ಸುದ್ದಿ

ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

By admin

October 05, 2019

ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ.

ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ.

ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ ಇಡೀ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ. ಇಂತಹ ಪ್ರಕರಣಗಳನ್ನು ತಪ್ಪಿಸಬೇಕು. ಅಲ್ಲದೆ, ಸಣ್ಣಪುಟ್ಟ ಅಪಘಾತಗಳು ನಡೆದ ಸಂದರ್ಭದಲ್ಲಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ಸೇವೆ ದೊರಕಿಸಿಕೊಡಬೇಕು ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಮುಷ್ಕರದ ಸಂದರ್ಭದಲ್ಲಿ ವಿನಾಕಾರಣ ಬಸ್ ಗಳು ಹಾನಿಗೀಡಾಗಿದ್ದು, ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುವ ಅವರು, ಪ್ರಯಾಣಿಕರು ಸಣ್ಣಪುಟ್ಟ ಕಿರಿಕಿರಿ ಮಾಡಿದರೂ, ಮೆಲುದನಿಯಲ್ಲೇ ಮಾತನಾಡಿ ಎಂದು ಸಲಹೆ ನೀಡಿದ್ದಾರೆ.