ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.

ಅಷ್ಟಾಂಗ ಯೋಗವನ್ನು ಕರಗತ ಮಾಡಿಕೊಂಡು ಇಂದು ದೀಪಿಕಾ ಮೆಹ್ತಾ ಬಳಿ ಬಾಲಿವುಡ್ ನಟ-ನಟಿಯರು, ಕಾರ್ಪೊರೇಟ್ ಉದ್ಯಮದ ಪ್ರಮುಖರು ಸೇರಿದಂತೆ ಅನೇಕ ಖ್ಯಾತನಾಮರಿಗೆ ವಿಶ್ವದಾದ್ಯಂತ ಅನೇಕರಿಗೆ ಯೋಗಾಸನಗಳನ್ನು ಕಲಿಸುತ್ತಿದ್ದಾರೆ.

ಆಧುನಿಕ ಜಗತ್ತು ತೀವ್ರ ಚಟುವಟಿಕೆಯುಳ್ಳ ಅವಿಶ್ರಾಂತ ತಾಣ. ಈ ಯುಗದಲ್ಲಿ ಜನರು ನಿರಂತರವಾಗಿ ಎಡಬಿಡದೇ ಕಾರ್ಯನಿರ್ವಹಿಸಬೇಕಾಗುತ್ತದೆ. ತಾಳ್ಮೆ, ಸಹನೆ-ಸಂಯಮ, ವ್ಯವಧಾನಕ್ಕೆ ಇಲ್ಲಿ ಜಾಗವಿಲ್ಲ. ನಮ್ಮ ಪ್ರತಿದಿನದ ವರ್ತನೆಯು ನಮ್ಮ ಪೂರ್ವಿಕರ ಕಾಲಕ್ಕಿಂತ ಸಾಕಷ್ಟು ಪರಿವರ್ತನೆಯಾಗಿ ಬೇರೆ ದಾರಿಯಲ್ಲಿ ಸಾಗಿದೆ.

ಇದರ ಪರಿಣಾಮವಾಗಿ ಹೊಸ ರೋಗರುಜಿನಗಳು, ಹೊಸ ಸಮಸ್ಯೆ, ತೊಂದರೆಗಳ ಸರಮಾಲೆ ಹಾಗೂ ಕೆಲವು ದಶಕಗಳ ಹಿಂದೆ ನಾವು ಕಂಡು ಕೇಳರಿಯದಿದ್ದ ಕಾಯಿಲೆಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ನಿರಂತರ ಕೆಡುಕಾಗಿ ಪರಿಣಮಿಸಿದೆ.

ಪ್ರಕೃತಿ ವಿಸ್ಮಯವಾದುದು. ಪ್ರತಿಯೊಂದು ವೈಪರೀತ್ಯಕ್ಕೂ ನಿಸರ್ಗದಲ್ಲಿ ಪರಿಹಾರವಿದೆ, ಅದಕ್ಕೊಂದು ಉಪಶಮನವಿದೆ. ನಮ್ಮ ಇಂದಿನ ದು:ಖ, ನೋವು, ಸಂಕಟ, ಸಮಸ್ಯೆಗಳಿಗೆ ಯೋಗ ಎಂಬ ಪ್ರಾಚೀನ ವಿಜ್ಞಾನದ ಮೂಲಕ ಚಿಕಿತ್ಸೆ ಕಂಡುಕೊಳ್ಳಬಹುದು. ದೇಹ, ಮನಸ್ಸು ಮತ್ತು ಆತ್ಮ ಇವುಗಳ ನಡುವೆ ಸಮನ್ವಯತೆ ಮತ್ತು ಸಮಾನತೆ ಸಾಧಿಸುವ ಸಮಗ್ರ ಸಿದ್ದಾಂತದ ಚಿಕಿತ್ಸಾ ವಿಧಾನವಾಗಿದೆ.

ಯೋಗ ಪ್ರಾಚೀನ ರೂಪದ ಒಂದು ವ್ಯಾಯಾಮವಾಗಿದ್ದು, ಸಾವಿರಾರು ವರ್ಷಗಳಿಂದ ತೀರಾ ನೈಸರ್ಗಿಕ ಹಾಗೂ ನಂಬಿಕೆ ಮಾರ್ಗದಲ್ಲಿ ಮನುಕುಲಕ್ಕೆ ಆರೋಗ್ಯದಿಂದ ಬದುಕುವ ಕೊಡುಗೆ ನೀಡಿದೆ. ಯೋಗ ಒಂದು ರೀತಿ ಪ್ರಶಾಂತ ಮನಸ್ಸು ಮತ್ತು ಆರೋಗ್ಯಕರ ದೇಹಕ್ಕೆ ಆಧ್ಯಾತ್ಮಿಕ ಮಾರ್ಗವಾಗಿದೆ. ಇದೇ ಕಾರಣಕ್ಕಾಗಿ ಯೋಗಾಸನವು ಅಂತರರಾಷ್ಟ್ರೀಯ ಮಟ್ಟದಲ್ಲಿ ಬಹುಳಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.
ಕಾರ್ಪೆಟ್ ಯೋಗ:-
ಯೋಗ ಯಾರೊಬ್ಬರಿಗೂ ಸೀಮಿತವಲ್ಲ ಅಥವಾ ಇದು ಪ್ರತಿದಿನದ ಕ್ರಮಬದ್ದತೆ, ಪಥ್ಯ, ಅನುಪಾನ, ಜೀವನ ಶೈಲಿಯಲ್ಲಿನ ಬದಲಾವಣೆ ಅಥವಾ ಸಾಹಸ, ಚುರುಕು ಪರಿಶ್ರಮ ಸ್ಥಿತಿಯ ದೀರ್ಘಾವಧಿ ಪ್ರಕ್ರಿಯೆಗಳ ಬೇಡಿಕೆಯಲ್ಲ. ಈ ಪ್ರಾಚೀನ ಕಲೆಯು ನಿಮಗೆ ಇಚ್ಚಾಶಕ್ತಿ ಇದ್ದರೆ ಸುಲಭವಾಗಿ ಅಭ್ಯಾಸ ಮಾಡಲು ಮತ್ತು ನೀವು ಯಶಸ್ವಿಯಾಗುವ ನಿಟ್ಟಿನಲ್ಲಿ ಬೆಳಕು ಚೆಲ್ಲುತ್ತದೆ.

ಭಾರತೀಯ ಮೂಲದ ಯೋಗ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಪೊರೇಟ್ ಯೋಗದ ಸ್ವರೂಪ ಪಡೆದುಕೊಂಡಿದ್ದು ಪ್ರಾಚೀನ ವಿದ್ಯೆಗೆ ಆಧುನಿಕ ಸ್ಪರ್ಶ ನೀಡಲಾಗಿದೆ. ನೀವು ಕೆಲಸ ಮಾಡುವ ಸ್ಥಳದಲ್ಲಿನ ಒತ್ತಡ ಮತ್ತು ಖಿನ್ನತೆಯನ್ನು ಜಾಗ್ರತೆ, ಸಾಮಥ್ರ್ಯ ಮತ್ತು ಅಧಿಕ ಉತ್ಪಾದಕತೆಯನ್ನಾಗಿ ಪರಿವರ್ತಿಸುವುದು ಇದರ ಉದ್ದೇಶವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್ 11ರಂದು ಬೈಕ್ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ….
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…