ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.

ಅಷ್ಟಾಂಗ ಯೋಗವನ್ನು ಕರಗತ ಮಾಡಿಕೊಂಡು ಇಂದು ದೀಪಿಕಾ ಮೆಹ್ತಾ ಬಳಿ ಬಾಲಿವುಡ್ ನಟ-ನಟಿಯರು, ಕಾರ್ಪೊರೇಟ್ ಉದ್ಯಮದ ಪ್ರಮುಖರು ಸೇರಿದಂತೆ ಅನೇಕ ಖ್ಯಾತನಾಮರಿಗೆ ವಿಶ್ವದಾದ್ಯಂತ ಅನೇಕರಿಗೆ ಯೋಗಾಸನಗಳನ್ನು ಕಲಿಸುತ್ತಿದ್ದಾರೆ.

ಆಧುನಿಕ ಜಗತ್ತು ತೀವ್ರ ಚಟುವಟಿಕೆಯುಳ್ಳ ಅವಿಶ್ರಾಂತ ತಾಣ. ಈ ಯುಗದಲ್ಲಿ ಜನರು ನಿರಂತರವಾಗಿ ಎಡಬಿಡದೇ ಕಾರ್ಯನಿರ್ವಹಿಸಬೇಕಾಗುತ್ತದೆ. ತಾಳ್ಮೆ, ಸಹನೆ-ಸಂಯಮ, ವ್ಯವಧಾನಕ್ಕೆ ಇಲ್ಲಿ ಜಾಗವಿಲ್ಲ. ನಮ್ಮ ಪ್ರತಿದಿನದ ವರ್ತನೆಯು ನಮ್ಮ ಪೂರ್ವಿಕರ ಕಾಲಕ್ಕಿಂತ ಸಾಕಷ್ಟು ಪರಿವರ್ತನೆಯಾಗಿ ಬೇರೆ ದಾರಿಯಲ್ಲಿ ಸಾಗಿದೆ.

ಇದರ ಪರಿಣಾಮವಾಗಿ ಹೊಸ ರೋಗರುಜಿನಗಳು, ಹೊಸ ಸಮಸ್ಯೆ, ತೊಂದರೆಗಳ ಸರಮಾಲೆ ಹಾಗೂ ಕೆಲವು ದಶಕಗಳ ಹಿಂದೆ ನಾವು ಕಂಡು ಕೇಳರಿಯದಿದ್ದ ಕಾಯಿಲೆಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ನಿರಂತರ ಕೆಡುಕಾಗಿ ಪರಿಣಮಿಸಿದೆ.

ಪ್ರಕೃತಿ ವಿಸ್ಮಯವಾದುದು. ಪ್ರತಿಯೊಂದು ವೈಪರೀತ್ಯಕ್ಕೂ ನಿಸರ್ಗದಲ್ಲಿ ಪರಿಹಾರವಿದೆ, ಅದಕ್ಕೊಂದು ಉಪಶಮನವಿದೆ. ನಮ್ಮ ಇಂದಿನ ದು:ಖ, ನೋವು, ಸಂಕಟ, ಸಮಸ್ಯೆಗಳಿಗೆ ಯೋಗ ಎಂಬ ಪ್ರಾಚೀನ ವಿಜ್ಞಾನದ ಮೂಲಕ ಚಿಕಿತ್ಸೆ ಕಂಡುಕೊಳ್ಳಬಹುದು. ದೇಹ, ಮನಸ್ಸು ಮತ್ತು ಆತ್ಮ ಇವುಗಳ ನಡುವೆ ಸಮನ್ವಯತೆ ಮತ್ತು ಸಮಾನತೆ ಸಾಧಿಸುವ ಸಮಗ್ರ ಸಿದ್ದಾಂತದ ಚಿಕಿತ್ಸಾ ವಿಧಾನವಾಗಿದೆ.

ಯೋಗ ಪ್ರಾಚೀನ ರೂಪದ ಒಂದು ವ್ಯಾಯಾಮವಾಗಿದ್ದು, ಸಾವಿರಾರು ವರ್ಷಗಳಿಂದ ತೀರಾ ನೈಸರ್ಗಿಕ ಹಾಗೂ ನಂಬಿಕೆ ಮಾರ್ಗದಲ್ಲಿ ಮನುಕುಲಕ್ಕೆ ಆರೋಗ್ಯದಿಂದ ಬದುಕುವ ಕೊಡುಗೆ ನೀಡಿದೆ. ಯೋಗ ಒಂದು ರೀತಿ ಪ್ರಶಾಂತ ಮನಸ್ಸು ಮತ್ತು ಆರೋಗ್ಯಕರ ದೇಹಕ್ಕೆ ಆಧ್ಯಾತ್ಮಿಕ ಮಾರ್ಗವಾಗಿದೆ. ಇದೇ ಕಾರಣಕ್ಕಾಗಿ ಯೋಗಾಸನವು ಅಂತರರಾಷ್ಟ್ರೀಯ ಮಟ್ಟದಲ್ಲಿ ಬಹುಳಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.
ಕಾರ್ಪೆಟ್ ಯೋಗ:-
ಯೋಗ ಯಾರೊಬ್ಬರಿಗೂ ಸೀಮಿತವಲ್ಲ ಅಥವಾ ಇದು ಪ್ರತಿದಿನದ ಕ್ರಮಬದ್ದತೆ, ಪಥ್ಯ, ಅನುಪಾನ, ಜೀವನ ಶೈಲಿಯಲ್ಲಿನ ಬದಲಾವಣೆ ಅಥವಾ ಸಾಹಸ, ಚುರುಕು ಪರಿಶ್ರಮ ಸ್ಥಿತಿಯ ದೀರ್ಘಾವಧಿ ಪ್ರಕ್ರಿಯೆಗಳ ಬೇಡಿಕೆಯಲ್ಲ. ಈ ಪ್ರಾಚೀನ ಕಲೆಯು ನಿಮಗೆ ಇಚ್ಚಾಶಕ್ತಿ ಇದ್ದರೆ ಸುಲಭವಾಗಿ ಅಭ್ಯಾಸ ಮಾಡಲು ಮತ್ತು ನೀವು ಯಶಸ್ವಿಯಾಗುವ ನಿಟ್ಟಿನಲ್ಲಿ ಬೆಳಕು ಚೆಲ್ಲುತ್ತದೆ.

ಭಾರತೀಯ ಮೂಲದ ಯೋಗ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಪೊರೇಟ್ ಯೋಗದ ಸ್ವರೂಪ ಪಡೆದುಕೊಂಡಿದ್ದು ಪ್ರಾಚೀನ ವಿದ್ಯೆಗೆ ಆಧುನಿಕ ಸ್ಪರ್ಶ ನೀಡಲಾಗಿದೆ. ನೀವು ಕೆಲಸ ಮಾಡುವ ಸ್ಥಳದಲ್ಲಿನ ಒತ್ತಡ ಮತ್ತು ಖಿನ್ನತೆಯನ್ನು ಜಾಗ್ರತೆ, ಸಾಮಥ್ರ್ಯ ಮತ್ತು ಅಧಿಕ ಉತ್ಪಾದಕತೆಯನ್ನಾಗಿ ಪರಿವರ್ತಿಸುವುದು ಇದರ ಉದ್ದೇಶವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
LPG ವಿತರಣಾ ಸಂಸ್ಥೆ LPG ಸಿಲಿಂಡರ್ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006 ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್ನಲ್ಲಿ ದಾಖಲಿಸಬೇಕು. ಸಿಲಿಂಡರ್ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…