ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಭಕ್ತರು ತಮ್ಮ ಭಕ್ತಿಗೆ ತಕ್ಕಂತೆ, ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕಾಣಿಕೆಗಳನ್ನು ಸಲ್ಲಿಸುತ್ತಾರೆ. ಹೀಗೆ ಸಲ್ಲಿಸಿದ ಕಾಣಿಕೆಗಳಲ್ಲಿ ಭಾಗಶಃ ಚಿನ್ನದ ಕಾಣಿಕೆಯೇ ಹೆಚ್ಚಗಿದೆ ಎಂದು ಅಂದಾಜಿಸಲಾಗಿದೆ. ತಿರುಪತಿಯ ತಮ್ಮಪ್ಪನ ದೇವಾಲಯ, ಜಮ್ಮು ಕಾಶ್ಮೀರದ ವೈಷ್ಣೋ ದೇವತೆಯ ದೇವಾಲಯ, ಅನಂತ ಪದ್ಮನಾಭ ಸ್ವಾಮಿ ದೇವಾಲಯ, ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶೇಖರಣೆಗೊಂಡಿರುವ ಒಟ್ಟು ಚಿನ್ನದ ಮೌಲ್ಯ, ಬರೋಬ್ಬರಿ 50 ಬಿಲಿಯನ್ ರೂಪಾಯಿಗಳು.
ತಿರುಮಲ ವೆಂಕಟೇಶ್ವರ ದೇವಸ್ಥಾನ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಬಳಿ ತಿರುಮಲ ಬೆಟ್ಟದ ಪಟ್ಟಣದಲ್ಲಿ ಪ್ರಸಿದ್ಧ ವೈದಿಕ ದೇವಾಲಯ ಆಗಿದೆ .ಇದು ಹೈದರಾಬಾದ್ ನಿಂದ ಸುಮಾರು 600 ಕಿ ( 370 ಮೈಲಿ) , ಚೆನೈ ನಿಂದ 138 ಕಿ ( 86 ಮೈಲಿ) ಮತ್ತು ಬೆಂಗಳೂರಿನಿಂದ 291 ಕಿಮೀ ( 181 ಮೈಲು) ದುರದಲ್ಲಿದೆ. ತಿರುಮಲ ಬೆಟ್ಟ ಸಮುದ್ರ ಮಟ್ಟದಿಂದ 853m ಮತ್ತು ಪ್ರದೇಶದಿಂದ 10,33 ಚದರ ಮೈಲಿ ( 27 ಕಿಮಿ 2 ) ಇದೆ . ತಿರುಪತಿ ತಿಮ್ಮಪ್ಪ ಎಷ್ಟು ಶ್ರೀಮಂತ ದೇವರು ಎಂದರೆ, ಪ್ರತಿ ತಿಂಗಳು 80 ರಿಂದ 100ಕಿಲೋ ಚಿನ್ನವನ್ನು ಭಕ್ತರು ತಿಮ್ಮಪ್ಪನಿಗೆ ಕಾಣಿಕೆಯಾಗಿ ನೀಡ್ತಾರಂತೆ. ಒಟ್ಟಾರೆಯಾಗಿ ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿ ಸುಮರು 70,000 ಕೋಟಿ ಮವಲ್ಯದ ಚಿನ್ನ ಅಡಗಿ ಕುಳಿತಿದೆ.ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿರುವ ಚಿನ್ನವನ್ನು ಕೆಲವು ಬ್ಯಾಂಕಿನಲ್ಲಿ ಇಡಲಾಗಿದೆ. ಇದರ ಬಡ್ಡಿಯೇ ಸುಮಾರು ಕೋಟಿಗಟ್ಟಲೇ ಬರುತ್ತದೆ ಎಂದು ಎಂದು ಮೂಲಗಳು ಅಂದಾಜಿಸಿವೆ. ಇಂಡಿಯನ್ ಓವರ್ಸಿಸ್ ಬ್ಯಾಂಕಿನಲ್ಲಿ 1353 ಕಿಲೋ, ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2275 ಕಿಲೋ ಚಿನ್ನವನ್ನು ಠೇವಣಿ ಮಾಡಿ ಇಡಲಾಗಿದೆ.
ಕೇರಳದಲ್ಲಿರುವ ಒಂದು ಹಿಂದೂ ಪುಣ್ಯ ಕ್ಷೇತ್ರ. ಇದು ಕೇರಳದ ಪಶ್ಚಿಮ ಘಟ್ಟ ಪರ್ವತ ಶ್ರೇಣಿಯಲ್ಲಿರುವ ಪತ್ತನಂತಿಟ್ಟ ಜಿಲ್ಲೆಯಲ್ಲಿದೆ. ಇಲ್ಲಿ ಸ್ವಾಮಿ ಅಯ್ಯಪ್ಪನ ದೇವಾಲಯವಿದೆ.ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನ ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ಸಾಸ್ತಾ ದೇವಾಲಯಗಳಲ್ಲಿ ಒಂದಾಗಿದೆ. ಶಬರಿಮಲೆಯ ದೇವಾಲಯ ದಕ್ಷಿಣ ಭಾರತದ ಅತ್ಯಂತ ದೂರದ ದೇವಾಲಯಗಳಲ್ಲಿ ಒಂದಾಗಿದೆ ಆದರು ಮೂರು ನಾಲ್ಕು ದಶಲಕ್ಷದಷ್ಟು ಯಾತ್ರಿಗಳು ಪ್ರತಿ ವರ್ಷ ಸೆಳೆಯುತ್ತದೆ. ಪರ್ವತಗಳನ್ನು ಮತ್ತು ದಟ್ಟವಾದ ಅರಣ್ಯದಿಂದ ಸುತ್ತುವರೆದಿದೆ. ಬಹುಶಃ ಕೇರಳದೆ ಅತ್ಯುತ್ತಮ ತೀರ್ಥಯಾತ್ರಾ ಸ್ಥಳವಾಗಿದೆ ಶಬರಿಮಲೆ ಆಗಿದೆ. ತೀರ್ಥಯಾತ್ರೆ ನವೆಂಬರ್ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ಜನವರಿ ಕೊನೆಯಾಗುತ್ತದೆ . ದೇವಾಲಯದ ಭಾರತದ ದಕ್ಷಿಣ ರಾಜ್ಯಗಳ ,ದೇಶದ ಮತ್ತು ವಿದೇಶದಲ್ಲಿ ಇತರ ಭಾಗಗಳಿಂದ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ. ಶಬರಿಮಲೆ ಸ್ವಾಮಿಯ ಒಟ್ಟು ಆರ್ಥಿಕ ವರಮಾನ ಎಷ್ಟು ಗೊತ್ತೇ? ಬರೋಬ್ಬರಿ 105 ಕೋಟಿಗಳು. ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 15 ಕಿಲೋಗಳಷ್ಟು ಚಿನ್ನ ಇದೆ ಎಂದು ಹೇಳಲಾಗುತ್ತದೆ.
ಕಟ್ರಾ ಅಥವಾ ಕಟ್ರಾ ವೈಷ್ಣೋ ದೇವಿ ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ್ ಜಿಲ್ಲೆಯ ಒಂದು ಸಣ್ಣ ಪಟ್ಟಣ ಮತ್ತು ವೈಷ್ಣೋ ದೇವಿ ಪವಿತ್ರ ದೇವಾಲಯ ನೆಲೆಗೊಂಡಿರುವ ತ್ರಿಕೂಟ ಬೆಟ್ಟಗಳ ತಪ್ಪಲಿನಲ್ಲಿ ಸ್ಥಿತವಾಗಿದೆ. ಅದು ಜಮ್ಮು ನಗರದಿಂದ ೪೨ ಕಿ.ಮಿ. ದೂರದಲ್ಲಿ ನೆಲೆಗೊಂಡಿದೆ. ಭಾರತದ ಮುಂಚೂಣಿಯಲ್ಲಿರುವ ತಾಂತ್ರಿಕ ವಿಶ್ವವಿದ್ಯಾಲಯಗಳ ಪೈಕಿ ಒಂದಾದ ಶ್ರೀ ಮಾತಾ ವೈಷ್ಣೋ ದೇವಿ ವಿಶ್ವವಿದ್ಯಾಲಯವೂ ಇಲ್ಲಿ ನೆಲೆಗೊಂಡಿದೆ.
ಅತಿ ಶ್ರೀಮಂತ ದೇವಾಲಯಗಳಲ್ಲಿ 5 ನೇ ಸ್ಥಾನದಲ್ಲಿ ಇರುವ ದೇವಾಲಯ ಜಮ್ಮು ಕಾಶ್ಮೀರದ ವೈಷ್ಣೋ ದೇವಯಿ ದೇವಾಲಯ. ಇಲ್ಲಿಗೆ ನವರಾತ್ರಿ ಸಮಯದಲ್ಲಿ ಕನಿಷ್ಟ ಸುಮಾರು 80 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವೈಷ್ಣೋ ದೇವಿಯ ಸನ್ನಿಧಿಯಲ್ಲಿರುವ ಒಟ್ಟು ಚಿನ್ನ ಎಂದರೆ 20,000 ಟನ್ ಎಂದು ಅಂದಾಜಿಸಲಾಗಿದೆ.
ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯ 108 ವಿಷ್ಣು ದೇವಾಲಯಗಳಲ್ಲಿ ಅತ್ಯಂತ ಪ್ರಮುಖ ದೇವಾಲಯವಾಗಿದೆ. ಇಲ್ಲಿ ನೀವು ಶೇಷ ಶಯನ ಅನಂತ ಪದ್ಮನಾಭನ ದಿವ್ಯ ಮೂರ್ತಿಯನ್ನು ಕಾಣಬಹುದು. ಮಲಗಿದ ರೂಪದಲ್ಲಿರುವ ಇಂತಹ ಬೃಹತ್ ಮೂರ್ತಿಯನ್ನು ನೀವು ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ. ಇಲ್ಲಿ ವಿಷ್ಣು ತಾವರೆಯ ಮೇಲೆ ಮಲಗಿರುವುದರಿಂದ ಪದ್ಮನಾಭ ಎಂದು ಕರೆಯಲಾಗುತ್ತದೆ. ಕೇರಳದ ಅನಂತ ಪದ್ಮನಾಭಸ್ವಾಮಿ ದೇವಾಲಯವು ಭಾರತದ ಅತಿ ಶ್ರೀಮಂತ ದೇವಾಲಯ ಎಂಬುದಾಗಿ ಗುರ್ತಿಸಿಕೊಂಡಿದೆ. ಈ ದೇವಾಲಯದಲ್ಲಿನ ಒಟ್ಟು ಚಿನ್ನದ ಮೌಲ್ಯ 1 ಲಕ್ಷ ಕೋಟಿ ರೂಪಾಯಿಗಳು..
ಗುರುವಾಯೂರು, ಗುರುಪಾವನಪುರಿ ಎಂದೂ ಪರಿಚಿತವಾಗಿದೆ, ಭಾರತದ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಒಂದು ಪುರಸಭಾ ಪಟ್ಟಣ. ಇದು, ದೈನಂದಿನ ಭಕ್ತಾದಿಗಳ ಸಂಖ್ಯೆಯ ದೃಷ್ಟಿಯಿಂದ, ಭಾರತದ ನಾಲ್ಕನೆ ಅತಿ ದೊಡ್ಡ ದೇವಸ್ಥಾನವೆನಿಸಿರುವ ಗುರುವಾಯೂರು ಶ್ರೀ ಕೃಷ್ಣ ದೇವಾಲಯದ ನೆಲೆಯಾಗಿದೆ. ಗುರುವಾಯೂರು, ದಂತಕಥೆಗಳ ಪ್ರಕಾರ, ಗುರುವಾಯೂರು ದೇವಸ್ಥಾನದ ಮೂರ್ತಿಯಷ್ಟು ಅಂದರೆ, 5000 ವರ್ಷಗಳಷ್ಟು ಹಳೆಯದಿರಬಹುದು.
ಕೇರಳಾದಲ್ಲಿ ಇರುವ ಖ್ಯಾತ ಹಿಂದೂ ದೇವಾಲಯ ಗುರುವಾಯೂರು ದೇವಾಲಯ. ಶ್ರೀಕೃಷ್ಣನ ಆವಾಸ ಸ್ಥಾನವಾಗಿರುವ ಗುರುವಾಯೂರು ದೇವಾಲಯದ ಒಟ್ಟು ಆದಾಯ 50 ಕೋಟಿಗಳು. ಭಕ್ತರಿಂದ ಕೆಜಿಗಟ್ಟಲೇ ಚಿನ್ನ ಉಡುಗೊರೆಯಾಗಿ ಶ್ರೀಕೃಷ್ಣನ ಪಾದಕ್ಕೆ ಬಂದು ಬೀಳುತ್ತದೆ. ಈ ದೇವಾಲಯದಲ್ಲಿ ಸುಮಾರು 600ಕಿಲೋಗಿಂತಲೂ ಹೆಚ್ಚಿನ ಪ್ರಮಾಣದ ಚಿನ್ನ ಇದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ 500 ಕಿಲೋ ಚಿನ್ನವನ್ನು ಭಾರತೀಯ ಸ್ಟೇಟ್ ಬ್ಯಾಂಕಿನ ಮುಂಬೈ ಶಾಖೆಯಲ್ಲಿ ಠೇವಣಿ ಮಾಡಿ ಇಡಲಾಗಿದೆ. ಇನ್ನುಳಿದ ಚಿನ್ನ ದೇವಾಲಯದ ವಶದಲ್ಲಿ ಇದೆ ಎಂದು ಹೇಳಲಾಗುತ್ತದೆ.
ಮುಂಬೈನ ಖ್ಯಾತ ದೇವಾಲಯ ಶ್ರೀ ಸಿದ್ದಿ ವಿನಾಯಕ ದೆವಾಲಯ. ಗಣೇಶ ಹಬ್ಬವನ್ನು ಇಲ್ಲಿನ ಜನರು ಭಕ್ತಿಯಿಂದ, ವಿಜೃಂಭಣೆಯಿಂದ ಅಚರಿಸುತ್ತಾರೆ. ಈ ದೇವಾಲಯದಲ್ಲಿ ಒಟ್ಟಾರೆಯಾಗಿ 150 ಕಿಲೋ ಚಿನ್ನ ಇದ್ದು, ಅದರಲ್ಲಿ ಕೇವಲ 10 ಕಿಲೋ ಚಿನ್ನವನ್ನು 10 ನಲ್ಲಿ ಇಡಲಾಗಿದೆ. ಇನ್ನುಳಿದ 140 ಕಿಲೋ ಚಿನ್ನವು ದೇವಸ್ಥಾನದ ಖಜಾನೆಯಲ್ಲಿ ಭದ್ರವಾಗಿದೆ ಅಂತ ಹೇಳಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…