ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

ಹೌದು, ಮಧ್ಯರಾತ್ರಿ ಇದ್ದಕ್ಕಿದ್ದಂತೆ ಸಮೀರ್ ಆಚಾರ್ಯವರನ್ನು ಎಲಿಮಿನೇಟ್ ಮಾಡುವ ಮುಖಾಂತರ ಉಳಿದ 5 ಜನ ಸ್ಪರ್ಧಿಗಳು ಬಿಗ್ ಬಾಸ್ ಸಂಚಿಕೆ 5ರ ಫೈನಲ್ ತಲುಪಿದ್ದಾರೆ. ದಿವಾಕರ್,ನಿವೇದಿತಾ ಗೌಡ,ಶ್ರುತಿ ಪ್ರಕಾಶ್,ಜಯರಾಂ ಕಾರ್ತಿಕ್,ಮತ್ತು ಚಂದನ್ ಶೆಟ್ಟಿ ಈ 5 ಜನರ ಗ್ರಾಂಡ್ ಪಿನಾಲೆ ತಲುಪಿದ್ದಾರೆ.
ಬಿಗ್ ಬಾಸ್ ಸಂಚಿಕೆ 5ರ ಪಟ್ಟಕ್ಕೆ ನೆನ್ನೆಯಿಂದಲೇ ವೋಟಿಂಗ್ ಶುರುವಾಗಿದೆ.ಈ 5 ಜನರಲ್ಲಿ ದಿವಾಕರ್ ಉಳಿದಂತೆ 4 ಜನ ಸೇಲೆಬ್ರೆಟಿಗಳಾಗಿದ್ದು, ಕಾಮನ್ ಮ್ಯಾನ್ Vs ಸೇಲೆಬ್ರೆಟಿಸ್ ಇವರಲ್ಲಿ ಯಾರೂ ಗೆಲ್ಲುತ್ತಾರೆಂಬ ಕುತೂಹಲ ಜನರಲ್ಲಿ ಇಮ್ಮಡಿಗೊಂಡಿದೆ.ಹಾಗಾದ್ರೆ ವೀಕ್ಷಕರು ಹೇಳುವ ಪ್ರಕಾರ ಯಾರು ಗೆಲ್ಬೇಕು ಎಂಬ ವಿವರ ಇಲ್ಲಿದೆ ಮುಂದೆ ನೋಡಿ…

ನಿವೇದಿತಾ ಗೌಡ ಹುಟ್ಟಿದ್ದು ಮತ್ತು ಬೆಳೆದಿದ್ದು ಮೈಸೂರಿನಲ್ಲಿಯೇ. ಆದರೂ ಆಕೆಗೆ ಸರಿಯಾಗಿ ಕನ್ನಡ ಮಾತನಾಡಲು ಬರುವುದಿಲ್ಲ. ಏಕೆಂದರೆ ಆಕೆ ಓದಿದ ಶಾಲೆ ಅಟಾಮಿಕ್ ಎನರ್ಜಿ ಸ್ಕೂಲಿನಲ್ಲಿ. ಶಾಲೆಯಲ್ಲಿ ಕನ್ನಡ ಇಲ್ಲದ ಕಾರಣ ಕನ್ನಡ ಬರೆಯಲು ಗೊತ್ತಿಲ್ಲ, ಶಾಲೆಯಲ್ಲಿ ಮಾತಾಡಲು ಸಹ ಇಲ್ಲದಿರುವುದರಿಂದ ಕನ್ನಡ ಆಕೆಗೆ ಮಾತಾಡಲು ತುಂಬ ಕಷ್ಟ. ಮನೆಯಲ್ಲಿ ಕನ್ನಡ, ಶಾಲಾ ಕಾಲೇಜ್ನಲ್ಲಿ ಇಂಗ್ಲಿಷ್, ಇವೆರಡು ಮಿಶ್ರಣವಾಗಿ ಇಂಗ್ಲಿಷ್ ಸ್ಟೈಲಿನ ಕನ್ನಡ ಮಾತನಾಡುತ್ತಾರೆ. ನಿವೇದಿತಾ ಈಗ ಮೈಸೂರಿನ ಮಹಾಜನ್ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಾರೆ. ಆಕೆಯ ವಯಸ್ಸು 18. ಬಿಗ್ಬಾಸ್ ಇತಿಹಾಸದಲ್ಲಿ ಅತೀ ಕಡಿಮೆ ವಯಸ್ಸಿನ ಸ್ಪರ್ಧಿಯಾಗಿದ್ದಾರೆ.ತಂದೆ ರಮೇಶ್ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಗೃಹಿಣಿ. ಒಬ್ಬ ಕಿರಿಯ ಸಹೋದರ ಇದ್ದಾನೆ.
ಡಬ್ ಸ್ಮ್ಯಾಶ್ ಮಾಡುವುದರಲ್ಲಿ ನಿವೇದಿತಾ ಗೌಡ ಎತ್ತಿದ ಕೈ. ನಿಜ ಹೇಳಬೇಕು ಅಂದ್ರೆ, ಡಬ್ ಸ್ಮ್ಯಾಶ್ ಜಗತ್ತಿನಲ್ಲಿ ನಿವೇದಿತಾ ಸೂಪರ್ ಸ್ಟಾರ್. ಕನ್ನಡದ ಸೂಪರ್ ಹಿಟ್ ಡೈಲಾಗ್ ಗಳನ್ನು ತಮ್ಮದೇ ಶೈಲಿಯಲ್ಲಿ ನಿವೇದಿತಾ ಹೇಳಿದ್ದಾರೆ. ಡಬ್ ಸ್ಮ್ಯಾಶ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿರುವ ಈಕೆ ಈಗ ಅದರಿಂದಲೇ ‘ಬಿಗ್ ಬಾಸ್’ ಎಂಬ ದೊಡ್ಡ ಕಾರ್ಯಕ್ರಮಕ್ಕೆ ಬಂದು, ಟಾಪ್ 5ರಲ್ಲಿ ತಮ್ಮ ಸ್ಥಾನ ಗಳಿಸುವ ಮೂಲಕ ಮೋಡಿ ಮಾಡಿದ್ದಾರೆ.

ಜಯರಾಂ ಕಾರ್ತಿಕ್ ಒಬ್ಬ ನಟನಾಗಿದ್ದು, ಕನ್ನಡ ಕಿರುತೆರೆ ಹಾಗೂ ಚಿತ್ರರಂಗಗಳಲ್ಲಿ ಪ್ರಸಿದ್ಧಿಪಡೆದಿದ್ದಾರೆ. ಇವರು ಕಲರ್ಸ್ ವಾಹಿನಿಯಲ್ಲಿ 2012-15ರಲ್ಲಿ ಪ್ರಸಾರಗೊಂಡ ಧಾರಾವಾಹಿಯಾದ ಅಶ್ವಿನಿ ನಕ್ಷತ್ರದಲ್ಲಿನ ಜೆ. ಕೃಷ್ಣ ಎಂಬ “ಸೂಪರ್ಸ್ಟಾರ್” ಪಾತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಿತರಾದರು. ಇದೇ ಸಮಯದಲ್ಲಿ ಇವರು ಹಲವು ಚಲನಚಿತ್ರಗಳಲ್ಲಿ ಸಹನಟರಾಗಿ ಕೂಡ ಕಾಣಿಸಿಕೊಂಡರು.2014 ರಲ್ಲಿ ತೆರೆಕಂಡ ಜಸ್ಟ್ ಲವ್ ಚಿತ್ರದ ಮೂಲಕ ನಾಯಕ ನಟರಾದರು. ನಟನೆಯ ಜೊತೆಜೊತೆಗೆ ಇವರು ಇಂಜಿನಿಯರ್ ಆಗಿಯೂ ಕೆಲಸ ಮಾಡಿದ್ದಾರೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಸ್ಪರ್ದಿಸಿದ್ದ ಇವರು, ಈಗ ಟಾಪ್ 5 ತಲುಪುವ ಮೂಲಕ ಬಿಗ್ ಬಾಸ್ ಪಟ್ಟ ಗೆಲ್ಲುವಲ್ಲಿ ಮುನ್ನುಗ್ಗುತ್ತಿದ್ದಾರೆ.

ಚಂದನ್ ಶೆಟ್ಟಿ, ಇದು 2012ರಿಂದಲೇ ಕನ್ನಡ ಸಿನಿಮಾಗಳಲ್ಲಿ ಕೇಳುತ್ತಿದ್ದ, ಕಾಣುತ್ತಿದ್ದ ಹೆಸರು. ಹಾಡುಗಳನ್ನು ಬರೆಯುವ, ಹಾಡುವ ಮತ್ತು ಸಂಗೀತ ಸಂಯೋಜಿಸುವ ಚಂದನ್ ಶೆಟ್ಟಿ ಸಾಕಷ್ಟು ಸಿನಿಮಾಗಳಿಗೆ ಕೆಲಸ ಮಾಡಿದ್ದರೂ ಒಂದು ಐಡೆಂಟಿಟಿ ಎಂದು ಕೊಟ್ಟಿದ್ದು ‘ಧಮ್ ಪವರ್ರೇ…’ ಪುನೀತ್ ರಾಜಕುಮಾರ್ ಅಭಿನಯದ ‘ಪವರ್’ ಚಿತ್ರದ ಈ ಶೀರ್ಷಿಕೆ ಗೀತೆ ಬರೆದು, ಹಾಡಿದ ಚಂದನ್ ಒಮ್ಮೆಲೇ ಲೈಮ್ಲೈಟ್ಗೆ ಬಂದರು.
ಹಾಸನ ಚಂದನ್ ಹುಟ್ಟೂರಾದರೂ ಬೆಳೆದಿದ್ದು ಸಕಲೇಶಪುರದಲ್ಲಿ. ಅಲ್ಲಿ ಹೈಸ್ಕೂಲ್ ಮುಗಿಸಿ ಪುತ್ತೂರಲ್ಲಿ ಪಿಯು ಓದಿ, ಮೈಸೂರಿಗೆ ಬಂದು ಬಿಬಿಎಂ ಮುಗಿಸಿದರು. ಉದ್ಯೋಗದ ಬೆನ್ನು ಹತ್ತಿ ಕಾಲ್ಸೆಂಟರ್ನಲ್ಲಿ ಒಂದು ವರ್ಷ ಕೆಲಸವನ್ನೂ ಮಾಡಿದರು.
ಸಂಗೀತದ ಕಡೆಗೆ ಸೆಳೆಯುತ್ತಿದ್ದ ಮನಸು ಕಾಲ್ಸೆಂಟರ್ ಬಿಡಿಸಿತು. ಬೆಂಗಳೂರಲ್ಲಿ ಯಾವುದಾದರೂ ನೌಕರಿ ಹಿಡಿದರೆ ಸಂಗೀತವನ್ನೂ ಜೊತೆಯಲ್ಲೇ ತೂಗಿಸಿಕೊಂಡು ಹೋಗಬಹುದು ಎಂದುಕೊಂಡು ಬೆಂಗಳೂರಿಗೆ ಬಂದರು.ಕಂಡ ಕನಸು ಕೈಗೂಡಿದಂತೆ ಅರ್ಜುನ್ ಜನ್ಯ ಅವರ ಶಿಷ್ಯತ್ವವೂ ಸಿಕ್ಕಿತು. ಅವರ ಜೊತೆ ಚಂದನ್ ಈವರೆಗೆ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಿದ್ದಾರೆ. ‘ಅಲೆಮಾರಿ’ ಚಿತ್ರದಲ್ಲಿ ಹಾಡುವ ಮೂಲಕ ಚಂದನ್ ಹಾಡಿನ ಬಂಡಿಯೂ ಆರಂಭವಾಯಿತು.ಹೀಗೆ ತಮ್ಮ ವಿಶಿಷ್ಟ ಗಾಯನದ ಮೂಲಕ ಹೆಸರು ಮಾಡಿರುವ ಇವರು ಬಿಗ್ ಬಾಸ್’ನಲ್ಲಿ ಸ್ಪರ್ದಿಸಿ ಟಾಪ್ 5ರ ಹಂತಕ್ಕೆ ತಲುಪಿ, ಇವರು ಕೂಡ ಬಿಗ್ ಬಾಸ್ ಸಂಚಿಕೆ 5ರ ಗೆಲ್ಲುವ ಕುದುರೆ ಎಂದು ಹೇಳಲಾಗುತ್ತಿದೆ.

ಗಾಯಕಿ ಹಾಗೂ ನಟಿ ಆಗಿರುವ ಶ್ರುತಿ ಪ್ರಕಾಶ್, ಬೆಳಗಾವಿಯಲ್ಲಿ ಹುಟ್ಟಿದ, ಮುಂಬೈನಲ್ಲಿ ನೆಲೆ ಕಂಡುಕೊಂಡಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಮಿಂಚುವ ಆಸೆ ಶ್ರುತಿ ಪ್ರಕಾಶ್ ರವರಿಗಿದೆ. ಹೀಗಾಗಿ ಅವರಿಗೆ ‘ಬಿಗ್ ಬಾಸ್’ ಒಂದು ಒಳ್ಳೆಯ ವೇದಿಕೆಯಾಗಿದ್ದು, ಸಮರ್ಥವಾಗಿ ಉಪಯೋಗಿಸಿಕೊಂಡಿದ್ದಾರೆ ಕೂಡ.ಜಯರಾಂ ಕಾರ್ತಿಕ್ ಜೊತೆ ತುಂಬಾ ಸ್ನೇಹದಿಂದ ಇವರ ಮೇಲೆ, ಜಯರಾಂರವರನ್ನು ಪ್ರೀತಿಸುತ್ತಿದ್ದಾರೆಯೇ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.ಇವರೂ ಕೂಡ ‘ಬಿಗ್ ಬಾಸ್ ಕನ್ನಡ-5’ ಕಾರ್ಯಕ್ರಮದ ಟಪ್ 5ರ ಸ್ಪರ್ದಿಯಾಗಿದ್ದು ಬಿಗ್ ಬಾಸ್ ಪಟ್ಟ ಇವರಿಗೆ ಒಲಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸೊಂಟ ನೋವು, ತಲೆನೋವು… ದೇಹದ ಯಾವುದೇ ನೋವಿರಲಿ… ನೆಗಡಿ, ಶೀತ, ಕೆಮ್ಮು.. ನಿಮಗೆ ಏನೇ ಆದರೂ… ಇವರ ಹತ್ತಿರ ಇದೆ ಔಷಧಿ. ಇವರೇ ಆಯುರ್ವೇದ ಪ್ರಾಡೆಕ್ಟ್ ಸೇಲ್ಸ್ ಮ್ಯಾನ್ ದಿವಾಕರ್. ನರಸೀಪುರದಲ್ಲಿ ಹುಟ್ಟಿ ಮಡಿಕೇರಿಯಲ್ಲಿ ಬೆಳೆದಿರುವ ದಿವಾಕರ್ ಹೊಟ್ಟೆ ಪಾಡಿಗಾಗಿ ಮಾಡದ ಕೆಲಸ ಇಲ್ಲ. ಎಮ್ಮೆ ಮೇಯಿಸುವುದರಿಂದ ಹಿಡಿದು ಹೋಟೆಲ್ ನಲ್ಲಿ ಕೆಲಸ, ಕೂಲಿ ಕೆಲಸ, ಗಾರೆ ಕೆಲಸ ಕೂಡ ಮಾಡಿರುವ ದಿವಾಕರ್ ಹೊಟ್ಟೆ ಹಸಿವಾದಾಗ ಭಿಕ್ಷೆ ಕೂಡ ಬೇಡಿದ್ದಾರಂತೆ.
ಇಷ್ಟೊಂದು ಕಷ್ಟಗಳಲ್ಲಿಯೇ ಬೆಳೆದು ಬಂದಿರುವ ಕಾಮಾನ್ ಮ್ಯಾನ್ ದಿವಾಕರ್ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಭಾಗವಹಿಸಿ, ಘಟಾನುಘಟಿ ಸೇಲೆಬ್ರೆಟಿಗಳ ಜೊತೆ ಸ್ಪರ್ದಿಸಿ ತಮ್ಮ ಪರಿಶ್ರಮದಿಂದ ಟಾಪ್ 5ರ ಹಂತ ತಲುಪಿದ್ದಾರೆ.ಬಿಗ್ ಬಾಸ್ ಪಟ್ಟ ಒಲಿಸಿಕೊಳ್ಳುವಲ್ಲಿ ಇವರು ಸೇಲೆಬ್ರೆಟಿಗಳಿಗಿಂತ ಮುಂದೆ ಇದ್ದು,ಗೆಲ್ಲುವ ನೆಚ್ಚಿನ ಸ್ಪರ್ದಿಯಾಗಿದ್ದಾರೆ.
ಜನರ ಅಭಿಪ್ರಾಯದ ಪ್ರಕಾರ ದಿವಾಕರ್’ರವರಿಗೆ ಹೆಚ್ಚಿಗೆ ವೋಟ್ ಮಾಡಿ ಗೆಲ್ಲಿಸಿ ಎಂದು ಸೋಶಿಯಲ್ ಮಿಡಿಯಾದಲ್ಲಿ ಅಭಿಯಾನ ಶುರುವಾಗಿದೆ.ನಮ್ಮ ಪ್ರಕಾರ ತುಂಬಾ ಕಷ್ಟದಿಂದಲೇ ಬಂದಿರುವ ಕಾಮನ್ ಮ್ಯಾನ್ ದಿವಾಕರ್ ಗೆದ್ದರೆ, ಅದು ಕಾಮನ್ ಮ್ಯಾನ್ ಸಿಕ್ಕ ಗೆಲುವಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್ಹಟನ್ನ ಬರ್ಗ್ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…