ಮನರಂಜನೆ

ಬಿಗ್ ಬಾಸ್-5ರ ಪಟ್ಟ ಯಾರಿಗೆ.?ಕಾಮಾನ್ ಮ್ಯಾನ್ Vs ಸೆಲೆಬ್ರೆಟಿಸ್!ಸೋಶಿಯಲ್ ಮೀಡಿಯಾದಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ?ಇಲ್ಲಿದೆ ಪೂರ್ತಿ ವಿವರ,ತಿಳಿಯಲು ಮುಂದೆ ಓದಿ…

608

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

ಹೌದು, ಮಧ್ಯರಾತ್ರಿ ಇದ್ದಕ್ಕಿದ್ದಂತೆ ಸಮೀರ್ ಆಚಾರ್ಯವರನ್ನು ಎಲಿಮಿನೇಟ್ ಮಾಡುವ ಮುಖಾಂತರ ಉಳಿದ 5 ಜನ ಸ್ಪರ್ಧಿಗಳು ಬಿಗ್ ಬಾಸ್ ಸಂಚಿಕೆ 5ರ ಫೈನಲ್ ತಲುಪಿದ್ದಾರೆ. ದಿವಾಕರ್,ನಿವೇದಿತಾ ಗೌಡ,ಶ್ರುತಿ ಪ್ರಕಾಶ್,ಜಯರಾಂ ಕಾರ್ತಿಕ್,ಮತ್ತು ಚಂದನ್ ಶೆಟ್ಟಿ ಈ 5 ಜನರ ಗ್ರಾಂಡ್ ಪಿನಾಲೆ ತಲುಪಿದ್ದಾರೆ.

ಬಿಗ್ ಬಾಸ್ ಸಂಚಿಕೆ 5ರ ಪಟ್ಟಕ್ಕೆ ನೆನ್ನೆಯಿಂದಲೇ ವೋಟಿಂಗ್ ಶುರುವಾಗಿದೆ.ಈ 5 ಜನರಲ್ಲಿ ದಿವಾಕರ್ ಉಳಿದಂತೆ 4 ಜನ ಸೇಲೆಬ್ರೆಟಿಗಳಾಗಿದ್ದು, ಕಾಮನ್ ಮ್ಯಾನ್ Vs ಸೇಲೆಬ್ರೆಟಿಸ್ ಇವರಲ್ಲಿ ಯಾರೂ ಗೆಲ್ಲುತ್ತಾರೆಂಬ ಕುತೂಹಲ ಜನರಲ್ಲಿ ಇಮ್ಮಡಿಗೊಂಡಿದೆ.ಹಾಗಾದ್ರೆ ವೀಕ್ಷಕರು ಹೇಳುವ ಪ್ರಕಾರ ಯಾರು ಗೆಲ್ಬೇಕು ಎಂಬ ವಿವರ ಇಲ್ಲಿದೆ ಮುಂದೆ ನೋಡಿ…

ನಿವೇದಿತಾ ಗೌಡ:-  

ನಿವೇದಿತಾ ಗೌಡ ಹುಟ್ಟಿದ್ದು ಮತ್ತು ಬೆಳೆದಿದ್ದು ಮೈಸೂರಿನಲ್ಲಿಯೇ. ಆದರೂ ಆಕೆಗೆ ಸರಿಯಾಗಿ ಕನ್ನಡ ಮಾತನಾಡಲು ಬರುವುದಿಲ್ಲ. ಏಕೆಂದರೆ ಆಕೆ ಓದಿದ ಶಾಲೆ ಅಟಾಮಿಕ್ ಎನರ್ಜಿ ಸ್ಕೂಲಿನಲ್ಲಿ. ಶಾಲೆಯಲ್ಲಿ ಕನ್ನಡ ಇಲ್ಲದ ಕಾರಣ ಕನ್ನಡ ಬರೆಯಲು ಗೊತ್ತಿಲ್ಲ, ಶಾಲೆಯಲ್ಲಿ ಮಾತಾಡಲು ಸಹ ಇಲ್ಲದಿರುವುದರಿಂದ ಕನ್ನಡ ಆಕೆಗೆ ಮಾತಾಡಲು ತುಂಬ ಕಷ್ಟ. ಮನೆಯಲ್ಲಿ ಕನ್ನಡ, ಶಾಲಾ ಕಾಲೇಜ್ನಲ್ಲಿ ಇಂಗ್ಲಿಷ್, ಇವೆರಡು ಮಿಶ್ರಣವಾಗಿ ಇಂಗ್ಲಿಷ್ ಸ್ಟೈಲಿನ ಕನ್ನಡ ಮಾತನಾಡುತ್ತಾರೆ. ನಿವೇದಿತಾ ಈಗ ಮೈಸೂರಿನ ಮಹಾಜನ್ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಾರೆ. ಆಕೆಯ ವಯಸ್ಸು 18. ಬಿಗ್ಬಾಸ್ ಇತಿಹಾಸದಲ್ಲಿ ಅತೀ ಕಡಿಮೆ ವಯಸ್ಸಿನ ಸ್ಪರ್ಧಿಯಾಗಿದ್ದಾರೆ.ತಂದೆ ರಮೇಶ್ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಗೃಹಿಣಿ. ಒಬ್ಬ ಕಿರಿಯ ಸಹೋದರ ಇದ್ದಾನೆ.

ಡಬ್ ಸ್ಮ್ಯಾಶ್ ಮಾಡುವುದರಲ್ಲಿ ನಿವೇದಿತಾ ಗೌಡ ಎತ್ತಿದ ಕೈ. ನಿಜ ಹೇಳಬೇಕು ಅಂದ್ರೆ, ಡಬ್ ಸ್ಮ್ಯಾಶ್ ಜಗತ್ತಿನಲ್ಲಿ ನಿವೇದಿತಾ ಸೂಪರ್ ಸ್ಟಾರ್. ಕನ್ನಡದ ಸೂಪರ್ ಹಿಟ್ ಡೈಲಾಗ್ ಗಳನ್ನು ತಮ್ಮದೇ ಶೈಲಿಯಲ್ಲಿ ನಿವೇದಿತಾ ಹೇಳಿದ್ದಾರೆ. ಡಬ್ ಸ್ಮ್ಯಾಶ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿರುವ ಈಕೆ ಈಗ ಅದರಿಂದಲೇ ‘ಬಿಗ್ ಬಾಸ್’ ಎಂಬ ದೊಡ್ಡ ಕಾರ್ಯಕ್ರಮಕ್ಕೆ ಬಂದು, ಟಾಪ್ 5ರಲ್ಲಿ ತಮ್ಮ ಸ್ಥಾನ ಗಳಿಸುವ ಮೂಲಕ ಮೋಡಿ ಮಾಡಿದ್ದಾರೆ.

ಜಯರಾಂ ಕಾರ್ತಿಕ್:-

ಜಯರಾಂ ಕಾರ್ತಿಕ್ ಒಬ್ಬ ನಟನಾಗಿದ್ದು, ಕನ್ನಡ ಕಿರುತೆರೆ ಹಾಗೂ ಚಿತ್ರರಂಗಗಳಲ್ಲಿ ಪ್ರಸಿದ್ಧಿಪಡೆದಿದ್ದಾರೆ. ಇವರು ಕಲರ್ಸ್ ವಾಹಿನಿಯಲ್ಲಿ 2012-15ರಲ್ಲಿ ಪ್ರಸಾರಗೊಂಡ ಧಾರಾವಾಹಿಯಾದ ಅಶ್ವಿನಿ ನಕ್ಷತ್ರದಲ್ಲಿನ ಜೆ. ಕೃಷ್ಣ ಎಂಬ “ಸೂಪರ್‍ಸ್ಟಾರ್” ಪಾತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಿತರಾದರು. ಇದೇ ಸಮಯದಲ್ಲಿ ಇವರು ಹಲವು ಚಲನಚಿತ್ರಗಳಲ್ಲಿ ಸಹನಟರಾಗಿ ಕೂಡ ಕಾಣಿಸಿಕೊಂಡರು.2014 ರಲ್ಲಿ ತೆರೆಕಂಡ  ಜಸ್ಟ್ ಲವ್ ಚಿತ್ರದ ಮೂಲಕ ನಾಯಕ ನಟರಾದರು. ನಟನೆಯ ಜೊತೆಜೊತೆಗೆ ಇವರು ಇಂಜಿನಿಯರ್ ಆಗಿಯೂ ಕೆಲಸ ಮಾಡಿದ್ದಾರೆ.

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಸ್ಪರ್ದಿಸಿದ್ದ ಇವರು, ಈಗ ಟಾಪ್ 5 ತಲುಪುವ ಮೂಲಕ ಬಿಗ್ ಬಾಸ್ ಪಟ್ಟ ಗೆಲ್ಲುವಲ್ಲಿ ಮುನ್ನುಗ್ಗುತ್ತಿದ್ದಾರೆ.

ಚಂದನ್ ಶೆಟ್ಟಿ:-

ಚಂದನ್ ಶೆಟ್ಟಿ, ಇದು 2012ರಿಂದಲೇ ಕನ್ನಡ ಸಿನಿಮಾಗಳಲ್ಲಿ ಕೇಳುತ್ತಿದ್ದ, ಕಾಣುತ್ತಿದ್ದ ಹೆಸರು. ಹಾಡುಗಳನ್ನು ಬರೆಯುವ, ಹಾಡುವ ಮತ್ತು ಸಂಗೀತ ಸಂಯೋಜಿಸುವ ಚಂದನ್ ಶೆಟ್ಟಿ ಸಾಕಷ್ಟು ಸಿನಿಮಾಗಳಿಗೆ ಕೆಲಸ ಮಾಡಿದ್ದರೂ ಒಂದು ಐಡೆಂಟಿಟಿ ಎಂದು ಕೊಟ್ಟಿದ್ದು ‘ಧಮ್ ಪವರ್ರೇ…’ ಪುನೀತ್ ರಾಜಕುಮಾರ್ ಅಭಿನಯದ ‘ಪವರ್’ ಚಿತ್ರದ ಈ ಶೀರ್ಷಿಕೆ ಗೀತೆ ಬರೆದು, ಹಾಡಿದ ಚಂದನ್ ಒಮ್ಮೆಲೇ ಲೈಮ್‌ಲೈಟ್‌ಗೆ ಬಂದರು.
ಹಾಸನ ಚಂದನ್ ಹುಟ್ಟೂರಾದರೂ ಬೆಳೆದಿದ್ದು ಸಕಲೇಶಪುರದಲ್ಲಿ. ಅಲ್ಲಿ ಹೈಸ್ಕೂಲ್ ಮುಗಿಸಿ ಪುತ್ತೂರಲ್ಲಿ ಪಿಯು ಓದಿ, ಮೈಸೂರಿಗೆ ಬಂದು ಬಿಬಿಎಂ ಮುಗಿಸಿದರು. ಉದ್ಯೋಗದ ಬೆನ್ನು ಹತ್ತಿ ಕಾಲ್‌ಸೆಂಟರ್‌ನಲ್ಲಿ ಒಂದು ವರ್ಷ ಕೆಲಸವನ್ನೂ ಮಾಡಿದರು.

ಸಂಗೀತದ ಕಡೆಗೆ ಸೆಳೆಯುತ್ತಿದ್ದ ಮನಸು ಕಾಲ್‌ಸೆಂಟರ್ ಬಿಡಿಸಿತು. ಬೆಂಗಳೂರಲ್ಲಿ ಯಾವುದಾದರೂ ನೌಕರಿ ಹಿಡಿದರೆ ಸಂಗೀತವನ್ನೂ ಜೊತೆಯಲ್ಲೇ ತೂಗಿಸಿಕೊಂಡು ಹೋಗಬಹುದು ಎಂದುಕೊಂಡು ಬೆಂಗಳೂರಿಗೆ ಬಂದರು.ಕಂಡ ಕನಸು ಕೈಗೂಡಿದಂತೆ ಅರ್ಜುನ್ ಜನ್ಯ ಅವರ ಶಿಷ್ಯತ್ವವೂ ಸಿಕ್ಕಿತು. ಅವರ ಜೊತೆ ಚಂದನ್ ಈವರೆಗೆ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಿದ್ದಾರೆ. ‘ಅಲೆಮಾರಿ’ ಚಿತ್ರದಲ್ಲಿ ಹಾಡುವ ಮೂಲಕ ಚಂದನ್ ಹಾಡಿನ ಬಂಡಿಯೂ ಆರಂಭವಾಯಿತು.ಹೀಗೆ ತಮ್ಮ ವಿಶಿಷ್ಟ ಗಾಯನದ ಮೂಲಕ ಹೆಸರು ಮಾಡಿರುವ ಇವರು ಬಿಗ್ ಬಾಸ್’ನಲ್ಲಿ ಸ್ಪರ್ದಿಸಿ ಟಾಪ್ 5ರ ಹಂತಕ್ಕೆ ತಲುಪಿ, ಇವರು ಕೂಡ ಬಿಗ್ ಬಾಸ್ ಸಂಚಿಕೆ 5ರ ಗೆಲ್ಲುವ ಕುದುರೆ ಎಂದು ಹೇಳಲಾಗುತ್ತಿದೆ.

ಶ್ರುತಿ ಪ್ರಕಾಶ್ :-

ಗಾಯಕಿ ಹಾಗೂ ನಟಿ ಆಗಿರುವ ಶ್ರುತಿ ಪ್ರಕಾಶ್, ಬೆಳಗಾವಿಯಲ್ಲಿ ಹುಟ್ಟಿದ, ಮುಂಬೈನಲ್ಲಿ ನೆಲೆ ಕಂಡುಕೊಂಡಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಮಿಂಚುವ ಆಸೆ ಶ್ರುತಿ ಪ್ರಕಾಶ್ ರವರಿಗಿದೆ. ಹೀಗಾಗಿ ಅವರಿಗೆ ‘ಬಿಗ್ ಬಾಸ್’ ಒಂದು ಒಳ್ಳೆಯ ವೇದಿಕೆಯಾಗಿದ್ದು, ಸಮರ್ಥವಾಗಿ ಉಪಯೋಗಿಸಿಕೊಂಡಿದ್ದಾರೆ ಕೂಡ.ಜಯರಾಂ ಕಾರ್ತಿಕ್ ಜೊತೆ ತುಂಬಾ ಸ್ನೇಹದಿಂದ ಇವರ ಮೇಲೆ, ಜಯರಾಂರವರನ್ನು ಪ್ರೀತಿಸುತ್ತಿದ್ದಾರೆಯೇ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.ಇವರೂ ಕೂಡ ‘ಬಿಗ್ ಬಾಸ್ ಕನ್ನಡ-5’ ಕಾರ್ಯಕ್ರಮದ ಟಪ್ 5ರ ಸ್ಪರ್ದಿಯಾಗಿದ್ದು ಬಿಗ್ ಬಾಸ್ ಪಟ್ಟ ಇವರಿಗೆ ಒಲಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

‘ಸೇಲ್ಸ್ ಮ್ಯಾನ್’ ದಿವಾಕರ್ “:-

ಸೊಂಟ ನೋವು, ತಲೆನೋವು… ದೇಹದ ಯಾವುದೇ ನೋವಿರಲಿ… ನೆಗಡಿ, ಶೀತ, ಕೆಮ್ಮು.. ನಿಮಗೆ ಏನೇ ಆದರೂ… ಇವರ ಹತ್ತಿರ ಇದೆ ಔಷಧಿ. ಇವರೇ ಆಯುರ್ವೇದ ಪ್ರಾಡೆಕ್ಟ್ ಸೇಲ್ಸ್ ಮ್ಯಾನ್ ದಿವಾಕರ್. ನರಸೀಪುರದಲ್ಲಿ ಹುಟ್ಟಿ ಮಡಿಕೇರಿಯಲ್ಲಿ ಬೆಳೆದಿರುವ ದಿವಾಕರ್ ಹೊಟ್ಟೆ ಪಾಡಿಗಾಗಿ ಮಾಡದ ಕೆಲಸ ಇಲ್ಲ. ಎಮ್ಮೆ ಮೇಯಿಸುವುದರಿಂದ ಹಿಡಿದು ಹೋಟೆಲ್ ನಲ್ಲಿ ಕೆಲಸ, ಕೂಲಿ ಕೆಲಸ, ಗಾರೆ ಕೆಲಸ ಕೂಡ ಮಾಡಿರುವ ದಿವಾಕರ್ ಹೊಟ್ಟೆ ಹಸಿವಾದಾಗ ಭಿಕ್ಷೆ ಕೂಡ ಬೇಡಿದ್ದಾರಂತೆ.

ಇಷ್ಟೊಂದು ಕಷ್ಟಗಳಲ್ಲಿಯೇ ಬೆಳೆದು ಬಂದಿರುವ ಕಾಮಾನ್ ಮ್ಯಾನ್ ದಿವಾಕರ್ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಭಾಗವಹಿಸಿ, ಘಟಾನುಘಟಿ ಸೇಲೆಬ್ರೆಟಿಗಳ ಜೊತೆ ಸ್ಪರ್ದಿಸಿ ತಮ್ಮ ಪರಿಶ್ರಮದಿಂದ ಟಾಪ್ 5ರ ಹಂತ ತಲುಪಿದ್ದಾರೆ.ಬಿಗ್ ಬಾಸ್ ಪಟ್ಟ ಒಲಿಸಿಕೊಳ್ಳುವಲ್ಲಿ ಇವರು ಸೇಲೆಬ್ರೆಟಿಗಳಿಗಿಂತ ಮುಂದೆ ಇದ್ದು,ಗೆಲ್ಲುವ ನೆಚ್ಚಿನ ಸ್ಪರ್ದಿಯಾಗಿದ್ದಾರೆ.

ಜನರ ಅಭಿಪ್ರಾಯದ ಪ್ರಕಾರ ದಿವಾಕರ್’ರವರಿಗೆ ಹೆಚ್ಚಿಗೆ ವೋಟ್ ಮಾಡಿ ಗೆಲ್ಲಿಸಿ ಎಂದು ಸೋಶಿಯಲ್ ಮಿಡಿಯಾದಲ್ಲಿ ಅಭಿಯಾನ ಶುರುವಾಗಿದೆ.ನಮ್ಮ ಪ್ರಕಾರ ತುಂಬಾ ಕಷ್ಟದಿಂದಲೇ ಬಂದಿರುವ ಕಾಮನ್ ಮ್ಯಾನ್ ದಿವಾಕರ್ ಗೆದ್ದರೆ, ಅದು ಕಾಮನ್ ಮ್ಯಾನ್ ಸಿಕ್ಕ ಗೆಲುವಾಗುತ್ತದೆ.

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿಬೇವನ್ನು ತಿನ್ನದೇ ಹಾಗೇ ಬಿಸಾಡುತ್ತೀರಾ ..ಆದ್ರೆ ಅದರ ಅದ್ಭುತ ಪ್ರಯೋಜನಗಳನ್ನ ತಿಳಿದರೆ…

    ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ವಿಸ್ಮಯ ಜಗತ್ತು

    ಇಲ್ಲಿ ಕತ್ತಲಾಗುತ್ತಿದ್ದಂತೆ ಪುರುಷರ ಮೇಲೆ ಹೆಣ್ಣು ಪ್ರೇತಾತ್ಮಗಳು ದಾಳಿ ಮಾಡುತ್ತಿವೆಯಂತೆ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್‍ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್‍’ನ ಈ ಗ್ರಾಮದಲ್ಲಿ ಕತ್ತಲಾದ…