ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7 ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.
ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್ ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಆಂಧ್ರದಲ್ಲೂ ಕೆಂಪೇಗೌಡ ಸುದೀಪ್ ಫ್ಯಾನ್ಸ್ ಕ್ಲಬ್…
ಕನ್ನಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳಲ್ಲಿ ಈಗಾಗಲೇ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಆದರೆ ಈಗ ಹಾಲಿವುಡ್ ಗೆ ಎಂಟ್ರಿ ಕೊಡ್ತಿದ್ದಾರಂತೆ ಹಾಗಾದರೆ ಏನು ಅಂತ ಆ ಸ್ಟೋರಿ ಇಲ್ಲಿದೆ ನೋಡಿ.
ಹೌದು! ಸ್ಯಾಂಡವುಡ್, ಬಾಲಿವುಡ್, ಟಾಲಿವುಡ್ ನಂತಹ ಸಿನಿಮಾ ಜಗತ್ತಿನಲ್ಲಿ, ತಮ್ಮದೇ ಆದ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ್ದಾರೆ. ಅದರಂತೆ ಈಗ ಹಾಲಿವುಡ್ ಗೆ ಭರ್ಜರಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಂಧಿನಗರದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ಹಾಲಿವುಡ್ ನ ಎಡ್ಡಿ ಆರ್ಯ ನಿರ್ದೇಶನದ “ರೈಸನ್ “ ಸಿನಿಮಾದಲ್ಲಿ ಸುದೀಪ್ ಸೇನಾಧಿಕಾರಿಯ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲಿದ್ದಾರಂತೆ, ಈ ಒಂದು ಸಿನಿಮಾ ‘ರೈಸನ್ ‘ ಸೈನ್ಸ್ ಫಿಕ್ಷನ್ ಕತೆ ಒಳಗೊಂಡಿದೆ. ಅಮೇರಿಕದ ಪೆನ್ಸೆಲ್ವೆನಿಯಾದಲ್ಲಿ ಸಮುದಾಯ ಒಂದು ವಾಸವಾಗಿರುತ್ತದಂತೆ, ಅಲ್ಲಿ ಉಲ್ಕಾಪಾತವಾಗಿ ಅನೇಕರು ಸಾವಿಗೀಡಾಗುತ್ತಾರಂತೆ, ರಸಾಯನಿಕ ಒಂದು ಬಿಡುಗಡೆಯಾಗಿ ಅಲ್ಲಿನ ಜನ ಅಪಾಯಕ್ಕೀಡಾಗುತ್ತಾರಂತೆ ಅವರನ್ನು ಕಾಪಾಡುವ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಿನಿಮಾದ ನಿರ್ದೇಶಕರು, ಸ್ರ್ಕಿಪ್ಟ್ ಪೂರ್ಣಗೊಳಿಸಿ ಚಿತ್ರೀಕರಣದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆಯಂತೆ, ಡಿಸೆಂಬರ್ ಅಂತ್ಯಕ್ಕೆಲ್ಲ ಶೂಟಿಂಗ್ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರಂತೆ, ಸುದೀಪ್ ಕೂಡ ಸದ್ಯ ‘ದಿ ವಿಲನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದಾದ ನಂತರ ಒಪ್ಪಿಕೊಂಡ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅದರೊಂದಿಗೆ ಹಾಲಿವುಡ್ ಚಿತ್ರಕ್ಕೆ ರೆಡಿಯಾಗಲಿದ್ದೇನೆಂದು ಹೇಳಿದ್ದಾರಂತೆ.
ಹಾಲಿವುಡ್ ಡೈರೆಕ್ಟರ್ ಎಡಿ ಆರ್ಯ ನಿರ್ದೇಶನದ ‘ರೈಸನ್’ ಚಿತ್ರದಲ್ಲಿ ಸುದೀಪ್ ನಾಯಕರಾಗಿ ಮೊದಲಿಗೆ ಹಾಲಿವುಡ್ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಆಸ್ಪ್ರೇಲಿಯಾ, ಅಮೆರಿಕದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೈಂಟಿಫಿಕ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ನಿರ್ದೇಶಕ ಎಡಿ ಸ್ವತಃ ಕತೆ, ಚಿತ್ರಕಥೆ ಬರೆದಿದ್ದಾರೆ.

ಈ ಚಿತ್ರದಲ್ಲಿ ಸುದೀಪ್ಗೆ ಇಬ್ಬರುನಾಯಕಿಯರು. ವಿದೇಶಿ ಹುಡುಗಿಯ ಪಾತ್ರದಲ್ಲಿ ನಿಕೋಲ್ ಶಾಲ್ಮೋ ನಟಿಸುತ್ತಿದ್ದಾರೆ. ಇವರು ತಮ್ಮ ದೃಶ್ಯಗಳ ಶೂಟಿಂಗ್ನಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಭಾರತೀಯ ಮೂಲದ ನಾಯಕಿ ಪಾತ್ರಕ್ಕಾಗಿ ನಟಿಯನ್ನು ಹುಡುಕಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.