ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಭಕ್ತರು ತಮ್ಮ ಭಕ್ತಿಗೆ ತಕ್ಕಂತೆ, ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕಾಣಿಕೆಗಳನ್ನು ಸಲ್ಲಿಸುತ್ತಾರೆ. ಹೀಗೆ ಸಲ್ಲಿಸಿದ ಕಾಣಿಕೆಗಳಲ್ಲಿ ಭಾಗಶಃ ಚಿನ್ನದ ಕಾಣಿಕೆಯೇ ಹೆಚ್ಚಗಿದೆ ಎಂದು ಅಂದಾಜಿಸಲಾಗಿದೆ. ತಿರುಪತಿಯ ತಮ್ಮಪ್ಪನ ದೇವಾಲಯ, ಜಮ್ಮು ಕಾಶ್ಮೀರದ ವೈಷ್ಣೋ ದೇವತೆಯ ದೇವಾಲಯ, ಅನಂತ ಪದ್ಮನಾಭ ಸ್ವಾಮಿ ದೇವಾಲಯ, ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶೇಖರಣೆಗೊಂಡಿರುವ ಒಟ್ಟು ಚಿನ್ನದ ಮೌಲ್ಯ, ಬರೋಬ್ಬರಿ 50 ಬಿಲಿಯನ್ ರೂಪಾಯಿಗಳು.

ತಿರುಮಲ ವೆಂಕಟೇಶ್ವರ ದೇವಸ್ಥಾನ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿ ಬಳಿ ತಿರುಮಲ ಬೆಟ್ಟದ ಪಟ್ಟಣದಲ್ಲಿ ಪ್ರಸಿದ್ಧ ವೈದಿಕ ದೇವಾಲಯ ಆಗಿದೆ .ಇದು ಹೈದರಾಬಾದ್ ನಿಂದ ಸುಮಾರು 600 ಕಿ ( 370 ಮೈಲಿ) , ಚೆನೈ ನಿಂದ 138 ಕಿ ( 86 ಮೈಲಿ) ಮತ್ತು ಬೆಂಗಳೂರಿನಿಂದ 291 ಕಿಮೀ ( 181 ಮೈಲು) ದುರದಲ್ಲಿದೆ. ತಿರುಮಲ ಬೆಟ್ಟ ಸಮುದ್ರ ಮಟ್ಟದಿಂದ 853m ಮತ್ತು ಪ್ರದೇಶದಿಂದ 10,33 ಚದರ ಮೈಲಿ ( 27 ಕಿಮಿ 2 ) ಇದೆ . ತಿರುಪತಿ ತಿಮ್ಮಪ್ಪ ಎಷ್ಟು ಶ್ರೀಮಂತ ದೇವರು ಎಂದರೆ, ಪ್ರತಿ ತಿಂಗಳು 80 ರಿಂದ 100ಕಿಲೋ ಚಿನ್ನವನ್ನು ಭಕ್ತರು ತಿಮ್ಮಪ್ಪನಿಗೆ ಕಾಣಿಕೆಯಾಗಿ ನೀಡ್ತಾರಂತೆ. ಒಟ್ಟಾರೆಯಾಗಿ ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿ ಸುಮರು 70,000 ಕೋಟಿ ಮವಲ್ಯದ ಚಿನ್ನ ಅಡಗಿ ಕುಳಿತಿದೆ.ತಿರುಪತಿ ತಿಮ್ಮಪ್ಪನ ಸಾನಿಧ್ಯದಲ್ಲಿರುವ ಚಿನ್ನವನ್ನು ಕೆಲವು ಬ್ಯಾಂಕಿನಲ್ಲಿ ಇಡಲಾಗಿದೆ. ಇದರ ಬಡ್ಡಿಯೇ ಸುಮಾರು ಕೋಟಿಗಟ್ಟಲೇ ಬರುತ್ತದೆ ಎಂದು ಎಂದು ಮೂಲಗಳು ಅಂದಾಜಿಸಿವೆ. ಇಂಡಿಯನ್ ಓವರ್ಸಿಸ್ ಬ್ಯಾಂಕಿನಲ್ಲಿ 1353 ಕಿಲೋ, ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2275 ಕಿಲೋ ಚಿನ್ನವನ್ನು ಠೇವಣಿ ಮಾಡಿ ಇಡಲಾಗಿದೆ.

ಕೇರಳದಲ್ಲಿರುವ ಒಂದು ಹಿಂದೂ ಪುಣ್ಯ ಕ್ಷೇತ್ರ. ಇದು ಕೇರಳದ ಪಶ್ಚಿಮ ಘಟ್ಟ ಪರ್ವತ ಶ್ರೇಣಿಯಲ್ಲಿರುವ ಪತ್ತನಂತಿಟ್ಟ ಜಿಲ್ಲೆಯಲ್ಲಿದೆ. ಇಲ್ಲಿ ಸ್ವಾಮಿ ಅಯ್ಯಪ್ಪನ ದೇವಾಲಯವಿದೆ.ಶಬರಿಮಲೆಯ ಶ್ರೀ ಅಯ್ಯಪ್ಪ ದೇವಸ್ಥಾನ ದೇಶದ ಅತ್ಯಂತ ಪ್ರಾಚೀನ ಮತ್ತು ಪ್ರಸಿದ್ಧ ಸಾಸ್ತಾ ದೇವಾಲಯಗಳಲ್ಲಿ ಒಂದಾಗಿದೆ. ಶಬರಿಮಲೆಯ ದೇವಾಲಯ ದಕ್ಷಿಣ ಭಾರತದ ಅತ್ಯಂತ ದೂರದ ದೇವಾಲಯಗಳಲ್ಲಿ ಒಂದಾಗಿದೆ ಆದರು ಮೂರು ನಾಲ್ಕು ದಶಲಕ್ಷದಷ್ಟು ಯಾತ್ರಿಗಳು ಪ್ರತಿ ವರ್ಷ ಸೆಳೆಯುತ್ತದೆ. ಪರ್ವತಗಳನ್ನು ಮತ್ತು ದಟ್ಟವಾದ ಅರಣ್ಯದಿಂದ ಸುತ್ತುವರೆದಿದೆ. ಬಹುಶಃ ಕೇರಳದೆ ಅತ್ಯುತ್ತಮ ತೀರ್ಥಯಾತ್ರಾ ಸ್ಥಳವಾಗಿದೆ ಶಬರಿಮಲೆ ಆಗಿದೆ. ತೀರ್ಥಯಾತ್ರೆ ನವೆಂಬರ್ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಮತ್ತು ಜನವರಿ ಕೊನೆಯಾಗುತ್ತದೆ . ದೇವಾಲಯದ ಭಾರತದ ದಕ್ಷಿಣ ರಾಜ್ಯಗಳ ,ದೇಶದ ಮತ್ತು ವಿದೇಶದಲ್ಲಿ ಇತರ ಭಾಗಗಳಿಂದ ಯಾತ್ರಾರ್ಥಿಗಳನ್ನು ಸೆಳೆಯುತ್ತದೆ. ಶಬರಿಮಲೆ ಸ್ವಾಮಿಯ ಒಟ್ಟು ಆರ್ಥಿಕ ವರಮಾನ ಎಷ್ಟು ಗೊತ್ತೇ? ಬರೋಬ್ಬರಿ 105 ಕೋಟಿಗಳು. ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 15 ಕಿಲೋಗಳಷ್ಟು ಚಿನ್ನ ಇದೆ ಎಂದು ಹೇಳಲಾಗುತ್ತದೆ.

ಕಟ್ರಾ ಅಥವಾ ಕಟ್ರಾ ವೈಷ್ಣೋ ದೇವಿ ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ್ ಜಿಲ್ಲೆಯ ಒಂದು ಸಣ್ಣ ಪಟ್ಟಣ ಮತ್ತು ವೈಷ್ಣೋ ದೇವಿ ಪವಿತ್ರ ದೇವಾಲಯ ನೆಲೆಗೊಂಡಿರುವ ತ್ರಿಕೂಟ ಬೆಟ್ಟಗಳ ತಪ್ಪಲಿನಲ್ಲಿ ಸ್ಥಿತವಾಗಿದೆ. ಅದು ಜಮ್ಮು ನಗರದಿಂದ ೪೨ ಕಿ.ಮಿ. ದೂರದಲ್ಲಿ ನೆಲೆಗೊಂಡಿದೆ. ಭಾರತದ ಮುಂಚೂಣಿಯಲ್ಲಿರುವ ತಾಂತ್ರಿಕ ವಿಶ್ವವಿದ್ಯಾಲಯಗಳ ಪೈಕಿ ಒಂದಾದ ಶ್ರೀ ಮಾತಾ ವೈಷ್ಣೋ ದೇವಿ ವಿಶ್ವವಿದ್ಯಾಲಯವೂ ಇಲ್ಲಿ ನೆಲೆಗೊಂಡಿದೆ.
ಅತಿ ಶ್ರೀಮಂತ ದೇವಾಲಯಗಳಲ್ಲಿ 5 ನೇ ಸ್ಥಾನದಲ್ಲಿ ಇರುವ ದೇವಾಲಯ ಜಮ್ಮು ಕಾಶ್ಮೀರದ ವೈಷ್ಣೋ ದೇವಯಿ ದೇವಾಲಯ. ಇಲ್ಲಿಗೆ ನವರಾತ್ರಿ ಸಮಯದಲ್ಲಿ ಕನಿಷ್ಟ ಸುಮಾರು 80 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ವೈಷ್ಣೋ ದೇವಿಯ ಸನ್ನಿಧಿಯಲ್ಲಿರುವ ಒಟ್ಟು ಚಿನ್ನ ಎಂದರೆ 20,000 ಟನ್ ಎಂದು ಅಂದಾಜಿಸಲಾಗಿದೆ.

ಕೇರಳದ ತಿರುವನಂತಪುರದಲ್ಲಿರುವ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಾಲಯ 108 ವಿಷ್ಣು ದೇವಾಲಯಗಳಲ್ಲಿ ಅತ್ಯಂತ ಪ್ರಮುಖ ದೇವಾಲಯವಾಗಿದೆ. ಇಲ್ಲಿ ನೀವು ಶೇಷ ಶಯನ ಅನಂತ ಪದ್ಮನಾಭನ ದಿವ್ಯ ಮೂರ್ತಿಯನ್ನು ಕಾಣಬಹುದು. ಮಲಗಿದ ರೂಪದಲ್ಲಿರುವ ಇಂತಹ ಬೃಹತ್ ಮೂರ್ತಿಯನ್ನು ನೀವು ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ. ಇಲ್ಲಿ ವಿಷ್ಣು ತಾವರೆಯ ಮೇಲೆ ಮಲಗಿರುವುದರಿಂದ ಪದ್ಮನಾಭ ಎಂದು ಕರೆಯಲಾಗುತ್ತದೆ. ಕೇರಳದ ಅನಂತ ಪದ್ಮನಾಭಸ್ವಾಮಿ ದೇವಾಲಯವು ಭಾರತದ ಅತಿ ಶ್ರೀಮಂತ ದೇವಾಲಯ ಎಂಬುದಾಗಿ ಗುರ್ತಿಸಿಕೊಂಡಿದೆ. ಈ ದೇವಾಲಯದಲ್ಲಿನ ಒಟ್ಟು ಚಿನ್ನದ ಮೌಲ್ಯ 1 ಲಕ್ಷ ಕೋಟಿ ರೂಪಾಯಿಗಳು..

ಗುರುವಾಯೂರು, ಗುರುಪಾವನಪುರಿ ಎಂದೂ ಪರಿಚಿತವಾಗಿದೆ, ಭಾರತದ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಒಂದು ಪುರಸಭಾ ಪಟ್ಟಣ. ಇದು, ದೈನಂದಿನ ಭಕ್ತಾದಿಗಳ ಸಂಖ್ಯೆಯ ದೃಷ್ಟಿಯಿಂದ, ಭಾರತದ ನಾಲ್ಕನೆ ಅತಿ ದೊಡ್ಡ ದೇವಸ್ಥಾನವೆನಿಸಿರುವ ಗುರುವಾಯೂರು ಶ್ರೀ ಕೃಷ್ಣ ದೇವಾಲಯದ ನೆಲೆಯಾಗಿದೆ. ಗುರುವಾಯೂರು, ದಂತಕಥೆಗಳ ಪ್ರಕಾರ, ಗುರುವಾಯೂರು ದೇವಸ್ಥಾನದ ಮೂರ್ತಿಯಷ್ಟು ಅಂದರೆ, 5000 ವರ್ಷಗಳಷ್ಟು ಹಳೆಯದಿರಬಹುದು.
ಕೇರಳಾದಲ್ಲಿ ಇರುವ ಖ್ಯಾತ ಹಿಂದೂ ದೇವಾಲಯ ಗುರುವಾಯೂರು ದೇವಾಲಯ. ಶ್ರೀಕೃಷ್ಣನ ಆವಾಸ ಸ್ಥಾನವಾಗಿರುವ ಗುರುವಾಯೂರು ದೇವಾಲಯದ ಒಟ್ಟು ಆದಾಯ 50 ಕೋಟಿಗಳು. ಭಕ್ತರಿಂದ ಕೆಜಿಗಟ್ಟಲೇ ಚಿನ್ನ ಉಡುಗೊರೆಯಾಗಿ ಶ್ರೀಕೃಷ್ಣನ ಪಾದಕ್ಕೆ ಬಂದು ಬೀಳುತ್ತದೆ. ಈ ದೇವಾಲಯದಲ್ಲಿ ಸುಮಾರು 600ಕಿಲೋಗಿಂತಲೂ ಹೆಚ್ಚಿನ ಪ್ರಮಾಣದ ಚಿನ್ನ ಇದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ 500 ಕಿಲೋ ಚಿನ್ನವನ್ನು ಭಾರತೀಯ ಸ್ಟೇಟ್ ಬ್ಯಾಂಕಿನ ಮುಂಬೈ ಶಾಖೆಯಲ್ಲಿ ಠೇವಣಿ ಮಾಡಿ ಇಡಲಾಗಿದೆ. ಇನ್ನುಳಿದ ಚಿನ್ನ ದೇವಾಲಯದ ವಶದಲ್ಲಿ ಇದೆ ಎಂದು ಹೇಳಲಾಗುತ್ತದೆ.

ಮುಂಬೈನ ಖ್ಯಾತ ದೇವಾಲಯ ಶ್ರೀ ಸಿದ್ದಿ ವಿನಾಯಕ ದೆವಾಲಯ. ಗಣೇಶ ಹಬ್ಬವನ್ನು ಇಲ್ಲಿನ ಜನರು ಭಕ್ತಿಯಿಂದ, ವಿಜೃಂಭಣೆಯಿಂದ ಅಚರಿಸುತ್ತಾರೆ. ಈ ದೇವಾಲಯದಲ್ಲಿ ಒಟ್ಟಾರೆಯಾಗಿ 150 ಕಿಲೋ ಚಿನ್ನ ಇದ್ದು, ಅದರಲ್ಲಿ ಕೇವಲ 10 ಕಿಲೋ ಚಿನ್ನವನ್ನು 10 ನಲ್ಲಿ ಇಡಲಾಗಿದೆ. ಇನ್ನುಳಿದ 140 ಕಿಲೋ ಚಿನ್ನವು ದೇವಸ್ಥಾನದ ಖಜಾನೆಯಲ್ಲಿ ಭದ್ರವಾಗಿದೆ ಅಂತ ಹೇಳಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ) ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…