ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಕಿಚ್ಚಾ ಸುದೀಪ್ ಅಭಿಮಾನಿಗಳ ಟ್ವಿಟರ್ ಖಾತೆಯೊಂದರಿಂದ ಇಂತಹುದೊಂದು ಸುದ್ದಿ ಕೇಳಿಬಂದಿದ್ದು, ಟೀಂ ಕಿಚ್ಚಾ ಸುದೀಪ್ ಎಂಬಖಾತೆದಾರರು ನಟ ಸುದೀಪ್ ಅವರು ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದಾರೆ. ಜುಲೈ 7 ರಂದು ಲಂಡನ್ ನಲ್ಲಿ ಶೂಟಿಂಗ್ ಆರಂಭವಾಗಲಿದ್ದು, ಶೀಘ್ರದಲ್ಲೇ ಸುದೀಪ್ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ಹಾರಲಿದ್ದಾರೆ ಎಂದು ಟ್ವೀಟ್ ಮಾಡಿದೆ.
ಸುದೀಪ್ ಅಭಿನಯಿಸುತ್ತಿರುವ ನೂತನ ಚಿತ್ರದ ಹೆಸರು ರೈಸನ್ ಎಂದು ಖಾತೆಯಲ್ಲಿ ಬರೆಯಲಾಗಿದ್ದು, ಚಿತ್ರವನ್ನು ಹಾಲಿವುಡ್ ನ ಖ್ಯಾತ ನಿರ್ದೇಶಕ ಎಡ್ಡಿ ಆರ್ಯ ನಿರ್ದೇಶಿಸುತ್ತಿದ್ದು, ಹೆಬ್ಬುಲಿ ಚಿತ್ರದಂತೆಯೇ ಸುದೀಪ್ ಈ ಚಿತ್ರದಲ್ಲೂ ಸೇನಾ ಯೋಧನ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಟ್ವೀಟ್ ಮಾಡಿದೆ. ಇನ್ನು ಈ ಸುದ್ದಿಗೆ ಸಂಬಂಧಿಸಿದಂತೆ ನಟ ಸುದೀಪ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಸುದ್ದಿ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಹಿಂದೆ ಬಾಲಿವುಡ್ ನ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ಸುದೀಪ್ ಬಳಿಕ ತೆಲುಗಿನ ಈಗ ಚಿತ್ರದಲ್ಲಿ ಅಭಿನಯಿಸಿದ್ದರು. ಬಳಿಕ ಎಸ್ ಎಸ್ ರಾಜಮೌಳಿ ನಿರ್ದೇಶನ ಬಾಹುಬಲಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸೂರಪ್ಪ ಬಾಬು ನಿರ್ಮಾಣದ ಕೋಟಿಗೊಬ್ಬ 3 ಚಿತ್ರದಲ್ಲಿ ಸುದೀಪ್ ಅಭಿನಯಿಸುತ್ತಿದ್ದು, ಈ ಚಿತ್ರಕ್ಕಾಗಿ ಸುದೀಪ್ ದಾಖಲೆಯ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿಯೂ ಕೂಡ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
ಇಲ್ಲಿ ಓದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ:-ಆಂಧ್ರದಲ್ಲೂ ಕೆಂಪೇಗೌಡ ಸುದೀಪ್ ಫ್ಯಾನ್ಸ್ ಕ್ಲಬ್…
ಕನ್ನಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳಲ್ಲಿ ಈಗಾಗಲೇ ಹಲವಾರು ಸಿನಿಮಾಗಳ ಮೂಲಕ ತಮ್ಮದೇ ಛಾಪನ್ನು ಮೂಡಿಸಿದ್ದಾರೆ. ಆದರೆ ಈಗ ಹಾಲಿವುಡ್ ಗೆ ಎಂಟ್ರಿ ಕೊಡ್ತಿದ್ದಾರಂತೆ ಹಾಗಾದರೆ ಏನು ಅಂತ ಆ ಸ್ಟೋರಿ ಇಲ್ಲಿದೆ ನೋಡಿ.
ಹೌದು! ಸ್ಯಾಂಡವುಡ್, ಬಾಲಿವುಡ್, ಟಾಲಿವುಡ್ ನಂತಹ ಸಿನಿಮಾ ಜಗತ್ತಿನಲ್ಲಿ, ತಮ್ಮದೇ ಆದ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನ ಹೊಂದಿದ್ದಾರೆ. ಅದರಂತೆ ಈಗ ಹಾಲಿವುಡ್ ಗೆ ಭರ್ಜರಿಯಾಗಿ ಎಂಟ್ರಿ ಕೊಡ್ತಿದ್ದಾರೆ ಎಂದು ಗಾಂಧಿನಗರದಲ್ಲಿ ಮಾತಾಡಿಕೊಳ್ಳುತ್ತಿದ್ದಾರೆ.

ಹಾಲಿವುಡ್ ನ ಎಡ್ಡಿ ಆರ್ಯ ನಿರ್ದೇಶನದ “ರೈಸನ್ “ ಸಿನಿಮಾದಲ್ಲಿ ಸುದೀಪ್ ಸೇನಾಧಿಕಾರಿಯ ಪಾತ್ರದ ಮೂಲಕ ಭರ್ಜರಿ ಎಂಟ್ರಿ ಕೊಡಲಿದ್ದಾರಂತೆ, ಈ ಒಂದು ಸಿನಿಮಾ ‘ರೈಸನ್ ‘ ಸೈನ್ಸ್ ಫಿಕ್ಷನ್ ಕತೆ ಒಳಗೊಂಡಿದೆ. ಅಮೇರಿಕದ ಪೆನ್ಸೆಲ್ವೆನಿಯಾದಲ್ಲಿ ಸಮುದಾಯ ಒಂದು ವಾಸವಾಗಿರುತ್ತದಂತೆ, ಅಲ್ಲಿ ಉಲ್ಕಾಪಾತವಾಗಿ ಅನೇಕರು ಸಾವಿಗೀಡಾಗುತ್ತಾರಂತೆ, ರಸಾಯನಿಕ ಒಂದು ಬಿಡುಗಡೆಯಾಗಿ ಅಲ್ಲಿನ ಜನ ಅಪಾಯಕ್ಕೀಡಾಗುತ್ತಾರಂತೆ ಅವರನ್ನು ಕಾಪಾಡುವ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಿನಿಮಾದ ನಿರ್ದೇಶಕರು, ಸ್ರ್ಕಿಪ್ಟ್ ಪೂರ್ಣಗೊಳಿಸಿ ಚಿತ್ರೀಕರಣದ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆಯಂತೆ, ಡಿಸೆಂಬರ್ ಅಂತ್ಯಕ್ಕೆಲ್ಲ ಶೂಟಿಂಗ್ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರಂತೆ, ಸುದೀಪ್ ಕೂಡ ಸದ್ಯ ‘ದಿ ವಿಲನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಇದಾದ ನಂತರ ಒಪ್ಪಿಕೊಂಡ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದು, ಅದರೊಂದಿಗೆ ಹಾಲಿವುಡ್ ಚಿತ್ರಕ್ಕೆ ರೆಡಿಯಾಗಲಿದ್ದೇನೆಂದು ಹೇಳಿದ್ದಾರಂತೆ.
ಹಾಲಿವುಡ್ ಡೈರೆಕ್ಟರ್ ಎಡಿ ಆರ್ಯ ನಿರ್ದೇಶನದ ‘ರೈಸನ್’ ಚಿತ್ರದಲ್ಲಿ ಸುದೀಪ್ ನಾಯಕರಾಗಿ ಮೊದಲಿಗೆ ಹಾಲಿವುಡ್ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಆಸ್ಪ್ರೇಲಿಯಾ, ಅಮೆರಿಕದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸೈಂಟಿಫಿಕ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ನಿರ್ದೇಶಕ ಎಡಿ ಸ್ವತಃ ಕತೆ, ಚಿತ್ರಕಥೆ ಬರೆದಿದ್ದಾರೆ.

ಈ ಚಿತ್ರದಲ್ಲಿ ಸುದೀಪ್ಗೆ ಇಬ್ಬರುನಾಯಕಿಯರು. ವಿದೇಶಿ ಹುಡುಗಿಯ ಪಾತ್ರದಲ್ಲಿ ನಿಕೋಲ್ ಶಾಲ್ಮೋ ನಟಿಸುತ್ತಿದ್ದಾರೆ. ಇವರು ತಮ್ಮ ದೃಶ್ಯಗಳ ಶೂಟಿಂಗ್ನಲ್ಲಿ ಈಗಾಗಲೇ ಪಾಲ್ಗೊಂಡಿದ್ದಾರೆ. ಭಾರತೀಯ ಮೂಲದ ನಾಯಕಿ ಪಾತ್ರಕ್ಕಾಗಿ ನಟಿಯನ್ನು ಹುಡುಕಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್ಮಹಲ್ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…