ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ…

ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ ಸುಮ್ಮನಾಗಿದ್ದಾರೆ! ಎತ್ತಿನಹೊಳೆ, ಮೇಕೇದಾಟು, ಪರಮಶಿವಯ್ಯ, ಎರಗೋಳು ಮುಂತಾದ ಯೋಜನೆಗಳನ್ನು ತರುತ್ತೇವೆಂದು ನಮಗೆ ನೀರಿನ ಆಸೆ ಹುಟ್ಟಿಸಿ ಸುಮ್ಮನಾಗಿದ್ದಾರೆ, ಆ ಎಲ್ಲಾ ಯೋಜನೆಗೆ ಎಥೇಚ್ಚವಾಗಿ ಹಣ ಪೋಲಾಗಿದ್ದು ನಮಗೆ ತಿಳಿದಿದೆ.ಸದನದಲ್ಲಿ ರಮೇಶ್ ಕುಮಾರ್ ಅವರ ನಡೆಯ ಬಗ್ಗೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ….! ಸದನದಿಂದಾಚೆಗೆ ನಮ್ಮ ಜಿಲ್ಲೆಯ ರಾಜಕೀಯ ಮುತ್ಸದ್ದಿಗಳು ಎಂಬ ಗೌರವಕ್ಕೆ ಎಂದಿಗೂ ಅವರು ಚ್ಯುತಿ ಬರದಂತೆ ನಡೆದುಕೊಂಡ್ಡಿದ್ದಾರೆ,

ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯ ನೂರಾರು ಕೆರೆಗಳಿಗೆ ನೀರು ತರಲು ಅವರು ಪಟ್ಟ ಪಾಡು ಅಷ್ಟಿಷ್ಟಲ್ಲ. ಗಾಂಧಿ ಪ್ರತಿಮೆ ಮುಂದೆ ಪ್ರತಿಭಟಿಸಿದ್ದಾರೆ, ಸದನದಲ್ಲಿ ಅತ್ತಿದ್ದಾರೆ ಜಗಳವಾಡಿದ್ದಾರೆ ಸ್ವಂತ ಪಕ್ಷದವರನ್ನೇ ಎದುರು ಹಾಕಿಕೊಂಡಿದ್ದಾರೆ ಮತ್ತು ಸುಪ್ರೀಂಕೋರ್ಟ್ ಮಟ್ಟಿಲೇರಿ ಕೆಸಿ ವ್ಯಾಲಿ ಯೋಜನೆಯನ್ನು ಜಿಲ್ಲೆಗೆ ತಂದಿದ್ದಾರೆ.ಯೋಜನೆ ತಂದಿರುವುದಲ್ಲ ಅದನ್ನ ಸಮರ್ಪಕವಾಗಿ ಕಾರ್ಯಗತಗೊಳಿಸಲು ಶ್ರಮಿಸಿದ್ದಾರೆ.. ಕಾರ್ಯಗತಗೊಳಿಸಿದ್ದಾರೆ ಕೂಡ…. ಅವರ ಬಗ್ಗೆ ಹೆಮ್ಮೆ ಎನಿಸುತ್ತದೆ..

ನೀರಿಲ್ಲ ನೀಲಗಿರಿ ಮರ ಹಾಕೋಣ, ನೀರಿಲ್ಲ ಮಕ್ಕಳಿಗೆ ಶಿಕ್ಷಣ ಕೊಡಿಸಿ ಕೆಲಸಕ್ಕೆ ಕಳಿಸೋಣ. ನೀರಿಲ್ಲ ಸಾಲ ಜಾಸ್ತಿಯಾಗಿ ತೀರಿಸಲಾಗುತ್ತಿಲ್ಲ ಸಾಯೋಣ ಎಂಬ ಮಾತುಗಳು ರೈತರ ಬಾಯಿಂದ ಕೇಳಿದ್ದೇವೆ ನೀರಿಲ್ಲ ಎಂಬ ನೋವನ್ನೂ ಅನುಭವಿಸಿದ್ದೇವೆ… ಈ ಯೋಜನೆಯಿಂದ ಆ ಮಾತುಗಳು ಇನ್ನು ನಾವು ಕೇಳಲ್ಲ ಅನ್ನಿಸುತ್ತೆ.. ಎಲ್ಲಾ ಕೆರೆಗಳು ತುಂಬುವ ಲಕ್ಷಣ ಕಾಣಿಸುತ್ತಿದೆ ಮತ್ತು ಅಂತರ್ಜಲದ ಮಟ್ಟ ಏರಿಕೆಯಾಗುತ್ತದೆ ಎಂಬ ನಂಬಿಕೆ ಇದೆ..
ನಂಬಿ ಇನ್ನ ಎರಡು ಮೂರುವರ್ಷಗಳಲ್ಲಿ ಜಿಲ್ಲೆಯ ಕೃಷಿ ಚಟುವಟಿಕೆಗಳುಮತ್ತಷ್ಟು ಗರಿಗೆದರುತ್ತದೆ ಜಿಲ್ಲೆಯ ರೈತರ ಆರ್ಥಿಕಪರಿಸ್ಥಿತಿ ಸುಧಾರಣೆ ಆಗುತ್ತದೆ ವ್ಯವಸಾಯಕ್ಕೆನೀರಿಲ್ಲ ಎಂದು ಊರಿಂದಾಚೆ ಇರುವಟೆಕ್ಕಿಗಳೂ ವಿವಿಧ ಕ್ಷೇತ್ರಗಳಲ್ಲಿರುವ ಉದ್ಯೋಗಿಗಳುಮತ್ತೆ ತನ್ನೂರಿಗೆ ಮರಳಿ ವ್ಯವಸಾಯ ಶುರುಮಾಡುತ್ತಾರೆ..ಆ ಹಳೆಯ ವೈಭವಕ್ಕೆಮರಳುತ್ತಾರೆ.. ಕೆಸಿ ವ್ಯಾಲಿ ಯೋಜನೆಯಹರಿಕಾರ, ಜಿಲ್ಲೆಯ ಭಗೀರಥ ರಮೇಶ್ಕುಮಾರ್ ಅವರಿಗೆ ಹಾಗೂ ಈಯೋಜನೆ ಕಾರ್ಯರೂಪಕ್ಕೆ ತರಲು ಶ್ರಮಿಸಿದ ಎಲ್ಲಾಮಾಜಿಗಳಿಗೂ ಹಾಲಿಗಳಿಗೂ ಮತ್ತು ಎಲ್ಲಾ ಪಕ್ಷಗಳಮುಖಂಡರಿಗೂ ಧನ್ಯವಾದಗಳು .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.