ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಹೌದು, ಮಧ್ಯರಾತ್ರಿ ಇದ್ದಕ್ಕಿದ್ದಂತೆ ಸಮೀರ್ ಆಚಾರ್ಯವರನ್ನು ಎಲಿಮಿನೇಟ್ ಮಾಡುವ ಮುಖಾಂತರ ಉಳಿದ 5 ಜನ ಸ್ಪರ್ಧಿಗಳು ಬಿಗ್ ಬಾಸ್ ಸಂಚಿಕೆ 5ರ ಫೈನಲ್ ತಲುಪಿದ್ದಾರೆ. ದಿವಾಕರ್,ನಿವೇದಿತಾ ಗೌಡ,ಶ್ರುತಿ ಪ್ರಕಾಶ್,ಜಯರಾಂ ಕಾರ್ತಿಕ್,ಮತ್ತು ಚಂದನ್ ಶೆಟ್ಟಿ ಈ 5 ಜನರ ಗ್ರಾಂಡ್ ಪಿನಾಲೆ ತಲುಪಿದ್ದಾರೆ.
ಬಿಗ್ ಬಾಸ್ ಸಂಚಿಕೆ 5ರ ಪಟ್ಟಕ್ಕೆ ನೆನ್ನೆಯಿಂದಲೇ ವೋಟಿಂಗ್ ಶುರುವಾಗಿದೆ.ಈ 5 ಜನರಲ್ಲಿ ದಿವಾಕರ್ ಉಳಿದಂತೆ 4 ಜನ ಸೇಲೆಬ್ರೆಟಿಗಳಾಗಿದ್ದು, ಕಾಮನ್ ಮ್ಯಾನ್ Vs ಸೇಲೆಬ್ರೆಟಿಸ್ ಇವರಲ್ಲಿ ಯಾರೂ ಗೆಲ್ಲುತ್ತಾರೆಂಬ ಕುತೂಹಲ ಜನರಲ್ಲಿ ಇಮ್ಮಡಿಗೊಂಡಿದೆ.ಹಾಗಾದ್ರೆ ವೀಕ್ಷಕರು ಹೇಳುವ ಪ್ರಕಾರ ಯಾರು ಗೆಲ್ಬೇಕು ಎಂಬ ವಿವರ ಇಲ್ಲಿದೆ ಮುಂದೆ ನೋಡಿ…
ನಿವೇದಿತಾ ಗೌಡ ಹುಟ್ಟಿದ್ದು ಮತ್ತು ಬೆಳೆದಿದ್ದು ಮೈಸೂರಿನಲ್ಲಿಯೇ. ಆದರೂ ಆಕೆಗೆ ಸರಿಯಾಗಿ ಕನ್ನಡ ಮಾತನಾಡಲು ಬರುವುದಿಲ್ಲ. ಏಕೆಂದರೆ ಆಕೆ ಓದಿದ ಶಾಲೆ ಅಟಾಮಿಕ್ ಎನರ್ಜಿ ಸ್ಕೂಲಿನಲ್ಲಿ. ಶಾಲೆಯಲ್ಲಿ ಕನ್ನಡ ಇಲ್ಲದ ಕಾರಣ ಕನ್ನಡ ಬರೆಯಲು ಗೊತ್ತಿಲ್ಲ, ಶಾಲೆಯಲ್ಲಿ ಮಾತಾಡಲು ಸಹ ಇಲ್ಲದಿರುವುದರಿಂದ ಕನ್ನಡ ಆಕೆಗೆ ಮಾತಾಡಲು ತುಂಬ ಕಷ್ಟ. ಮನೆಯಲ್ಲಿ ಕನ್ನಡ, ಶಾಲಾ ಕಾಲೇಜ್ನಲ್ಲಿ ಇಂಗ್ಲಿಷ್, ಇವೆರಡು ಮಿಶ್ರಣವಾಗಿ ಇಂಗ್ಲಿಷ್ ಸ್ಟೈಲಿನ ಕನ್ನಡ ಮಾತನಾಡುತ್ತಾರೆ. ನಿವೇದಿತಾ ಈಗ ಮೈಸೂರಿನ ಮಹಾಜನ್ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಾರೆ. ಆಕೆಯ ವಯಸ್ಸು 18. ಬಿಗ್ಬಾಸ್ ಇತಿಹಾಸದಲ್ಲಿ ಅತೀ ಕಡಿಮೆ ವಯಸ್ಸಿನ ಸ್ಪರ್ಧಿಯಾಗಿದ್ದಾರೆ.ತಂದೆ ರಮೇಶ್ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಗೃಹಿಣಿ. ಒಬ್ಬ ಕಿರಿಯ ಸಹೋದರ ಇದ್ದಾನೆ.
ಡಬ್ ಸ್ಮ್ಯಾಶ್ ಮಾಡುವುದರಲ್ಲಿ ನಿವೇದಿತಾ ಗೌಡ ಎತ್ತಿದ ಕೈ. ನಿಜ ಹೇಳಬೇಕು ಅಂದ್ರೆ, ಡಬ್ ಸ್ಮ್ಯಾಶ್ ಜಗತ್ತಿನಲ್ಲಿ ನಿವೇದಿತಾ ಸೂಪರ್ ಸ್ಟಾರ್. ಕನ್ನಡದ ಸೂಪರ್ ಹಿಟ್ ಡೈಲಾಗ್ ಗಳನ್ನು ತಮ್ಮದೇ ಶೈಲಿಯಲ್ಲಿ ನಿವೇದಿತಾ ಹೇಳಿದ್ದಾರೆ. ಡಬ್ ಸ್ಮ್ಯಾಶ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿರುವ ಈಕೆ ಈಗ ಅದರಿಂದಲೇ ‘ಬಿಗ್ ಬಾಸ್’ ಎಂಬ ದೊಡ್ಡ ಕಾರ್ಯಕ್ರಮಕ್ಕೆ ಬಂದು, ಟಾಪ್ 5ರಲ್ಲಿ ತಮ್ಮ ಸ್ಥಾನ ಗಳಿಸುವ ಮೂಲಕ ಮೋಡಿ ಮಾಡಿದ್ದಾರೆ.
ಜಯರಾಂ ಕಾರ್ತಿಕ್ ಒಬ್ಬ ನಟನಾಗಿದ್ದು, ಕನ್ನಡ ಕಿರುತೆರೆ ಹಾಗೂ ಚಿತ್ರರಂಗಗಳಲ್ಲಿ ಪ್ರಸಿದ್ಧಿಪಡೆದಿದ್ದಾರೆ. ಇವರು ಕಲರ್ಸ್ ವಾಹಿನಿಯಲ್ಲಿ 2012-15ರಲ್ಲಿ ಪ್ರಸಾರಗೊಂಡ ಧಾರಾವಾಹಿಯಾದ ಅಶ್ವಿನಿ ನಕ್ಷತ್ರದಲ್ಲಿನ ಜೆ. ಕೃಷ್ಣ ಎಂಬ “ಸೂಪರ್ಸ್ಟಾರ್” ಪಾತ್ರದ ಮೂಲಕ ಪ್ರೇಕ್ಷಕರಿಗೆ ಪರಿಚಿತರಾದರು. ಇದೇ ಸಮಯದಲ್ಲಿ ಇವರು ಹಲವು ಚಲನಚಿತ್ರಗಳಲ್ಲಿ ಸಹನಟರಾಗಿ ಕೂಡ ಕಾಣಿಸಿಕೊಂಡರು.2014 ರಲ್ಲಿ ತೆರೆಕಂಡ ಜಸ್ಟ್ ಲವ್ ಚಿತ್ರದ ಮೂಲಕ ನಾಯಕ ನಟರಾದರು. ನಟನೆಯ ಜೊತೆಜೊತೆಗೆ ಇವರು ಇಂಜಿನಿಯರ್ ಆಗಿಯೂ ಕೆಲಸ ಮಾಡಿದ್ದಾರೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಸ್ಪರ್ದಿಸಿದ್ದ ಇವರು, ಈಗ ಟಾಪ್ 5 ತಲುಪುವ ಮೂಲಕ ಬಿಗ್ ಬಾಸ್ ಪಟ್ಟ ಗೆಲ್ಲುವಲ್ಲಿ ಮುನ್ನುಗ್ಗುತ್ತಿದ್ದಾರೆ.
ಚಂದನ್ ಶೆಟ್ಟಿ, ಇದು 2012ರಿಂದಲೇ ಕನ್ನಡ ಸಿನಿಮಾಗಳಲ್ಲಿ ಕೇಳುತ್ತಿದ್ದ, ಕಾಣುತ್ತಿದ್ದ ಹೆಸರು. ಹಾಡುಗಳನ್ನು ಬರೆಯುವ, ಹಾಡುವ ಮತ್ತು ಸಂಗೀತ ಸಂಯೋಜಿಸುವ ಚಂದನ್ ಶೆಟ್ಟಿ ಸಾಕಷ್ಟು ಸಿನಿಮಾಗಳಿಗೆ ಕೆಲಸ ಮಾಡಿದ್ದರೂ ಒಂದು ಐಡೆಂಟಿಟಿ ಎಂದು ಕೊಟ್ಟಿದ್ದು ‘ಧಮ್ ಪವರ್ರೇ…’ ಪುನೀತ್ ರಾಜಕುಮಾರ್ ಅಭಿನಯದ ‘ಪವರ್’ ಚಿತ್ರದ ಈ ಶೀರ್ಷಿಕೆ ಗೀತೆ ಬರೆದು, ಹಾಡಿದ ಚಂದನ್ ಒಮ್ಮೆಲೇ ಲೈಮ್ಲೈಟ್ಗೆ ಬಂದರು.
ಹಾಸನ ಚಂದನ್ ಹುಟ್ಟೂರಾದರೂ ಬೆಳೆದಿದ್ದು ಸಕಲೇಶಪುರದಲ್ಲಿ. ಅಲ್ಲಿ ಹೈಸ್ಕೂಲ್ ಮುಗಿಸಿ ಪುತ್ತೂರಲ್ಲಿ ಪಿಯು ಓದಿ, ಮೈಸೂರಿಗೆ ಬಂದು ಬಿಬಿಎಂ ಮುಗಿಸಿದರು. ಉದ್ಯೋಗದ ಬೆನ್ನು ಹತ್ತಿ ಕಾಲ್ಸೆಂಟರ್ನಲ್ಲಿ ಒಂದು ವರ್ಷ ಕೆಲಸವನ್ನೂ ಮಾಡಿದರು.
ಸಂಗೀತದ ಕಡೆಗೆ ಸೆಳೆಯುತ್ತಿದ್ದ ಮನಸು ಕಾಲ್ಸೆಂಟರ್ ಬಿಡಿಸಿತು. ಬೆಂಗಳೂರಲ್ಲಿ ಯಾವುದಾದರೂ ನೌಕರಿ ಹಿಡಿದರೆ ಸಂಗೀತವನ್ನೂ ಜೊತೆಯಲ್ಲೇ ತೂಗಿಸಿಕೊಂಡು ಹೋಗಬಹುದು ಎಂದುಕೊಂಡು ಬೆಂಗಳೂರಿಗೆ ಬಂದರು.ಕಂಡ ಕನಸು ಕೈಗೂಡಿದಂತೆ ಅರ್ಜುನ್ ಜನ್ಯ ಅವರ ಶಿಷ್ಯತ್ವವೂ ಸಿಕ್ಕಿತು. ಅವರ ಜೊತೆ ಚಂದನ್ ಈವರೆಗೆ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಸಹಾಯಕರಾಗಿ ಕೆಲಸ ಮಾಡಿದ್ದಾರೆ. ‘ಅಲೆಮಾರಿ’ ಚಿತ್ರದಲ್ಲಿ ಹಾಡುವ ಮೂಲಕ ಚಂದನ್ ಹಾಡಿನ ಬಂಡಿಯೂ ಆರಂಭವಾಯಿತು.ಹೀಗೆ ತಮ್ಮ ವಿಶಿಷ್ಟ ಗಾಯನದ ಮೂಲಕ ಹೆಸರು ಮಾಡಿರುವ ಇವರು ಬಿಗ್ ಬಾಸ್’ನಲ್ಲಿ ಸ್ಪರ್ದಿಸಿ ಟಾಪ್ 5ರ ಹಂತಕ್ಕೆ ತಲುಪಿ, ಇವರು ಕೂಡ ಬಿಗ್ ಬಾಸ್ ಸಂಚಿಕೆ 5ರ ಗೆಲ್ಲುವ ಕುದುರೆ ಎಂದು ಹೇಳಲಾಗುತ್ತಿದೆ.
ಗಾಯಕಿ ಹಾಗೂ ನಟಿ ಆಗಿರುವ ಶ್ರುತಿ ಪ್ರಕಾಶ್, ಬೆಳಗಾವಿಯಲ್ಲಿ ಹುಟ್ಟಿದ, ಮುಂಬೈನಲ್ಲಿ ನೆಲೆ ಕಂಡುಕೊಂಡಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಮಿಂಚುವ ಆಸೆ ಶ್ರುತಿ ಪ್ರಕಾಶ್ ರವರಿಗಿದೆ. ಹೀಗಾಗಿ ಅವರಿಗೆ ‘ಬಿಗ್ ಬಾಸ್’ ಒಂದು ಒಳ್ಳೆಯ ವೇದಿಕೆಯಾಗಿದ್ದು, ಸಮರ್ಥವಾಗಿ ಉಪಯೋಗಿಸಿಕೊಂಡಿದ್ದಾರೆ ಕೂಡ.ಜಯರಾಂ ಕಾರ್ತಿಕ್ ಜೊತೆ ತುಂಬಾ ಸ್ನೇಹದಿಂದ ಇವರ ಮೇಲೆ, ಜಯರಾಂರವರನ್ನು ಪ್ರೀತಿಸುತ್ತಿದ್ದಾರೆಯೇ ಎಂಬ ಊಹಾಪೋಹಗಳು ಕೇಳಿಬರುತ್ತಿವೆ.ಇವರೂ ಕೂಡ ‘ಬಿಗ್ ಬಾಸ್ ಕನ್ನಡ-5’ ಕಾರ್ಯಕ್ರಮದ ಟಪ್ 5ರ ಸ್ಪರ್ದಿಯಾಗಿದ್ದು ಬಿಗ್ ಬಾಸ್ ಪಟ್ಟ ಇವರಿಗೆ ಒಲಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸೊಂಟ ನೋವು, ತಲೆನೋವು… ದೇಹದ ಯಾವುದೇ ನೋವಿರಲಿ… ನೆಗಡಿ, ಶೀತ, ಕೆಮ್ಮು.. ನಿಮಗೆ ಏನೇ ಆದರೂ… ಇವರ ಹತ್ತಿರ ಇದೆ ಔಷಧಿ. ಇವರೇ ಆಯುರ್ವೇದ ಪ್ರಾಡೆಕ್ಟ್ ಸೇಲ್ಸ್ ಮ್ಯಾನ್ ದಿವಾಕರ್. ನರಸೀಪುರದಲ್ಲಿ ಹುಟ್ಟಿ ಮಡಿಕೇರಿಯಲ್ಲಿ ಬೆಳೆದಿರುವ ದಿವಾಕರ್ ಹೊಟ್ಟೆ ಪಾಡಿಗಾಗಿ ಮಾಡದ ಕೆಲಸ ಇಲ್ಲ. ಎಮ್ಮೆ ಮೇಯಿಸುವುದರಿಂದ ಹಿಡಿದು ಹೋಟೆಲ್ ನಲ್ಲಿ ಕೆಲಸ, ಕೂಲಿ ಕೆಲಸ, ಗಾರೆ ಕೆಲಸ ಕೂಡ ಮಾಡಿರುವ ದಿವಾಕರ್ ಹೊಟ್ಟೆ ಹಸಿವಾದಾಗ ಭಿಕ್ಷೆ ಕೂಡ ಬೇಡಿದ್ದಾರಂತೆ.
ಇಷ್ಟೊಂದು ಕಷ್ಟಗಳಲ್ಲಿಯೇ ಬೆಳೆದು ಬಂದಿರುವ ಕಾಮಾನ್ ಮ್ಯಾನ್ ದಿವಾಕರ್ ಬಿಗ್ ಬಾಸ್ 5ರ ಸಂಚಿಕೆಯಲ್ಲಿ ಭಾಗವಹಿಸಿ, ಘಟಾನುಘಟಿ ಸೇಲೆಬ್ರೆಟಿಗಳ ಜೊತೆ ಸ್ಪರ್ದಿಸಿ ತಮ್ಮ ಪರಿಶ್ರಮದಿಂದ ಟಾಪ್ 5ರ ಹಂತ ತಲುಪಿದ್ದಾರೆ.ಬಿಗ್ ಬಾಸ್ ಪಟ್ಟ ಒಲಿಸಿಕೊಳ್ಳುವಲ್ಲಿ ಇವರು ಸೇಲೆಬ್ರೆಟಿಗಳಿಗಿಂತ ಮುಂದೆ ಇದ್ದು,ಗೆಲ್ಲುವ ನೆಚ್ಚಿನ ಸ್ಪರ್ದಿಯಾಗಿದ್ದಾರೆ.
ಜನರ ಅಭಿಪ್ರಾಯದ ಪ್ರಕಾರ ದಿವಾಕರ್’ರವರಿಗೆ ಹೆಚ್ಚಿಗೆ ವೋಟ್ ಮಾಡಿ ಗೆಲ್ಲಿಸಿ ಎಂದು ಸೋಶಿಯಲ್ ಮಿಡಿಯಾದಲ್ಲಿ ಅಭಿಯಾನ ಶುರುವಾಗಿದೆ.ನಮ್ಮ ಪ್ರಕಾರ ತುಂಬಾ ಕಷ್ಟದಿಂದಲೇ ಬಂದಿರುವ ಕಾಮನ್ ಮ್ಯಾನ್ ದಿವಾಕರ್ ಗೆದ್ದರೆ, ಅದು ಕಾಮನ್ ಮ್ಯಾನ್ ಸಿಕ್ಕ ಗೆಲುವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.