ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಪಿಂಗ್ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.
1.ಗಡಿಬಿಡಿಯಲ್ಲಿ ಶಾಪಿಂಗ್ ಖಂಡಿತ ಮಾಡ್ಬೇಡಿ:-
ಅಯ್ಯೋ ಟೈಂ ಇಲ್ಲ.. ಬೇಗ ಹೋಗ್ಬೇಕು ಅಂದುಕೊಂಡು ಎಂದೂ ಶಾಪಿಂಗ್ ಮಾಡ್ಬೇಡಿ. ಇಂತ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಡಿಸೈನ್ಗಳನ್ನ ನೋಡದೆ ಮೊದಲು ಅಂಗಡಿಗೆ ಹೋದಾಗ ಯಾವುದು ಕಣ್ಣಿಗೆ ಚೆನ್ನಾಗಿ ಕಾಣುತ್ತೋ ಅದನ್ನೇ ಕೊಂಡುಕೊಳ್ತೀವಿ.
ಆದ್ರೆ ಇನ್ನೂ ಸ್ವಲ್ಪ ಸಮಯ ಹುಡುಕಿದ್ರೆ ಅದಕ್ಕಿಂತ ಚೆಂದದ ಡಿಸೈನ್ವುಳ್ಳ ಬಟ್ಟೆ ಸಿಗಬಹುದು.
2.ಟ್ರಯಲ್ ಮಾಡದೆ ಪರ್ಚೇಸ್ ಮಾಡ್ಬೇಡಿ:-
ಕಣ್ಣಿಗೆ ಚೆಂದವಾಗಿ ಕಂಡ ಬಟ್ಟೆಯನ್ನ ಧರಿಸಿ ನೋಡಿದಾಗ ಅದು ನಿಮಗೆ ಸೂಟ್ ಆಗದಿರಬಹುದು. ಅಥವಾ ಫಿಟಿಂಗ್ನಲ್ಲಿ ವ್ಯತ್ಯಾಸವಿರುವ ಸಾಧ್ಯತೆಯೂ ಇರುತ್ತದೆ.
ಹೀಗಾಗಿ ಯಾವಾಗ್ಲೂ ಟ್ರಯಲ್ ನೋಡಿಯೇ ಬಟ್ಟೆ ಖರೀದಿ ಮಾಡಿ. ಅದರಲ್ಲೂ ವಿವಿಧ ಬ್ರ್ಯಾಂಡ್ಗಳ ಜೀನ್ಸ್ ಮತ್ತು ಟಾಪ್ಗಳ ಸೈಜ್ನಲ್ಲಿ ವ್ಯತ್ಯಾಸವಿರುತ್ತದೆ.
3.ಒಂದೇ ಡಿಸೈನ್ನಲ್ಲಿ ಬೇರೆ ಬೇರೆ ಬಣ್ಣದ ಬಟ್ಟೆ ತಗೋಬೇಡಿ:-
ಒಂದು ಟೀ ಶರ್ಟ್/ಟಾಪ್/ಪ್ಯಾಂಟ್ ಇಷ್ಟವಾದ್ರೆ ಅದೇ ಡಿಸೈನ್ನಲ್ಲಿ ಮೂರ್ನಾಲ್ಕು ವಿವಿಧ ಬಣ್ಣದ ಟೀ-ಶರ್ಟ್/ಟಾಪ್ ತೆಗೆದುಕೊಳ್ಳೋದನ್ನ ಮಾಡ್ಬೇಡಿ. ಸಾಕಷ್ಟು ವೆರೈಟಿಯ ಡಿಸೈನ್ಗಳು ಇರುವಾಗ ಒಂದೇ ಡಿಸೈನ್ಗೆ ಅಂಟಿಕೊಳ್ಳೋದು ಯಾಕೆ?
4.ನಿಮಗೆ ಫಿಟ್ ಆಗದ ಬಟ್ಟೆಯನ್ನ ಅಲ್ಲೇ ಬಿಡಿ:-
ಅಯ್ಯೋ ಈ ಟಾಪ್ ಎಷ್ಟೊಂದು ಚೆನ್ನಾಗಿದೆ… ಆದ್ರೆ ನನಗೆ ಸ್ವಲ್ಪ ಟೈಟ್ ಆಗ್ತಿದೆ… ಪರ್ವಾಗಿಲ್ಲ, ಮುಂದೆ ಸಣ್ಣ ಆಗ್ತೀನಿ…. ಎಂತೆಲ್ಲಾ ಅಂದುಕೊಂಡು ನಿಮಗೆ ಫಿಟ್ ಆಗದಿರುವ ಬಟ್ಟೆಯನ್ನ ಖರೀದಿಸಬೇಡಿ. ತುಂಬಾ ಇಷ್ಟವಾದ ಬಟ್ಟೆ ಸ್ವಲ್ಪ ಇದ್ದು, ನಿಮ್ಮ ಸೈಜ್ ನಲ್ಲಿ ಲಭ್ಯವಿಲ್ಲದಿದ್ರೆ ಅದನ್ನ ಟೈಲರ್ ಬಳಿ ಕೊಟ್ಟು ಫಿಟ್ ಮಾಡಿಸಿಕೊಳ್ಳಬಹುದು.
5.ಸೇಲ್ ಇದ್ದಾಗ ಶಾಪಿಂಗ್ ಹೋಗಿ:-
ಹೊಸ ಡಿಸೈನ್ನ ಬಟ್ಟೆಗಳ ಬೆಲೆ ತುಂಬಾ ದುಬಾರಿ ಎನಿಸಿದ್ರೆ ಸ್ವಲ್ಪ ಕಾಯಿರಿ. ಸ್ವಲ್ಪ ಸಮಯದ ನಂತರ ಡಿಸ್ಕೌಂಟ್ ಸೇಲ್ ಹಾಕಿದಾಗ ಅದೇ ಬಟ್ಟೆ ಕಡಿಮೆ ಬೆಲೆ/ ಅರ್ಧ ಬೆಲೆಗೂ ಸಿಗಬಹುದು. ಹಾಗಂತ ಎಲ್ಲಾ ಬಟ್ಟೆಗಳು ಸೇಲ್ನಲ್ಲಿ ಬರುತ್ತವೆ ಅಂದ್ಕೋಬೇಡಿ. ಇಂತದ್ದೊಂದು ಜಾಕೇಟ್ ಖರೀದಿಸಬೇಕು ಅಂದ್ಕೊಂಡು ಅದು ತುಂಬಾ ದಿನಗಳ ನಂತರ ಸಿಕ್ಕರೆ ಅದನ್ನ ಆಗಲೇ ಖರೀದಿಸಿದ್ರೆ ಉತ್ತಮ. ಸಾಮಾನ್ಯವಾಗಿ ಸಿಗೋ ಉಡುಪುಗಳಾದ್ರೆ ಸೇಲ್ ಹಾಕಿದಾಗಲೇ ಖರೀದಿ ಮಾಡಿ.
6.ಫ್ರೆಂಡ್ಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೇ ಇರಬೇಡಿ:-
ನಿಮ್ಮ ಸ್ಟೈಲ್ ಅಥವಾ ಟೇಸ್ಟ್ ನಿಮ್ಮ ಸ್ನೇಹಿತರಿಗೆ ಇಷ್ಟವಾಗದಿರಬಹುದು. ಅಥವಾ ನೀವು ಆರಿಸಿದ ಬಟ್ಟೆ ಚೆನ್ನಾಗಿಲ್ಲ ಅಂತಲೂ ಅವರು ಹೇಳಿಬಿಡಬಹುದು. ಆದ್ರೆ ಆ ಬಟ್ಟೆಯನ್ನ ಯಾವ ರೀತಿ ಸ್ಟೈಲ್ ಮಾಡಬೇಕು , ಯಾವುದರೊಂದಿಗೆ ಮ್ಯಾಚ್ ಮಾಡಿ ಹಾಕೋಬೇಕು ಅನ್ನೋದು ಅವರಿಗಿಂತ ಚೆನ್ನಾಗಿ ನಿಮಗೆ ಗೊತ್ತಿರುತ್ತದೆ. ಹೀಗಾಗಿ ಗೆಳೆಯ/ ಗೆಳತಿಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೆ ಇದ್ರೆ ನಿಮಗೇ ಲಾಸ್. ಸ್ನೇಹಿತರಿಗಿಂತ ನಿಮ್ಮ ಟೇಸ್ಟ್ ಭಿನ್ನವಾಗಿದ್ರೆ ಒಬ್ಬರೇ ಶಾಪಿಂಗ್ ಮಾಡಲು ಹೋಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….