ಸಿನಿಮಾ

ಕಿಚ್ಚ ನಟಿಸುತ್ತಿರುವ ಈ ಹಾಲಿವುಡ್ ಚಿತ್ರದಲ್ಲಿ, ಖ್ಯಾತ ನಾಯಕಿ ಮತ್ತು ನಿರ್ದೇಶಕ ಯಾರು ಗೊತ್ತಾ..?ಈ ಲೇಖನ ಓದಿ ಶಾಕ್ ಆಗ್ತೀರಾ…

873

ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.

ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7  ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.

ಹಾಲಿವುಡ್ ನ “ದಿ ರೈಸನ್” ಚಿತ್ರಕ್ಕೆ ಸುದೀಪ್ ಸಹಿ:-

ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್  ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ  ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.  ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಆಂಧ್ರದಲ್ಲೂ ಕೆಂಪೇಗೌಡ ಸುದೀಪ್ ಫ್ಯಾನ್ಸ್ ಕ್ಲಬ್…

ಕನ್ನಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳಲ್ಲಿ ಈಗಾಗಲೇ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಆದರೆ ಈಗ ಹಾಲಿವುಡ್ ಗೆ ಎಂಟ್ರಿ ಕೊಡ್ತಿದ್ದಾರಂತೆ ಹಾಗಾದರೆ ಏನು ಅಂತ ಆ ಸ್ಟೋರಿ ಇಲ್ಲಿದೆ ನೋಡಿ.

ಹೌದು! ಸ್ಯಾಂಡವುಡ್, ಬಾಲಿವುಡ್, ಟಾಲಿವುಡ್ ನಂತಹ ಸಿನಿಮಾ ಜಗತ್ತಿನಲ್ಲಿ, ತಮ್ಮದೇ ಆದ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ್ದಾರೆ. ಅದರಂತೆ ಈಗ ಹಾಲಿವುಡ್ ಗೆ ಭರ್ಜರಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಂಧಿನಗರದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ಹಾಲಿವುಡ್ ನ ಎಡ್ಡಿ ಆರ್ಯ ನಿರ್ದೇಶನದ “ರೈಸನ್ “ ಸಿನಿಮಾದಲ್ಲಿ ಸುದೀಪ್ ಸೇನಾಧಿಕಾರಿಯ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲಿದ್ದಾರಂತೆ, ಈ ಒಂದು ಸಿನಿಮಾ ‘ರೈಸನ್ ‘ ಸೈನ್ಸ್ ಫಿಕ್ಷನ್ ಕತೆ ಒಳಗೊಂಡಿದೆ. ಅಮೇರಿಕದ ಪೆನ್ಸೆಲ್ವೆನಿಯಾದಲ್ಲಿ ಸಮುದಾಯ ಒಂದು ವಾಸವಾಗಿರುತ್ತದಂತೆ, ಅಲ್ಲಿ ಉಲ್ಕಾಪಾತವಾಗಿ ಅನೇಕರು ಸಾವಿಗೀಡಾಗುತ್ತಾರಂತೆ, ರಸಾಯನಿಕ ಒಂದು ಬಿಡುಗಡೆಯಾಗಿ ಅಲ್ಲಿನ ಜನ ಅಪಾಯಕ್ಕೀಡಾಗುತ್ತಾರಂತೆ ಅವರನ್ನು ಕಾಪಾಡುವ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸಿನಿಮಾದ ನಿರ್ದೇಶಕರು, ಸ್ರ್ಕಿಪ್ಟ್ ಪೂರ್ಣಗೊಳಿಸಿ ಚಿತ್ರೀಕರಣದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆಯಂತೆ, ಡಿಸೆಂಬರ್ ಅಂತ್ಯಕ್ಕೆಲ್ಲ ಶೂಟಿಂಗ್ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರಂತೆ, ಸುದೀಪ್ ಕೂಡ ಸದ್ಯ ‘ದಿ ವಿಲನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದಾದ ನಂತರ ಒಪ್ಪಿಕೊಂಡ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅದರೊಂದಿಗೆ ಹಾಲಿವುಡ್ ಚಿತ್ರಕ್ಕೆ ರೆಡಿಯಾಗಲಿದ್ದೇನೆಂದು ಹೇಳಿದ್ದಾರಂತೆ.

ಹಾಲಿವುಡ್‌ ಡೈರೆಕ್ಟರ್‌ ಎಡಿ ಆರ್ಯ ನಿರ್ದೇಶನದ ‘ರೈಸನ್‌’ ಚಿತ್ರದಲ್ಲಿ ಸುದೀಪ್‌ ನಾಯಕರಾಗಿ ಮೊದಲಿಗೆ ಹಾಲಿವುಡ್‌ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಆಸ್ಪ್ರೇಲಿಯಾ, ಅಮೆರಿಕದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೈಂಟಿಫಿಕ್‌ ಥ್ರಿಲ್ಲರ್‌ ಚಿತ್ರ ಇದಾಗಿದ್ದು, ನಿರ್ದೇಶಕ ಎಡಿ ಸ್ವತಃ ಕತೆ, ಚಿತ್ರಕಥೆ ಬರೆದಿದ್ದಾರೆ.

ಈ ಚಿತ್ರದಲ್ಲಿ ಸುದೀಪ್‌ಗೆ ಇಬ್ಬರುನಾಯಕಿಯರು. ವಿದೇಶಿ  ಹುಡುಗಿಯ ಪಾತ್ರದಲ್ಲಿ ನಿಕೋಲ್‌ ಶಾಲ್ಮೋ ನಟಿಸುತ್ತಿದ್ದಾರೆ. ಇವರು ತಮ್ಮ ದೃಶ್ಯಗಳ ಶೂಟಿಂಗ್‌ನಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಭಾರತೀಯ ಮೂಲದ ನಾಯಕಿ ಪಾತ್ರಕ್ಕಾಗಿ ನಟಿಯನ್ನು ಹುಡುಕಲಾಗುತ್ತಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ರಾಜಕೀಯ

    ನ್ಯಾಯ ಸಿಗದೇ ಆತ್ಮಹತ್ಯಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದ ಶಾಸಕ..!

    ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ  ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…

  • ಸಿನಿಮಾ

    ಸ್ಯಾಂಡಲ್ ವುಡ್ ತಾರಾ ಜೋಡಿ ದಿಗಂತ್-ಐಂದ್ರಿತಾ ಮದುವೆಗೆ ಹೋಗುವ ಅತಿಥಿಗಳು ಈ ಷರತ್ತನ್ನು ಪಾಲಿಸಬೇಕು..!

    ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…