟ್ಟು ತಿಂದ್ರೆ ಸಕ್ಕತ್ತಾಗ್ ಶಕ್ತಿನೂ ಸಿಗತ್ತೆ.

6. ಇದ್ರಲ್ಲಿರೋ ನಾರಿನಂಶ ಹೊಟ್ಟೆ ಕಟ್ಕೊಳ್ದೆ ಇರೋ ಹಾಗೆ ನೋಡ್ಕೊಳತ್ತೆ:-

ಮಲಬದ್ದತೆ ಇದ್ಯಲ್ಲಾ… ಅದು ಎಲ್ಲಾ ಕಾಯ್ಲೆಗೂ ಇಲ್ ಜಾಗ ಇದೆ ಬಾರಪ್ಪಾ ಅನ್ನತ್ತೆ. ಬಟಾಣಿಯಲ್ಲಿ ಹೆಚ್ಚಿನ ಪ್ರಮಾಣದ ನಾರಿನಂಶ ಇರೋದ್ರಿಂದ ಎಷ್ಟೋ ದಿನ್ಗಳಿಂದ ಕೂಡ್ಕಂಡಿರೋ ತ್ಯಾಜ್ಯಗಳನ್ನ ಹೊರ್ಗಹಾಕ್ಲಿಕ್ಕೆ ಸಹಾಯ ಮಾಡತ್ತೆ. ಹಾಗೇ ಬಟಾಣಿ ಜೀರ್ಣಾಂಗ ವ್ಯವಸ್ಥೆಗೆ ತುಂಬಾನೇ ಸಾಥ್ ಕೊಡೋದೂ ಇದಕ್ಕೆ ಕಾರಣ ಇರ್ಬೋದು.

7. ಕೂದಲಿನ ಅಂದ ಕಾಪಾಡೋಕೆ ಇದ್ರಲ್ಲಿರೋ ವಿಟಮಿನ್ ಬಿ ಸಹಾಯ ಮಾಡತ್ತೆ:-

ಬಟಾಣಿಯಲ್ಲಿರೋ ವಿಟಮಿನ್ ಬಿ , ಫೋಲೆಟ್ , ವಿಟಮಿನ್ ಬಿ 6 ಕೂದಲು ಬೇರಿನಿಂದ ಗಟ್ಟಿಯಾಗೋ ಹಾಗೆ ನೋಡ್ಕೊಳತ್ತೆ. ವಿಟಮಿನ್ ಸಿ ಅನ್ನೋದು ಕೂದ್ಲು ಉದ್ರದೇ ಇರೋ ಹಾಗೆ ಕಾಪಾಡತ್ತೆ.

8.ಆಗಾಗ ಹುಷಾರ್ ತಪ್ಪಿ ಬೀಳದೆ ಇರೋ ಹಾಗೆ ನೋಡ್ಕೊಳತ್ತೆ:-

ನಮ್ ದೇಹದಲ್ಲಿರೋ ವ್ಯಾಧಿ ಕ್ಷಮತ್ವ ನಿರ್ಧಾರ ಆಗೋದೇ ವಿಟಮಿನ್ ಎ ಮೂಲಕ. ಒಂದು ತಟ್ಟೇ ಬಟಾಣಿಯಲ್ಲಿ ಸುಮಾರು 22 % ವಿಟಮಿನ್ ಎ ನಮ್ ದೇಹಕ್ಕೆ ಸಿಗತ್ತಂತೆ. ಅದ್ಕೊಸ್ಕರ ಇಮ್ಯುನಿಟಿ ಇಲ್ಲಾಂತ ಕೊರಗ್ಬೇಡಿ. ಬಟಾಣಿ ತಿನ್ನಿ. ಉಸಿರಾಟದ ತೊಂದ್ರೆ ಆಗ್ದೆ ಇರಕ್ಕೂ ವಿಟಮಿನ್ ಎ ಬೇಕಾಗತ್ತೆ.

9. ಚರ್ಮ ಹೊಳಿಯೋ ಹಾಗೆ ಮಾಡಿ ಚಿಕ್ಕೋರ ತರ ಕಾಣೋಹಾಗೆ ಮಾಡತ್ತೆ:-

ನಮ್ ದೇಹದಲ್ಲಿ ಫ್ರೀ ರಾಡಿಕಲ್ ಅನ್ನೋ ಅಂಶ ಇಲ್ದೇ ಹೋಗಿದ್ರೆ ಬಿಸ್ಲು , ಚಳಿ , ಮಳೆಯಂತ ನಮ್ ಚರ್ಮ ಬೇಗನೇ ಸುಕ್ಕು ಗಟ್ತಿತ್ತು. ಬಟಾಣಿಯಲ್ಲಿರೋ ಆಂಟಿ ಆಕ್ಸಿಡೆಂಟ್ ಈ ಫ್ರೀ ರಾಡಿಕಲ್ಗಳ ಆಯಸ್ಸು ಮತ್ತು ಅದ್ರ ಶಕ್ತಿಯನ್ನ ಜಾಸ್ತಿ ಮಾಡ್ಸತ್ತೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

    ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.

  • ಸುದ್ದಿ

    ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸವಾಲೆಸೆದ ಸ್ಯಾಂಡಲ್​ವುಡ್​ ನಟಿ..!

    ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್‌ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ.  ಸಂಚಾರ ನಿಯಮ ಉಲ್ಲಂಘಿಸಿದ ಬೈಕ್‌ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…

  • ಸುದ್ದಿ

    ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

    ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ….

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…

  • ಸ್ಪೂರ್ತಿ

    ತಿಂಗಳಿಗೆ 35 ಸಾವಿರ ದುಡಿಯುತ್ತಿರುವ 3 ನೇ ತರಗತಿ ಓದಿರುವ ಹುಡುಗ, ಹೇಗೆ ಗೊತ್ತಾ.

    ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…